Homeಕರ್ನಾಟಕಮತದಾನದ ವಿವರ ತಡವಾಗಿ ಪ್ರಕಟ, ನೋಂದಾಯಿತ ಮತದಾರರ ಮಾಹಿತಿ ಮಾಯ: ಚು. ಆಯೋಗಕ್ಕೆ ಗಂಭೀರ ಪ್ರಶ್ನೆ...

ಮತದಾನದ ವಿವರ ತಡವಾಗಿ ಪ್ರಕಟ, ನೋಂದಾಯಿತ ಮತದಾರರ ಮಾಹಿತಿ ಮಾಯ: ಚು. ಆಯೋಗಕ್ಕೆ ಗಂಭೀರ ಪ್ರಶ್ನೆ ಎತ್ತಿದ ಖರ್ಗೆ

- Advertisement -
- Advertisement -

ಲೋಕಸಭೆ ಚುನಾವಣೆಯ ಮೊದಲ ಮತ್ತು ಎರಡನೇ ಹಂತದ ಮತದಾನದ ಅಂತಿಮ ಅಂಕಿ ಅಂಶಗಳನ್ನು ಬಹಳ ತಡವಾಗಿ ಬಿಡುಗಡೆಗೊಳಿಸಿರುವುದು ಮತ್ತು ಚುನಾವಣಾ ಆಯೋಗದ ವೆಬ್‌ಸೈಟ್‌ನಿಂದ ನೋಂದಾಯಿತ ಮತದಾರರ ಮಾಹಿತಿ ಕಾಣೆಯಾಗಿರುವುದು ಅನುಮಾನಗಳನ್ನು ಹುಟ್ಟು ಹಾಕಿದೆ.

ಇದು ಉದ್ದೇಶಪೂರ್ವಕವಾಗಿ ಮಾಡಿರುವ ಕೃತ್ಯ. ಮತದಾನದ ಫಲಿತಾಂಶ ಬದಲಿಸುವ ಹುನ್ನಾರ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರಿಗೆ ಈ ಕುರಿತು ವಿವರವಾದ ಪತ್ರವೊಂದನ್ನು ಬರೆದಿದ್ದಾರೆ.

ಪತ್ರದಲ್ಲಿ, “ಈ ಬಾರಿಯ ಲೋಕಸಭೆ ಚುನಾವಣೆ ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟವಾಗಿದೆ. ಇತ್ತೀಚಿನ ಬೆಳವಣಿಗೆಗಳಿಂದ ಭಾರತೀಯ ಚುನಾವಣಾ ಆಯೋಗದ ಮೇಲಿನ ವಿಶ್ವಾಸಾರ್ಹತೆ ಕಡಿಮೆಯಾಗಿದೆ. ಮೊದಲ ಮತ್ತು ಎರಡನೇ ಹಂತದ ಮತದಾನದ ಅಂಕಿ ಅಂಶಗಳನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ತಡವಾಗಿ ಬಹಿರಂಗಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಮೂರನೇ ಹಂತದ ಮತದಾನಕ್ಕೆ ನೋಂದಾಯಿತ ಮತದಾರರ ಅಂತಿಮ ಪಟ್ಟಿಯನ್ನೂ ಬಿಡುಗಡೆ ಮಾಡಿಲ್ಲಎಂದು ವಿವಿಧ ಮಾಧ್ಯಮಗಳ ವರದಿಗಳ ಮೂಲಕ ತಿಳಿದು ಬಂದಿದೆ. ಇದು ಅತ್ಯಂತ ದಿಗ್ಭ್ರಮೆಗೊಳಿಸುವ ಸಂಗತಿಯಾಗಿದೆ. ಈ ಎಲ್ಲಾ ಬೆಳವಣಿಗೆಗಳು ಭಾರತದ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಮೇಲೆ ಕರಾಳ ಛಾಯೆ ಮೂಡಿಸಿದೆ. ಚುನಾವಣಾ ಆಯೋಗ ಭಾರತದ ರಾಜ್ಯಗಳು ಮತ್ತು ಅದರ ಜನರ ಸಾಮೂಹಿಕ ಪ್ರಯತ್ನದಿಂದ ಸ್ಥಾಪಿಸಲಾದ ಸಂಸ್ಥೆಯಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಮೊದಲ ಮತ್ತು ಎರಡನೇ ಹಂತದ ಅಂತಿಮ ಮತದಾನದ ಶೇಕಡಾವಾರು ಅಂಕಿ ಅಂಶಗಳ ಬಿಡುಗಡೆಯಲ್ಲಿನ ಅತಿಯಾದ ವಿಳಂಬ ಅಂಕಿ ಅಂಶಗಳ ಗುಣಮಟ್ಟದ ಮೇಲೆ ಗಂಭೀರ ಅನುಮಾನಗಳನ್ನು ಹುಟ್ಟು ಹಾಕಿದೆ. ನನ್ನ 52 ವರ್ಷಗಳ ರಾಜಕೀಯ ಜೀವನದಲ್ಲಿ ಇಷ್ಟೊಂದು ವಿಳಂಬವಾಗಿ ಮತದಾನದ ಅಂಕಿ ಅಂಶ ಬಿಡುಗಡೆ ಮಾಡಿರುವುದನ್ನು ಎಂದಿಗೂ ನೋಡಿಲ್ಲ. ಮತದಾನ ನಡೆದ ಗಂಟೆಗಳ ಒಳಗೆ ಅಂಕಿ ಅಂಶ ಬಿಡುಗಡೆಯಾಗುತ್ತಿತ್ತು. ಹಾಗಾಗಿ, ಈ ಕೆಳಗಿನ ಪ್ರಶ್ನೆಗಳನ್ನು ನಾವು ಕೇಳಬೇಕಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ಹೇಳಿದ್ದಾರೆ.

