Homeಮುಖಪುಟಬಿಜೆಪಿಯ ನವ ಭಾರತದಲ್ಲಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ: ಪರಕಾಲ ಪ್ರಭಾಕರ್

ಬಿಜೆಪಿಯ ನವ ಭಾರತದಲ್ಲಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ: ಪರಕಾಲ ಪ್ರಭಾಕರ್

- Advertisement -
- Advertisement -

ಬಿಜೆಪಿ ಆಡಳಿತದ ನವ ಭಾರತದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪತಿ ಹಾಗೂ ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪರಕಾಲ ಪ್ರಭಾಕರ್, ಒಕ್ಕೂಟ ವ್ಯವಸ್ಥೆಯನ್ನು ನಾಶಪಡಿಸುವ ಪ್ರಯತ್ನಗಳು ನಡೆದಿವೆ. ದೇಶದಲ್ಲಿ  ಧರ್ಮವು ಯಾವಾಗಲೂ ಇತ್ತು. ಆದರೆ, ಬಿಜೆಪಿ ಆಡಳಿತದ ಈ ‘ನವ ಭಾರತ’ದಲ್ಲಿ ಹೊಸ ವಿಷಯವೆಂದರೆ ರಾಜಕೀಯ ಉದ್ದೇಶಗಳು ಮತ್ತು ಹಿತಾಸಕ್ತಿಗಳಿಗಾಗಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ ಎಂದು ಹೇಳಿದ್ದಾರೆ.

ದೇಶದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯು ಅಪಾಯದಲ್ಲಿದೆ. ಕೇಂದ್ರ ಸರ್ಕಾರವು ಟೀಕೆಗಳನ್ನು ಸ್ವೀಕರಿಸುವುದಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ ಇರುವವರು ತಮ್ಮನ್ನು ತಾವು ಸ್ವಾತಂತ್ರ್ಯ ಹೋರಾಟಗಾರರೆಂದು ಕರೆದುಕೊಳ್ಳುತ್ತಿದ್ದಾರೆ. ಇದು ನಾಚಿಗೇಡಿನ ಸಂಗತಿ. ನವಭಾರತದಲ್ಲಿ ಅಸಮಾನತೆ ತಾಂಡವವಾಡುತ್ತಿದೆ. ಆರ್ಥಿಕವಾಗಿ ಸಶಕ್ತರಾಗಿರುವ ಶೇಕಡ ಒಂದರಷ್ಟು ಜನರು ರಾಷ್ಟ್ರದ ಶೇ.40ರಷ್ಟು ಸಂ‍ಪನ್ಮೂಲವನ್ನು ಹೊಂದಿದ್ದಾರೆ ಎಂದು ಪರಕಾಲ ಪ್ರಭಾಕರ್ ಹೇಳಿದ್ದಾರೆ.

ಮೋದಿ ನೇತೃತ್ವದ ಪ್ರಸ್ತುತ ಬಿಜೆಪಿ ಸರಕಾರದ ಪ್ರಬಲ ಟೀಕಾಕಾರಾಗಿರುವ ಪರಕಾಲ ಪ್ರಭಾಕರ್ ಅವರು ಒರ್ವ ಭಾರತೀಯ ರಾಜಕೀಯ ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಮರ್ಶಕರಾಗಿದ್ದಾರೆ. ಇವರು ಲಂಡನ್‌ ಸ್ಕೂಲ್‌ ಆಪ್‌ ಎಕನಾಮಿಕ್‌ನಿಂದ ಪಿಹೆಚ್‌ಡಿ ಪಡೆದಿದ್ದರು. ಜುಲೈ 2014 ಮತ್ತು ಜೂನ್ 2018ರ ನಡುವೆ ಸಂವಹನ ಸಲಹೆಗಾರರಾಗಿ ಆಂಧ್ರ ಪ್ರದೇಶ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆಯ ಸ್ಥಾನವನ್ನು ಹೊಂದಿದ್ದರು.

ನೋಟು ರದ್ದತಿಯನ್ನು ಒಂದು ದೊಡ್ಡ ಪ್ರಮಾದ ಎಂದು ಕರೆದಿದ್ದ ಪರಕಾಲ ಪ್ರಭಾಕರ್, ಅರ್ಥಶಾಸ್ತ್ರದಲ್ಲಿ ಮೂಲಭೂತ ತರಬೇತಿ ಹೊಂದಿರುವ ಯಾವುದೇ ಅರ್ಥಶಾಸ್ತ್ರಜ್ಞರು, ಇಷ್ಟು ದೊಡ್ಡ ಪ್ರಮಾಣದಲ್ಲಿ ನೋಟು ಅಮಾನೀಕರಣವನ್ನು ಶಿಫಾರಸು ಮಾಡುತ್ತಿರಲಿಲ್ಲ ಎಂದು ಹೇಳಿದ್ದರು. ಸ್ವಾತಂತ್ರ್ಯ ಹಾಗೂ ಸಂವಿಧಾನ ರೂಪಿಸಿದ ಆಶಯಗಳಿಗೆ ವಿರುದ್ಧವಾಗಿ ದೇಶ ಸಾಗುತ್ತಿದೆ. ಜನರು ಭ್ರಮೆಗಳನ್ನೇ ವಾಸ್ತವವೆಂದು ನಂಬಿಕೊಂಡು ಸಂಭ್ರಮಿಸುತ್ತಿದ್ದಾರೆ. ಕೇಂದ್ರದ ಯೋಜನೆಗಳ ಶೇ 80ರಷ್ಟು ಹಣವನ್ನು ಪ್ರಚಾರಕ್ಕೆ ಬಳಸಲಾಗುತ್ತಿದೆ. ಪ್ರಶ್ನಿಸಿದವರನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಅವರು ಹೇಳಿದ್ದರು.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...