Homeಮುಖಪುಟಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

- Advertisement -
- Advertisement -

ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದುಕೊಂಡಿದೆ. ಇದರ ಬೆನ್ನಲ್ಲಿ ಅಮಿತ್ ಶಾ ಪ್ರತಿನಿಧಿಸುವ ಗಾಂಧಿನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ಗುಜರಾತ್‌ನ ಗಾಂಧಿನಗರ ಸಂಸದೀಯ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಅಮಿತ್ ಶಾ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಸ್ವತಂತ್ರವಾಗಿ ಸ್ಪರ್ಧೆಯಲ್ಲಿದ್ದ ಅಭ್ಯರ್ಥಿ ಜಿತೇಂದ್ರ ಚೌಹಾಣ್(39) ವಿಡಿಯೋವೊಂದರಲ್ಲಿ ಆರೋಪಿಸಿದ್ದಾರೆ. ನಾನು ಕೊಲ್ಲಲ್ಪಡುವ ಸಾಧ್ಯತೆಯಿದೆ, ನಾನು ನನ್ನ ದೇಶವಾಸಿಗಳಿಗೆ ಮನವಿ ಮಾಡುತ್ತೇನೆ, ಈ ರಾಷ್ಟ್ರವನ್ನು ಉಳಿಸಿ, ಇದು ಅಪಾಯದಲ್ಲಿದೆ ಎಂದು ಹೇಳಿದ್ದಾರೆ. ಇದಾದ ಮರುದಿನ ಚೌಹಾಣ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ನನ್ನ ಮೇಲೆ ಒತ್ತಡವಿದ್ದ ಕಾರಣ ನಾನು ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಚೌಹಾಣ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಗಾಂಧಿನಗರ ಬಿಜೆಪಿಯ ಭದ್ರ ಕೋಟೆ, ಇಲ್ಲಿ ಬಿಜೆಪಿ ಪಕ್ಷವು 1989ರಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತಾ ಬಂದಿದೆ. 2019ರಲ್ಲಿ ಅಮಿತ್‌ ಶಾ ಅವರ ಗೆಲುವಿನ ಅಂತರವು 5.5 ಲಕ್ಷಕ್ಕೂ ಹೆಚ್ಚು ಮತಗಳಾಗಿತ್ತು.

ಚೌಹಾಣ್ ಸೇರಿದಂತೆ ಗಾಂಧಿನಗರದ ಮೂವರು ಅಭ್ಯರ್ಥಿಗಳು ರೇಸ್‌ನಿಂದ ಹೊರಬರಲು ಒತ್ತಡವನ್ನು ಎದುರಿಸುತ್ತಿದ್ದಾರೆ ಎಂದು ಸ್ಕ್ರಾಲ್‌ಗೆ ತಿಳಿಸಿದ್ದಾರೆ. ನಮಗೆ ಸ್ಥಳೀಯ ಬಿಜೆಪಿ ನಾಯಕರು ಬೆದರಿಕೆ ಹಾಕುತ್ತಿದ್ದಾರೆ. ಗುಜರಾತ್ ಪೊಲೀಸರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಈ ಆರೋಪಗಳನ್ನು ಅಲ್ಲಗಳೆದಿದೆ, ಗುಜರಾತ್‌ನ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಈ ಕುರಿತು ತಕ್ಷಣಕ್ಕೆ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ಇದುವರೆಗೆ ಗಾಂಧಿನಗರದ 16 ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಿಂದ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಅವರಲ್ಲಿ ಚೌಹಾಣ್ ಸೇರಿದಂತೆ 12 ಮಂದಿ ಸ್ವತಂತ್ರರು ಅಭ್ಯರ್ಥಿಗಳಾಗಿದ್ದರು. ನಾಲ್ವರು ಸಣ್ಣ ರಾಜಕೀಯ ಪಕ್ಷಗಳಿಗೆ ಸೇರಿದವರಾಗಿದ್ದರು.

