HomeUncategorizedಪಾವಗಡದ ಮೇಲೆ ಸಂಸದ ನಾರಾಯಣಸ್ವಾಮಿಯ ದಿಢೀರ್ ಮಮಕಾರದ ಮರ್ಮವೇನು ಗೊತ್ತಾ?

ಪಾವಗಡದ ಮೇಲೆ ಸಂಸದ ನಾರಾಯಣಸ್ವಾಮಿಯ ದಿಢೀರ್ ಮಮಕಾರದ ಮರ್ಮವೇನು ಗೊತ್ತಾ?

- Advertisement -
- Advertisement -

ತಿಂಗಳಿಗೆ ಕನಿಷ್ಟ ನಾಲ್ಕೈದು ಬಾರಿ ಪಾವಗಡಕ್ಕೆ ಬಂದುಹೋಗುತ್ತಿರುವ ಸಂಸದ ನಾರಾಯಣಸ್ವಾಮಿ ಅವರಿಗೆ ಪಾವಗಡದ ಮೇಲೆ ದಿಢೀರ್ ಅಂತ ಪ್ರೀತಿ ಉಕ್ಕಿ ಬರಲು ಕಾರಣವೇನಿರಬಹುದು..

 

 

 

 

ಪಾವಗಡ ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರ. ಇಲ್ಲಿ ದಲಿತರದ್ದೇ ಮೇಲುಗೈ, ಅಂದ್ರೆ ಜನಸಂಖ್ಯೆ ಯಲ್ಲಿ ಮಾತ್ರವೇ ಹೊರತು ಅಧಿಕಾರ ಅನುಭವಿಸಲು ಅಲ್ಲ. ದಲಿತ ಸಮುದಾಯದ ಅಭ್ಯರ್ಥಿಯೇ ಶಾಸಕರಾಗಿ ಆಯ್ಕೆಯಾಗಿ ಬಂದರೂ ಪರೋಕ್ಷವಾಗಿ ಆಡಳಿತ ನಡೆಸುವವರು ಬೇರೆಯವರು. ಶಾಸಕರು ಮತ್ತು ಪಕ್ಷದ ಸಂಪೂರ್ಣ ಹಿಡಿತ ರೆಡ್ಡಿಗಳು ಮತ್ತು ಲಿಂಗಾಯತರ ಕೈಯಲ್ಲಿರುತ್ತದೆ. ಶಾಸಕರು ರಬ್ಬರ್ ಸ್ಟಾಂಪ್. ಮೇಲ್ಜಾತಿ ಮುಖಂಡರ ಮಾತು ಕೇಳದ ಶಾಸಕರು ಮುಂದಿನ ಚುನಾವಣೆಯಲ್ಲಿ ಆಯ್ಕೆಯಾಗುವುದಿಲ್ಲ ಅಥವ ಪಕ್ಷದ ಹೈಕಮಾಂಡ್‍ಗೆ ಚಾಡಿ ಹೇಳಿ ವ್ಯವಸ್ಥಿತವಾಗಿ ಟಿಕೆಟ್ ತಪ್ಪಿಸುವ ಪಿತೂರಿಯೂ ನಡೆಯುತ್ತದೆ. ಆದ್ದರಿಂದ ಇಲ್ಲಿನ ಶಾಸಕರು ಮೇಲ್ವರ್ಗದ ಮುಖಂಡರ ಜೊತೆ ಹೊಂದಿಕೊಂಡೇ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಪಾವಗಡ ತಾಲೂಕಿನಲ್ಲಿ ಮೊದಲ ಸ್ಥಾನದಲ್ಲಿ ಎಡಗೈ ಸಮುದಾಯ, ಬೋವಿ, ಲಂಬಾಣಿ ಸಮುದಾಯ, ಗೊಲ್ಲರು ಮತ್ತು ನಾಯಕರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಮತಗಳೇ ನಿರ್ಣಾಯಕ. ಯಾವ ಅಭ್ಯರ್ಥಿ ಮೂರು ಜನಾಂಗದ ಮತ ಪಡೆಯುತ್ತಾರೋ ಅವರು ಶಾಸಕರಾಗಿ ಆಯ್ಕೆಯಾಗುವುದು ಖಚಿತ. ಹೀಗಾಗಿ ಇದುವರೆಗೆ ಎಡಗೈ ಸಮುದಾಯದವರು, ಲಂಬಾಣಿ ಮತ್ತು ಬೋವಿ ಸಮುದಾಯದಿಂದ ಶಾಸಕರಾಗಿದ್ದಾರೆ. ಹಿಂದಿನಿಂದಲೂ ಒಮ್ಮೆ ಜೆಡಿಎಸ್ ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸುತ್ತಾ ಬಂದಿದ್ದಾರೆ.

