Homeಮುಖಪುಟಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್‌: ನಿರಾಶೆ ವ್ಯಕ್ತಪಡಿಸಿದ ಕುಸ್ತಿಪಟುಗಳು

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್‌: ನಿರಾಶೆ ವ್ಯಕ್ತಪಡಿಸಿದ ಕುಸ್ತಿಪಟುಗಳು

- Advertisement -
- Advertisement -

ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಶನ್‌ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ವ್ಯಾಪಕ ಪ್ರತಿಭಟನೆ ನಡೆಸಿದ್ದರು. ಅವರನ್ನು ಆ ಬಳಿಕ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿ ಪ್ರಕರಣ ದಾಖಲಿಸಲಾಗಿತ್ತು. ಉತ್ತರಪ್ರದೇಶದ ಕೈಸರ್‌ಗಂಜ್ ಕ್ಷೇತ್ರದ ಹಾಲಿ ಸಂಸದರಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ಈ ಬಾರಿ ಟಿಕೆಟ್‌ ನೀಡಲಾಗಿಲ್ಲ. ಬದಲಾಗಿ ಆತನ ಪುತ್ರನಿಗೆ ಟಿಕೆಟ್‌ ನೀಡಲಾಗಿದ್ದು, ಕುಸ್ತಿಪಟುಗಳ ಆಕ್ಷೇಪಕ್ಕೆ ಕಾರಣವಾಗಿದೆ.

ಬ್ರಿಜ್ ಭೂಷಣ್ ಅವರ ಕಿರಿಯ ಮಗ ಕರಣ್‌ಗೆ(33) ಫೆಬ್ರವರಿಯಲ್ಲಿ ಉತ್ತರಪ್ರದೇಶ ಕುಸ್ತಿ ಅಸೋಸಿಯೇಷನ್ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ಇದೇ ಕರಣ್ ಭೂಷಣ್ ಸಿಂಗ್‌ಗೆ ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್‌ ನೀಡಿರುವುದು ಭಾರೀ ಟೀಕೆಗೆ ಕಾರಣವಾಗಿದೆ.

ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ರಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್, ಭಾರತದ ಹೆಣ್ಣುಮಕ್ಕಳು ಸೋತಿದ್ದಾರೆ, ಬ್ರಿಜ್ ಭೂಷಣ್ ಗೆದ್ದಿದ್ದಾರೆ ಎಂದು ಬರೆದಿದ್ದಾರೆ. ನಾವೆಲ್ಲರೂ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ, ಬೀದಿಯಲ್ಲಿ ದಿನಗಳನ್ನು ಕಳೆದಿದ್ದೇವೆ. ಬ್ರಿಜ್ ಭೂಷಣ್ ಅವರನ್ನು ಇನ್ನೂ ಬಂಧಿಸಿಲ್ಲ. ನಾವು ಯಾವತ್ತೂ ಕೇಳಿದ್ದು ನ್ಯಾಯ ಮಾತ್ರ. ಆದರೆ ಬಂಧಿಸುವುದು ಬಿಡಿ, ಅವರ ಮಗನಿಗೆ ಟಿಕೆಟ್ ಸಿಕ್ಕಿದ್ದು ಅದು ಭಾರತದ ಕೋಟ್ಯಂತರ ಹೆಣ್ಣುಮಕ್ಕಳ ಉತ್ಸಾಹವನ್ನು ಮುರಿದಿದೆ. ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಒಬ್ಬ ವ್ಯಕ್ತಿಯ ಮುಂದೆ ಸರ್ಕಾರ ಏಕೆ ದುರ್ಬಲವಾಗಿದೆ? ನಿಮಗೆ ಬೇಕಾಗಿರುವುದು ಭಗವಾನ್ ರಾಮನ ಹೆಸರಿನಲ್ಲಿ ಮತಗಳು, ಅವರ ನೀತಿಗಳನ್ನು ಅನುಸರಿಸುವ ಬಗ್ಗೆ ನಿಮ್ಮ ನಿಲುವು ಏನು? ಎಂದು ಸಾಕ್ಷಿ ಮಲಿಕ್‌ ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಬ್ರಿಜ್ ಭೂಷಣ್ ಅವರ ಸಹಾಯಕ ಸಂಜಯ್ ಸಿಂಗ್ WFI ಚುನಾವಣೆಯಲ್ಲಿ ಗೆದ್ದ ನಂತರ ಪ್ರತಿಭಟನೆ ವ್ಯಕ್ತಪಡಿಸಿ ಸಾಕ್ಷಿ ಮಲಿಕ್ ಕುಸ್ತಿಗೆ ನಿವೃತ್ತಿ ಘೋಷಿಸಿದ್ದರು.

