HomeUncategorizedಪಾವಗಡದ ಮೇಲೆ ಸಂಸದ ನಾರಾಯಣಸ್ವಾಮಿಯ ದಿಢೀರ್ ಮಮಕಾರದ ಮರ್ಮವೇನು ಗೊತ್ತಾ?

ಪಾವಗಡದ ಮೇಲೆ ಸಂಸದ ನಾರಾಯಣಸ್ವಾಮಿಯ ದಿಢೀರ್ ಮಮಕಾರದ ಮರ್ಮವೇನು ಗೊತ್ತಾ?

- Advertisement -
- Advertisement -

ತಿಂಗಳಿಗೆ ಕನಿಷ್ಟ ನಾಲ್ಕೈದು ಬಾರಿ ಪಾವಗಡಕ್ಕೆ ಬಂದುಹೋಗುತ್ತಿರುವ ಸಂಸದ ನಾರಾಯಣಸ್ವಾಮಿ ಅವರಿಗೆ ಪಾವಗಡದ ಮೇಲೆ ದಿಢೀರ್ ಅಂತ ಪ್ರೀತಿ ಉಕ್ಕಿ ಬರಲು ಕಾರಣವೇನಿರಬಹುದು..

 

 

 

 

ಪಾವಗಡ ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರ. ಇಲ್ಲಿ ದಲಿತರದ್ದೇ ಮೇಲುಗೈ, ಅಂದ್ರೆ ಜನಸಂಖ್ಯೆ ಯಲ್ಲಿ ಮಾತ್ರವೇ ಹೊರತು ಅಧಿಕಾರ ಅನುಭವಿಸಲು ಅಲ್ಲ. ದಲಿತ ಸಮುದಾಯದ ಅಭ್ಯರ್ಥಿಯೇ ಶಾಸಕರಾಗಿ ಆಯ್ಕೆಯಾಗಿ ಬಂದರೂ ಪರೋಕ್ಷವಾಗಿ ಆಡಳಿತ ನಡೆಸುವವರು ಬೇರೆಯವರು. ಶಾಸಕರು ಮತ್ತು ಪಕ್ಷದ ಸಂಪೂರ್ಣ ಹಿಡಿತ ರೆಡ್ಡಿಗಳು ಮತ್ತು ಲಿಂಗಾಯತರ ಕೈಯಲ್ಲಿರುತ್ತದೆ. ಶಾಸಕರು ರಬ್ಬರ್ ಸ್ಟಾಂಪ್. ಮೇಲ್ಜಾತಿ ಮುಖಂಡರ ಮಾತು ಕೇಳದ ಶಾಸಕರು ಮುಂದಿನ ಚುನಾವಣೆಯಲ್ಲಿ ಆಯ್ಕೆಯಾಗುವುದಿಲ್ಲ ಅಥವ ಪಕ್ಷದ ಹೈಕಮಾಂಡ್‍ಗೆ ಚಾಡಿ ಹೇಳಿ ವ್ಯವಸ್ಥಿತವಾಗಿ ಟಿಕೆಟ್ ತಪ್ಪಿಸುವ ಪಿತೂರಿಯೂ ನಡೆಯುತ್ತದೆ. ಆದ್ದರಿಂದ ಇಲ್ಲಿನ ಶಾಸಕರು ಮೇಲ್ವರ್ಗದ ಮುಖಂಡರ ಜೊತೆ ಹೊಂದಿಕೊಂಡೇ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಪಾವಗಡ ತಾಲೂಕಿನಲ್ಲಿ ಮೊದಲ ಸ್ಥಾನದಲ್ಲಿ ಎಡಗೈ ಸಮುದಾಯ, ಬೋವಿ, ಲಂಬಾಣಿ ಸಮುದಾಯ, ಗೊಲ್ಲರು ಮತ್ತು ನಾಯಕರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಮತಗಳೇ ನಿರ್ಣಾಯಕ. ಯಾವ ಅಭ್ಯರ್ಥಿ ಮೂರು ಜನಾಂಗದ ಮತ ಪಡೆಯುತ್ತಾರೋ ಅವರು ಶಾಸಕರಾಗಿ ಆಯ್ಕೆಯಾಗುವುದು ಖಚಿತ. ಹೀಗಾಗಿ ಇದುವರೆಗೆ ಎಡಗೈ ಸಮುದಾಯದವರು, ಲಂಬಾಣಿ ಮತ್ತು ಬೋವಿ ಸಮುದಾಯದಿಂದ ಶಾಸಕರಾಗಿದ್ದಾರೆ. ಹಿಂದಿನಿಂದಲೂ ಒಮ್ಮೆ ಜೆಡಿಎಸ್ ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸುತ್ತಾ ಬಂದಿದ್ದಾರೆ.

