Homeಕರ್ನಾಟಕಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಅನಿಮೇಟೆಡ್ ವೀಡಿಯೊ ಹಂಚಿಕೊಂಡ ಬಿಜೆಪಿ: 'ಎಕ್ಸ್‌' ಬಳಕೆದಾರರು ತರಾಟೆ

ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಅನಿಮೇಟೆಡ್ ವೀಡಿಯೊ ಹಂಚಿಕೊಂಡ ಬಿಜೆಪಿ: ‘ಎಕ್ಸ್‌’ ಬಳಕೆದಾರರು ತರಾಟೆ

- Advertisement -
- Advertisement -

ಮುಸ್ಲಿಮರ ಬಗ್ಗೆ ಕೆಟ್ಟದಾಗಿ ಬಿಂಬಿಸುವ, ಮುಸ್ಲಿಮರ ಬಗ್ಗೆ ಕಾಂಗ್ರೆಸ್‌ ತುಷ್ಟೀಕರಣ ಮಾಡುತ್ತದೆ ಎಂದು ಪ್ರತಿಪಾದಿಸುವ ಅನಿಮೇಟೆಡ್ ವೀಡಿಯೊವೊಂದನ್ನು ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

ಎಚ್ಚರ..ಎಚ್ಚರ..ಎಚ್ಚರ.. ಎಂಬ ತಲೆ ಬರಹದಲ್ಲಿ ಬಿಜೆಪಿ ವಿಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯ ಅವರ ಕಾರ್ಟೂನ್‌ಗಳಿವೆ. ಈ ಇಬ್ಬರು ಎಸ್ಸಿ,ಎಸ್ಟಿ, ಒಬಿಸಿ ಎಂದು ಬರೆದ ಮೊಟ್ಟೆ ಬಳಿ ಮುಸ್ಲಿಂ ಎಂದು ಬರೆದ ದೊಡ್ಡ ಮೊಟ್ಟೆಯನ್ನು ತಂದು ಇಡುತ್ತಾರೆ. ಈ ಮೊಟ್ಟೆಯಿಂದ ಹೊರಬಂದ ಮುಸ್ಲಿಂ ಎಂದು ಬರೆದ ಹಕ್ಕಿಗೆ ರಾಹುಲ್‌ ಗಾಂಧಿ ಸಂಪತ್ತನ್ನು ತಂದು ಸುರಿಯುವುದು, ಬಳಿಕ ಎಸ್ಸಿ, ಎಸ್ಟಿ ಒಬಿಸಿ ಎಂದು ಬರೆದ ಹಕ್ಕಿಯನ್ನು ಮುಸ್ಲಿಂ ಎಂದು ಬರೆದ ಹಕ್ಕಿ ಹೊರದಬ್ಬುವ ದ್ವೇಷ ಪೂರಿತ ಅಂಶಗಳು ಅನಿಮೇಟೆಡ್ ವೀಡಿಯೊದಲ್ಲಿ ಉಲ್ಲೇಖವಾಗಿದೆ.

