Homeಕರ್ನಾಟಕಮತದಾನದ ವಿವರ ತಡವಾಗಿ ಪ್ರಕಟ, ನೋಂದಾಯಿತ ಮತದಾರರ ಮಾಹಿತಿ ಮಾಯ: ಚು. ಆಯೋಗಕ್ಕೆ ಗಂಭೀರ ಪ್ರಶ್ನೆ...

ಮತದಾನದ ವಿವರ ತಡವಾಗಿ ಪ್ರಕಟ, ನೋಂದಾಯಿತ ಮತದಾರರ ಮಾಹಿತಿ ಮಾಯ: ಚು. ಆಯೋಗಕ್ಕೆ ಗಂಭೀರ ಪ್ರಶ್ನೆ ಎತ್ತಿದ ಖರ್ಗೆ

- Advertisement -
- Advertisement -

ಲೋಕಸಭೆ ಚುನಾವಣೆಯ ಮೊದಲ ಮತ್ತು ಎರಡನೇ ಹಂತದ ಮತದಾನದ ಅಂತಿಮ ಅಂಕಿ ಅಂಶಗಳನ್ನು ಬಹಳ ತಡವಾಗಿ ಬಿಡುಗಡೆಗೊಳಿಸಿರುವುದು ಮತ್ತು ಚುನಾವಣಾ ಆಯೋಗದ ವೆಬ್‌ಸೈಟ್‌ನಿಂದ ನೋಂದಾಯಿತ ಮತದಾರರ ಮಾಹಿತಿ ಕಾಣೆಯಾಗಿರುವುದು ಅನುಮಾನಗಳನ್ನು ಹುಟ್ಟು ಹಾಕಿದೆ.

ಇದು ಉದ್ದೇಶಪೂರ್ವಕವಾಗಿ ಮಾಡಿರುವ ಕೃತ್ಯ. ಮತದಾನದ ಫಲಿತಾಂಶ ಬದಲಿಸುವ ಹುನ್ನಾರ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರಿಗೆ ಈ ಕುರಿತು ವಿವರವಾದ ಪತ್ರವೊಂದನ್ನು ಬರೆದಿದ್ದಾರೆ.

ಪತ್ರದಲ್ಲಿ, “ಈ ಬಾರಿಯ ಲೋಕಸಭೆ ಚುನಾವಣೆ ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟವಾಗಿದೆ. ಇತ್ತೀಚಿನ ಬೆಳವಣಿಗೆಗಳಿಂದ ಭಾರತೀಯ ಚುನಾವಣಾ ಆಯೋಗದ ಮೇಲಿನ ವಿಶ್ವಾಸಾರ್ಹತೆ ಕಡಿಮೆಯಾಗಿದೆ. ಮೊದಲ ಮತ್ತು ಎರಡನೇ ಹಂತದ ಮತದಾನದ ಅಂಕಿ ಅಂಶಗಳನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ತಡವಾಗಿ ಬಹಿರಂಗಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಮೂರನೇ ಹಂತದ ಮತದಾನಕ್ಕೆ ನೋಂದಾಯಿತ ಮತದಾರರ ಅಂತಿಮ ಪಟ್ಟಿಯನ್ನೂ ಬಿಡುಗಡೆ ಮಾಡಿಲ್ಲಎಂದು ವಿವಿಧ ಮಾಧ್ಯಮಗಳ ವರದಿಗಳ ಮೂಲಕ ತಿಳಿದು ಬಂದಿದೆ. ಇದು ಅತ್ಯಂತ ದಿಗ್ಭ್ರಮೆಗೊಳಿಸುವ ಸಂಗತಿಯಾಗಿದೆ. ಈ ಎಲ್ಲಾ ಬೆಳವಣಿಗೆಗಳು ಭಾರತದ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಮೇಲೆ ಕರಾಳ ಛಾಯೆ ಮೂಡಿಸಿದೆ. ಚುನಾವಣಾ ಆಯೋಗ ಭಾರತದ ರಾಜ್ಯಗಳು ಮತ್ತು ಅದರ ಜನರ ಸಾಮೂಹಿಕ ಪ್ರಯತ್ನದಿಂದ ಸ್ಥಾಪಿಸಲಾದ ಸಂಸ್ಥೆಯಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಮೊದಲ ಮತ್ತು ಎರಡನೇ ಹಂತದ ಅಂತಿಮ ಮತದಾನದ ಶೇಕಡಾವಾರು ಅಂಕಿ ಅಂಶಗಳ ಬಿಡುಗಡೆಯಲ್ಲಿನ ಅತಿಯಾದ ವಿಳಂಬ ಅಂಕಿ ಅಂಶಗಳ ಗುಣಮಟ್ಟದ ಮೇಲೆ ಗಂಭೀರ ಅನುಮಾನಗಳನ್ನು ಹುಟ್ಟು ಹಾಕಿದೆ. ನನ್ನ 52 ವರ್ಷಗಳ ರಾಜಕೀಯ ಜೀವನದಲ್ಲಿ ಇಷ್ಟೊಂದು ವಿಳಂಬವಾಗಿ ಮತದಾನದ ಅಂಕಿ ಅಂಶ ಬಿಡುಗಡೆ ಮಾಡಿರುವುದನ್ನು ಎಂದಿಗೂ ನೋಡಿಲ್ಲ. ಮತದಾನ ನಡೆದ ಗಂಟೆಗಳ ಒಳಗೆ ಅಂಕಿ ಅಂಶ ಬಿಡುಗಡೆಯಾಗುತ್ತಿತ್ತು. ಹಾಗಾಗಿ, ಈ ಕೆಳಗಿನ ಪ್ರಶ್ನೆಗಳನ್ನು ನಾವು ಕೇಳಬೇಕಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ಹೇಳಿದ್ದಾರೆ.

