Homeಮುಖಪುಟಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

- Advertisement -
- Advertisement -

2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ ಪೊಲೀಸ್ ಅಧಿಕಾರಿ ಎಂದು ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್‌ ನಾಯಕ ವಿಜಯ್ ವಡೆಟ್ಟಿವಾರ್ ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

1993ರ ಮುಂಬೈ ಸರಣಿ ಸ್ಫೋಟ ಮತ್ತು 26/11 ಮುಂಬೈ ದಾಳಿಯ ಪ್ರಕರಣಗಳಲ್ಲಿ ಉಜ್ವಲ್ ನಿಕಮ್ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕೆಲಸ ಮಾಡಿದ್ದರು. ಈಗ ಅವರು ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಹೇಮಂತ್ ಕರ್ಕರೆಯನ್ನು ಕೊಂದ ಗುಂಡು ಅಜ್ಮಲ್ ಕಸಬ್‌ನಂತಹ ಭಯೋತ್ಪಾದಕರದ್ದಲ್ಲ, ಆದು  ಆರೆಸ್ಸೆಸ್‌ಗೆ ನಿಕಟವಾಗಿರುವ ಪೊಲೀಸ್ ಅಧಿಕಾರಿಯದ್ದು, ಈ ಸತ್ಯವನ್ನು ಮುಚ್ಚಿಟ್ಟ ಉಜ್ವಲ್ ನಿಕಮ್ ಒಬ್ಬ ದೇಶದ್ರೋಹಿ ಮತ್ತು ಅವರಂತಹ ದೇಶದ್ರೋಹಿಗೆ ಬಿಜೆಪಿ ಚುನಾವಣಾ ಟಿಕೆಟ್ ನೀಡಿದೆ ಎಂದು ವಡೆತ್ತಿವಾರ್  ಆರೋಪಿಸಿದ್ದಾರೆ.

ಕೊಲ್ಹಾಪುರದಲ್ಲಿ ಭಾನುವಾರ ಮಾತನಾಡಿದ ವಡೆತ್ತಿವಾರ್, ತಮ್ಮ ಹೇಳಿಕೆಗಳಿಗೆ ರಾಜಕೀಯ ಬಣ್ಣ ನೀಡಲಾಗುತ್ತಿದೆ, ತಮ್ಮ ಹೇಳಿಕೆಗಳು ಮಾಜಿ ಉನ್ನತ ಪೊಲೀಸ್ ಅಧಿಕಾರಿ ಎಸ್.ಎಂ. ಮುಶ್ರೀಫ್ ಬರೆದಿರುವ ಕರ್ಕರೆಯನ್ನು ಕೊಂದ ಪುಸ್ತಕವನ್ನು ಆಧರಿಸಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಎಸ್‌ಎಂ ಮುಶ್ರೀಫ್ ಬರೆದಿರುವ ಪುಸ್ತಕದಲ್ಲಿ ಬರೆದದ್ದನ್ನು ಉಲ್ಲೇಖಿಸಿದ್ದೇನೆ. ಹೇಮಂತ್ ಕರ್ಕರೆಗೆ ತಗುಲಿದ ಗುಂಡಿನ ಬಗ್ಗೆ ಅದರಲ್ಲಿ ಪ್ರತಿಯೊಂದು ಮಾಹಿತಿಯೂ ಇತ್ತು. ಇದು ಭಯೋತ್ಪಾದಕರ ಬುಲೆಟ್ ಅಲ್ಲ ಎಂದು ಹೇಳಿದ್ದಾರೆ.

ವಡೆಟ್ಟಿವಾರ್ ಅವರ ಹೇಳಿಕೆಯು ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಟೀಕೆಗೆ ಕಾರಣವಾಗಿದೆ. ಮುಂಬೈ ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದ ವೀರಯೋಧರನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಆರೋಪಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವನಕುಲೆ, ಇಂತಹ ಹೇಳಿಕೆಗಳ ಮೂಲಕ ಪಾಕಿಸ್ತಾನಕ್ಕೆ ಸಹಾಯ ಮಾಡಲು ಕಾಂಗ್ರೆಸ್ ಪಿತೂರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಮತ ಪಡೆಯಲು ಕಾಂಗ್ರೆಸ್ ಎಷ್ಟು ಕೆಳಮಟ್ಟಕ್ಕೆ ಇಳಿಯುತ್ತದೆ? ಅವರು ಈಗ ಬಿಜೆಪಿಯನ್ನು ವಿರೋಧಿಸಲು 26/11 ಮುಂಬೈ ದಾಳಿಯ ಭಯೋತ್ಪಾದಕ ಅಜ್ಮಲ್ ಕಸಬ್‌ನ ಪರವಾಗಿ ಮಾತನಾಡುತ್ತಿದ್ದಾರೆಯೇ? ಸ್ವಲ್ಪ ನಾಚಿಕೆ ಇರಲಿ. ಕಾಂಗ್ರೆಸ್‌ಗೆ ಯಾವುದೇ ಸಮಸ್ಯೆ ಇಲ್ಲ. ಅವರು ಈಗ ಹುತಾತ್ಮರಾದ ನಮ್ಮ ಪೊಲೀಸ್ ಅಧಿಕಾರಿಗಳನ್ನು ಅವಮಾನಿಸುತ್ತಿದ್ದಾರೆ ಎಂದು ಚಂದ್ರಶೇಖರ ಬಾವನಕುಲೆ ಹೇಳಿದ್ದಾರೆ.

ಇದನ್ನು ಓದಿ: ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10 ಮಂದಿ ವಿರುದ್ದ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...