Homeಅಂತರಾಷ್ಟ್ರೀಯಅಲ್‌ ಜಝೀರಾ ಕಚೇರಿ ಮೇಲೆ ದಾಳಿ ನಡೆಸಿದ ಇಸ್ರೇಲ್‌ ಅಧಿಕಾರಿಗಳು

ಅಲ್‌ ಜಝೀರಾ ಕಚೇರಿ ಮೇಲೆ ದಾಳಿ ನಡೆಸಿದ ಇಸ್ರೇಲ್‌ ಅಧಿಕಾರಿಗಳು

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನಡೆಸಿದ ಕ್ರೌರ್ಯವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ ಅಲ್‌ ಜಝೀರಾ ಸುದ್ದಿವಾಹಿನಿಯನ್ನು ಇಸ್ರೇಲ್‌ ಈ ಹಿಂದೆ ದೇಶದಲ್ಲಿ ನಿರ್ಬಂಧ ವಿಧಿಸಿತ್ತು. ಇದೀಗ ಇಸ್ರೇಲ್‌ನಲ್ಲಿನ ಅಲ್‌ಜಝೀರಾ ಕಚೇರಿಗೆ ಇಸ್ರೇಲ್‌ ಅಧಿಕಾರಿಗಳು ದಾಳಿ ನಡೆಸಿದ್ದು, ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಕತಾರ್ ಮೂಲದ ಟಿವಿ ಸುದ್ದಿ ನೆಟ್‌ವರ್ಕ್‌ ಅಲ್‌ ಜಝೀರಾವನ್ನು ದೇಶದಲ್ಲಿ ನಿರ್ಬಂಧಿಸದಲು ಇಸ್ರೇಲ್‌ ಸಚಿವ ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಅಂತರಾಷ್ಟ್ರೀಯ ಮಾಧ್ಯಮ ಸಂಸ್ಥೆಯೊಂದರ ಮೇಳೆ ಇಂಥ ದಾಳಿ ನಡೆದಿರುವುದು ಇದೇ ಮೊದಲು ಎಂದು ಹೇಳಲಾಗಿದೆ.

ಸಂವಹನ ಸಚಿವಾಲಯದ ಇನ್ಸ್‌ಪೆಕ್ಟರ್‌ಗಳು, ಪೊಲೀಸರೊಂದಿಗೆ ಜೆರುಸಲೆಮ್‌ನಲ್ಲಿರುವ ಅಲ್ ಜಝೀರಾ ಕಚೇರಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಕ್ಯಾಮರ ಸೇರಿದಂತೆ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಮೊದಲು ಅಲ್‌ ಜಝೀರಾ ಪ್ರಸಾರಕ್ಕೆ ಇಸ್ರೇಲ್‌ ನಿರ್ಬಂಧ ವಿಧಿಸಿರುವುದರ ಜೊತೆಗೆ ಅಲ್‌ಜಝೀರಾ ವೆಬ್‌ಸೈಟ್‌ನ್ನು ಇಸ್ರೇಲ್‌ನಾದ್ಯಂತ ನಿರ್ಬಂಧಿಸಿತ್ತು.

ಇಸ್ರೇಲ್‌ನ ಸಂವಹನ ಸಚಿವರಾದ ಶ್ಲೋಮೋ ಕರ್ಹಿ ದಾಳಿ ಕುರಿತ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ ಜಝೀರಾ ಇಸ್ರೇಲ್‌ನ ಕ್ರಮವನ್ನು ಖಂಡಿಸಿದ್ದು, ಇದು ಮಾಹಿತಿಯನ್ನು ಪಡೆಯುವ ಮಾನವನ ಹಕ್ಕುಗಳನ್ನು ಉಲ್ಲಂಘಿಸುವ ಅಪರಾಧ ಕೃತ್ಯ ಎಂದು ಹೇಳಿದೆ. ಅಸೋಸಿಯೇಷನ್ ಫಾರ್ ಸಿವಿಲ್ ರೈಟ್ಸ್ ಇನ್ ಇಸ್ರೇಲ್ (ACRI) ಈ ಬಗ್ಗೆ ಇಸ್ರೇಲ್‌ನ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ. ಇದು ಮಾಧ್ಯಮಗಳಿಗೆ ಕರಾಳ ದಿನ ಮತ್ತು ಪ್ರಜಾಪ್ರಭುತ್ವಕ್ಕೆ ಕರಾಳ ದಿನ ಎಂದು ಇಸ್ರೇಲ್‌ನ ವಿದೇಶಿ ಪ್ರೆಸ್ ಅಸೋಸಿಯೇಷನ್ ಹೇಳಿಕೆಯಲ್ಲಿ ತಿಳಿಸಿದೆ.

