Homeಅಂತರಾಷ್ಟ್ರೀಯಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ '2024ರ ಯುನೆಸ್ಕೋ ಪತ್ರಿಕಾ...

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ ಪತ್ರಿಕಾ ಸ್ವಾತಂತ್ರ್ಯ ಪ್ರಶಸ್ತಿ’

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು ಆಯ್ಕೆ ಮಾಡಲಾಗಿದೆ. ವಿದೇಶಿ ಮಾಧ್ಯಮಗಳಿಗೆ ಗಾಝಾಗೆ ತೆರಳದಂತೆ ಇಸ್ರೇಲ್‌ ನಿರ್ಬಂಧ ವಿಧಿಸಿತ್ತು. ಸ್ಥಳೀಯ ಪತ್ರಕರ್ತರು ಗಾಝಾ ಪಟ್ಟಿಯ ಕಣ್ಣುಗಳು ಮತ್ತು ಕಿವಿಗಳಾಗಿದ್ದರು. ಇಸ್ರೇಲ್‌ ದಾಳಿ ಮೂಲಕ ಗಾಝಾದಲ್ಲಿ 30,000ಕ್ಕೂ ಅಧಿಕ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದೆ. ಈ ವೇಳೆ ಪತ್ರಕರ್ತರ ಸರಣಿ ಸಾವುಗಳು ನಡೆದಿದೆ. ಆದರೂ ಎದೆಗುಂದದೆ ಪ್ಯಾಲೆಸ್ತೀನ್‌ ಪತ್ರಕರ್ತರು ಇಸ್ರೇಲ್‌ನ ಕೃತ್ಯವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದರು.

UNESCO ಗಾಝಾದಲ್ಲಿ 26 ಪತ್ರಕರ್ತರ ಸಾವುಗಳ ಬಗ್ಗೆ ಉಲ್ಲೇಖಿಸಿದೆ, ಆದರೆ ವಾಸ್ತವ ಸಂಖ್ಯೆ ಅದಕ್ಕಿಂತ ಹೆಚ್ಚಿರಬಹುದು. ಅಲ್ ಜಝೀರಾ ಮಾಧ್ಯಮದ ಪ್ರಕಾರ ಗಾಝಾದಲ್ಲಿ 100ಕ್ಕಿಂತ ಹೆಚ್ಚು ಪತ್ರಕರ್ತರು ಮೃತಪಟ್ಟಿದ್ದಾರೆ. ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ತನ್ನ ಕುಟುಂಬದ ಅನೇಕ ಸದಸ್ಯರನ್ನು ಕಳೆದುಕೊಂಡಿದ್ದಾರೆ. ಅವರು ಕೂಡ ಇಸ್ರೇಲ್‌ ದಾಳಿ ವೇಳೆ ಗಾಯಗೊಂಡಿದ್ದಾರೆ.

ಅಲ್‌ ಜಝೀರಾ ಚಾನೆಲ್‌ನ ಕ್ಯಾಮರಾಮ್ಯಾನ್ ಸಮೀರ್ ಅಬುದಾಕ ದಕ್ಷಿಣ ಗಾಝಾದಲ್ಲಿ ವರದಿ ಮಾಡುವಾಗ ಮೃತಪಟ್ಟಿದ್ದಾರೆ. ಇದಲ್ಲದೆ ಇಸ್ರೇಲ್‌ ದೇಶವು ಅಲ್‌ಜಝೀರಾ ಮಾಧ್ಯಮದ ಪ್ರಸಾರ ಮತ್ತು ಕಾರ್ಯಚರಣೆಯನ್ನು ಸಂಫೂರ್ಣವಾಗಿ ನಿಷೇಧಿಸಿದೆ.

ಪ್ರಶಸ್ತಿ ಕುರಿತು ತೀರ್ಪುಗಾರರ ಸಮಿತಿಯ ಮುಖ್ಯಸ್ಥರಾದ ಮಾರಿಸಿಯೊ ವೀಬೆಲ್ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಹತಾಶತೆಯ ಈ ಸಮಯದಲ್ಲಿ, ಈ ಬಿಕ್ಕಟ್ಟಿನ ಬಗ್ಗೆ ವರದಿ ಮಾಡುತ್ತಿರುವ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ಒಗ್ಗಟ್ಟಿನ ಬಗ್ಗೆ ಬಲವಾದ ಸಂದೇಶವನ್ನು ಕಳುಹಿಸಲು ನಾವು ಬಯಸುತ್ತೇವೆ. ಮಾನವೀಯವಾಗಿ ಅವರ ಧೈರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬದ್ಧತೆಗೆ ನಾವು ದೊಡ್ಡ ಋಣವನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

UNESCO/Guillermo Cano ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತದೆ, ಕಠಿಣ ಮತ್ತು ಅಪಾಯಕಾರಿ ಸಂದರ್ಭಗಳನ್ನು ಎದುರಿಸುತ್ತಿರುವ ಪತ್ರಕರ್ತರ ಧೈರ್ಯವನ್ನು ಮೆಚ್ಚಿ ಈ ಗೌರವವನ್ನು ನೀಡಲಾಗುತ್ತದೆ ಎಂದು UNESCO ನಿರ್ದೇಶಕ-ಜನರಲ್ ಆಡ್ರೆ ಅಜೌಲೆ ಹೇಳಿದ್ದಾರೆ. ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯು 194 ಸದಸ್ಯ ರಾಷ್ಟ್ರಗಳನ್ನು ಹೊಂದಿದೆ.

ಹಮಾಸ್‌ ಇಸ್ರೇಲ್‌ ಮೇಲೆ ಅ.7ರಂದು ನಡೆಸಿದ ವೈಮಾನಿಕ ದಾಳಿಗೆ 1,200 ಜನರು ಮೃತಪಟ್ಟಿದ್ದರು.  ಆ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿ ಗಾಝಾ ಮೇಲೆ ನಡೆಸಿದ ದಾಳಿಯಲ್ಲಿ 30,000ಕ್ಕೂ ಅಧಿಕ ಗಾಝಾದ ನಾಗರಿಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಮಕ್ಕಳು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಇದನ್ನು ಓದಿ: ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....