ಈ ದ್ವೇಷವನ್ನು ಹರಡುವ, ಸುಳ್ಳು ಬಿಂಬಿಸುವ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡುತ್ತಿದ್ದಂತೆ ಬಿಜೆಪಿ ವಿರುದ್ಧ ವ್ಯಾಪಕವಾದಂತಹ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ಪೋಸ್ಟ್ ಬಗ್ಗೆ ಪ್ರತಿಕ್ರಿಯಿಸಿದ ಬಹುಭಾಷಾ ನಟ ಪ್ರಕಾಶ್ ರಾಜ್, ಇದನ್ನು ನಾಚಿಕೆಗೇಡು ಎಂದು ಬಣ್ಣಿಸಿದ್ದಾರೆ. ಎಲ್ಲರನ್ನೂ ಒಳಗೊಳ್ಳುವ, ಶಾಂತಿಪ್ರಿಯ ಕರ್ನಾಟಕ ಮತ್ತು ದೇಶದ ಜನತೆ ಹಿಂದುತ್ವ ಪಕ್ಷಗಳಿಗೆ  ಸೂಕ್ತ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಭಾರತೀಯ ಮೂಲದ ಬ್ರಿಟಿಷ್ ಶಿಕ್ಷಣ ತಜ್ಞ ಪ್ರೊಫೆಸರ್ ನಿತಾಶಾ ಕೌಲ್ ಅವರು ವಿಡಿಯೊ ಬಗ್ಗೆ ಪ್ರತಿಕ್ರಿಯಿಸಿ, 1930ರ ದಶಕದ ಜರ್ಮನಿ ಶೈಲಿಯ ಕಾರ್ಟೂನ್ ಎಂದು ಇದನ್ನು ಬಣ್ಣಿಸಿದ್ದಾರೆ. ನಾಝಿಗಳು ಅಪಪ್ರಚಾರಕ್ಕೆ ಇಂಥ ವಿಡಿಯೊ ಬಳಸುತ್ತಿದ್ದರು. ಇದು ಚುನಾವಣಾ ನೀತಿಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಕೆಪಿ ಸಿಂಗ್‌ ಎಂಬವರು, ಸಮಾಜದಲ್ಲಿ ದ್ವೇಷವನ್ನು ಹರಡುವ ಗುರಿಯನ್ನು ಹೊಂದಿರುವ ಈ ದ್ವೇಷಪೂರಿತ ಮತ್ತು ಕೋಮುವಾದಿ ಪೋಸ್ಟ್‌ ವಿರುದ್ಧ ಕಾಂಗ್ರೆಸ್‌ ಪ್ರಕರಣ ದಾಖಲಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಶ್ರೀನಿವಾಸ್‌ ಕಾರ್ಕಳ ಎಂಬವರು ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಎಲ್ಲಾ ಜನರನ್ನು ಎಲ್ಲಾ ಸಮಯದಲ್ಲೂ ಮರುಳು ಮಾಡಲು ಸಾಧ್ಯವಿಲ್ಲ. ದ್ವೇಷವೂ ಕೊನೆಯನ್ನು ಕಾಣಲಿದೆ. ನನ್ನ ಮಾತುಗಳನ್ನು ನೆನಪಿಟ್ಟುಕೊಳಳಿ, ಬಿಜೆಪಿ ಈ ಚುನಾವಣೆಯಲ್ಲಿ ದೊಡ್ಡ ರೀತಿಯಲ್ಲಿ ಸೋಲಲಿದೆ ಎಂದು ಹೇಳಿದ್ದು, ಈ ಪೋಸ್ಟ್‌ನ್ನು ಕರ್ನಾಟಕದ ಸಿಎಂ, ಡಿಸಿಎಂ ಗೃಹಸಚಿವರು ಮತ್ತು ಡಿಜಿಪಿಗೆ ಟ್ಯಾಗ್‌ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇಂತಹ ವಿಷಪೂರಿತ ಕಸದ ಬಗ್ಗೆ ಮಾತ್ರ ಹತ್ತು ವರ್ಷ ಅಧಿಕಾರದಲ್ಲಿದ್ದ ಸರ್ಕಾರಕ್ಕೆ ಮಾತನಾಡಲಿದೆ. ಚುನಾವಣಾ ಆಯೋಗವು ತಪ್ಪು ಮಾಹಿತಿ ಮತ್ತು ವಿಭಜನೆಯ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಲವಾಗಿ ಹೇಳುತ್ತಿದೆ. ಇದನ್ನು ಪ್ರಧಾನಿ ಮೋದಿಯವರು ಮುಂಭಾಗದಿಂದ ಮುನ್ನಡೆಸುತ್ತಿದ್ದಾರೆ, ಅವರ ಹೆಸರನ್ನು ಕೂಡ ಚುನಾವಣಾ ಆಯೋಗ ಉಲ್ಲೇಖಿಸುವುದಿಲ್ಲ, ಈ ಬಗ್ಗೆ ನ್ಯಾಯಾಲಯ ನಿಗಾ ವಹಿಸುತ್ತಾ? ಎಂದು ಸೀಮಾ ಎಂಬವರು ಪ್ರತಿಕ್ರಿಯಿಸಿದ್ದಾರೆ.

