Homeಫ್ಯಾಕ್ಟ್‌ಚೆಕ್FACT CHECK : ಬಿಜೆಪಿ ಮಾತ್ರ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂಬ ಮೋದಿ ಹೇಳಿಕೆ...

FACT CHECK : ಬಿಜೆಪಿ ಮಾತ್ರ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

ಮೇ 1, 2024 ರಂದು ಗುಜರಾತ್‌ನ ಬನಸ್ಕಾಂತದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, “ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದ ಏಕೈಕ ಪಕ್ಷ ಬಿಜೆಪಿ” ಎಂದು ಹೇಳಿದ್ದರು.

ಲೋಕಸಭೆಯು 545 ಸ್ಥಾನಗಳನ್ನು ಹೊಂದಿದ್ದು, ಈ ಪೈಕಿ 543 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಯಾವುದೇ ಪಕ್ಷ ಸರ್ಕಾರ ರಚಿಸಲು 272 ಸ್ಥಾನಗಳ ಬಹುಮತ ಬೇಕಿದೆ.

ಗುಜರಾತಿ ಭಾಷೆಯಲ್ಲಿ ಮಾತನಾಡಿದ್ದ ಮೋದಿ, “ಯಾವುದೇ ಪಕ್ಷ ಕೇಂದ್ರದಲ್ಲಿ ಸರ್ಕಾರ ರಚಿಸಲು ಕನಿಷ್ಠ 272 ಸ್ಥಾನಗಳ ಅಗತ್ಯವಿದೆ. ಬಿಜೆಪಿ ಹೊರತುಪಡಿಸಿ, ದೇಶದ ಯಾವುದೇ ರಾಜಕೀಯ ಪಕ್ಷಗಳು 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ. ಕಾಂಗ್ರೆಸ್‌ನವರು ಸರ್ಕಾರ ರಚಿಸುವುದಾಗಿ ಹೇಳುತ್ತಿದ್ದಾರೆ. ದೆಹಲಿಯಲ್ಲಿ ಅವರ ರಾಜ ಮನೆತನದವರು ಕಾಂಗ್ರೆಸ್‌ಗೆ ಮತ ಹಾಕಲು ಅಭ್ಯರ್ಥಿಗಳಿಲ್ಲ. ಭರೂಚ್‌ನಲ್ಲಿ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್ ಅವರ ಕುಟುಂಬ ಮತ ಹಾಕಲು ಕಾಂಗ್ರೆಸ್‌ ಅಭ್ಯರ್ಥಿಗಳಿಲ್ಲ. ಭಾವನಗರದ ದೊಡ್ಡ ದೊಡ್ಡ ಕಾಂಗ್ರೆಸ್‌ ನಾಯಕರು ಕೂಡ ಆ ಪಕ್ಷದ ಅಭ್ಯರ್ಥಿಗೆ ಮತ ಹಾಕಲು ಸಾಧ್ಯವಿಲ್ಲ. ಇದು ಕಾಂಗ್ರೆಸ್‌ನ ಪರಿಸ್ಥಿತಿ” ಎಂದಿದ್ದಾರೆ.

ಫ್ಯಾಕ್ಟ್‌ಚೆಕ್ : ಮೋದಿ ಹೇಳಿಕೆಯ ಸತ್ಯಾಸತ್ಯತೆ ಪರಿಶೀಲಿಸುವ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಪ್ರಧಾನಿಯ ಹೇಳಿಕೆಯ ಕುರಿತು ಎಎನ್‌ಐ ಸುದ್ದಿ ಸಂಸ್ಥೆ ಹಂಚಿಕೊಂಡಿರುವ ಭಾಷಣಕ್ಕೆ ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಅವರು ಪ್ರತಿಕ್ರಿಯೆ ನೀಡಿದ್ದು ಕಂಡು ಬಂದಿದೆ.

“ಕಾಂಗ್ರೆಸ್ ಪಕ್ಷ ಇದುವರೆಗೆ 326 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ನೀವು ಸಂಪೂರ್ಣ ಗಣಿತಶಾಸ್ತ್ರದಲ್ಲಿ ಪದವಿ ಹೊಂದಿದ್ದೀರಾ ಪ್ರಧಾನ ಮಂತ್ರಿಯವರೇ?” ಎಂದು ಪವನ್ ಖೇರಾ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಕಾಂಗ್ರೆಸ್‌ನ ಪ್ರಚಾರ ಘಟಕದ ಅಧಿಕೃತ ಎಕ್ಸ್ ಖಾತೆ INC Sandesh (@incsandesh)ನಲ್ಲಿ ಏಪ್ರಿಲ್ 22, 2024ರಂದು ಪ್ರಕಟಿಸಿದ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಲಭ್ಯವಾಗಿದೆ. ಈ ಪಟ್ಟಿಯಲ್ಲಿ ಒಟ್ಟು 301 ಅಭ್ಯರ್ಥಿಗಳ ಹೆಸರಿದೆ.

ಇಷ್ಟೇ ಅಲ್ಲದೆ ಏಪ್ರಿಲ್ 30, 2024ರವರೆಗೆ ಬಿಹಾರದ 1, ಆಂಧ್ರ ಪ್ರದೇಶದ 3, ತೆಲಂಗಾಣದ 3, ಮಹಾರಾಷ್ಟ್ರದ 2, ಹರಿಯಾಣದ 9, ಒಡಿಶಾದ 2, ಪಂಜಾಬ್‌ನ 4 ಮತ್ತು ಹಿಮಾಚಲ ಪ್ರದೇಶದ 2 ಕ್ಷೇತ್ರಗಳು ಸೇರಿ 26 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಈ ಮೂಲಕ ಪಕ್ಷದ ಒಟ್ಟು ಅಭ್ಯರ್ಥಿಗಳ ಸಂಖ್ಯೆ 327ಕ್ಕೆ ತಲುಪಿದೆ.

ಮೋದಿ ಭಾಷಣದಲ್ಲಿ ಉಲ್ಲೇಖಿಸಿದ ಭರೂಚ್ ಮತ್ತು ಭಾವನಗರ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಮಿತ್ರ ಪಕ್ಷ ಆಮ್‌ ಆದ್ಮಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ವರದಿ ಲಿಂಕ್ ಇಲ್ಲಿದೆ 

ಹಾಗಾಗಿ, ಬಿಜೆಪಿ ಮಾತ್ರ 272ಕ್ಕಿಂತ ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು

ಇದನ್ನೂ ಓದಿ : FACT CHECK : ಕಾಂಗ್ರೆಸ್ ಪ್ರಣಾಳಿಕೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಭರವಸೆ ನೀಡಿದೆ ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...