ಖರ್ಗೆ ಪ್ರಸ್ತಾಪಿಸಿದ ಪ್ರಶ್ನೆಗಳು ಹೀಗಿವೆ..

1. ಏಪ್ರಿಲ್ 30, 2024 ರಂದು ಚುನಾವಣಾ ಆಯೋಗ 2024ರ ಲೋಕಸಭೆಯ ಚುನಾವಣೆಯ ಮೊದಲ ಮತ್ತು ಎರಡನೇ ಹಂತದ ಮತದಾನದ ಅಂತಿಮ ಶೇಕಡವಾರು ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. ಮೊದಲ ಹಂತದ ಮತದಾನದ 11 ದಿನಗಳ ನಂತರ (19 ಏಪ್ರಿಲ್ 2024) ಮತ್ತು ಎರಡನೇ ಹಂತದ ಮತದಾನದ 4 ದಿನಗಳ ನಂತರ (26 ಏಪ್ರಿಲ್ 2024) ಡೇಟಾ ಬಿಡುಗಡೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗಕ್ಕೆ ನಮ್ಮ ಮೊದಲ ಪ್ರಶ್ನೆ ಏನೆಂದರೆ.. ಆಯೋಗವು ಮತದಾನದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಲು ಇಷ್ಟೊಂದು ವಿಳಂಬ ಮಾಡಿದ್ದು ಏಕೆ?

2. ಈ ಹಿಂದೆಯೆಲ್ಲ ಆಯೋಗವು ಮತದಾನದ ನಡೆದ 24 ಗಂಟೆಗಳ ಒಳಗೆ ಅಂತಿಮ ಅಂಕಿ ಅಂಶಗಳನ್ನು ಪ್ರಕಟಿಸುತ್ತಿತ್ತು. ಈ ಬಾರಿ ಏನು ಬದಲಾಗಿದೆ? ರಾಜಕೀಯ ಪಕ್ಷಗಳು ಮತ್ತು ರಾಜಕೀಯ ಕಾರ್ಯಕರ್ತರು ಪದೇ ಪದೇ ಪ್ರಶ್ನಿಸುತ್ತಿದ್ದರೂ, ವಿಳಂಬವನ್ನು ಸಮರ್ಥಿಸಲು ಆಯೋಗ ಯಾವುದೇ ಸ್ಪಷ್ಟೀಕರಣವನ್ನು ನೀಡಲು ವಿಫಲವಾಗಿದ್ದು ಏಕೆ? ಇವಿಎಂಗಳಲ್ಲಿ ಸಮಸ್ಯೆ ಇದೆಯೇ?

3. ಮೊದಲ ಹಂತದಲ್ಲಿ 102 ಸ್ಥಾನಗಳಿಗೆ ನಡೆದ ಮತದಾನದ ಅಂಕಿ ಅಂಶಗಳನ್ನು19 ಏಪ್ರಿಲ್ 2024 ರಂದು ಸಂಜೆ 7 ಗಂಟೆಗೆ ಬಿಡುಗಡೆ ಮಾಡಿದ್ದ ಚುನಾವಣಾ ಆಯೋಗ, ಅಂದಾಜು 60% ಮತದಾನವಾಗಿದೆ ಎಂದಿತ್ತು. ಎರಡನೇ ಹಂತದಲ್ಲಿ 88 ಸ್ಥಾನಗಳಿಗೆ ನಡೆದ ಅಂದಾಜು ಮತದಾನದ ಪ್ರಮಾಣ 60.96 % ಎಂದಿತ್ತು.
ಈ ಎಲ್ಲಾ ಅಂಕಿ ಅಂಶಗಳು ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿಯಾಗಿದೆ.

