Homeಕರ್ನಾಟಕಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

- Advertisement -
- Advertisement -

ಹಾಸನದ ಎಚ್‌ ಡಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಪ್ರಕರಣ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸಿಲುಕಿಕೊಂಡಿರುವ ರೇವಣ್ಣ ವಿರುದ್ಧ ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

ನಾಪತ್ತೆಯಾಗಿರುವ ಮಹಿಳೆಯ ಪುತ್ರ ರಾಜು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಪ್ರಜ್ವಲ್‌ ಲೈಂಗಿಕ ದೌರ್ಜನ್ಯದ ವಿಡಿಯೋದಲ್ಲಿ ನನ್ನ ತಾಯಿಯ ವಿಡಿಯೋ ಕೂಡ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೆಚ್​ಡಿ ರೇವಣ್ಣ ವಿರುದ್ಧ ಸೆಕ್ಷನ್ 149/2024 ಕಲಂ, 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಮತ್ತು ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದು ದೂರಿನಲ್ಲಿ ನಮೂದಿಸಲಾಗಿದೆ.

ರಾಜು ನೀಡಿದ ದೂರಿನಲ್ಲಿ ಏನಿದೆ?

ನನ್ನ ತಂದೆಗೆ ಮೂವರು ಮಕ್ಕಳು, ನನ್ನ ತಾಯಿ ಹೊಳೇನರಸಿಪುರದ ಚೆನ್ನಾಂಬಿಕ ಥಿಯೇಟರ್ ಪಕ್ಕ ಇರುವ ಎಚ್‌ಡಿ ರೇವಣ್ಣ ಅವರ ಮನೆಯಲ್ಲಿ ಸುಮಾರು 6 ವರ್ಷ ಕೆಲಸ‌ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ನಮಗೆ ಪರಿಚಯಸ್ಥರಾಗದ್ದ ಸತೀಶ್ ಎಂಬವರು ಭವಾನಿ ಅಕ್ಕರವರು ಕರೆಯುತ್ತಿದ್ದಾರೆ ಎಂದು ಹೇಳಿ ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಚುನಾವಣೆಯ ದಿವಸ ಬೆಳಿಗ್ಗೆ ನನ್ನ ತಾಯಿಯನ್ನು ಸತೀಶ್ ವಾಪಸ್ಸು  ಕರೆದುಕೊಂಡು ಬಂದಿದ್ದಾರೆ. ನನ್ನ ತಂದೆ ಮತ್ತು ತಾಯಿಗೆ ಪೊಲೀಸ್ ಬಂದರೆ ಏನೂ ಹೇಳಬೇಡಿ, ಅವರಿಗೆ ಸಿಗಬೇಡಿ, ನಿಮ್ಮ ಮೇಲೆ ಕೇಸ್ ಆಗುತ್ತದೆ. ಬಂದರೆ ನನಗೆ ತಿಳಿಸಿ ನಾನು ಬಂದು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಏಪ್ರಿಲ್ 29ರಂದು 9ಗಂಟೆಗೆ ಮತ್ತೆ ಬಂದ ಸತೀಶ್, ನಿಮ್ಮ ತಾಯಿ ಪೊಲೀಸ್‌ನವರಿಗೆ ಸಿಕ್ಕಿ ಹಾಕಿಕೊಂಡರೆ ಕೇಸು ಆಗುತ್ತದೆ ಮತ್ತೆ ನೀವು ಸಹ ಜೈಲಿಗೆ ಹೋಗಬೇಕಾಗುತ್ತದೆ. ರೇವಣ್ಣ ಸಾಹೇಬರು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ನನ್ನ ತಾಯಿಗೆ ಹೇಳಿ ನನ್ನ ತಾಯಿಯನ್ನು ಒತ್ತಾಯ ಮಾಡಿಕೊಂಡು ಸತೀಶ್ ಅವರು ಹೀರೋ ಹೊಂಡಾ ಸ್ಪ್ಲೆಂಡ‌ರ್ ಬೈಕಿನಲ್ಲಿ ಕರೆದುಕೊಂಡು ಹೋದರು. ನನ್ನ ತಾಯಿಯನ್ನು ಎಲ್ಲಿಗೆ ಕರೆದುಕೊಂಡು ಹೋದರು ಎಂಬುದು ನಮಗೆ ಗೊತ್ತಿಲ್ಲ. ಮೇ.1ರಂದು ನಮ್ಮ ತಾಯಿಯ ವಿಡಿಯೋ ಬಗ್ಗೆ ಸ್ನೇಹಿತರು ನನಗೆ ಮಾಹಿತಿ ನೀಡಿದ್ದಾರೆ. ನಿನ್ನ ಅಮ್ಮನ ಕಾಲು ಕಟ್ಟಿ ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ ಎಂದು ಹೇಳಿದರು. ಈ ಬಗ್ಗೆ ದೊಡ್ಡ ಕೇಸಾಗಿರುವುದಾಗಿ ನನಗೆ ತಿಳಿಸಿದರು. ನಂತರ ನಾನು ರಾತ್ರಿ ಫೋನ್ ಮಾಡಿ ನನ್ನ ತಾಯಿ ಬಗ್ಗೆ ವಿಚಾರಿಸಿದೆ. ನನ್ನ ತಾಯಿಯನ್ನು ವಾಪಾಸು ಕರೆದುಕೊಂಡು ಬರುವಂತೆ ಹೇಳಿದೆ, ಆದರೆ ಹಲ್ಲೆ ಪ್ರಕರಣವೊಂದರಲ್ಲಿ ನಿಮ್ಮ ತಾಯಿ ಆರೋಪಿ ಎಂದು ಸುಳ್ಳು ಹೇಳಿದ್ದಾರೆ. ನನ್ನ ತಾಯಿಯನ್ನು ಹೆದರಿಸಿ ಒತ್ತಾಯವಾಗಿ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದಾರೆ, ನನ್ನ ತಾಯಿಯ ಜೀವಕ್ಕೆ ಅಪಾಯವಿದೆ, ಆದ್ದರಿಂದ ನನ್ನ ತಾಯಿಯನ್ನು ಪತ್ತೆ ಮಾಡಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...