ನಾಮಪತ್ರ ಹಿಂಪಡೆಯಲು ಎಷ್ಟು ಹಣ ಬೇಕು ಎಂದು ಕೇಳಲಾಯ್ತು, ನನಗೆ ಹಣ ಬೇಕಾಗಿಲ್ಲ. ಆದರೆ ನಾನು ನಾಮಪತ್ರ ಹಿಂತೆಗೆದುಕೊಳ್ಳಲು ಕಾರಣಗಳಿವೆ. ನನಗೆ ಮೂವರು ಹೆಣ್ಣು ಮಕ್ಕಳಿದ್ದು, ಅವರನ್ನು ನೋಡಿಕೊಳ್ಳಬೇಕು. ನನಗೆ ಏನಾದರೂ ಸಂಭವಿಸಿದರೆ, ಅವರು ಹೇಗೆ ಬದುಕುತ್ತಾರೆ? ಏಪ್ರಿಲ್ 21ರಂದು ಕ್ರೈಂ ಬ್ರಾಂಚ್‌ನ ನಾಲ್ವರು ಅಹಮದಾಬಾದ್‌ನ ಎಲ್ಲೆಡೆ ತಮ್ಮನ್ನು ಹಿಂಬಾಲಿಸಿದ್ದಾರೆ. ಅವರು ನನ್ನ 10 ಬೆಂಬಲಿಗರಲ್ಲಿ ನಾಲ್ವರಿಗೆ ಕಿರುಕುಳ ನೀಡಿದ್ದಾರೆ ಎಂದು ಚೌಹಾನ್‌ ಹೇಳಿದ್ದಾರೆ.

ಅದೇ ರೀತಿ ಇತರ ನಾಮಪತ್ರ ಹಿಂಪಡೆದ ಅಭ್ಯರ್ಥಿಗಳು ವಿವಿಧ ಕಾರಣಗಳನ್ನು ನೀಡಿದ್ದಾರೆ, ಹಣದ ಕೊರತೆ, ಬಿಜೆಪಿಗೆ ಸೇರ್ಪಡೆ ಸೇರಿದಂತೆ ವಿವಿಧ ಕಾರಣಗಳಿಗೆ ಅವರು ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.

ಚೌಹಾಣ್ ತನ್ನ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡುವ ಒಂದು ದಿನದ ಮೊದಲು, ಒಂದು ಡಜನ್‌ಗಿಂತಲೂ ಹೆಚ್ಚು ಜನರ ಗುಂಪು ಅಹಮದಾಬಾದ್‌ನ ಚಂದ್ಖೇಡಾ ನಿವಾಸಿ, ಗಾಂಧಿನಗರದ ಪ್ರಜಾತಂತ್ರ ಆಧಾರ್ ಪಕ್ಷದ ಅಭ್ಯರ್ಥಿ ‘ಸುಮಿತ್ರಾ ಮೌರ್ಯ’ ಅವರ ಮನೆಗೆ ಪ್ರವೇಶಿಸಿದ್ದಾರೆ. ಅವರು ಸುಮಿತ್ರಾ ಮೌರ್ಯ ಅವರಿಗೆ ನಾಮಪತ್ರ ಹಿಂಪಡೆಯುವಂತೆ ಬೆದರಿಸಿದ್ದರು ಎಂದು ಆರೋಪಿಸಲಾಗಿದೆ.