ಖರ್ಗೆ ಪ್ರಸ್ತಾಪಿಸಿದ ಪ್ರಶ್ನೆಗಳು ಹೀಗಿವೆ..

1. ಏಪ್ರಿಲ್ 30, 2024 ರಂದು ಚುನಾವಣಾ ಆಯೋಗ 2024ರ ಲೋಕಸಭೆಯ ಚುನಾವಣೆಯ ಮೊದಲ ಮತ್ತು ಎರಡನೇ ಹಂತದ ಮತದಾನದ ಅಂತಿಮ ಶೇಕಡವಾರು ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. ಮೊದಲ ಹಂತದ ಮತದಾನದ 11 ದಿನಗಳ ನಂತರ (19 ಏಪ್ರಿಲ್ 2024) ಮತ್ತು ಎರಡನೇ ಹಂತದ ಮತದಾನದ 4 ದಿನಗಳ ನಂತರ (26 ಏಪ್ರಿಲ್ 2024) ಡೇಟಾ ಬಿಡುಗಡೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗಕ್ಕೆ ನಮ್ಮ ಮೊದಲ ಪ್ರಶ್ನೆ ಏನೆಂದರೆ.. ಆಯೋಗವು ಮತದಾನದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಲು ಇಷ್ಟೊಂದು ವಿಳಂಬ ಮಾಡಿದ್ದು ಏಕೆ?

2. ಈ ಹಿಂದೆಯೆಲ್ಲ ಆಯೋಗವು ಮತದಾನದ ನಡೆದ 24 ಗಂಟೆಗಳ ಒಳಗೆ ಅಂತಿಮ ಅಂಕಿ ಅಂಶಗಳನ್ನು ಪ್ರಕಟಿಸುತ್ತಿತ್ತು. ಈ ಬಾರಿ ಏನು ಬದಲಾಗಿದೆ? ರಾಜಕೀಯ ಪಕ್ಷಗಳು ಮತ್ತು ರಾಜಕೀಯ ಕಾರ್ಯಕರ್ತರು ಪದೇ ಪದೇ ಪ್ರಶ್ನಿಸುತ್ತಿದ್ದರೂ, ವಿಳಂಬವನ್ನು ಸಮರ್ಥಿಸಲು ಆಯೋಗ ಯಾವುದೇ ಸ್ಪಷ್ಟೀಕರಣವನ್ನು ನೀಡಲು ವಿಫಲವಾಗಿದ್ದು ಏಕೆ? ಇವಿಎಂಗಳಲ್ಲಿ ಸಮಸ್ಯೆ ಇದೆಯೇ?

3. ಮೊದಲ ಹಂತದಲ್ಲಿ 102 ಸ್ಥಾನಗಳಿಗೆ ನಡೆದ ಮತದಾನದ ಅಂಕಿ ಅಂಶಗಳನ್ನು19 ಏಪ್ರಿಲ್ 2024 ರಂದು ಸಂಜೆ 7 ಗಂಟೆಗೆ ಬಿಡುಗಡೆ ಮಾಡಿದ್ದ ಚುನಾವಣಾ ಆಯೋಗ, ಅಂದಾಜು 60% ಮತದಾನವಾಗಿದೆ ಎಂದಿತ್ತು. ಎರಡನೇ ಹಂತದಲ್ಲಿ 88 ಸ್ಥಾನಗಳಿಗೆ ನಡೆದ ಅಂದಾಜು ಮತದಾನದ ಪ್ರಮಾಣ 60.96 % ಎಂದಿತ್ತು.
ಈ ಎಲ್ಲಾ ಅಂಕಿ ಅಂಶಗಳು ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿಯಾಗಿದೆ.

