Homeಮುಖಪುಟಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ ನೋಟಿಸ್‌?...

ಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ ನೋಟಿಸ್‌? ಡಿಟೇಲ್ಸ್‌..

- Advertisement -
- Advertisement -

ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಕರ್ನಾಟಕದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್‌ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಸಾವಿರಾರು ವಿಡಿಯೋ ಕ್ಲಿಪ್‌ಗಳು ಸೋರಿಕೆಯಾಗಿತ್ತು. ಲೋಕಸಭೆ ಚುನಾವಣೆಗೆ ಹಾಸನ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್‌ ರೇವಣ್ಣ, ಮತದಾನದ ಬೆನ್ನಲ್ಲೇ ದೇಶದಿಂದ ಪರಾರಿಯಾಗಿದ್ದರು.

ಕರ್ನಾಟಕ ಪೊಲೀಸರು ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್‌ ತಂದೆ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಏಪ್ರಿಲ್ 29ರಂದು ಅವರ ಪುತ್ರನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ್ದರು.

ಇಂಟರ್‌ಪೋಲ್ ಹೇಗೆ ಕೆಲಸ ಮಾಡುತ್ತದೆ?

‘ಇಂಟರ್‌ನ್ಯಾಶನಲ್ ಕ್ರಿಮಿನಲ್ ಪೋಲೀಸ್ ಆರ್ಗನೈಸೇಶನ್’ ಅಥವಾ ‘ಇಂಟರ್‌ಪೋಲ್’ ಒಂದು ಅಂತರ-ಸರ್ಕಾರಿ ಕಾನೂನು ಜಾರಿ ಸಂಸ್ಥೆಯಾಗಿದ್ದು, ಇದು 196 ಸದಸ್ಯ ರಾಷ್ಟ್ರಗಳನ್ನು ಹೊಂದಿದೆ. ಇದು ಸದಸ್ಯ ರಾಷ್ಟ್ರಗಳಲ್ಲಿ ಪರಸ್ಪರ ಪೊಲೀಸ್ ನೆರವು, ಅಪರಾಧಿಗಳ ಪತ್ತೆ ಮತ್ತು ಅಪರಾಧ ನಿಯಂತ್ರಣಕ್ಕೆ ಸಹಕಾರ ನೀಡುತ್ತದೆ.

ಇಂಟರ್‌ಪೋಲ್ ಸಂಸ್ಥೆಯು ಜಾಗತಿಕವಾಗಿ ಅಪರಾಧಗಳು ಮತ್ತು ಬೇಕಾಗಿರುವ ಅಪರಾಧಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳುತ್ತದೆ ಮತ್ತು ಪರಾರಿಯಾದವರನ್ನು ಪತ್ತೆಹಚ್ಚಲು ತಾಂತ್ರಿಕ ಸಹಾಯ, ಕಾರ್ಯಾಚರಣೆ ಮತ್ತು ಬೆಂಬಲವನ್ನು ಒದಗಿಸುತ್ತದೆ. ಇದು ವಾಂಟೆಡ್ ಕ್ರಿಮಿನಲ್‌ಗಳ ಕುರಿತು ದಾಖಲೆಗಳನ್ನು ಶೇಖರಿಸಿಟ್ಟಿರುತ್ತದೆ. ಇದು ಸದಸ್ಯ ರಾಷ್ಟ್ರಗಳಿಗೆ ಅಪರಾಧಿಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ.

ಏಜೆನ್ಸಿಯು ಎಲ್ಲಾ ಸದಸ್ಯ ರಾಷ್ಟ್ರಗಳಲ್ಲಿ ಕೇಂದ್ರೀಯ ಬ್ಯೂರೋವನ್ನು ಹೊಂದಿದೆ, ಇದು ಆ ದೇಶದ ಕಾನೂನು ಜಾರಿ ಸಂಸ್ಥೆಗಳು ಮತ್ತು ಇಂಟರ್‌ಪೋಲ್ ನಡುವಿನ ಸಂಪರ್ಕದ ಏಕೈಕ ಬಿಂದುವಾಗಿದೆ. ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಸಿಬಿಐ) ಅಧಿಕೃತವಾಗಿ ಭಾರತದ ನೋಡಲ್ ಏಜೆನ್ಸಿ ಎಂದು ಗೊತ್ತುಪಡಿಸಲಾಗಿದೆ.

ಸದಸ್ಯ ರಾಷ್ಟ್ರಗಳಿಗೆ ಅಪರಾಧ-ಸಂಬಂಧಿತ ಮಾಹಿತಿಗಾಗಿ ಮತ್ತು ಎಚ್ಚರಿಕೆಯನ್ನು ನೀಡಲು ಇಂಟರ್‌ಪೋಲ್‌ ಸಂಸ್ಥೆಯು ‘ಕಲರ್‌ ಕೋಡೆಡ್‌ ಸಿಸ್ಟಮ್‌’ (‘colour-coded’ system) ವ್ಯವಸ್ಥೆಯನ್ನು ಬಳಸುತ್ತದೆ. ಬಣ್ಣ ಆಧಾರಿತವಾಗಿ ನೋಟೀಸ್‌ ನೀಡುತ್ತದೆ. 2020ರಲ್ಲಿ ಇಂಟರ್ಪೋಲ್ ಬ್ಲೂ ಕಾರ್ನ್‌ ನೋಟಿಸ್‌ ಜಾರಿ ಮಾಡಿತ್ತು. 2019ರಲ್ಲಿ ದೇಶಬಿಟ್ಟು ಪರಾರಿಯಾಗಿದ್ದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪಿ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಬಂಧನಕ್ಕಾಗಿ ನೋಟಿಸ್‌ ಜಾರಿ ಮಾಡಲಾಗಿತ್ತು. ಆದರೆ, ಆತನನ್ನು ಇನ್ನೂ ಬಂಧಿಸಲಾಗಿಲ್ಲ.