ಆದರೆ ಈಗ ಪಾವಗಡ ತಾಲೂಕು ಭಿನ್ನರಾಜಕೀಯ ಚಟುವಟಿಕೆಗಳಿಗೆ ವೇದಿಕೆ ಒದಗಿಸಿದಂತೆ ಕಂಡುಬರುತ್ತಿದೆ. 2019ರ ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಎ.ನಾರಾಯಣಸ್ವಾಮಿ ಸಂಸದರಾಗಿ ಆಯ್ಕೆಯಾಗಿದ್ದು ಕ್ಷೇತ್ರದಲ್ಲಿ ತಿರುಗಾಟ ಹೆಚ್ಚಾಗಿದೆ. ಪ್ರತಿ ತಿಂಗಳು ಕನಿಷ್ಟ ನಾಲ್ಕೈದು ಬಾರಿ ಪಾವಗಡಕ್ಕೆ ಬಂದು ಹೋಗುತ್ತಿರುವುದು ಸಂದೇಹಕ್ಕೆ ಕಾರಣವಾಗಿದೆ. ದಿಢೀರ್ ಪಾವಗಡ ತಾಲೂಕಿನ ಮೇಲೆ ಸಂಸದ ನಾರಾಯಣಸ್ವಾಮಿ ಅವರಿಗೆ ಪ್ರೀತಿ ಉಕ್ಕಿ ಬರಲು ಕಾರಣವೇನು? ಪದೇಪದೇ ಭೇಟಿ ಮಾಡುತ್ತಿರುವ ಉದ್ದೇಶವೇನು ಎಂಬ ಮಾತುಗಳ ಪತ್ರಕರ್ತವಲಯದಿಂದ ಕೇಳಿಬರತೊಡಗಿವೆ.

ಕಳೆದ ಆಗಸ್ಟ್‍ನಲ್ಲಿ ಪಾವಗಡದ ಹಳ್ಳಿಗಳಿಗೆ ಭೇಟಿ ನೀಡಿದ ನಾರಾಯಣಸ್ವಾಮಿ ಗಣೇಶ ಹಬ್ಬದಲ್ಲಿ ಯುವಕರಿಗೆ ಹಣ ಹಂಚಿ ಹೋಗಿರುವುದು ಗುಟ್ಟಾಗಿ ಉಳಿದಿಲ್ಲ. ಇದರಿಂದ ನಾರಾಯಣಸ್ವಾಮಿ ಬಗ್ಗೆ ಯುವಪೀಳಿಗೆ ಪ್ರೀತಿ ಬೆಳೆಸಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬಂಧುವೊಬ್ಬರನ್ನು ಪಾವಗಡ ಮೀಸಲು ಕ್ಷೇತ್ರದಲ್ಲಿ ಸ್ಪರ್ಧೆಗಿಳಿಸಿ ಗೆಲ್ಲಿಸಿಕೊಳ್ಳುವ ತಯಾರಿ ನಡೆಸಿದ್ದಾರೆ. ಇದಕ್ಕೆ ಪೂರಕವೆಂಬ ಪ್ರಚಾರದ ತಂತ್ರಗಳನ್ನು ಬಳಕೆ ಮಾಡಿಕೊಳ್ಳುತ್ತಿರುವುದು ಎನ್ನುತ್ತವೆ ಸ್ಥಳೀಯ ಮೂಲಗಳು.

 

 

 

 

ಬೆಂಗಳೂರಿನ ಆನೇಕಲ್ ಮುನಿವೆಂಕಟಪ್ಪ ಲೇಔಟ್‍ನಲ್ಲಿ ವಾಸವಾಗಿರುವ ನಾರಾಯಣಸ್ವಾಮಿ ಕೋಟ್ಯಂತರ ರೂಪಾಯಿ ಒಡೆಯ. 2019ರ ಚುನಾವಣೆಯಲ್ಲಿ ಅವರೇ ಘೋಷಿಸಿಕೊಂಡಂತೆ ಒಂದು ಕೆ.ಜಿ. ಚಿನ್ನ, 5 ಕೆ.ಜಿ. ಬೆಳ್ಳಿ ಸೇರಿದಂತೆ 99,96,842 ರೂ ಮೌಲ್ಯದ ಚರಾಸ್ತಿ ಇದೆ. ರಿಲಯನ್ಸ್ ಇನ್ಸೂರೆನ್ಸ್‍ನಲ್ಲಿ ಇಟ್ಟಿರುವ ಮೊತ್ತವೂ ಇದರಲ್ಲಿ ಸೇರಿದೆ. ಸ್ಥಿರಾಸ್ತಿ ಮೌಲ್ಯ 8 ಕೋಟಿ, 65 ಲಕ್ಷದ 40 ಸಾವಿರ 842 ರೂಪಾಯಿ. ಹತ್ತಿರತ್ತಿರ ಒಂಬತ್ತು ಕೋಟಿಯ ಕುಳ. ಈ ಕಾರಣಕ್ಕಾಗಿಯೆ ನೀರಿನಂತೆ ಹಣ ಖರ್ಚು ಮಾಡುತ್ತಾರೆಂಬ ಹೆಸರೂ ಇದೆ.