ಆದರೆ, ಏಪ್ರಿಲ್ 20 ರಂದು, ಆಯೋಗವು ಮೊದಲ ಹಂತದ ಮತದಾನದ ಪ್ರಮಾಣವನ್ನು 65.5% ಕ್ಕೆ ಮತ್ತು 27ರಂದು ಎರಡನೇ ಹಂತದ ಮತದಾನದ ಪ್ರಮಾಣವನ್ನು 66.7% ಕ್ಕೆ ಹೆಚ್ಚಿಸಿದೆ. ಅಂತಿಮವಾಗಿ ಏಪ್ರಿಲ್ 30 ರಂದು ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಮೊದಲ ಹಂತದಲ್ಲಿ 66.14% ಮತ್ತು ಎರಡನೇ ಹಂತದಲ್ಲಿ 66.71% ಮತದಾನವಾಗಿದೆ ಎಂದು ದೃಢೀಕರಿಸಿದೆ. ಈ ರೀತಿ ಬದಲಾವಣೆಯಾಗಿದ್ದು ಏಕೆ?

4. ಏಪ್ರಿಲ್ 19ರಂದು ಮೊದಲ ಹಂತದ ಮತದಾನದ ದಿನ ಸಂಜೆ 7 ಗಂಟೆಯ ಹೊತ್ತಿಗೆ ಬಿಡುಗಡೆ ಮಾಡಲಾದ ಅಂದಾಜು ಅಂಕಿ ಅಂಶಕ್ಕಿಂತ, ಏಪ್ರಿಲ್ 30ರಂದು ಬಿಡುಗಡೆ ಮಾಡಲಾದ ಅಂತಿಮ ಅಂಕಿ ಅಂಶದಲ್ಲಿ ಮತದಾನದ ಪ್ರಮಾಣ ಶೇ. 5.5ರಷ್ಟು ಹೆಚ್ಚಳವಾಗಿದ್ದು ಏಕೆ?

ಏಪ್ರಿಲ್ 26ರಂದು ಎರಡನೇ ಹಂತದ ಮತದಾನದ ದಿನ ಸಂಜೆ 7 ಗಂಟೆಯ ಹೊತ್ತಿಗೆ ಬಿಡುಗಡೆ ಮಾಡಲಾದ ಅಂದಾಜು ಅಂಕಿ ಅಂಶಕ್ಕಿಂತ, ಏಪ್ರಿಲ್ 30ರಂದು ಬಿಡುಗಡೆ ಮಾಡಲಾದ ಅಂತಿಮ ಅಂಕಿ ಅಂಶದಲ್ಲಿ ಮತದಾನ ಪ್ರಮಾಣ 5.74ರಷ್ಟು ಹೆಚ್ಚಳವಾಗಿದ್ದು ಹೇಗೆ?

5.ಪ್ರತೀ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳಲ್ಲಿ ನೋಂದಾಯಿತ ಮತದಾರರು ಮತ್ತು ಹಕ್ಕು ಚಲಾಯಿಸಿದ ಮತದಾರರ ಅಂಕಿ ಅಂಶಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ ಏಕೆ? ಆ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದರೆ ಶೇ.5ರಷ್ಟು ಮತದಾನ ಹೇಗೆ ಹೆಚ್ಚಾಯಿತು ಎಂದು ನಮಗೆ ತಿಳಿದುಕೊಳ್ಳಬಹುದು.

ಸಾರ್ವಜನಿಕ ವಲಯದಲ್ಲಿ ಎದ್ದಿರುವ ಈ ಪ್ರಶ್ನೆಗಳನ್ನು ನಿವಾರಿಸಲು ಚುನಾವಣಾ ಆಯೋಗ ಪ್ರತಿ ಲೋಕಸಭೆ ಕ್ಷೇತ್ರದ ಮತದಾರರ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದರೆ ಸಾಲದು. ಪ್ರತಿ ಮತಗಟ್ಟೆಯಲ್ಲಿನ ಮತದಾನದ ದತ್ತಾಂಶವನ್ನೂ ಬಿಡುಗಡೆ ಮಾಡಬೇಕು. ಇದರ ಜೊತೆಗೆ ಪ್ರತಿ ಮತಗಟ್ಟೆ, ವಿಧಾನಸಭೆ ಮತ್ತು ಲೋಕಸಭೆ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಸಲ್ಲಿಸಿರುವ ದೂರುಗಳನ್ನು ತಿಳಿಸಬೇಕು ಎಂದು ಖರ್ಗೆ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಮೇಲೆ ಉಲ್ಲೇಖಿಸಿದ ಎಲ್ಲಾ ಪ್ರಶ್ನೆಗಳನ್ನು ಇಂಡಿಯಾ ಮೈತ್ರಿಕೂಟದ ನಾಯಕರು ಎತ್ತಬೇಕು. ಈ ಮೂಲಕ ನಮ್ಮ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಒಗ್ಗಟ್ಟಿನ ಪ್ರಯತ್ನ ಮಾಡಬೇಕು ಎಂದು ಖರ್ಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ : ಕರ್ನಾಟಕದ 14 ಸೇರಿ ದೇಶದ 93 ಕ್ಷೇತ್ರಗಳಲ್ಲಿ ಇಂದು ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...