ಇದು ಮುಸ್ಲಿಮರು ಮತ್ತು ಎಸ್‌ಸಿ, ಎಸ್‌ಟಿ, ಒಬಿಸಿಗಳ ವಿರುದ್ಧದ  ಬ್ರಾಹ್ಮಣ ಬನಿಯಾ ಬಿಜೆಪಿಯ ದ್ವೇಷದ  ಭಾಗವಾಗಿದೆ. ಬಿಜೆಪಿ SC ST OBC ಮುಸ್ಲಿಂ ಕ್ರಿಶ್ಚಿಯನ್ ಸಿಖ್ಖರು ಜಗಳವಾಡಬೇಕೆಂದು ಬಯಸುತ್ತದೆ ಇನ್ನೋರ್ವ ಎಕ್ಸ್‌ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

ಇವು ಮಾತ್ರ ನಿಮಗೆ ತಿಳಿದಿರುವ ತಂತ್ರಗಳು. 2024ರ ಮತದಾರ 2014ರಂತೆಯೇ ಇಲ್ಲ. ಕನ್ನಡಿಗರು ಈ ಬಾರಿ ನಿಮಗೆ ಸಂಪೂರ್ಣ ಸೋಲಿನ ರುಚಿ ತೋರಿಸುತ್ತಾರೆ ಎಂದು ಇಂಡಿಯನ್‌ ಡಾಕ್ಟರ್‌ ಎಂಬ ಎಕ್ಸ್‌ ಖಾತೆಯು ಪ್ರತಿಕ್ರಿಯಿಸಿದೆ.

ಸೂರಜ್‌ ಯಾದವ್‌ ಎಂಬವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಖಾತೆಯು ಯಾವುದೇ ಸಮುದಾಯದ ವಿರುದ್ಧ ದ್ವೇಷವನ್ನು ಹರಡಲು ಮುಕ್ತವಾಗಿದೆಯೇ? ನೀವು ಅಂತಹ ವಿಷಯಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಎಕ್ಸ್‌ಗೆ ಪೋಸ್ಟ್‌ನ್ನು ಟ್ಯಾಗ್‌ ಮಾಡಿದ್ದು, ಬಿಜೆಪಿ ಎಕ್ಸ್‌ ಖಾತೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಯಾಸಿರ್‌ ಅಹ್ಮದ್‌ ಎಂಬವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಿಮ್ಮ ನಿಜವಾದ ಬಣ್ಣಗಳನ್ನು ತೋರಿಸುವ ಮಾರ್ಗ, ನಿಮ್ಮ ವಿಷಕಾರಿ ರಾಜಕಾರಣ ಕರ್ನಾಟಕಕ್ಕೆ ಬೇಕಾಗಿಲ್ಲ ಎಂದು ಬರೆದುಕೊಂಡಿದ್ದಾರೆ. ತಲಪತಿ ರಿಶಿ ಎಂಬವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದ್ವೇಷ ಹರಡಬೇಡಿ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದೇ ರೀತಿ ಹಲವರು ಬಿಜೆಪಿಗೆ ‘ಸುಳ್ಳು ಮತ್ತು ದ್ವೇಷವನ್ನು ಹರಬೇಡಿ’ ಎಂದು ಎಕ್ಸ್‌ನಲ್ಲಿ ಪಾಠ ಮಾಡಿದ್ದಾರೆ.

ಇದನ್ನು ಓದಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...