Homeಅಂತರಾಷ್ಟ್ರೀಯಅನೌಪಚಾರಿಕ ಶೃಂಗಸಭೆ - ಉಭಯ ನಾಯಕರ ವ್ಯರ್ಥ ಕಸರತ್ತು : ಜಾಲಿ ರೈಡ್ ನಡೆಸಿದ ಮೋದಿ-ಕ್ಸಿ

ಅನೌಪಚಾರಿಕ ಶೃಂಗಸಭೆ – ಉಭಯ ನಾಯಕರ ವ್ಯರ್ಥ ಕಸರತ್ತು : ಜಾಲಿ ರೈಡ್ ನಡೆಸಿದ ಮೋದಿ-ಕ್ಸಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರ ನಡುವಿನ ಮಾತುಕತೆ ವ್ಯರ್ಥ ಕಸರತ್ತಿನಂತೆ ಕಾಣುತ್ತದೆ. ಇದು ಅನೌಪಚಾರಿಕ ಶೃಂಗಸಭೆಯಾದ್ದರಿಂದ ನಿರ್ಧಿಷ್ಟಪಡಿಸಿದ ವಿಷಯಗಳೇ ಪ್ರಸ್ತಾಪವಾಗಬೇಕು ಎಂದೇನೂ ಇರಲಿಲ್ಲ. ಹಾಗಾಗಿ ಆರ್ಥಿಕ ವಿಷಯಗಳಲ್ಲದೆ ಗಡಿ ವಿಷಯಗಳು ಚರ್ಚೆಗೆ ಬರಬೇಕಿತ್ತು. ಪ್ರಧಾನಿ ಮೋದಿ ಆರ್ಥಿಕತೆ ಮತ್ತು ವ್ಯಾಪಾರ ಕುರಿತು ಮಾತನಾಡಿದರೆ ಕ್ಸಿ ಸರಕು ಮತ್ತು ಹೂಡಿಕೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಉಭಯ ನಾಯಕರು ಪ್ರಜ್ಞಾಪೂರ್ವಕವಾಗಿಯೇ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸುವ ಗೋಜಿಗೆ ಹೋಗಿಲ್ಲ. ಹೀಗಾಗಿ ಮೋದಿ-ಕ್ಸಿ ಜೋಡಿ ಹಳೆಯ ವಿಷಯಗಳಿಗೆ ಕಟ್ಟುಬಿದ್ದಿರುವುದರಿಂದ ಶೃಂಗಸಭೆಯ ಉದ್ದೇಶ ಈಡೇರಿದಂತೆ ಆಗಿಲ್ಲ ಎನ್ನಬಹುದು.

ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿ ರದ್ದುಪಡಿಸುವ ಮೊದಲು ಹಾಗೂ ನಂತರವೂ ಚೀನಾ ದೇಶ ಪಾಕಿಸ್ತಾನದ ಪರ ಧ್ವನಿ ಎತ್ತುತ್ತಲೇ ಬರುತ್ತಿದೆ. ಪ್ರತಿಯೊಂದು ಹಂತದಲ್ಲೂ ಚೀನಾ ಪಾಕಿಸ್ತಾನವನ್ನು ಬಿಟ್ಟುಕೊಟ್ಟಿಲ್ಲ. ವಿಶೇಷ ಸ್ಥಾನಮಾನ ತೆಗೆದ ಬಳಿಕ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎರಡು ಬಾರಿ ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿ ಬಂದು ತಾನು ಭಾರತದ ಪರ ಇಲ್ಲ ಎಂಬುದನ್ನು ಪ್ರದರ್ಶಿಸಿದೆ. ಚೀನಾ ದೇಶವು ಪಾಕಿಸ್ತಾನ ನೆಲದಲ್ಲಿ ಅಂದರೆ ಭಾರತದ ಗಡಿಗೆ ಹೊಂದಿಕೊಂಡಂತೆ ಆರ್ಥಿಕ ಕಾರಿಡಾರ್ ಹೊಂದಿರುವ ಕಾರಣ ಆ ದೇಶಕ್ಕೆ ಪಾಕ್‍ನ್ನು ಬೆಂಬಲಿಸುವುದು ಅನಿವಾರ್ಯವು ಆಗಬಹುದು. ಹಾಗಾಗಿಯೇ ಚೀನಾಕ್ಕೆ ಪಾಕ್ ಮೇಲಿನ ಪ್ರೇಮ ಹೆಚ್ಚು. ಇದೇ ಕಾರಣಕ್ಕಾಗಿಯೇ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, 56 ಇಂಚಿನ ಎದೆಯನ್ನು ಈಗ ಪ್ರಧಾನಿ ಚೀನಾ ಅಧ್ಯಕ್ಷರ ಮುಂದೆ ಪ್ರದರ್ಶಿಸಬೇಕು. ಪಾಕ್ ಆಕ್ರಮಿತ ಕಾಶ್ಮೀರದಿಂದ ಹಿಂದೆ ಸರಿಯಲು ಕ್ಸಿಗೆ ಪ್ರಧಾನಿ ನೇರವಾಗಿ ಹೇಳಬೇಕು ಎಂದು ವ್ಯಂಗ್ಯವಾಗಿ ತಿವಿದರು.

