Homeಮುಖಪುಟವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

- Advertisement -
- Advertisement -

ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದ ವರದಿಯು ತಿಳಿಸಿದೆ. ಪತ್ರಿಕಾ ಸ್ವಾತಂತ್ರ್ಯದಲ್ಲಿ ಭಾರತವು 159ನೇ ಸ್ಥಾನವನ್ನು ಪಡೆದುಕೊಂಡಿದೆ. ಪತ್ರಕರ್ತರ ಮೇಲಿನ ಹಿಂಸಾಚಾರ, ಕೇಂದ್ರೀಕೃತ ಮಾಧ್ಯಮ ಮಾಲೀಕತ್ವ ಮತ್ತು ರಾಜಕೀಯ ಹೊಂದಾಣಿಕೆಯಿಂದಾಗಿ ಪತ್ರಿಕಾ ಸ್ವಾತಂತ್ರ್ಯವು “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ” ದಲ್ಲಿ ಬಿಕ್ಕಟ್ಟಿನಲ್ಲಿದೆ ಎಂಬುವುದನ್ನು ಬಹಿರಂಗಪಡಿಸಿದೆ.

ಕಳೆದ ವರ್ಷ ಭಾರತವು ಪತ್ರಿಕಾ ಸ್ವಾತಂತ್ರ್ಯದಲ್ಲಿ 161ನೇ ಸ್ಥಾನದಲ್ಲಿತ್ತು. ಭಾರತವನ್ನು 2014ರಿಂದ ಬಿಜೆಪಿ  ಮತ್ತು ಹಿಂದೂ ಬಲಂಪಂಥೀಯ ರಾಷ್ಟ್ರೀಯವಾದಿ ಪ್ರಧಾನಿ ನರೇಂದ್ರ ಮೋದಿ ಆಳುತ್ತಿದ್ದಾರೆ ಎಂದು ಆರ್‌ಎಸ್‌ಎಫ್ ಡೇಟಾವನ್ನು ಬಿಡುಗಡೆ ಮಾಡುವಾಗ ಹೇಳಿದೆ.

‘ಏಷ್ಯಾ-ಪೆಸಿಫಿಕ್: ನಿರಂಕುಶ ಸರ್ಕಾರಗಳ ನೊಗದಡಿಯಲ್ಲಿ ಪತ್ರಿಕಾ ಸ್ವಾತಂತ್ರ್ಯ’ ಎಂಬ ಶೀರ್ಷಿಕೆಯ ವರದಿಯಲ್ಲಿ ಭಾರತವನ್ನೂ ಉಲ್ಲೇಖಿಸಲಾಗಿದೆ. ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದಲ್ಲಿ 161ನೇ ಸ್ಥಾನದಿಂದ 159ನೇ ಸ್ಥಾನಕ್ಕೆ ತಲುಪಿದೆ. ಈ ಮೊದಲು ಭಾರತಕ್ಕಿಂತ ರ್ಯಾಂಕಿಂಗ್‌ನಲ್ಲಿ ಮೇಲೆ ಇದ್ದ ದೇಶಗಳು ಈ ಸಲ ಕಳಪೆ ನಿರ್ವಹಣೆಯನ್ನು ಪ್ರದರ್ಶಿಸಿರುವುದು ಇದಕ್ಕೆ ಕಾರಣವಾಗಿದೆ. ಪತ್ರಿಕಾ ಸ್ವಾತಂತ್ರ್ಯದ ವಿರುದ್ಧ ಇನ್ನಷ್ಟು ಕರಾಳ ಕಾನೂನುಗಳನ್ನು ಜಾರಿಗೊಳಿಸಿದ ಭಾರತವು ಎರಡು ರ್ಯಾಂಕ್ ಮೇಲಕ್ಕೇರಿದೆ. ಆದರೆ ಈ ಸ್ಥಾನವು ಪ್ರಜಾಪ್ರಭುತ್ವಕ್ಕೆ ಯೋಗ್ಯವೆನಿಸುವುದಿಲ್ಲ ಎಂದು ವರದಿ ಉಲ್ಲೇಖಿಸಿದೆ.