ಆದರೆ ಈಗ ಪಾವಗಡ ತಾಲೂಕು ಭಿನ್ನರಾಜಕೀಯ ಚಟುವಟಿಕೆಗಳಿಗೆ ವೇದಿಕೆ ಒದಗಿಸಿದಂತೆ ಕಂಡುಬರುತ್ತಿದೆ. 2019ರ ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಎ.ನಾರಾಯಣಸ್ವಾಮಿ ಸಂಸದರಾಗಿ ಆಯ್ಕೆಯಾಗಿದ್ದು ಕ್ಷೇತ್ರದಲ್ಲಿ ತಿರುಗಾಟ ಹೆಚ್ಚಾಗಿದೆ. ಪ್ರತಿ ತಿಂಗಳು ಕನಿಷ್ಟ ನಾಲ್ಕೈದು ಬಾರಿ ಪಾವಗಡಕ್ಕೆ ಬಂದು ಹೋಗುತ್ತಿರುವುದು ಸಂದೇಹಕ್ಕೆ ಕಾರಣವಾಗಿದೆ. ದಿಢೀರ್ ಪಾವಗಡ ತಾಲೂಕಿನ ಮೇಲೆ ಸಂಸದ ನಾರಾಯಣಸ್ವಾಮಿ ಅವರಿಗೆ ಪ್ರೀತಿ ಉಕ್ಕಿ ಬರಲು ಕಾರಣವೇನು? ಪದೇಪದೇ ಭೇಟಿ ಮಾಡುತ್ತಿರುವ ಉದ್ದೇಶವೇನು ಎಂಬ ಮಾತುಗಳ ಪತ್ರಕರ್ತವಲಯದಿಂದ ಕೇಳಿಬರತೊಡಗಿವೆ.

ಕಳೆದ ಆಗಸ್ಟ್‍ನಲ್ಲಿ ಪಾವಗಡದ ಹಳ್ಳಿಗಳಿಗೆ ಭೇಟಿ ನೀಡಿದ ನಾರಾಯಣಸ್ವಾಮಿ ಗಣೇಶ ಹಬ್ಬದಲ್ಲಿ ಯುವಕರಿಗೆ ಹಣ ಹಂಚಿ ಹೋಗಿರುವುದು ಗುಟ್ಟಾಗಿ ಉಳಿದಿಲ್ಲ. ಇದರಿಂದ ನಾರಾಯಣಸ್ವಾಮಿ ಬಗ್ಗೆ ಯುವಪೀಳಿಗೆ ಪ್ರೀತಿ ಬೆಳೆಸಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬಂಧುವೊಬ್ಬರನ್ನು ಪಾವಗಡ ಮೀಸಲು ಕ್ಷೇತ್ರದಲ್ಲಿ ಸ್ಪರ್ಧೆಗಿಳಿಸಿ ಗೆಲ್ಲಿಸಿಕೊಳ್ಳುವ ತಯಾರಿ ನಡೆಸಿದ್ದಾರೆ. ಇದಕ್ಕೆ ಪೂರಕವೆಂಬ ಪ್ರಚಾರದ ತಂತ್ರಗಳನ್ನು ಬಳಕೆ ಮಾಡಿಕೊಳ್ಳುತ್ತಿರುವುದು ಎನ್ನುತ್ತವೆ ಸ್ಥಳೀಯ ಮೂಲಗಳು.

 

 

 

 

ಬೆಂಗಳೂರಿನ ಆನೇಕಲ್ ಮುನಿವೆಂಕಟಪ್ಪ ಲೇಔಟ್‍ನಲ್ಲಿ ವಾಸವಾಗಿರುವ ನಾರಾಯಣಸ್ವಾಮಿ ಕೋಟ್ಯಂತರ ರೂಪಾಯಿ ಒಡೆಯ. 2019ರ ಚುನಾವಣೆಯಲ್ಲಿ ಅವರೇ ಘೋಷಿಸಿಕೊಂಡಂತೆ ಒಂದು ಕೆ.ಜಿ. ಚಿನ್ನ, 5 ಕೆ.ಜಿ. ಬೆಳ್ಳಿ ಸೇರಿದಂತೆ 99,96,842 ರೂ ಮೌಲ್ಯದ ಚರಾಸ್ತಿ ಇದೆ. ರಿಲಯನ್ಸ್ ಇನ್ಸೂರೆನ್ಸ್‍ನಲ್ಲಿ ಇಟ್ಟಿರುವ ಮೊತ್ತವೂ ಇದರಲ್ಲಿ ಸೇರಿದೆ. ಸ್ಥಿರಾಸ್ತಿ ಮೌಲ್ಯ 8 ಕೋಟಿ, 65 ಲಕ್ಷದ 40 ಸಾವಿರ 842 ರೂಪಾಯಿ. ಹತ್ತಿರತ್ತಿರ ಒಂಬತ್ತು ಕೋಟಿಯ ಕುಳ. ಈ ಕಾರಣಕ್ಕಾಗಿಯೆ ನೀರಿನಂತೆ ಹಣ ಖರ್ಚು ಮಾಡುತ್ತಾರೆಂಬ ಹೆಸರೂ ಇದೆ.