ನಾವು ತೀವ್ರವಾಗಿ ನಿರಾಶೆಗೊಂಡಿದ್ದೇವೆ. ಕುಸ್ತಿಪಟುಗಳಿಗೆ ಇನ್ನೂ ಯಾವುದೇ ನ್ಯಾಯ ಸಿಕ್ಕಿಲ್ಲ ಮತ್ತು ಕರಣ್ ಅವರಿಗೆ ಟಿಕೆಟ್‌ ಸಿಕ್ಕಿರುವುದು ಯಾರೂ ನಮ್ಮ ಬಗ್ಗೆ ನಿಜವಾಗಿಯೂ ಕಾಳಜಿ ವಹಿಸುವುದಿಲ್ಲ ಎಂಬುವುದನ್ನು ತೋರಿಸುತ್ತದೆ. ನನ್ನ ಮಗಳು ಪ್ರತಿಭಟಿಸಿ ಕುಸ್ತಿಯನ್ನು ತೊರೆದಳು. ಭಜರಂಗ್ ಮತ್ತು ವಿನೇಶ್ ತಮ್ಮ ರಾಷ್ಟ್ರೀಯ ಗೌರವಗಳನ್ನು ಹಿಂದಿರುಗಿಸಿದರು, ಎಲ್ಲವೂ ವ್ಯರ್ಥವಾಯಿತು ಎಂದು ತೋರುತ್ತದೆ ಎಂದು ಮಲಿಕ್ ಅವರ ತಾಯಿ ಹೇಳಿದ್ದಾರೆ.

ಜೂನ್ 2023ರಲ್ಲಿ ದೆಹಲಿ ಪೊಲೀಸರು ಬ್ರಿಜ್ ಭೂಷಣ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354, 354D, 345Aಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ 1,000 ಪುಟಗಳ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದರು. ಸದ್ಯ ಪ್ರಕರಣದ ವಿಚಾರಣೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ಕುರಿತ  ಮುಂದಿನ ವಿಚಾರಣೆ ಮೇ.7ರಂದು ನಡೆಯಲಿದೆ.

ಕುಸ್ತಿಪಟು ಜಿತೇಂದರ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕರಣ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು “ಬೆನ್ನಿಗೆ ಇರಿತ” ಎಂದು ಕರೆದಿದ್ದಾರೆ. ಇದಕ್ಕಾಗಿಯೇ ನಾವು ರಸ್ತೆಗಳಲ್ಲಿ ಮಲಗಿದ್ದೇವೆಯೇ? ನಾವು ಹೋರಾಟ ಮಾಡಿದ್ದು ಇದಕ್ಕಾಗಿಯೇ? ಬ್ರಿಜ್ ಭೂಷಣ್ ಅವರ ಜನರು WFIನ ನಾಯಕತ್ವ ವಹಿಸಿಕೊಂಡರು ಮತ್ತು ಈಗ ಅವರ ಮಗ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆದಿದ್ದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ ಖ್ಯಾತ ಕುಸ್ತಿಪಟು ಬಜರಂಗ್ ಪುನಿಯ, ಬಿಜೆಪಿ ಮಹಿಳೆಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಹಾಗೂ ಪರಿವಾರವಾದ ಅಥವಾ ವಂಶಪಾರಂಪರ್ಯ ರಾಜಕಾರಣ ಆಡಳಿತಾರೂಢ ಬಿಜೆಪಿಯಲ್ಲೂ ಬೇರೂರಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...