ಚೀನಾ ಮತ್ತು ಭಾರತದ ನಡುವೆ ಗಡಿ ವಿವಾದ ಹಿಂದಿನಿಂದಲೂ ಇದೆ. ಅದನ್ನು ಬಗೆಹರಿಸುವ ಸಣ್ಣ ಪ್ರಯತ್ನಗಳು ನಡೆದಿವೆಯಾದರೂ ಗಡಿ ವಿವಾದಗಳು ಬಗೆಹರಿದಿಲ್ಲ. ಭಾರತ ಮತ್ತು ಚೀನಾ ಗಡಿಯನ್ನು ಹಂಚಿಕೊಂಡಿವೆ. ಅದೇ ಕಾರಣಕ್ಕೆ ವಿವಾದ ಹಾಗೆಯೇ ಉಳಿದಿದೆ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ನಿರ್ಮಾಣವಾಗುವ ಸಂದರ್ಭದಲ್ಲಿ ಭಾರತ ತಕರಾರು ಎತ್ತಿತ್ತು. ನಮ್ಮ ಗಡಿಯಲ್ಲಿ ಆರ್ಥಿಕ ಕಾರಿಡಾರು ಮಾಡಬಾರದು ಎಂದು ಪ್ರಧಾನಿ ಮೋದಿ ಹೇಳಿದರು. ಇದೇ ನೆಪವನ್ನು ಇಟ್ಟುಕೊಂಡು ಚೀನಾ ಮತ್ತೆ ಕ್ಯಾತೆ ತೆಗೆಯಿತು. 2017ರಲ್ಲಿ ತನ್ನ ಗಡಿಭಾಗದಲ್ಲಿ ಹೆಚ್ಚುವರಿ ಸೈನಿಕರ ಜಮಾವಣೆ ಮಾಡಿತು. ಇದಕ್ಕೆ ಉತ್ತರವಾಗಿ ಭಾರತವೂ ಗಡಿಯಲ್ಲಿ ಸೈನಿಕರ ನಿಯೋಜನೆ ಮಾಡಿತು. ಇದರಿಂದಾಗಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂತಾರಾಷ್ಟ್ರೀಯ ಒತ್ತಡ ಹೆಚ್ಚಿದಂತೆ ಉಭಯ ರಾಷ್ಟ್ರಗಳು ಸೈನಿಕರನ್ನು ವಾಪಸ್ ಕರೆಸಿಕೊಂಡರು.

ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಕೆಲವು ಭಾಗಗಳು ತನಗೆ ಸೇರಬೇಕು ಎಂದು ಚೀನಾ ವಾದಿಸಿತು. ಹೀಗಾಗಿ ಸಿಕ್ಕಿಂ ಪ್ರದೇಶದ ಕೋಳಿ ಕತ್ತು ಅಥವಾ ಟ್ರೈ ಜಂಕ್ಷನ್ ಪ್ರದೇಶದಲ್ಲಿ ದ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು. ಆ ವಿಷಯ ಇನ್ನೂ ಹಸಿರಾಗಿಯೇ ಇದೆ. ಪರಿಸ್ಥಿತಿ ಹೀಗಿರುವಾಗ ಗಂಭೀರವಾದ ವಿಷಯಗಳು ಅನೌಪಚಾರಿಕ ಶೃಂಗಸಭೆಯಲ್ಲಿ ಚರ್ಚೆಗೆ ಬಂದಿದ್ದರೆ ಒಳ್ಳೆಯದಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಮ್ಮು-ಕಾಶ್ಮೀರ ವಿಷಯವನ್ನು ತೆಗೆದುಕೊಂಡು ಹೋಗಿದ್ದರೂ ಅದು ಉಭಯ ದೇಶಗಳ ನಡುವೆ ಮಾತುಕತೆಯ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇದು ಭಾರತದ ಪ್ರತಿಪಾದನೆಯೂ ಕೂಡ. ಆದರೆ ಭಾರತ ಅಮೇರಿಕಾವನ್ನು ನಂಬಿ ಕೂತಂತೆ ಕಾಣುತ್ತಿದೆ. ಪ್ರಧಾನಿ ಮೋದಿ ಅವರು ಪದೇಪದೇ ಅಮೆರಿಕಾ ಅಧ್ಯಕ್ಷರನ್ನು ಭೇಟಿ ಮಾಡುತ್ತಿರುವುದು ಇದಕ್ಕೆ ಉದಾಹರಣೆಯಾಗಿದೆ. ಅಮೆರಿಕಾ ತನ್ನ ನಿಲುವು ಸ್ಪಷ್ಟಪಡಿಸದೆ ಒಮ್ಮೆ ಭಾರತದ ಪರವಾಗಿ ಮತ್ತೊಮ್ಮೆ ಪಾಕಿಸ್ತಾನದ ಪರವಾಗಿ ಮಾತನಾಡುತ್ತ ತನ್ನ ಶಸ್ತ್ರಾಸ್ತ್ರಗಳ ಮಾರಾಟದಲ್ಲಿ ತೊಡಗಿದೆ.