ಇಸ್ರೇಲ್ ಮತ್ತು ಹಮಾಸ್ ಮಧ್ಯೆ ಕತಾರ್‌ ಪ್ರಮುಖ ಮಧ್ಯವರ್ತಿಯಾಗಿದೆ. ಗಾಝಾದಲ್ಲಿನ ಇಸ್ರೇಲ್‌ ಒತ್ತೆಯಾಳುಗಳ ಬಿಡುಗಡೆಯನ್ನು ಒಳಗೊಂಡಿರುವ ಒಪ್ಪಂದದ ಕಡೆಗೆ ಕೆಲಸ ಮಾಡುವುದನ್ನು ಕತಾರ್‌ ಮುಂದುವರೆಸಿದೆ. ಈ ಮಧ್ಯೆ ಇಸ್ರೇಲ್‌- ಕತಾರ್‌ ಮೂಲದ ಅಲ್‌ಜಝೀರಾ ಕಚೇರಿ ಮೇಲೆ ದಾಳಿ ನಡೆಸಿದೆ.

ಅಲ್ ಜಝೀರಾ ಇಸ್ರೇಲ್‌ನ ಭದ್ರತೆಗೆ ಹಾನಿ ಮಾಡಿದೆ, ಅಕ್ಟೋಬರ್ 7ರ ಹತ್ಯಾಕಾಂಡದಲ್ಲಿ ಸಕ್ರಿಯವಾಗಿ ಭಾಗವಹಿಸಿದೆ, ನಮ್ಮ ದೇಶದಿಂದ ಹಮಾಸ್ ಧ್ವನಿಯನ್ನು ತೆಗೆದುಹಾಕುವ ಸಮಯ ಇದು ಎಂದು ನೆತನ್ಯಾಹು ಈ ಕುರಿತ ಇಸ್ರೇಲ್‌ ಸದನದಲ್ಲಿ ಹೇಳಿದ್ದಾರೆ.

ಮಾರ್ಚ್‌ನಲ್ಲಿ ಇಸ್ರೇಲ್‌ ಸೈನಿಕರು ಗಾಝಾದ ಅಲ್ ಶಿಫಾ ಆಸ್ಪತ್ರೆಯಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಎಂದು ಹೇಳುವ ಸ್ಟೋರಿಯನ್ನು ಅಲ್‌ಜಝೀರಾ ಚಾನೆಲ್ ವರದಿ ಮಾಡಿತ್ತು. ಇದನ್ನು ಇಸ್ರೇಲ್ ರಕ್ಷಣಾ ಪಡೆಗಳು ನಿರಾಕರಿಸಿದ್ದವು.

ಶ್ವೇತಭವನದ ವಕ್ತಾರ ಕರೀನ್ ಜೀನ್-ಪಿಯರ್ ಇಸ್ರೇಲ್‌ ಸರಕಾರದ ಈ ಕ್ರಮವನ್ನು ಟೀಕಿಸಿದ್ದಾರೆ. ಗಾಝಾದಲ್ಲಿ ಕೆಲಸ ಮಾಡುವವರು ಸೇರಿದಂತೆ ಪ್ರಪಂಚದಾದ್ಯಂತದ ಪತ್ರಕರ್ತರ ಕೆಲಸವನ್ನು ಯುಎಸ್ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡಿರುವುದನ್ನು ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...