Homeಕರ್ನಾಟಕಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್...

ಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್ ಸಂದರ್ಶನ

- Advertisement -
- Advertisement -

‘ಇಷ್ಟು ಕೋಟಿ ರೊಕ್ಕ ಕೊಟ್ಟರ ಅದನ್ನ ಎಲ್ಲಿಡೋದು ಅಂತ ನಮಗ ಗೊತ್ತಾಗವಲ್ದು ರೀ’ ಎಂದು ವಿಧಾನಸಭೆಯಲ್ಲಿ ಬಿ.ನಾರಾಯಣರಾವ್ ಅವರು ಮಾತನಾಡಿದಾಗ ಕರ್ನಾಟಕದ ಮತದಾರ ಬಂಧುಗಳಿಗೆ ಅದನ್ನು ಹೇಗೆ ಸ್ವೀಕರಿಸಬೇಕು ಎಂದು ಗೊತ್ತಾಗಲಿಲ್ಲ. ಮಾತಾಡುತ್ತಿದ್ದ ವ್ಯಕ್ತಿ ಪ್ರಾಮಾಣಿಕವಾಗಿದ್ದಂತೆ ಎಲ್ಲರಿಗೂ ಅನ್ನಿಸುತ್ತಿತ್ತಾದರೂ, ಇಂದಿನ ರಾಜಕಾರಣದಲ್ಲಿ ಇಂತಹ ಒಬ್ಬ ಶಾಸಕ ಇರಲು ಸಾಧ್ಯವೇ ಎಂಬ ಗುಮಾನಿಯೂ ಇತ್ತು. ನಾರಾಯಣರಾವ್‍ರನ್ನು ಬಲ್ಲವರಿಗೆ ಅಂತಹ ಅನುಮಾನವೇನೂ ಇಲ್ಲ. ‘80ರ ದಶಕದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸ್ಥಾಪನೆಯಾಗಬೇಕೆಂದು ಒತ್ತಾಯಿಸಿ ಬೀದರ್‌ನಿಂದ ಬೆಂಗಳೂರಿನವರೆಗೆ ಸೈಕಲ್ ಜಾಥಾ ಮಾಡಿದ ಉತ್ಸಾಹಿ ಅವರು. ಬಸವಕಲ್ಯಾಣದ ಹಿಂದುಳಿದ ಜಾತಿಯ ಅವರು ನಿರಂತರವಾಗಿ ರಾಜಕಾರಣದಲ್ಲಿದ್ದರೂ ಅಧಿಕಾರದ ಹತ್ತಿರಕ್ಕೆ ಎಂದೂ ಬಂದಿರಲಿಲ್ಲ. ಆ ನಂತರ ದೇವೇಗೌಡರೊಮ್ಮೆ ತಮ್ಮ ಪಕ್ಷದಿಂದ ‘89ರಲ್ಲಿ ಎಂಎಲ್‍ಎ ಟಿಕೆಟ್ ಕೊಟ್ಟಿದ್ದರಾದರೂ ಯಶಸ್ವಿಯಾಗಲಿಲ್ಲ. 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋತು, 2018ರಲ್ಲಿ ಗೆದ್ದರು. ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ಅತಿಥಿಗೃಹದಲ್ಲಿ ಪತ್ರಿಕೆಯ ತಂಡಕ್ಕೆ ನಾರಾಯಣರಾವ್ ಮಾತಿಗೆ ಸಿಕ್ಕರು.

ಚಿತ್ರಕೃಪೆ: ಯೋಯೋ ಟಿವಿ

ಪತ್ರಿಕೆ: ವಿಧಾನಸಭೆಯಲ್ಲಿ ನೀವು ಮಾತಾಡಿದ್ದನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು. ನಿಮ್ಮಂತಹ ವ್ಯಕ್ತಿಗಳು ರಾಜಕಾರಣ ಮಾಡುವ ಪರಿಸ್ಥಿತಿ ಇದೆಯೇ? ನೀವು ಬಯಸುವಂತಹ ಬದಲಾವಣೆ ರಾಜಕಾರಣದಲ್ಲಿ ಸಾಧ್ಯವೇ?

ಬಿ.ನಾರಾಯಣರಾವ್: ಯಾರು ಬದಲಾವಣೆ ಆಗುತ್ತಾರೋ ಬಿಡುತ್ತಾರೋ ಅದು ನಮಗೆ ಸಂಬಂಧಿಸಿಲ್ಲ. ನಾವು, ನಮ್ಮಂತಹ ನಿಷ್ಠಾವಂತರು ಪ್ರಾಮಾಣಿಕರು, ಜನಪರ ಕಾಳಜಿಯಿಟ್ಟು ಹೋರಾಟ ಮಾಡಿದಂತವರು ಬದಲಾಗಬಾರದು.

