Homeಕರ್ನಾಟಕಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

- Advertisement -
- Advertisement -

ಹಾಸನದ ಎಚ್‌ ಡಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಪ್ರಕರಣ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸಿಲುಕಿಕೊಂಡಿರುವ ರೇವಣ್ಣ ವಿರುದ್ಧ ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

ನಾಪತ್ತೆಯಾಗಿರುವ ಮಹಿಳೆಯ ಪುತ್ರ ರಾಜು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಪ್ರಜ್ವಲ್‌ ಲೈಂಗಿಕ ದೌರ್ಜನ್ಯದ ವಿಡಿಯೋದಲ್ಲಿ ನನ್ನ ತಾಯಿಯ ವಿಡಿಯೋ ಕೂಡ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೆಚ್​ಡಿ ರೇವಣ್ಣ ವಿರುದ್ಧ ಸೆಕ್ಷನ್ 149/2024 ಕಲಂ, 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಮತ್ತು ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದು ದೂರಿನಲ್ಲಿ ನಮೂದಿಸಲಾಗಿದೆ.

ರಾಜು ನೀಡಿದ ದೂರಿನಲ್ಲಿ ಏನಿದೆ?

ನನ್ನ ತಂದೆಗೆ ಮೂವರು ಮಕ್ಕಳು, ನನ್ನ ತಾಯಿ ಹೊಳೇನರಸಿಪುರದ ಚೆನ್ನಾಂಬಿಕ ಥಿಯೇಟರ್ ಪಕ್ಕ ಇರುವ ಎಚ್‌ಡಿ ರೇವಣ್ಣ ಅವರ ಮನೆಯಲ್ಲಿ ಸುಮಾರು 6 ವರ್ಷ ಕೆಲಸ‌ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ನಮಗೆ ಪರಿಚಯಸ್ಥರಾಗದ್ದ ಸತೀಶ್ ಎಂಬವರು ಭವಾನಿ ಅಕ್ಕರವರು ಕರೆಯುತ್ತಿದ್ದಾರೆ ಎಂದು ಹೇಳಿ ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಚುನಾವಣೆಯ ದಿವಸ ಬೆಳಿಗ್ಗೆ ನನ್ನ ತಾಯಿಯನ್ನು ಸತೀಶ್ ವಾಪಸ್ಸು  ಕರೆದುಕೊಂಡು ಬಂದಿದ್ದಾರೆ. ನನ್ನ ತಂದೆ ಮತ್ತು ತಾಯಿಗೆ ಪೊಲೀಸ್ ಬಂದರೆ ಏನೂ ಹೇಳಬೇಡಿ, ಅವರಿಗೆ ಸಿಗಬೇಡಿ, ನಿಮ್ಮ ಮೇಲೆ ಕೇಸ್ ಆಗುತ್ತದೆ. ಬಂದರೆ ನನಗೆ ತಿಳಿಸಿ ನಾನು ಬಂದು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಏಪ್ರಿಲ್ 29ರಂದು 9ಗಂಟೆಗೆ ಮತ್ತೆ ಬಂದ ಸತೀಶ್, ನಿಮ್ಮ ತಾಯಿ ಪೊಲೀಸ್‌ನವರಿಗೆ ಸಿಕ್ಕಿ ಹಾಕಿಕೊಂಡರೆ ಕೇಸು ಆಗುತ್ತದೆ ಮತ್ತೆ ನೀವು ಸಹ ಜೈಲಿಗೆ ಹೋಗಬೇಕಾಗುತ್ತದೆ. ರೇವಣ್ಣ ಸಾಹೇಬರು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ನನ್ನ ತಾಯಿಗೆ ಹೇಳಿ ನನ್ನ ತಾಯಿಯನ್ನು ಒತ್ತಾಯ ಮಾಡಿಕೊಂಡು ಸತೀಶ್ ಅವರು ಹೀರೋ ಹೊಂಡಾ ಸ್ಪ್ಲೆಂಡ‌ರ್ ಬೈಕಿನಲ್ಲಿ ಕರೆದುಕೊಂಡು ಹೋದರು. ನನ್ನ ತಾಯಿಯನ್ನು ಎಲ್ಲಿಗೆ ಕರೆದುಕೊಂಡು ಹೋದರು ಎಂಬುದು ನಮಗೆ ಗೊತ್ತಿಲ್ಲ. ಮೇ.1ರಂದು ನಮ್ಮ ತಾಯಿಯ ವಿಡಿಯೋ ಬಗ್ಗೆ ಸ್ನೇಹಿತರು ನನಗೆ ಮಾಹಿತಿ ನೀಡಿದ್ದಾರೆ. ನಿನ್ನ ಅಮ್ಮನ ಕಾಲು ಕಟ್ಟಿ ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ ಎಂದು ಹೇಳಿದರು. ಈ ಬಗ್ಗೆ ದೊಡ್ಡ ಕೇಸಾಗಿರುವುದಾಗಿ ನನಗೆ ತಿಳಿಸಿದರು. ನಂತರ ನಾನು ರಾತ್ರಿ ಫೋನ್ ಮಾಡಿ ನನ್ನ ತಾಯಿ ಬಗ್ಗೆ ವಿಚಾರಿಸಿದೆ. ನನ್ನ ತಾಯಿಯನ್ನು ವಾಪಾಸು ಕರೆದುಕೊಂಡು ಬರುವಂತೆ ಹೇಳಿದೆ, ಆದರೆ ಹಲ್ಲೆ ಪ್ರಕರಣವೊಂದರಲ್ಲಿ ನಿಮ್ಮ ತಾಯಿ ಆರೋಪಿ ಎಂದು ಸುಳ್ಳು ಹೇಳಿದ್ದಾರೆ. ನನ್ನ ತಾಯಿಯನ್ನು ಹೆದರಿಸಿ ಒತ್ತಾಯವಾಗಿ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದಾರೆ, ನನ್ನ ತಾಯಿಯ ಜೀವಕ್ಕೆ ಅಪಾಯವಿದೆ, ಆದ್ದರಿಂದ ನನ್ನ ತಾಯಿಯನ್ನು ಪತ್ತೆ ಮಾಡಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...