Homeಮುಖಪುಟಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

- Advertisement -
- Advertisement -

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ ತನ್ನ ವಿರುದ್ಧ ಸಾರ್ವಜನಿಕ ಹೇಳಿಕೆಯನ್ನು ನೀಡಿದ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರಿಗೂ ನಿಷೇಧವನ್ನು ವಿಧಿಸಿದ್ದಾರೆ.

ಚುನಾವಣಾ ಸಮಯದಲ್ಲಿ ರಾಜಕೀಯ ಲಾಭಕ್ಕೆ ಅನಧಿಕೃತ, ಕಾನೂನುಬಾಹಿರ ತನಿಖೆಯ ನೆಪ ನೆಪದಲ್ಲಿ ಪೊಲೀಸರು ರಾಜಭವನ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ರಾಜಭವನ ತಿಳಿಸಿದ್ದು, ಇದು ಪ.ಬಂಗಾಳದ ರಾಜ್ಯ ಸರಕಾರ ಮತ್ತು ರಾಜಭವನದ ನಡುವಿನ ಸಂಘರ್ಷವನ್ನು ಹೆಚ್ಚಿಸಿದೆ.

ಈ ಕುರಿತು ರಾಜಭವನ ಹೇಳಿಕೆಯನ್ನು ಹೊರಡಿಸಿದ್ದು, ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಸಚಿವರ ವಿರುದ್ಧ ಮುಂದಿನ ಕಾನೂನು ಕ್ರಮಗಳ ಕುರಿತು ಸಲಹೆಗಾಗಿ ಭಾರತದ ಅಟಾರ್ನಿ ಜನರಲ್ ಅವರನ್ನು ಸಂಪರ್ಕಿಸಲಾಗಿದೆ. ಅನಧಿಕೃತವಾಗಿ ಮತ್ತು ನ್ಯಾಯಸಮ್ಮತವಲ್ಲದ ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನವನ್ನು ಪ್ರವೇಶಿಸುವುದನ್ನು ಗೌರವಾನ್ವಿತ ರಾಜ್ಯಪಾಲರು ನಿಷೇಧಿಸಿದ್ದಾರೆ ಎಂದು ತಿಳಿಸಿದೆ.

ರಾಜ್ಯಪಾಲರು ರಾಜಭವನದ ಸಿಬ್ಬಂದಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ರಾಜ್ಯಪಾಲರು ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದರು.

ತಮ್ಮ ವಿರುದ್ಧ ಮಾನಹಾನಿಕರ ಮತ್ತು ಸಂವಿಧಾನ ವಿರೋಧಿ ಮಾಧ್ಯಮ ಹೇಳಿಕೆಗಳನ್ನು ನೀಡಿದ್ದಾರೆಂದು ರಾಜ್ಯ ಹಣಕಾಸು ಇಲಾಖೆ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರನ್ನು ರಾಜಧಾನಿ ಕೋಲ್ಕತ್ತಾ, ಡಾರ್ಜಿಲಿಂಗ್ ಮತ್ತು ಬ್ಯಾರಕ್‌ಪೋರ್‌ನಲ್ಲಿರುವ ಭವನದ ಆವರಣಕ್ಕೆ ಪ್ರವೇಶಿಸದಂತೆ ರಾಜ್ಯಪಾಲರು ನಿರ್ಬಂಧ ವಿಧಿಸಿದ್ದಾರೆ.

ರಾಜಭವನದಲ್ಲಿ ಏನಾಗುತ್ತಿದೆ ಎಂದು ನಾನು ಆಶ್ಚರ್ಯ ಪಡುತ್ತೇನೆ ಮತ್ತು ಅದು ಕೂಡ ಪ್ರಧಾನ ಮಂತ್ರಿ ರಾಜ್ಯಕ್ಕೆ ಬರುವ ದಿನದಂದು, ಗವರ್ನರ್ ಲೈಂಗಿಕ ಕಿರುಕುಳದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ನಾವು ಯಾವ ರೀತಿಯ ರಾಜ್ಯದಲ್ಲಿ ಇದ್ದೇವೆ ಎಂದು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು  ರಾಜ್ಯಪಾಲರ ಲೈಂಗಿಕ ದೌರ್ಜನ್ಯದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ ಹೇಳಿದ್ದರು.

ರಾಜ್ಯಪಾಲರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಮೊದಲು ಕೋಲ್ಕತ್ತಾ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಿಸಿದ್ದರು. ಇದರ ಬೆನ್ನಲ್ಲಿ ಪ.ಬಂಗಾಳದಲ್ಲಿ ಪ್ರಕರಣ ಭಾರೀ ಸದ್ದು ಮಾಡಿದೆ. ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಉಪ ಆಯುಕ್ತೆ ಇಂದಿರಾ ಮುಖರ್ಜಿ, ನಾವು ದೂರು ಸ್ವೀಕರಿಸಿದ್ದೇವೆ ಮತ್ತು ತನಿಖೆ ನಡೆಸುತ್ತಿದ್ದೇವೆ. ಕಾನೂನು ತಜ್ಞರೊಂದಿಗೆ ಈ ವಿಷಯದ ಬಗ್ಗೆ ಸಮಾಲೋಚಿಸುತ್ತಿದ್ದೇವೆ ಎಂದು ಹೇಳಿದ್ದರು.

ಇದನ್ನು ಓದಿ: ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...