Homeಮುಖಪುಟಕೋವಿಶೀಲ್ಡ್ ತೆಗೆದುಕೊಂಡ ಬಳಿಕ ನಮ್ಮ ಮಕ್ಕಳು ಸಾವನ್ನಪ್ಪಿದ್ದಾರೆ: ಪೋಷಕರ ಆರೋಪ

ಕೋವಿಶೀಲ್ಡ್ ತೆಗೆದುಕೊಂಡ ಬಳಿಕ ನಮ್ಮ ಮಕ್ಕಳು ಸಾವನ್ನಪ್ಪಿದ್ದಾರೆ: ಪೋಷಕರ ಆರೋಪ

- Advertisement -
- Advertisement -

ಕೋವಿಶೀಲ್ಡ್ ಲಸಿಕೆ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್ ಕಡಿಮೆಯಂತಹ ಅಡ್ಡಪರಿಣಾಮಕ್ಕೆ ಕಾರಣವಾಗುತ್ತದೆ ಎಂದು ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’ ಯುಕೆ ಕೋರ್ಟ್‌ನಲ್ಲಿ ಒಪ್ಪಿಕೊಂಡ ಬೆನ್ನಲ್ಲಿ ಕೋವಿಶೀಲ್ಡ್‌ ತೆಗೆದುಕೊಂಡ ಬಳಿಕ ಇಬ್ಬರು ಯುವತಿಯರು ಮೃತಪಟ್ಟಿರುವ ಬಗ್ಗೆ ಅವರ ಪೋಷಕರು ಆರೋಪಿಸಿದ್ದಾರೆ.

ಅಸ್ಟ್ರಾಜೆನೆಕಾ ಲಸಿಕೆಯನ್ನು ಭಾರತದಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ‘ಕೋವಿಶೀಲ್ಡ್’ ಎಂಬ ಹೆಸರಿನಲ್ಲಿ ತಯಾರಿಸಿದೆ ಮತ್ತು ಇಲ್ಲಿ ವ್ಯಾಪಕವಾಗಿ ಜನರಿಗೆ ಈ ಲಸಿಕೆಯನ್ನು ನೀಡಲಾಗಿದೆ.

ವೇಣುಗೋಪಾಲನ್‌ ಗೋವಿಂದನ್‌ 2021ರಲ್ಲಿ ತನ್ನ 20 ವರ್ಷದ ಮಗಳು ಕಾರುಣ್ಯಳನ್ನು ಕಳೆದುಕೊಂಡಿದ್ದರು, ಹಲವು ಜೀವಗಳನ್ನು ಕಳೆದುಕೊಂಡ ನಂತರ ಕಂಪೆನಿ ಈಗ ವಾಸ್ತವ ಒಪ್ಪಿಕೊಂಡಿದೆ ಎಂದು ವೇಣುಗೋಪಾಲನ್‌ ಹೇಳಿದ್ದಾರೆ. 15 ಯುರೋಪಿಯನ್ ದೇಶಗಳು ರಕ್ತ ಹೆಪ್ಪುಗಟ್ಟುವಿಕೆಯಿಂದ ಉಂಟಾಗುವ ಸಾವುಗಳ ಹಿನ್ನೆಲೆ ಅದರ ಬಳಕೆಯನ್ನು ನಿರ್ಬಂಧಿಸಿದ ನಂತರ ಸೀರಮ್ ಇನ್‌ಸ್ಟಿಟ್ಯೂಟ್ ಲಸಿಕೆ ಪೂರೈಕೆಯನ್ನು ನಿಲ್ಲಿಸಬೇಕಿತ್ತು. ನೊಂದ ಪೋಷಕರು ನ್ಯಾಯಕ್ಕಾಗಿ ವಿವಿಧ ನ್ಯಾಯಾಲಯಗಳಲ್ಲಿ ಹೋರಾಟ ನಡೆಸುತ್ತಿದ್ದರೂ ವಿಚಾರಣೆ ನಡೆಯುತ್ತಿಲ್ಲ. ನ್ಯಾಯಕ್ಕಾಗಿ ಮತ್ತು ಸಾರ್ವಜನಿಕ ಆರೋಗ್ಯದ ಹೆಸರಿನಲ್ಲಿ ನಡೆಸಲಾದ ಈ ದುಷ್ಕೃತ್ಯವು ಮರುಕಳಿಸುವುದನ್ನು ತಡೆಯಲು, ನಾವು ಎಲ್ಲಾ ಅಪರಾಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತೇವೆ ಎಂದು ವೇಣುಗೋಪಾಲನ್‌ ಹೇಳಿದ್ದಾರೆ.

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಅಡಾರ್ ಪೂನಾವಾಲ್ಲಾ ಅವರು ಈ ಪಾಪಗಳಿಗೆ ಉತ್ತರಿಸಬೇಕಾಗುತ್ತದೆ. ಇದಲ್ಲದೆ ಲಸಿಕೆಗೆ ಅನುಮೋದಿಸಿದ್ದಕ್ಕಾಗಿ ಸರ್ಕಾರವನ್ನು ಅವರು ದೂಷಿಸಿದ್ದಾರೆ.

2021ರಲ್ಲಿ ರಿಥೈಕಾ (18)ಎಂಬ ಮಗಳನ್ನು ಕಳೆದುಕೊಂಡ ರಚನಾ ಗಂಗೂ ಮತ್ತು 20 ವರ್ಷದ ಮಗಳು ಕಾರುಣ್ಯಳನ್ನು ಕಳೆದುಕೊಂಡ ಗೋವಿಂದನ್ ಅವರು ತಮ್ಮ  ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆಸಲು ವೈದ್ಯಕೀಯ ಮಂಡಳಿಯನ್ನು ನೇಮಿಸುವಂತೆ ಈ ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

‘ಅಸ್ಟ್ರಾಜೆನೆಕಾ’ ಕಂಪನಿಯು ಈ ಕುರಿತ 51 ಮೊಕದ್ದಮೆಗಳನ್ನು ಎದುರಿಸುತ್ತಿದೆ, ಕೋವಿಶೀಲ್ಡ್‌ ಲಸಿಕೆಯು ಡಜನ್‌ಗಟ್ಟಲೆ ಪ್ರಕರಣಗಳಲ್ಲಿ ಸಾವು ಮತ್ತು ಗಂಭೀರವಾದ ಗಾಯವನ್ನು ಉಂಟುಮಾಡಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ಪರಿಹಾರವನ್ನು ಬಯಸುತ್ತಿದ್ದಾರೆ. ಈ ಸುದ್ದಿಯು ಭಾರತದ ಜನರನ್ನು ಒಳಗೊಂಡಂತೆ ವಿಶ್ವದಾದ್ಯಂತ ಕೋಟ್ಯಾಂತರ ಜನರ ಮೇಲೆ ಪರಿಣಾಮ ಬೀರಿದೆ.

ಕೋವಿಡ್ -19 ವಿರುದ್ಧದ ‘ಕೋವಿಶೀಲ್ಡ್‌’ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿತ್ತು. TTS ಅಥವಾ ಥ್ರಂಬೋಸಿಸ್ ಜೊತೆಗೆ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಮತ್ತು ರಕ್ತದಲ್ಲಿ ಪ್ಲೇಟ್ಲೆಟ್‌ ಅಂಶಗಳು ಕಡಿಮೆಯಾಗಲು ಕಾರಣವಾಗುತ್ತದೆ ಎನ್ನುವುದು ಬಹಿರಂಗವಾಗಿತ್ತು.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...