Homeಮುಖಪುಟ'ನಾಡಾ'ದಿಂದ ಕುಸ್ತಿಪಟು ಬಜರಂಗ್ ಪುನಿಯಾ ಅಮಾನತು: ವರದಿ

‘ನಾಡಾ’ದಿಂದ ಕುಸ್ತಿಪಟು ಬಜರಂಗ್ ಪುನಿಯಾ ಅಮಾನತು: ವರದಿ

- Advertisement -
- Advertisement -

ಡೋಪಿಂಗ್ ಪರೀಕ್ಷೆ (ಮಾದಕವಸ್ತು ಪತ್ತೆ ಪರೀಕ್ಷೆ)ಗೆ ಸರಿಯಾದ ಸಮಯಕ್ಕೆ ಮೂತ್ರದ ಮಾದರಿಯನ್ನು ನೀಡದ ಆರೋಪದ ಮೇಲೆ ಒಲಿಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಪ್ರಾಧಿಕಾರ (ನಾಡಾ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಬಜರಂಗ್ ಪುನಿಯಾ “ಮಾದಕ ವಸ್ತು ಪರೀಕ್ಷೆ ಪತ್ತೆಗೆ ಕೇಳಿರುವ ಪ್ರಶ್ನೆಯ ಬಗ್ಗೆ ನಾನು ಸ್ಪಷ್ಟಪಡಿಸುತ್ತೇನೆ. ನಾನು ನಾಡಾ ಅಧಿಕಾರಿಗಳಿಗೆ ನನ್ನ ಮಾದರಿಗಳನ್ನು ನೀಡಲು ತಿರಸ್ಕರಿಸಿಲ್ಲ. ನನ್ನ ಮಾದರಿಗಳನ್ನು ಹಾಗೂ ಮಾದಕ ದ್ರವ್ಯ ಪತ್ತೆ ಪರೀಕ್ಷೆ ನಡೆಸಲು ಅವಧಿ ಮೀರಿದ ಕಿಟ್‌ಗಳನ್ನು ತಂದ ಬಗ್ಗೆ ಕೈಗೊಂಡ ಕ್ರಮಗಳ ಕುರಿತ ನನ್ನ ಪ್ರಶ್ನೆಗೆ ಉತ್ತರಿಸಲು ಅವರಲ್ಲಿ ಮನವಿ ಮಾಡುತ್ತೇನೆ. ಅಮಾನತು ಪತ್ರಕ್ಕೆ ನನ್ನ ವಕೀಲರು ಉತ್ತರ ನೀಡಲಿದ್ದಾರೆ” ಎಂದಿದ್ದಾರೆ.

ಅಮಾನತು ಆದೇಶ ಜುಲೈ 26 ರಿಂದ ಪ್ರಾರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಬಜರಂಗ್ ಪುನಿಯಾ ಅವರಿಗೆ ತಡೆಯೊಡ್ಡುವ ಸಾಧ್ಯತೆ ಇದೆ ವರದಿಗಳು ಹೇಳಿವೆ.

ನಾಡಾ 2021ರ ಆರ್ಟಿಕಲ್ 7.4 ರ ಪ್ರಕಾರ, ಈ ವಿಷಯದಲ್ಲಿ ವಿಚಾರಣೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರುವ ಮೊದಲು ಯಾವುದೇ ಸ್ಪರ್ಧೆ ಅಥವಾ ಚಟುವಟಿಕೆಯಲ್ಲಿ ಭಾಗವಹಿಸದಂತೆ ಬಜರಂಗ್ ಪುನಿಯಾ ಅವರನ್ನು ತಕ್ಷಣವೇ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಕೆಲ ತಿಂಗಳ ಹಿಂದೆ ಪುನಿಯಾ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಪ್ರಾಧಿಕಾರ (ನಾಡಾ) ಮೇಲೆ ಗಂಭೀರ ಆರೋಪವೊಂದನ್ನು ಮಾಡಿದ್ದರು. ಅಥ್ಲೀಟ್‌ಗಳ ಮೇಲೆ ಡೋಪ್ ಪರೀಕ್ಷೆ ನಡೆಸುವಾಗ ಅವಧಿ ಮೀರಿದ ಮತ್ತು ಹಳೆಯ ಉಪಕರಣಗಳನ್ನು ಬಳಸಲಾಗುತ್ತಿದೆ ಎಂದು ಹೇಳಿದ್ದರು. ಜೊತೆಗೆ ಸಾಕ್ಷ್ಯ ಸಮೇತವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್​ ಭೂಷಣ್​ ಶರಣ್​ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಕ್ಷಿ ಮಲ್ಲಿಕ್, ವಿನೇಶ್ ಫೋಗಟ್ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಬೀದಿಗಿಳಿದು ಹೋರಾಟ ನಡೆಸಿದ್ದರು. ಆ ಸಂದರ್ಭದಲ್ಲಿ ಬಜರಂಗ್ ಪುನಿಯಾ ಅವರನ್ನು ಬೆಂಬಲಿಸಿ ಹೋರಾಟದಲ್ಲಿ ಪಾಲ್ಗೊಂಡಿದ್ದರು.

ಕುಸ್ತಿಪಟುಗಳ ಹೋರಾಟದ ನಡುವೆಯೇ ನಡೆದ ಕುಸ್ತಿ ಒಕ್ಕೂಟದ ಚುನಾಣೆಯಲ್ಲಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದರಿಂದ ತೀವ್ರ ಬೇಸರಗೊಂಡಿದ್ದ
ಕುಸ್ತಿಪಟು ಸಾಕ್ಷಿ ಮಲಿಕ್​ ಕುಸ್ತಿಗೆ ವಿದಾಯ ಹೇಳಿದ್ದರು. ಅವರ ಬೆನ್ನಲ್ಲೇ ಬಜರಂಗ್ ಪುನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ್ದರು.

ಬಜರಂಗ್‌ ಪುನಿಯಾ 2020ರ ಟೊಕಿಯೋ ಒಲಿಂಪಿಕ್ಸ್‌ನಲ್ಲಿ 65 ಕೆಜಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು.

ಇದನ್ನೂ ಓದಿ : ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...