Homeಮುಖಪುಟರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ ವೇಮುಲಾ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದ್ದು, ಈ ವೇಳೆ ಪ್ರಕರಣದ ಮರು ತನಿಖೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

2016ರ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಮುಕ್ತಾಯದ (ಫೈಲ್ ಕ್ಲೋಸ್) ವರದಿಯನ್ನು ಸಲ್ಲಿಸಿದ್ದು, ಆಗಿನ ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ವಿಧಾನ ಪರಿಷತ್ ಸದಸ್ಯ ಎನ್ ರಾಮಚಂದರ್ ರಾವ್ ಮತ್ತು ಉಪಕುಲಪತಿ ಅಪ್ಪಾ ರಾವ್, ಎಬಿವಿಪಿ ಮುಖಂಡರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಕ್ಲೀನ್‌ ಚಿಟ್‌ ನೀಡಿದ್ದರು.

ತೆಲಂಗಾಣ ಹೈಕೋರ್ಟ್‌ಗೆ ಈ ಕುರಿತು ವರದಿ ಸಲ್ಲಿಕೆಯಾಗಿದ್ದು, ವರದಿಯು ರೋಹಿತ್ ‘ಪರಿಶಿಷ್ಟ ಜಾತಿಗೆ ಸೇರಿದವನಲ್ಲ’ ಎಂದು ಹೇಳಿದೆ ಮತ್ತು ತನ್ನ “ನಿಜವಾದ ಜಾತಿಯ ಗುರುತು” ಪತ್ತೆಯಾಗುತ್ತದೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಊಹಿಸಲಾಗಿದೆ ಎಂದು ಹೇಳಲಾಗಿದೆ. ಆತನ ಕುಟುಂಬದ ಜಾತಿ ಪ್ರಮಾಣಪತ್ರಗಳನ್ನು ಯಾವುದೇ ಸಾಕ್ಷ್ಯವನ್ನು ನೀಡದೆ ನಕಲಿ ಮಾಡಲಾಗಿದೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ.

ಇದರ ಬೆನ್ನಲ್ಲಿ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ), ರವಿ ಗುಪ್ತಾ ಅವರು ಪ್ರತಿಕ್ರಿಯಿಸಿದ್ದು, ಪ್ರಕರಣದ ವರದಿಯಲ್ಲಿ ವ್ಯತ್ಯಾಸ ಕಂಡು ಬಂದಿದೆ. ಈ ಹಿನ್ನೆಲೆ ನ್ಯಾಯಾಲಯದ ಮಧ್ಯಪ್ರವೇಶವನ್ನು ಕೋರುತ್ತಿದ್ದೇವೆ, ಈ ಕುರಿತು ಹೆಚ್ಚಿನ ತನಿಖೆಗೆ ಅನುಮತಿ ನೀಡುವಂತೆ ಮ್ಯಾಜಿಸ್ಟ್ರೇಟ್‌ಗೆ ಮನವಿ ಮಾಡುವುದಾಗಿ ಹೇಳಿದ್ದಾರೆ.

ವರದಿಯಲ್ಲಿ ಕೆಲವು ಅನುಮಾನಗಳಿವೆ. ಪ್ರಕರಣದ ಬಗ್ಗೆ ಪರಿಶೀಲಿಸಲು ನಾವು ನ್ಯಾಯಾಲಯವನ್ನು ಕೋರುತ್ತೇವೆ ಎಂದು ಹೇಳಿದರು. ಮೃತ ರೋಹಿತ್ ವೇಮುಲನ ತಾಯಿ ಹಾಗೂ ಇತರರಿಂದ ಕೆಲವು ಅನುಮಾನಗಳು ವ್ಯಕ್ತವಾಗಿರುವುದರಿಂದ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲು ನಿರ್ಧರಿಸಲಾಗಿದ್ದು, ಪ್ರಕರಣದ ಮುಂದಿನ ತನಿಖೆಗೆ ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಮಾದಾಪುರದ ಸಹಾಯಕ ಪೊಲೀಸ್ ಆಯುಕ್ತರಾಗಿದ್ದು, ಕಳೆದ ನವೆಂಬರ್ 2023ರ ಮೊದಲು ಪ್ರಕರಣದ ಅಂತಿಮ ಮುಕ್ತಾಯ ವರದಿಯನ್ನು ಅವರು ನಡೆಸಿದ್ದ ತನಿಖೆಯ ಆಧಾರದ ಮೇಲೆ ಸಿದ್ಧಪಡಿಸಿದ್ದಾರೆ ಎಂದು ಡಿಜಿಪಿ ಹೇಳಿದ್ದಾರೆ.

 

ಇದನ್ನು ಓದಿ: ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...