ಆದರೆ, ಏಪ್ರಿಲ್ 20 ರಂದು, ಆಯೋಗವು ಮೊದಲ ಹಂತದ ಮತದಾನದ ಪ್ರಮಾಣವನ್ನು 65.5% ಕ್ಕೆ ಮತ್ತು 27ರಂದು ಎರಡನೇ ಹಂತದ ಮತದಾನದ ಪ್ರಮಾಣವನ್ನು 66.7% ಕ್ಕೆ ಹೆಚ್ಚಿಸಿದೆ. ಅಂತಿಮವಾಗಿ ಏಪ್ರಿಲ್ 30 ರಂದು ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಮೊದಲ ಹಂತದಲ್ಲಿ 66.14% ಮತ್ತು ಎರಡನೇ ಹಂತದಲ್ಲಿ 66.71% ಮತದಾನವಾಗಿದೆ ಎಂದು ದೃಢೀಕರಿಸಿದೆ. ಈ ರೀತಿ ಬದಲಾವಣೆಯಾಗಿದ್ದು ಏಕೆ?

4. ಏಪ್ರಿಲ್ 19ರಂದು ಮೊದಲ ಹಂತದ ಮತದಾನದ ದಿನ ಸಂಜೆ 7 ಗಂಟೆಯ ಹೊತ್ತಿಗೆ ಬಿಡುಗಡೆ ಮಾಡಲಾದ ಅಂದಾಜು ಅಂಕಿ ಅಂಶಕ್ಕಿಂತ, ಏಪ್ರಿಲ್ 30ರಂದು ಬಿಡುಗಡೆ ಮಾಡಲಾದ ಅಂತಿಮ ಅಂಕಿ ಅಂಶದಲ್ಲಿ ಮತದಾನದ ಪ್ರಮಾಣ ಶೇ. 5.5ರಷ್ಟು ಹೆಚ್ಚಳವಾಗಿದ್ದು ಏಕೆ?

ಏಪ್ರಿಲ್ 26ರಂದು ಎರಡನೇ ಹಂತದ ಮತದಾನದ ದಿನ ಸಂಜೆ 7 ಗಂಟೆಯ ಹೊತ್ತಿಗೆ ಬಿಡುಗಡೆ ಮಾಡಲಾದ ಅಂದಾಜು ಅಂಕಿ ಅಂಶಕ್ಕಿಂತ, ಏಪ್ರಿಲ್ 30ರಂದು ಬಿಡುಗಡೆ ಮಾಡಲಾದ ಅಂತಿಮ ಅಂಕಿ ಅಂಶದಲ್ಲಿ ಮತದಾನ ಪ್ರಮಾಣ 5.74ರಷ್ಟು ಹೆಚ್ಚಳವಾಗಿದ್ದು ಹೇಗೆ?

5.ಪ್ರತೀ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳಲ್ಲಿ ನೋಂದಾಯಿತ ಮತದಾರರು ಮತ್ತು ಹಕ್ಕು ಚಲಾಯಿಸಿದ ಮತದಾರರ ಅಂಕಿ ಅಂಶಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ ಏಕೆ? ಆ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದರೆ ಶೇ.5ರಷ್ಟು ಮತದಾನ ಹೇಗೆ ಹೆಚ್ಚಾಯಿತು ಎಂದು ನಮಗೆ ತಿಳಿದುಕೊಳ್ಳಬಹುದು.

ಸಾರ್ವಜನಿಕ ವಲಯದಲ್ಲಿ ಎದ್ದಿರುವ ಈ ಪ್ರಶ್ನೆಗಳನ್ನು ನಿವಾರಿಸಲು ಚುನಾವಣಾ ಆಯೋಗ ಪ್ರತಿ ಲೋಕಸಭೆ ಕ್ಷೇತ್ರದ ಮತದಾರರ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದರೆ ಸಾಲದು. ಪ್ರತಿ ಮತಗಟ್ಟೆಯಲ್ಲಿನ ಮತದಾನದ ದತ್ತಾಂಶವನ್ನೂ ಬಿಡುಗಡೆ ಮಾಡಬೇಕು. ಇದರ ಜೊತೆಗೆ ಪ್ರತಿ ಮತಗಟ್ಟೆ, ವಿಧಾನಸಭೆ ಮತ್ತು ಲೋಕಸಭೆ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಸಲ್ಲಿಸಿರುವ ದೂರುಗಳನ್ನು ತಿಳಿಸಬೇಕು ಎಂದು ಖರ್ಗೆ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಮೇಲೆ ಉಲ್ಲೇಖಿಸಿದ ಎಲ್ಲಾ ಪ್ರಶ್ನೆಗಳನ್ನು ಇಂಡಿಯಾ ಮೈತ್ರಿಕೂಟದ ನಾಯಕರು ಎತ್ತಬೇಕು. ಈ ಮೂಲಕ ನಮ್ಮ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಒಗ್ಗಟ್ಟಿನ ಪ್ರಯತ್ನ ಮಾಡಬೇಕು ಎಂದು ಖರ್ಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ : ಕರ್ನಾಟಕದ 14 ಸೇರಿ ದೇಶದ 93 ಕ್ಷೇತ್ರಗಳಲ್ಲಿ ಇಂದು ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...