ಆ ದಿನ ತನಗೆ ಮತ್ತು ತನ್ನ ಪತಿಗೆ ಸರಣಿ ದೂರವಾಣಿ ಕರೆಗಳು ಬಂದವು, ತಮ್ಮ ಬಾಸ್ ಜೊತೆ ಮಾತನಾಡುವಂತೆ ಅವರು ನನಗೆ ಸೂಚಿಸಿದರು, ಬಾಸ್‌ ಯಾರೆಂದು ಅವರು ನನಗೆ ಹೇಳಿಲ್ಲ. ನಾನು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಅವರು ನನ್ನಲ್ಲಿ ಕೇಳಿದ್ದಾರೆ ಮತ್ತು ನಾನು ಸ್ಪರ್ಧಿಸಬಾರದು ಎಂದು ಹೇಳಿದ್ದಾರೆ ಎಂದು ಸುಮಿತ್ರಾ ಮೌರ್ಯ ಆರೋಪಿಸಿದ್ದಾರೆ. ಗಾಂಧಿನಗರದಿಂದ ಸ್ಪರ್ಧೆಯಿಂದ ಸುಮಿತ್ರಾ ಮೌರ್ಯ ಹಿಂದೆ ಸರಿದಿಲ್ಲ. ಆದರೆ ವಿಡಿಯೋ ಮಾಡಿದ್ದ ಚೌಹಾಣ್ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದ್ದ ರಾಥೋಡ್ ಅವರು 2019ರಲ್ಲಿ ಬಹುಜನ ಸಮಾಜ ಪಕ್ಷದ ಟಿಕೆಟ್‌ನಲ್ಲಿ ಗಾಂಧಿನಗರದಿಂದ ಸ್ಪರ್ಧಿಸಿದ್ದರು. ಅವರು 6,500 ಮತಗಳನ್ನು ಪಡೆದಿದ್ದರು. ಅವರು ಈ ಬಾರಿ 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಸರ್ಕಾರಿ ನೌಕರಿಯಲ್ಲಿರುವ ನನ್ನ ಚಿಕ್ಕಪ್ಪನೊಂದಿಗೆ ಶಾಸಕರ ಜನರು ನನ್ನಲ್ಲಿ ಸ್ಪರ್ಧಿಸದಂತೆ ಸೂಚಿಸಿದ್ದಾರೆ. 2019ರಲ್ಲೂ ನನ್ನ ಮೇಲೆ ಒತ್ತಡವಿತ್ತು. ಆದರೆ ಆಗ ನಾನು ಹಿಂದೆ ಸರಿಯಲಿಲ್ಲ. ಈ ಬಾರಿ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ರಾಥೋಡ್ ಅವರನ್ನು ಬಿಜೆಪಿಗೆ ಸೇರುವಂತೆ ಆಗ್ರಹಿಸಲಾಗಿದೆ ಆದರೆ ಅವರು ನಿರಾಕರಿಸಿದ್ದಾರೆ. ಗಾಂಧಿನಗರದ ಕಣದಲ್ಲಿರುವ ಇನ್ನಿಬ್ಬರು ಸ್ವತಂತ್ರ ಅಭ್ಯರ್ಥಿಗಳಾದ ಸುರೇಂದ್ರ ಶಾ ಮತ್ತು ನರೇಶ್ ಪ್ರಿಯದರ್ಶಿ ಅವರಲ್ಲಿ ತಮ್ಮಂತೆಯೇ ಹಿಂದೆ ಸರಿಯುವಂತೆ ಒತ್ತಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇತರ ನಾಲ್ವರು ಸ್ವತಂತ್ರ ಅಭ್ಯರ್ಥಿಗಳಾದ ಕಿಶೋರ್ ಗೋಯಲ್, ರಜನಿಕಾಂತ್ ಪಟೇಲ್, ಮಖನ್‌ಭಾಯ್ ಕಾಲಿಯಾ ಮತ್ತು ಮೆಹಬೂಬ್ ರಂಗ್ರೇಜ್ ಸಹ ಕಣದಿಂದ ಹಿಂದೆ ಸರಿದಿದ್ದರು ಆದರೆ ಅವರು ತಮಗೆ ಒತ್ತಡ ಹಾಕಲಾಗಿದೆ ಎಂಬುವುದನ್ನು ಬಹಿರಂಗಪಡಿಸಿಲ್ಲ.

ಚೌಹಾಣ್‌ ಅವರು ಅಮಿತ್‌ ಶಾ ವಿರುದ್ಧ ಕಣಕ್ಕಿಳಿದಿರುವಾಗ ಬಿಜೆಪಿಯಷ್ಟು ಬಲಿಷ್ಠವಾಗಿರುವ ಪಕ್ಷ ಅವರ ಉಮೇದುವಾರಿಕೆ ಬಗ್ಗೆ ಏಕೆ ಚಿಂತಿಸುತ್ತದೆ ಎಂದು ಕೇಳಿದಾಗ, ದೇಶದ ಗೃಹ ಸಚಿವರ ವಿರುದ್ಧ ಸಣ್ಣ ವ್ಯಕ್ತಿಯೊಬ್ಬ ಚುನಾವಣೆಯಲ್ಲಿ ನಿಂತಾಗ ಸಚಿವರ ಆತ್ಮಗೌರವಕ್ಕೆ ಕುತ್ತು ಬರುತ್ತದೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ಕೊನೆಗೊಂಡಿದೆ ಎಂದು ನಾನು ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...