ಪಾವಗಡದಲ್ಲಿ ನಡೆಯುವ ಪ್ರತಿ ಮೀಟಿಂಗ್‍ಗೂ ಬರುತ್ತಾರೆ. ಅತ್ಯಂತ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಾರೆ. ಇವರು ಹೀಗೆ ಚಟುವಟಿಕೆಯಿಂದ ಓಡಾಡುವುದು ನೋಡಿದರೆ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು. ನಾರಾಯಣಸ್ವಾಮಿ ಯುವಕರನ್ನು ಸಂಘಟಿಸುತ್ತಿರುವುದು ಕಾಂಗ್ರೆಸ್ ಮುಖಂಡ ಹಾಲಿ ಶಾಸಕ ವೆಂಕಟರವಣಪ್ಪ ಮತ್ತು ಜೆಡಿಎಸ್ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಅವರಲ್ಲಿ ತಳಮಳ ಶುರುವಾಗಿದೆ.

ಪ್ರಯೋಗಗಳ ಮೇಲೆ ಪ್ರಯೋಗ ನಡೆಸುತ್ತಿರುವ ಬಿಜೆಪಿ ಇಲ್ಲಿ ಖಾತೆ ತೆರೆಯಲು ಕಸರತ್ತು ನಡೆಸುತ್ತಿದೆ. ಮೊದಲ ಬಾರಿಗೆ ಬಿಜೆಪಿ ಲಂಬಾಣಿ ಸಮುದಾಯದ ಸೋಮ್ಲಾನಾಯಕ್ ಅವರನ್ನು ಕಣಕ್ಕೆ ಇಳಿಸಿತು. ಆದರೆ ಸೋಲು ಕಂಡಿತು. ಮತ್ತೆ ಕೃಷ್ಣಾನಾಯಕ್ ಅವರನ್ನು ಕಣಕ್ಕಿಳಿಸಿದಾಗಲೂ ಸೋತುಸುಣ್ಣವಾಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೋವಿ ಸಮುದಾಯದ ಬಲರಾಂ ಅವರನ್ನು ಕಣಕ್ಕಿಳಿಸಿದರೂ ಪ್ರಯೋಜನವಾಗಲಿಲ್ಲ. ಆದರೆ ಓಟಿನ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿರುವುದು ಕಂಡುಬಂದಿದೆ.

ಮತ ಪ್ರಮಾಣ ಹೆಚ್ಚಾಗಲು ಕಾರಣವೂ ಇದೆ. ಆರ್.ಎಸ್.ಎಸ್. ಭಜರಂಗದಳ ಸಂಘಟನೆಗಳು ಒಳಗೊಳಗೆ ಕೆಲಸ ಮಾಡುತ್ತಿವೆ. ಈಗ ನಾರಾಯಣಸ್ವಾಮಿ ಪಾವಗಡಕ್ಕೆ ಬಂದಿರುವುದು ಬಿಜೆಪಿ ಬಲಗೊಳ್ಳಲು ಕಾರಣವಾಗಲಿದೆ. ಪರಿಶಿಷ್ಟ ಸಮುದಾಯದ ಮತಗಳನ್ನು ಹಿಡಿಗಂಟಾಗಿ ಇಟ್ಟುಕೊಂಡರೆ ಕಮಲ ಅರಳುವುದು ಖಚಿತ ಎಂದು ಭಾವಿಸಿರುವ ಸಂಸದರು ಪಾವಗಡ ಕ್ಷೇತ್ರಕ್ಕೆ ಪದೇಪದೇ ಭೇಟಿ ನೀಡುವುದು ಮಾಡುತ್ತಿದ್ದಾರೆ.
ಈ ಹಿಂದೆ ಸದ್ದುಗದ್ದಲವಿಲ್ಲದೆ ಯಾವುದೇ ಪ್ರಚಾರ ಇಲ್ಲದೇ ಕೆಲಸದಲ್ಲಿ ತೊಡಗಿದ್ದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ವೆಂಕಟರವಣಪ್ಪ, ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಹಾಲಿ ಸಂಸದರ ಅಬ್ಬರದ ಪ್ರಚಾರವನ್ನು ನೋಡಿ ತಳಮಳಗೊಂಡಿರುವುದಂತೂ ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...