ಯಾರು ಏನ್ ಮಾಡ್ತರೋ ಬಿಡ್ತಾರೋ ಗೊತ್ತಿಲ್ಲ. ಈ ದೇಶದಲ್ಲಿ ಮಹಾತ್ಮಗಾಂಧಿ ಎಲ್ಲರಿಗಿಂತ ಭಿನ್ನವಾದ ನಾಯಕತ್ವ ಕೊಟ್ಟರು. ಹಾಗಾಗಿ ನಮ್ಮಂತವರು ಅಲ್ಲೊಬ್ಬರು ಇಲ್ಲೊಬ್ಬರು ಉಳಿದುಕೊಂಡಿದ್ದೇವೆ. ಇದು ಬದಲಾವಣೆ ಆಗುವುದಿಲ್ಲ ಅಂತ ನಾವು ಕೆಟ್ಟವರ ಜೊತೆ ಹೋಗೋಕ್ಕಾಗಲ್ಲ.

ಪತ್ರಿಕೆ: ಅನರ್ಹ ಶಾಸಕರು – ಮಾರಿಕೊಂಡು ಹೋದವರನ್ನು ನಿಮ್ಮ ಪಕ್ಷದವರು, ನೀವು ಬೈದಿರಿ. ಆದರೆ ಅಂತಹವರಿಗೆ ಟಿಕೆಟ್ ಕೊಟ್ಟಿದ್ದೇ ನಿಮ್ಮ ಪಕ್ಷವಲ್ಲವೇ?

ವಿಧಾನಸಭೆಯಲ್ಲೇ ನಾನು ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಮೂರು ಜನರಿಗೆ ಸೇರಿಸಿ ಹೇಳಿದ್ದೀನಿ. ಚುನಾವಣೆಗೆ ಕೇವಲ ಹದಿನೈದು ದಿನ ಇದ್ದಾಗ, ಹಣವಂತರು, ಸಾರಾಯಿ ಮಾರುವವರು, ರಿಯಲ್ ಎಸ್ಟೇಟ್‍ನವರು ಕಪ್ಪು ಹಣ ಉಳ್ಳವರಿಗೆ ಟಿಕೆಟ್ ಕೊಟ್ಟಿದ್ದೇ ಈ ಅನಾಹುತಕ್ಕೆ ನಿಜವಾದ ಕಾರಣ.

ಬೇವಿನ ಬೀಜವ ಬಿತ್ತಿ, ಬೆಲ್ಲದ ಕಟ್ಟೆಯನು ಕಟ್ಟಿ,
ಸವಿಜೇನು ಹಾಲು ತುಪ್ಪವನ್ನು ಎರೆದರೆ
ಕಹಿಯಲ್ಲದೇ ಸಿಹಿಯಾಗಬಲ್ಲುದೇ
ನಮ್ಮ ಕೂಡಲ ಸಂಗಮದೇವ

ಎಂದು ಬಸವಣ್ಣನವರು 800 ವರ್ಷಕ್ಕಿಂತ ಮುಂಚೆಯೇ ಹೇಳಿದ ಕಟುಸತ್ಯವನ್ನು ಉಲ್ಲೇಖಿಸಿದ್ದೆ. ಬೇವು ಬೀಜ ಬಿತ್ತಿದರೆ ಬೇವೇ ಸಿಗುತ್ತದೆ. ಮಾವು ಬಿತ್ತಿದರೆ ಮಾವೇ ಸಿಗುತ್ತದೆ ಎಂಬುದು ಇವರಿಗೆ ಗೊತ್ತಿಲ್ಲವೇ?

ಪತ್ರಿಕೆ: ನೀವು ಬಸವ ತತ್ವದ ಕುರಿತು ಇಷ್ಟೊಂದು ಮಾತಾಡುತ್ತೀರಿ. ಆದರೆ ಅದೇಕೆ ಬೆಳೆದು ನಿಲ್ಲಲಿಲ್ಲ?