ಭಾರತದ ಪ್ರಧಾನಿ ಭೇಟಿಯಾದರೆ ಉಭಯ ದೇಶಗಳು ಗಡಿ ವಿವಾದವನ್ನು ಬಗೆಹರಿಸಿಕೊಳ್ಳಲಿ ಅನ್ನುವುದು. ಪಾಕ್ ಪ್ರಧಾನಿ ಭೇಟಿ ಮಾಡಿದರೆ ತಾನು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ದ ಎನ್ನುವುದು. ಹೀಗೆ ಎರಡು ನಾಲಗೆಯ ಮಾತುಗಳು ಅಮೆರಿಕಾದಿಂದ ಹೊರಬರುತ್ತಿವೆ. ಇದು ಭಾರತಕ್ಕೆ ತಿಳಿಯುತ್ತಿಲ್ಲವೇ? ಅಮೆರಿಕಾ ಮತ್ತು ಚೀನಾ ಪಾಕಿಸ್ತಾನದ ಪರವಾಗಿಯೇ ಇದ್ದರೂ ಭಾರತ ಯಾರ ಓಲೈಕೆಯಲ್ಲಿ ತೊಡಗಿದೆ ಎಂಬ ಪ್ರಶ್ನೆ ಎದುರಾಗುತ್ತದೆ. ಇದು ವ್ಯರ್ಥ ಕಸರತ್ತೂ ಕೂಡ. ಭಾರತ ರಾಜತಾಂತ್ರಿಕ ಪ್ರಬುದ್ಧತೆ ಪ್ರದರ್ಶಿಸುತ್ತಿಲ್ಲ. ಚರ್ಚಿತವಾಗಬೇಕಾದ ವಿಷಯಗಳೇ ಪ್ರಮುಖವಾಗುತ್ತಿಲ್ಲ.

ಚೀನಾ ಅಧ್ಯಕ್ಷರು ‘ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ’ ಬಗ್ಗೆ ಮಾತನಾಡಿದ್ದಾರೆ. ಅದು ಬೆಲ್ಟ್ ಅಂಡ್ ರೋಡ್ ಇನಿಶಿಯೇಟಿವ್ ಇಲ್ಲವೇ ಬೆಲ್ ಅಂಡ್ ರೋಡ್ ಫೋರಂ ಮತ್ತು ಆರ್ಥಿಕ ಕಾರಿಡಾರ್‌ನ ಮುಂದುವರೆದ ಭಾಗ. ಈಗಾಗಲೇ ಪಾಕಿಸ್ತಾನದಲ್ಲಿ ತನ್ನ ನೆಲೆಯನ್ನು ಕಂಡುಕೊಂಡಿರುವ ಚೀನಾ. ಭಾರತದ ಮೇಲೂ ಹೊಸ ಆರ್ಥಿಕ ಪಾಲುದಾರಿಕೆ ಮೂಲಕ ಸವಾರಿ ಮಾಡಲು ಹೊರಟಂತೆ ಕಾಣುತ್ತಿದೆ. ಚೀನಾ ಉತ್ಪನ್ನಗಳನ್ನು ತಿರಸ್ಕರಿಸಬೇಕು ಎನ್ನುವ ಬಿಜೆಪಿಯು ತನ್ನದೇ ಕೇಂದ್ರ ಸರ್ಕಾರ ಚೀನಾದಿಂದ ಹೂಡಿಕೆಗೆ ಅವಕಾಶ ನೀಡುತ್ತಿರುವುದನ್ನು ಮಗುಮ್ಮಾಗಿಯೇ ಸ್ವೀಕರಿಸುವ ಮೂಲಕ ತನ್ನ ಆಷಾಡಭೂತಿತನವನ್ನು ಪ್ರದರ್ಶಿಸಿದೆ. ಕಳೆದ ಐದು ವರ್ಷದಿಂದ ಇಚೀಗೆ ಯಾವುದೇ ದೇಶ ಇಂಡಿಯಾದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿಲ್ಲ. ಹಾಗಾದರೆ ವಿದೇಶ ಸುತ್ತುವ ಮೋದಿ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಎದುರಾಗುತ್ತದೆ. ಆದ್ದರಿಂದ ಮಾಮಲ್ಲಪುರಂನಲ್ಲಿ ಚೀನಾ ಅಧ್ಯಕ್ಷರಿಗೆ ಕೆಂಪು ನೆಲಹಾಸ ಹಾಕಿ ಸ್ವಾಗತಿಸಿದರೂ ಉಭಯ ನಾಯಕರ ನಡುವೆ ನಡೆದ ಚರ್ಚೆ ವ್ಯರ್ಥ ಕಸರತ್ತು ಎನ್ನದೆ ಬೇರೆ ಮಾರ್ಗವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...