2014ರಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪತ್ರಿಕಾ ಸ್ವಾತಂತ್ರ್ಯದ ಪರಿಸ್ಥಿತಿಯು  ಹದಗೆಟ್ಟಿದೆ ಎಂದು RSF ತನ್ನ ವರದಿಯಲ್ಲಿ ಹೇಳುತ್ತದೆ. ಪ್ರಧಾನಿಯವರ ವೈಯಕ್ತಿಕ ಸ್ನೇಹಿತ ಮುಖೇಶ್ ಅಂಬಾನಿ 70ಕ್ಕೂ ಹೆಚ್ಚು ಮಾಧ್ಯಮಗಳ ಮಾಲಿಕತ್ವವನ್ನು ಹೊಂದಿದ್ದಾರೆ. 2022ರ ಕೊನೆಯಲ್ಲಿ ಎನ್‌ಡಿಟಿವಿ ಚಾನೆಲ್‌ನ್ನು ಮೋದಿಯ ಇನ್ನೋರ್ವ ಸ್ನೇಹಿತ ಗೌತಮ್ ಅದಾನಿ ಸ್ವಾದೀನಪಡಿಸಿಕೊಂಡಿದ್ದಾರೆ ಮತ್ತು ಮುಖ್ಯವಾಹಿನಿಯ ಮಾಧ್ಯಮದಲ್ಲಿ ಬಹುತ್ವ ಅಂತ್ಯಗೊಂಡಿದೆ. ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ ಪರ ಪ್ರಚಾರವನ್ನು ನಡೆಸುವ ಗೋದಿ ಮೀಡಿಯಾಗಳು ಹೆಚ್ಚಳವಾಗಿದೆ. ಒತ್ತಡ ಹಾಗೂ ಪ್ರಭಾವದಿಂದಾಗಿ ಭಾರತದ ಹಳೆಯ ಮಾದರಿಯಾದ ಬಹುತ್ವವಾದಿ ಪತ್ರಿಕಾ ಮಾಧ್ಯಮಗಳು ಪ್ರಶ್ನಿಸಲ್ಪಡುತ್ತಿದೆ. ಪ್ರಧಾನಿಯವರು ಪತ್ರಕರ್ತರ ಕಟು ಟೀಕಾಕಾರರಾಗಿದ್ದಾರೆ. ಸರ್ಕಾರವನ್ನು ಟೀಕಿಸುವ ಭಾರತೀಯ ಪತ್ರಕರ್ತರು ಕಿರುಕುಳಕ್ಕೆ ಒಳಗಾಗುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತಕ್ಕಿಂತ ನನರೆಯ ದೇಶಗಳು ಪತ್ರಿಕಾ ಸ್ವಾತಂತ್ರ್ಯದಲ್ಲಿ ಉತ್ತಮವಾದ ಸ್ಥಾನದಲ್ಲಿದೆ. ಪಾಕಿಸ್ತಾನ 152, ಶ್ರೀಲಂಕಾ 15, ನೇಪಾಳ 74 ಮತ್ತು ಮಾಲ್ಡೀವ್ಸ್ 106 ಸ್ಥಾನದಲ್ಲಿದೆ. ಪ್ರಪಂಚದಾದ್ಯಂತ, ಹೆಚ್ಚಿನ ಸರ್ಕಾರಗಳು ಪತ್ರಿಕೋದ್ಯಮಕ್ಕೆ ವಿಶ್ವಾಸಾರ್ಹ, ಸ್ವತಂತ್ರ ಮತ್ತು ವೈವಿಧ್ಯಮಯ ಉತ್ತಮ ವಾತಾವರಣದ ಖಾತರಿದಾರರಾಗಿ ತಮ್ಮ ಪಾತ್ರವನ್ನು ನಿರ್ವಹಿಸುತ್ತಿಲ್ಲ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...