ಬಿ.ನಾರಾಯಣರಾವ್: ಬಸವ ತತ್ವ ದ್ರಾವಿಡಿಯನ್ ಭಾಗದಲ್ಲಿ ನಮ್ಮ ದಕ್ಷಿಣದಲ್ಲಿ ಹುಟ್ಟಿರುವುದರಿಂದ ಇದು ಬೆಳೆದಿಲ್ಲ. ವಿಂಧ್ಯಪರ್ವತದ ಆಚೆ ಹುಟ್ಟಿದ ಧರ್ಮಗಳು – ಉದಾಹರಣೆಗೆ ಬುದ್ಧ ಧರ್ಮ ಇವತ್ತು ವಿಶ್ವವ್ಯಾಪಿಯಾಗಿಲ್ಲವೇ? ಮಹಾವೀರನ ಧರ್ಮವೂ ಬೆಳೆದಿದೆ. ಮೂರ್ನಾಲ್ಕು ಧರ್ಮಗಳು ವಿಂಧ್ಯ ಪರ್ವತದ ಆಚೆ ಹುಟ್ಟಿದವು ವಿಶ್ವವ್ಯಾಪಿಯಾಗಿವೆ.

ವಿಂಧ್ಯಪರ್ವತ ಈಚೆ ಹುಟ್ಟಿರುವುದು ಒಂದೇ ಒಂದು ಧರ್ಮ ಅದು ಬಸವಣ್ಣನವರ ನೇತೃತ್ವದಲ್ಲಿ ಲಿಂಗಾಯಿತ ಧರ್ಮ. ಅಂಥ ಒಂದು ಧರ್ಮಕ್ಕೆ ರಾಜಕೀಯ ರಕ್ಷಣೆ ಸಿಕ್ಕಿಲ್ಲ. ರಾಜಾಶ್ರಯ ಸಿಕ್ಕಿಲ್ಲ. ಇದು ಒಂದೇ ಧರ್ಮಕ್ಕೆ ರಾಜಾಶ್ರಯ ಸಿಕ್ಕಿಲ್ಲ. ಬೌದ್ಧ ಧರ್ಮಕ್ಕೂ ರಾಜಾಶ್ರಯ ಸಿಕ್ಕಿತ್ತು.

ಪತ್ರಿಕೆ: ಲಿಂಗಾಯಿತ ಸಮುದಾಯದ ಯಡಿಯೂರಪ್ಪನವರು ಸಿಎಂ ಆಗಿದ್ದಾರೆ.. ಅದು ರಾಜಾಶ್ರಯ ಸಿಕ್ಕ ಹಾಗಲ್ಲವೇ?
ಬಿ.ನಾರಾಯಣರಾವ್: ಯಡಿಯೂರಪ್ಪನವರು ಎಷ್ಟು ಕೆಲಸ ಮಾಡುತ್ತಾರೋ ಅಷ್ಟನ್ನು ನಾವು ಸ್ವಾಗತಿಸುತ್ತೇವೆ. ಅವರ ಮನಸ್ಸು ಬಸವಣ್ಣನವರ ಬಗ್ಗೆ ತುಡಿತ ಇದ್ರೂ, ಕಾಳಜಿ ಇದ್ರೂ ಕೂಡ ಅವರು ವೈದಿಕ ವ್ಯವಸ್ಥೆಯ ಭಾಗವಾಗಿರುವುದರಿಂದ ಅವರು ಪೂರ್ಣ ಪ್ರಮಾಣದಲ್ಲಿ ಮಾಡಲಿಕ್ಕೆ (ಆ ವ್ಯವಸ್ಥೆ) ಬಿಡುವುದಿಲ್ಲ. ವೈದಿಕ ವ್ಯವಸ್ಥೆಯನ್ನು ಸಮಾಧಾನಪಡಿಸಲಿಕ್ಕೇನೇ ಅವರ ಒಂದು ಜೀವಮಾನ ಹೋಯ್ತು.

ಪ: ನೀವು ವ್ಯಕ್ತಿಗತ ನೆಲೆಯಲ್ಲಿ ಮಾತಾಡುತ್ತಿದ್ದೀರಿ. ಆದರೆ, ಸಮಗ್ರ ಬದಲಾವಣೆ ಬರಬೇಕಾದರೆ ಒಂದು ಪಕ್ಷ, ಸಂಘಟನೆ ಸರಿಯಿರಬೇಕು. ನಿಮ್ಮ ಪಕ್ಷವೂ ಸರಿಯಿಲ್ಲ. ಹೀಗಿದ್ದ ಮೇಲೆ ಸಮಾಜ ಬದಲಾವಣೆ ಹೇಗೆ ಸಾಧ್ಯ?

