Homeಕರ್ನಾಟಕಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

- Advertisement -
- Advertisement -

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಮತ್ತು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಶುಕ್ರವಾರ (ಮೇ 3) ಸಿಎಂಗೆ ಪತ್ರ ಬರೆದಿರುವ ರಾಹುಲ್ ಗಾಂಧಿ, “ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ನಮ್ಮ ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು” ಎಂದಿದ್ದಾರೆ.

“ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್​​ ಶಾ ವಿರುದ್ದ ಕಿಡಿಕಾರಿರುವ ರಾಹುಲ್ ಗಾಂಧಿ “ಈ ಬಗ್ಗೆ ಕೇಂದ್ರ ಸಚಿವ ಅಮಿತ್​​ ಶಾ ಅವರಿಗೆ ಮೊದಲೇ ದೇವರಾಜೇಗೌಡ ಮಾಹಿತಿ ನೀಡಿದ್ದಾರೆ. ಆದರೂ ಪ್ರಜ್ವಲ್‌ಗೆ ಟಿಕೆಟ್​​​ ನೀಡಿರುವುದು ಆಘಾತದ ವಿಷಯ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ, ಅವರು ಪ್ರಜ್ವಲ್ ಪರವಾಗಿ ಪ್ರಚಾರ ಮಾಡಿದ್ದು ಆಘಾತಕಾರಿ ಬೆಳವಣಿಗೆ” ಎಂದು ಹೇಳಿದ್ದಾರೆ.

“ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವವರ ವಿರುದ್ದ ತುಟಿ ಬಿಚ್ಚದಿರುವ ಇಂತಹ ಹಿರಿಯ ರಾಜಕಾರಣಿಯನ್ನು ನನ್ನ ಎರಡು ದಶಕಗಳ ಸಾರ್ವಜನಿಕ ಜೀವನದಲ್ಲಿ ಯಾವತ್ತೂ ನೋಡಿಲ್ಲ” ಎಂದಿದ್ದಾರೆ

“ಪ್ರಜ್ವಲ್​​​ಗೆ ಭಾರತದಿಂದ ಪರಾರಿಯಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ. ಪ್ರಧಾನಿ ಮೋದಿ ಅವರು ಹರಿಯಾಣ ಮಹಿಳಾ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಮೌನ ವಹಿಸಿದ್ದಾರೆ. ಇದು ಮೋದಿ ಪರಿವಾರದ ಸದಸ್ಯರ ಪ್ರಕರಣ” ಎಂದು ರಾಹುಲ್ ಟೀಕಿಸಿದ್ದಾರೆ.

“ಪ್ರಜ್ವಲ್ ವಿರುದ್ದದ ಆರೋಪಗಳ ತನಿಖೆಗೆ ಕರ್ನಾಟಕ ಸರ್ಕಾರ ವಿಶೇಷಾ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಆರೋಪಿಯ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಪ್ರಧಾನಿಗೆ ಪತ್ರವನ್ನೂ ಬರೆದಿದ್ದೇನೆ. ಪಾಸ್‌ಪೋರ್ಟ್ ರದ್ದುಗೊಳಿಸಿ ಆದಷ್ಟು ಬೇಗ ಆರೋಪಿಯನ್ನು ವಶಕ್ಕೆ ಪಡೆಯಬೇಕಿದೆ” ಎಂದಿದ್ದಾರೆ

“ಸಂತ್ರಸ್ತೆಯರಿಗೆ ಅಗತ್ಯವಿರುವ ಎಲ್ಲಾ ರೀತಿಯ ಬೆಂಬಲ ನೀಡುವಂತೆ ನಾನು ನಿಮ್ಮಲ್ಲಿ ಮನವಿ ಮಾಡುತ್ತಿದ್ದೇನೆ. ಅವರಿಗೆ ಅನ್ಯಾಯದ ವಿರುದ್ದ ಹೋರಾಡಲು ನಮ್ಮ ಬೆಂಬಲ ಬೇಕಿದೆ. ಈ ದುಷ್ಕೃತ್ಯದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರೆಲ್ಲರನ್ನೂ ಕಾನೂನಡಿ ತರಬೇಕಿದೆ” ಎಂದು ರಾಹುಲ್ ಗಾಂಧಿ ಪತ್ರದಲ್ಲಿ ಹೇಳಿದ್ದಾರೆ.

ಸಂತ್ರಸ್ತರ ರಕ್ಷಣೆಗೆ ಸರ್ಕಾರ ಸಿದ್ದ : ಸಿಎಂ

ರಾಹುಲ್ ಗಾಂಧಿಯ ಪತ್ರವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸಿಎಂ, “ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು. ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್ ಗಾಂಧಿ ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ : ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...