Homeಮುಖಪುಟಕೋವಿಶೀಲ್ಡ್ ತೆಗೆದುಕೊಂಡ ಬಳಿಕ ನಮ್ಮ ಮಕ್ಕಳು ಸಾವನ್ನಪ್ಪಿದ್ದಾರೆ: ಪೋಷಕರ ಆರೋಪ

ಕೋವಿಶೀಲ್ಡ್ ತೆಗೆದುಕೊಂಡ ಬಳಿಕ ನಮ್ಮ ಮಕ್ಕಳು ಸಾವನ್ನಪ್ಪಿದ್ದಾರೆ: ಪೋಷಕರ ಆರೋಪ

- Advertisement -
- Advertisement -

ಕೋವಿಶೀಲ್ಡ್ ಲಸಿಕೆ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್ ಕಡಿಮೆಯಂತಹ ಅಡ್ಡಪರಿಣಾಮಕ್ಕೆ ಕಾರಣವಾಗುತ್ತದೆ ಎಂದು ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’ ಯುಕೆ ಕೋರ್ಟ್‌ನಲ್ಲಿ ಒಪ್ಪಿಕೊಂಡ ಬೆನ್ನಲ್ಲಿ ಕೋವಿಶೀಲ್ಡ್‌ ತೆಗೆದುಕೊಂಡ ಬಳಿಕ ಇಬ್ಬರು ಯುವತಿಯರು ಮೃತಪಟ್ಟಿರುವ ಬಗ್ಗೆ ಅವರ ಪೋಷಕರು ಆರೋಪಿಸಿದ್ದಾರೆ.

ಅಸ್ಟ್ರಾಜೆನೆಕಾ ಲಸಿಕೆಯನ್ನು ಭಾರತದಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ‘ಕೋವಿಶೀಲ್ಡ್’ ಎಂಬ ಹೆಸರಿನಲ್ಲಿ ತಯಾರಿಸಿದೆ ಮತ್ತು ಇಲ್ಲಿ ವ್ಯಾಪಕವಾಗಿ ಜನರಿಗೆ ಈ ಲಸಿಕೆಯನ್ನು ನೀಡಲಾಗಿದೆ.

ವೇಣುಗೋಪಾಲನ್‌ ಗೋವಿಂದನ್‌ 2021ರಲ್ಲಿ ತನ್ನ 20 ವರ್ಷದ ಮಗಳು ಕಾರುಣ್ಯಳನ್ನು ಕಳೆದುಕೊಂಡಿದ್ದರು, ಹಲವು ಜೀವಗಳನ್ನು ಕಳೆದುಕೊಂಡ ನಂತರ ಕಂಪೆನಿ ಈಗ ವಾಸ್ತವ ಒಪ್ಪಿಕೊಂಡಿದೆ ಎಂದು ವೇಣುಗೋಪಾಲನ್‌ ಹೇಳಿದ್ದಾರೆ. 15 ಯುರೋಪಿಯನ್ ದೇಶಗಳು ರಕ್ತ ಹೆಪ್ಪುಗಟ್ಟುವಿಕೆಯಿಂದ ಉಂಟಾಗುವ ಸಾವುಗಳ ಹಿನ್ನೆಲೆ ಅದರ ಬಳಕೆಯನ್ನು ನಿರ್ಬಂಧಿಸಿದ ನಂತರ ಸೀರಮ್ ಇನ್‌ಸ್ಟಿಟ್ಯೂಟ್ ಲಸಿಕೆ ಪೂರೈಕೆಯನ್ನು ನಿಲ್ಲಿಸಬೇಕಿತ್ತು. ನೊಂದ ಪೋಷಕರು ನ್ಯಾಯಕ್ಕಾಗಿ ವಿವಿಧ ನ್ಯಾಯಾಲಯಗಳಲ್ಲಿ ಹೋರಾಟ ನಡೆಸುತ್ತಿದ್ದರೂ ವಿಚಾರಣೆ ನಡೆಯುತ್ತಿಲ್ಲ. ನ್ಯಾಯಕ್ಕಾಗಿ ಮತ್ತು ಸಾರ್ವಜನಿಕ ಆರೋಗ್ಯದ ಹೆಸರಿನಲ್ಲಿ ನಡೆಸಲಾದ ಈ ದುಷ್ಕೃತ್ಯವು ಮರುಕಳಿಸುವುದನ್ನು ತಡೆಯಲು, ನಾವು ಎಲ್ಲಾ ಅಪರಾಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತೇವೆ ಎಂದು ವೇಣುಗೋಪಾಲನ್‌ ಹೇಳಿದ್ದಾರೆ.

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಅಡಾರ್ ಪೂನಾವಾಲ್ಲಾ ಅವರು ಈ ಪಾಪಗಳಿಗೆ ಉತ್ತರಿಸಬೇಕಾಗುತ್ತದೆ. ಇದಲ್ಲದೆ ಲಸಿಕೆಗೆ ಅನುಮೋದಿಸಿದ್ದಕ್ಕಾಗಿ ಸರ್ಕಾರವನ್ನು ಅವರು ದೂಷಿಸಿದ್ದಾರೆ.

2021ರಲ್ಲಿ ರಿಥೈಕಾ (18)ಎಂಬ ಮಗಳನ್ನು ಕಳೆದುಕೊಂಡ ರಚನಾ ಗಂಗೂ ಮತ್ತು 20 ವರ್ಷದ ಮಗಳು ಕಾರುಣ್ಯಳನ್ನು ಕಳೆದುಕೊಂಡ ಗೋವಿಂದನ್ ಅವರು ತಮ್ಮ  ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆಸಲು ವೈದ್ಯಕೀಯ ಮಂಡಳಿಯನ್ನು ನೇಮಿಸುವಂತೆ ಈ ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

‘ಅಸ್ಟ್ರಾಜೆನೆಕಾ’ ಕಂಪನಿಯು ಈ ಕುರಿತ 51 ಮೊಕದ್ದಮೆಗಳನ್ನು ಎದುರಿಸುತ್ತಿದೆ, ಕೋವಿಶೀಲ್ಡ್‌ ಲಸಿಕೆಯು ಡಜನ್‌ಗಟ್ಟಲೆ ಪ್ರಕರಣಗಳಲ್ಲಿ ಸಾವು ಮತ್ತು ಗಂಭೀರವಾದ ಗಾಯವನ್ನು ಉಂಟುಮಾಡಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ಪರಿಹಾರವನ್ನು ಬಯಸುತ್ತಿದ್ದಾರೆ. ಈ ಸುದ್ದಿಯು ಭಾರತದ ಜನರನ್ನು ಒಳಗೊಂಡಂತೆ ವಿಶ್ವದಾದ್ಯಂತ ಕೋಟ್ಯಾಂತರ ಜನರ ಮೇಲೆ ಪರಿಣಾಮ ಬೀರಿದೆ.

ಕೋವಿಡ್ -19 ವಿರುದ್ಧದ ‘ಕೋವಿಶೀಲ್ಡ್‌’ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿತ್ತು. TTS ಅಥವಾ ಥ್ರಂಬೋಸಿಸ್ ಜೊತೆಗೆ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಮತ್ತು ರಕ್ತದಲ್ಲಿ ಪ್ಲೇಟ್ಲೆಟ್‌ ಅಂಶಗಳು ಕಡಿಮೆಯಾಗಲು ಕಾರಣವಾಗುತ್ತದೆ ಎನ್ನುವುದು ಬಹಿರಂಗವಾಗಿತ್ತು.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...