ಬಿ.ನಾರಾಯಣರಾವ್: ಹಾಗಂತ ನಾವು ಮನುವಾದಿಗಳ ಜೊತೆ, ಬಿಜೆಪಿ ಗುರುತಿಸಿಕೊಳ್ಳಲು ಆಗುವುದಿಲ್ಲ. ಅದು ನಾಗ್ಪುರದಿಂದ ನಡೆಯುವ ಪಕ್ಷ. ಆರ್‌ಎಸ್‍ಎಸ್‍ನವರ ಕೈಯಲ್ಲಿ ಅದರ ಜುಟ್ಟಿದೆ. ಮೋದಿ ಕೂಡ ಅವರ ಕೈಗೊಂಬೆ. ಯಡಿಯೂರಪ್ಪನವರು ಸಹ ಕೈಗೊಂಬೆಯೇ.. ಅವರು ಪೇಟಿ ಬಾರಿಸುತ್ತಾರೆ ಇವರು ಕುಣಿತಾರೆ. ಕಾನೂನುಗಳು ನಾಗ್ಪುರದಲ್ಲಿ ತಯಾರಾಗ್ತಾವೆ. ಅವರು ಪುಟ ಓದೋದು ಪಾರ್ಲಿಮೆಂಟಲ್ಲಿ. ಇದು ಕಟುಸತ್ಯ. ಎರಡು ಮಾತಿಲ್ಲ. ಈಗ ನಾವು ಇದ್ದುದರಲ್ಲಿ ಇಲ್ಲಿರಬೇಕು.. ಜೆಡಿಎಸ್ ಒಂದು ಕುಟುಂಬದ ಪಕ್ಷ ಆಗಿಬಿಟ್ಟಿದೆ. ಬಿಜೆಪಿಗೆ ನಾವು ಹೋಗುವಂತಿಲ್ಲ. ಕಾಂಗ್ರೆಸ್ಸೂ ಕೂಡ ನೈತಿಕವಾಗಿ ಅಷ್ಟೇನು ಒಳ್ಳೆದಿಲ್ಲ. ಅಲ್ಲಿ ಕೂಡ ಜನಪರ ಕಾಳಜಿ ಇರುವವರು ಒಂದು ಕಡೆ ಇದ್ದಾರೆ, ವೈದಿಕ ವ್ಯವಸ್ಥೆಯನ್ನು ಒಪ್ಪಿ ಕೊಂಡಿರುವವರು ಸಹ ಇದ್ದಾರೆ. ಅಲ್ಲಿ ಎಲ್ಲಾ ಸಾಚಾ ಇಲ್ಲ. ಇದಕ್ಕಿಂತ ಒಳ್ಳೆಯ ವ್ಯವಸ್ಥೆ ಬರಬೇಕೆಂಬ ತುಡಿತ ನಮಗೂ ಇದೆ.

ಪ: ಕರ್ನಾಟಕ ರಾಜ್ಯ ಕಾಂಗ್ರೆಸ್ ನಾಯಕತ್ವದಲ್ಲಿ ಕಚ್ಚಾಟ ನಡೆಯುತ್ತಿದೆ. ವಿರೋಧ ಪಕ್ಷದ ನಾಯಕ ಸಹಾ ಇಲ್ಲ. ಈ ದುರಂತಕ್ಕೆ ಏನು ಹೇಳುತ್ತೀರಿ?

ಬಿ.ನಾರಾಯಣರಾವ್: ಅದೆಲ್ಲಾ 9ನೇ ತಾರೀಖಿಗೆ ಮುಕ್ತಾಯವಾಗುತ್ತದೆ ಸರ್. ಒಂದು ಹೇಳುತ್ತೇನೆ. ಈ ರಾಜ್ಯದಲ್ಲಿ ಜನನಾಯಕರಿರುವುದು ಇಬ್ಬರೆ. ಮೂರು ಪಕ್ಷ ಇವೆ ಮೂರು ಜನ ಇದ್ದಾರೆ. ಕಾಂಗ್ರೆಸ್‍ಗೆ ಸಿದ್ದರಾಮಯ್ಯ, ಬಿಜೆಪಿಗೆ ಯಡಿಯೂರಪ್ಪ, ಜೆಡಿಎಸ್‍ಗೆ ದೇವೇಗೌಡ. ಈಗ ಅವರದು – ಜೆಡಿಎಸ್‍ದು ಮುಗಿದಿದೆ. ಇನ್ನು ಯಡಿಯೂರಪ್ಪನವರದು ಎಷ್ಟು ದಿನ ನೋಡಬೇಕು. ಜನರಿಗೆ ನಾಟಕ ನೋಡಬೇಕಾಗಿದೆ. ಜೆಡಿಎಸ್ ನಾಟಕ ಮುಗಿದಿದೆ. ಈಗ ಬಿಜೆಪಿದು ಇದೆ. ಇದು ಎಷ್ಟು ದಿನ ನಡೆಯುತ್ತದೆ ನೋಡಬೇಕು. ಇದು ಮುಗಿದರೆ ಅನಿವಾರ್ಯವಾಗಿ ಕಾಂಗ್ರೆಸ್ ಬರಲೇಬೇಕು ಸರ್. ಇವೂ ಮೂರು ಬೇಡ ಅಂದ್ರೆ ಮತ್ತೊಂದು ಹುಟ್ಟಿದ್ದರೆ ಅದಕ್ಕೆ ಸೇರಬೇಕು.

