Homeಮುಖಪುಟಬಿಜೆಪಿಯ ನವ ಭಾರತದಲ್ಲಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ: ಪರಕಾಲ ಪ್ರಭಾಕರ್

ಬಿಜೆಪಿಯ ನವ ಭಾರತದಲ್ಲಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ: ಪರಕಾಲ ಪ್ರಭಾಕರ್

- Advertisement -
- Advertisement -

ಬಿಜೆಪಿ ಆಡಳಿತದ ನವ ಭಾರತದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪತಿ ಹಾಗೂ ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪರಕಾಲ ಪ್ರಭಾಕರ್, ಒಕ್ಕೂಟ ವ್ಯವಸ್ಥೆಯನ್ನು ನಾಶಪಡಿಸುವ ಪ್ರಯತ್ನಗಳು ನಡೆದಿವೆ. ದೇಶದಲ್ಲಿ  ಧರ್ಮವು ಯಾವಾಗಲೂ ಇತ್ತು. ಆದರೆ, ಬಿಜೆಪಿ ಆಡಳಿತದ ಈ ‘ನವ ಭಾರತ’ದಲ್ಲಿ ಹೊಸ ವಿಷಯವೆಂದರೆ ರಾಜಕೀಯ ಉದ್ದೇಶಗಳು ಮತ್ತು ಹಿತಾಸಕ್ತಿಗಳಿಗಾಗಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ ಎಂದು ಹೇಳಿದ್ದಾರೆ.

ದೇಶದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯು ಅಪಾಯದಲ್ಲಿದೆ. ಕೇಂದ್ರ ಸರ್ಕಾರವು ಟೀಕೆಗಳನ್ನು ಸ್ವೀಕರಿಸುವುದಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ ಇರುವವರು ತಮ್ಮನ್ನು ತಾವು ಸ್ವಾತಂತ್ರ್ಯ ಹೋರಾಟಗಾರರೆಂದು ಕರೆದುಕೊಳ್ಳುತ್ತಿದ್ದಾರೆ. ಇದು ನಾಚಿಗೇಡಿನ ಸಂಗತಿ. ನವಭಾರತದಲ್ಲಿ ಅಸಮಾನತೆ ತಾಂಡವವಾಡುತ್ತಿದೆ. ಆರ್ಥಿಕವಾಗಿ ಸಶಕ್ತರಾಗಿರುವ ಶೇಕಡ ಒಂದರಷ್ಟು ಜನರು ರಾಷ್ಟ್ರದ ಶೇ.40ರಷ್ಟು ಸಂ‍ಪನ್ಮೂಲವನ್ನು ಹೊಂದಿದ್ದಾರೆ ಎಂದು ಪರಕಾಲ ಪ್ರಭಾಕರ್ ಹೇಳಿದ್ದಾರೆ.

ಮೋದಿ ನೇತೃತ್ವದ ಪ್ರಸ್ತುತ ಬಿಜೆಪಿ ಸರಕಾರದ ಪ್ರಬಲ ಟೀಕಾಕಾರಾಗಿರುವ ಪರಕಾಲ ಪ್ರಭಾಕರ್ ಅವರು ಒರ್ವ ಭಾರತೀಯ ರಾಜಕೀಯ ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಮರ್ಶಕರಾಗಿದ್ದಾರೆ. ಇವರು ಲಂಡನ್‌ ಸ್ಕೂಲ್‌ ಆಪ್‌ ಎಕನಾಮಿಕ್‌ನಿಂದ ಪಿಹೆಚ್‌ಡಿ ಪಡೆದಿದ್ದರು. ಜುಲೈ 2014 ಮತ್ತು ಜೂನ್ 2018ರ ನಡುವೆ ಸಂವಹನ ಸಲಹೆಗಾರರಾಗಿ ಆಂಧ್ರ ಪ್ರದೇಶ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆಯ ಸ್ಥಾನವನ್ನು ಹೊಂದಿದ್ದರು.

ನೋಟು ರದ್ದತಿಯನ್ನು ಒಂದು ದೊಡ್ಡ ಪ್ರಮಾದ ಎಂದು ಕರೆದಿದ್ದ ಪರಕಾಲ ಪ್ರಭಾಕರ್, ಅರ್ಥಶಾಸ್ತ್ರದಲ್ಲಿ ಮೂಲಭೂತ ತರಬೇತಿ ಹೊಂದಿರುವ ಯಾವುದೇ ಅರ್ಥಶಾಸ್ತ್ರಜ್ಞರು, ಇಷ್ಟು ದೊಡ್ಡ ಪ್ರಮಾಣದಲ್ಲಿ ನೋಟು ಅಮಾನೀಕರಣವನ್ನು ಶಿಫಾರಸು ಮಾಡುತ್ತಿರಲಿಲ್ಲ ಎಂದು ಹೇಳಿದ್ದರು. ಸ್ವಾತಂತ್ರ್ಯ ಹಾಗೂ ಸಂವಿಧಾನ ರೂಪಿಸಿದ ಆಶಯಗಳಿಗೆ ವಿರುದ್ಧವಾಗಿ ದೇಶ ಸಾಗುತ್ತಿದೆ. ಜನರು ಭ್ರಮೆಗಳನ್ನೇ ವಾಸ್ತವವೆಂದು ನಂಬಿಕೊಂಡು ಸಂಭ್ರಮಿಸುತ್ತಿದ್ದಾರೆ. ಕೇಂದ್ರದ ಯೋಜನೆಗಳ ಶೇ 80ರಷ್ಟು ಹಣವನ್ನು ಪ್ರಚಾರಕ್ಕೆ ಬಳಸಲಾಗುತ್ತಿದೆ. ಪ್ರಶ್ನಿಸಿದವರನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಅವರು ಹೇಳಿದ್ದರು.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...