Homeಮುಖಪುಟಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

- Advertisement -
- Advertisement -

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ ತನ್ನ ವಿರುದ್ಧ ಸಾರ್ವಜನಿಕ ಹೇಳಿಕೆಯನ್ನು ನೀಡಿದ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರಿಗೂ ನಿಷೇಧವನ್ನು ವಿಧಿಸಿದ್ದಾರೆ.

ಚುನಾವಣಾ ಸಮಯದಲ್ಲಿ ರಾಜಕೀಯ ಲಾಭಕ್ಕೆ ಅನಧಿಕೃತ, ಕಾನೂನುಬಾಹಿರ ತನಿಖೆಯ ನೆಪ ನೆಪದಲ್ಲಿ ಪೊಲೀಸರು ರಾಜಭವನ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ರಾಜಭವನ ತಿಳಿಸಿದ್ದು, ಇದು ಪ.ಬಂಗಾಳದ ರಾಜ್ಯ ಸರಕಾರ ಮತ್ತು ರಾಜಭವನದ ನಡುವಿನ ಸಂಘರ್ಷವನ್ನು ಹೆಚ್ಚಿಸಿದೆ.

ಈ ಕುರಿತು ರಾಜಭವನ ಹೇಳಿಕೆಯನ್ನು ಹೊರಡಿಸಿದ್ದು, ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಸಚಿವರ ವಿರುದ್ಧ ಮುಂದಿನ ಕಾನೂನು ಕ್ರಮಗಳ ಕುರಿತು ಸಲಹೆಗಾಗಿ ಭಾರತದ ಅಟಾರ್ನಿ ಜನರಲ್ ಅವರನ್ನು ಸಂಪರ್ಕಿಸಲಾಗಿದೆ. ಅನಧಿಕೃತವಾಗಿ ಮತ್ತು ನ್ಯಾಯಸಮ್ಮತವಲ್ಲದ ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನವನ್ನು ಪ್ರವೇಶಿಸುವುದನ್ನು ಗೌರವಾನ್ವಿತ ರಾಜ್ಯಪಾಲರು ನಿಷೇಧಿಸಿದ್ದಾರೆ ಎಂದು ತಿಳಿಸಿದೆ.

ರಾಜ್ಯಪಾಲರು ರಾಜಭವನದ ಸಿಬ್ಬಂದಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ರಾಜ್ಯಪಾಲರು ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದರು.

ತಮ್ಮ ವಿರುದ್ಧ ಮಾನಹಾನಿಕರ ಮತ್ತು ಸಂವಿಧಾನ ವಿರೋಧಿ ಮಾಧ್ಯಮ ಹೇಳಿಕೆಗಳನ್ನು ನೀಡಿದ್ದಾರೆಂದು ರಾಜ್ಯ ಹಣಕಾಸು ಇಲಾಖೆ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರನ್ನು ರಾಜಧಾನಿ ಕೋಲ್ಕತ್ತಾ, ಡಾರ್ಜಿಲಿಂಗ್ ಮತ್ತು ಬ್ಯಾರಕ್‌ಪೋರ್‌ನಲ್ಲಿರುವ ಭವನದ ಆವರಣಕ್ಕೆ ಪ್ರವೇಶಿಸದಂತೆ ರಾಜ್ಯಪಾಲರು ನಿರ್ಬಂಧ ವಿಧಿಸಿದ್ದಾರೆ.

ರಾಜಭವನದಲ್ಲಿ ಏನಾಗುತ್ತಿದೆ ಎಂದು ನಾನು ಆಶ್ಚರ್ಯ ಪಡುತ್ತೇನೆ ಮತ್ತು ಅದು ಕೂಡ ಪ್ರಧಾನ ಮಂತ್ರಿ ರಾಜ್ಯಕ್ಕೆ ಬರುವ ದಿನದಂದು, ಗವರ್ನರ್ ಲೈಂಗಿಕ ಕಿರುಕುಳದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ನಾವು ಯಾವ ರೀತಿಯ ರಾಜ್ಯದಲ್ಲಿ ಇದ್ದೇವೆ ಎಂದು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು  ರಾಜ್ಯಪಾಲರ ಲೈಂಗಿಕ ದೌರ್ಜನ್ಯದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ ಹೇಳಿದ್ದರು.

ರಾಜ್ಯಪಾಲರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಮೊದಲು ಕೋಲ್ಕತ್ತಾ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಿಸಿದ್ದರು. ಇದರ ಬೆನ್ನಲ್ಲಿ ಪ.ಬಂಗಾಳದಲ್ಲಿ ಪ್ರಕರಣ ಭಾರೀ ಸದ್ದು ಮಾಡಿದೆ. ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಉಪ ಆಯುಕ್ತೆ ಇಂದಿರಾ ಮುಖರ್ಜಿ, ನಾವು ದೂರು ಸ್ವೀಕರಿಸಿದ್ದೇವೆ ಮತ್ತು ತನಿಖೆ ನಡೆಸುತ್ತಿದ್ದೇವೆ. ಕಾನೂನು ತಜ್ಞರೊಂದಿಗೆ ಈ ವಿಷಯದ ಬಗ್ಗೆ ಸಮಾಲೋಚಿಸುತ್ತಿದ್ದೇವೆ ಎಂದು ಹೇಳಿದ್ದರು.

ಇದನ್ನು ಓದಿ: ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...