ಪ: ಲಿಂಗಾಯಿತರು ಬಸವತತ್ವ ವಿರೋಧಿ ಸಿದ್ಧಾಂತ ಹೊಂದಿರುವ ಬಿಜೆಪಿಗೆ ಮತ ಕೊಡುತ್ತಾರಲ್ಲಾ. ಅದರ ಬಗ್ಗೆ ನೀವೇನು ಹೇಳುತ್ತೀರಿ?

ಬಿ.ನಾರಾಯಣರಾವ್: ಲಿಂಗಾಯಿತರು ಕಾಂಗ್ರೆಸ್‍ಗೆ ಮತ ಕೊಡದಿದ್ದರೂ ಪರವಾಗಿಲ್ಲ. ಆದರೆ ಬಸವಣ್ಣನವರಿಗೆ ಅನ್ಯಾಯ ಮಾಡದಂತೆ ಅವರ ತತ್ವದ ಮೇಲೆ ಅವರು ನಡೆದರೆ ಸಾಕು. ಅವರಿಗೆ ಶರಣು ಶರಣಾರ್ಥಿ. ತಮಗಿಷ್ಟ ಬಂದವರಿಗೆ ಮತ ಹಾಕುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಆದರೆ ಬಸವ ವಿರೋಧಿಯಾಗಿ, ಬಸವಣ್ಣನವರ ತತ್ವಕ್ಕೆ ವಿರುದ್ಧವಾಗಿ ನಡೆದುಕೊಳ್ಳಬಾರದು. ಬಸವಣ್ಣನವರು ಯಾವ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಿದ್ದಾರೋ ಆ ವ್ಯವಸ್ಥೆಯ ಒಳಗೆ ಹೋಗಬಾರದು ಅಷ್ಟೇ.

ಸಂದರ್ಶನ:
ಡಾ.ವಾಸು.ಎಚ್.ವಿ ಮತ್ತು
ಸಿದ್ದಪ್ಪ ಮೂಲಗೆ


ಕೊರೊನಾ: ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ ನಿಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾರಾಯಣ ರಾವ್ ಅವರ ಅನಿಸಿಕೆಗಳು ವಾಸ್ತವಿಕವಾಗಿವೆ. ಈಗ ಈಗಿರುವ ಮೂರೂ ಪಕ್ಷಗಳ ಬದಲಿಗೆ ಇನ್ನೊಂದು ಪಕ್ಷ ದೆಹಲಿ ಅವಶ್ಯಕತೆಯಿದೆ. ದುದೈ೯ವವೆಂರರೆ ಅಂತಹ ಪಕ್ಷವನ್ನು ಕಟ್ಟುವ, ಬೆಳೆಸುವ ನಾಯಕನಿಲ್ಲ. ಹಾಗೆ ನೋಡಿದರೆ ಹಳೆಯ ಜನತಾ ದಳ ಭರವಸೆಯ ಪಕ್ಷ ವಾಗಿತ್ತು. ಆದರೆ ಪುನರ್ ಜೀವನವಾಗಬೇಕಾಗಿದೆ.

  2. ಹಳೇಪಕ್ಶಗಳಿಗೆ ಅಂಟಿಕೊಳ್ಳುವುದು ಸರಿಯಲ್ಲ.
    ದರ್ಮದ ಹಂಗಿಲ್ಲದ, ಕುಟುಂಬ ರಾಜಕಾರಣದ ಹಂಗಿಲ್ಲದ ಕನ್ನಡನೆಲೆಯ ಹೊಸಕೂಟ ಗಟ್ಟಿಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...