ಪಾವಗಡದಲ್ಲಿ ನಡೆಯುವ ಪ್ರತಿ ಮೀಟಿಂಗ್‍ಗೂ ಬರುತ್ತಾರೆ. ಅತ್ಯಂತ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಾರೆ. ಇವರು ಹೀಗೆ ಚಟುವಟಿಕೆಯಿಂದ ಓಡಾಡುವುದು ನೋಡಿದರೆ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು. ನಾರಾಯಣಸ್ವಾಮಿ ಯುವಕರನ್ನು ಸಂಘಟಿಸುತ್ತಿರುವುದು ಕಾಂಗ್ರೆಸ್ ಮುಖಂಡ ಹಾಲಿ ಶಾಸಕ ವೆಂಕಟರವಣಪ್ಪ ಮತ್ತು ಜೆಡಿಎಸ್ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಅವರಲ್ಲಿ ತಳಮಳ ಶುರುವಾಗಿದೆ.

ಪ್ರಯೋಗಗಳ ಮೇಲೆ ಪ್ರಯೋಗ ನಡೆಸುತ್ತಿರುವ ಬಿಜೆಪಿ ಇಲ್ಲಿ ಖಾತೆ ತೆರೆಯಲು ಕಸರತ್ತು ನಡೆಸುತ್ತಿದೆ. ಮೊದಲ ಬಾರಿಗೆ ಬಿಜೆಪಿ ಲಂಬಾಣಿ ಸಮುದಾಯದ ಸೋಮ್ಲಾನಾಯಕ್ ಅವರನ್ನು ಕಣಕ್ಕೆ ಇಳಿಸಿತು. ಆದರೆ ಸೋಲು ಕಂಡಿತು. ಮತ್ತೆ ಕೃಷ್ಣಾನಾಯಕ್ ಅವರನ್ನು ಕಣಕ್ಕಿಳಿಸಿದಾಗಲೂ ಸೋತುಸುಣ್ಣವಾಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೋವಿ ಸಮುದಾಯದ ಬಲರಾಂ ಅವರನ್ನು ಕಣಕ್ಕಿಳಿಸಿದರೂ ಪ್ರಯೋಜನವಾಗಲಿಲ್ಲ. ಆದರೆ ಓಟಿನ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿರುವುದು ಕಂಡುಬಂದಿದೆ.

ಮತ ಪ್ರಮಾಣ ಹೆಚ್ಚಾಗಲು ಕಾರಣವೂ ಇದೆ. ಆರ್.ಎಸ್.ಎಸ್. ಭಜರಂಗದಳ ಸಂಘಟನೆಗಳು ಒಳಗೊಳಗೆ ಕೆಲಸ ಮಾಡುತ್ತಿವೆ. ಈಗ ನಾರಾಯಣಸ್ವಾಮಿ ಪಾವಗಡಕ್ಕೆ ಬಂದಿರುವುದು ಬಿಜೆಪಿ ಬಲಗೊಳ್ಳಲು ಕಾರಣವಾಗಲಿದೆ. ಪರಿಶಿಷ್ಟ ಸಮುದಾಯದ ಮತಗಳನ್ನು ಹಿಡಿಗಂಟಾಗಿ ಇಟ್ಟುಕೊಂಡರೆ ಕಮಲ ಅರಳುವುದು ಖಚಿತ ಎಂದು ಭಾವಿಸಿರುವ ಸಂಸದರು ಪಾವಗಡ ಕ್ಷೇತ್ರಕ್ಕೆ ಪದೇಪದೇ ಭೇಟಿ ನೀಡುವುದು ಮಾಡುತ್ತಿದ್ದಾರೆ.
ಈ ಹಿಂದೆ ಸದ್ದುಗದ್ದಲವಿಲ್ಲದೆ ಯಾವುದೇ ಪ್ರಚಾರ ಇಲ್ಲದೇ ಕೆಲಸದಲ್ಲಿ ತೊಡಗಿದ್ದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ವೆಂಕಟರವಣಪ್ಪ, ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಹಾಲಿ ಸಂಸದರ ಅಬ್ಬರದ ಪ್ರಚಾರವನ್ನು ನೋಡಿ ತಳಮಳಗೊಂಡಿರುವುದಂತೂ ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...