ಇಂಟರ್‌ಪೋಲ್‌ನ ನೋಟಿಸ್ ವ್ಯವಸ್ಥೆಯು ಪ್ರಸ್ತುತ ಎಂಟು ವಿಧದ ಸೂಚನೆಗಳನ್ನು ಹೊಂದಿದೆ.

ರೆಡ್ ನೋಟಿಸ್: ಪ್ರಾಸಿಕ್ಯೂಷನ್ ಅಥವಾ ಶಿಕ್ಷೆಗೆ ಗುರಿಪಡಿಸಲು ಬೇಕಾದ ಅರೋಪಿಗಳ ಸ್ಥಳ ಗುರುತಿಸಲು ಮತ್ತು ಅತನನ್ನು ಬಂಧಿಸಲು.

ಯಲ್ಲೋ ನೋಟಿಸ್: ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಈ ನೊಟೀಸ್‌ ನೀಡಲಾಗುತ್ತದೆ. ಸಾಮಾನ್ಯವಾಗಿ ಅಪ್ರಾಪ್ತ ವಯಸ್ಕರು, ಅಥವಾ ತಮ್ಮ ಗುರುತನ್ನೇ ಗುರುತಿಸಿಕೊಳ್ಳಲು ಸಾಧ್ಯವಾಗದ ವ್ಯಕ್ತಿಗಳನ್ನು ಹುಡುಕಲು ಬಳಸಲಾಗುತ್ತದೆ.

ಬ್ಲೂ ನೋಟಿಸ್‌: ಅಪರಾಧ ತನಿಖೆಗೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಈ ನೊಟೀಸ್ ನೀಡಲಾಗುತ್ತದೆ.

ಬ್ಲ್ಯಾಕ್‌ ನೋಟಿಸ್‌: ಅಪರಿಚಿತ ದೇಹಗಳ ಬಗ್ಗೆ ಮಾಹಿತಿ ಪಡೆಯಲು ಈ ನೊಟೀಸ್‌ನ್ನು ನೀಡಲಾಗುತ್ತದೆ.

ಗ್ರೀನ್‌ ನೋಟಿಸ್‌: ಈ ನೊಟೀಸ್‌ನ್ನು ವ್ಯಕ್ತಿಯ ಅಪರಾಧ ಚಟುವಟಿಕೆಗಳ ಬಗ್ಗೆ ಎಚ್ಚರಿಕೆ ನೀಡಲು, ಆತನಿಂದ ಸಾರ್ವಜನಿಕರಿಗೆ ಎದುರಾಗುವ ಸಂಭನೀಯ ಬೆದರಿಕೆಯ ಬಗ್ಗೆ ಮಾಹಿತಿ ನೀಡಲು ಬಳಸಲಾಗುತ್ತದೆ.

ಆರೆಂಜ್ ನೋಟಿಸ್: ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಪ್ರತಿನಿಧಿಸುವ ಘಟನೆ, ವ್ಯಕ್ತಿ, ವಸ್ತು ಅಥವಾ ಪ್ರಕ್ರಿಯೆಯ ಬಗ್ಗೆ ಎಚ್ಚರಿಕೆ ನೀಡಲು ಈ ನೊಟೀಸ್‌ ನೀಡಲಾಗುತ್ತದೆ.

ಪರ್ಪಲ್‌ ನೋಟಿಸ್: ಅಪರಾಧಿಗಳು ರೂಪಿಸುವ ತಂತ್ರ, ಬಳಸುವ ವಸ್ತುಗಳು, ಸಾಧನಗಳು ಮತ್ತು ತಪ್ಪಿಸಿಕೊಳ್ಳುವ ವಿಧಾನಗಳ ಕುರಿತು ಮಾಹಿತಿ ಹುಡುಕುವುದು ಅಥವಾ ಒದಗಿಸುವುದಕ್ಕೆ ಈ ನೊಟೀಸ್‌ ನೀಡಲಾಗುತ್ತದೆ.

ನಾಪತ್ತೆಯಾದ ವ್ಯಕ್ತಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಸಂಸ್ಥೆಯು ‘ಬ್ಲೂ ಕಾರ್ನರ್’ ನೋಟಿಸ್ ನೀಡುತ್ತದೆ. ಇದನ್ನು ವಿಚಾರಣಾ ಸೂಚನೆ ಎಂದೂ ಕರೆಯುತ್ತಾರೆ, ಅಂತಹ ಎಚ್ಚರಿಕೆಯನ್ನು ಒಬ್ಬ ವ್ಯಕ್ತಿಯ ಬಗ್ಗೆ ಸದಸ್ಯ ರಾಷ್ಟ್ರಗಳಿಂದ ಹೆಚ್ಚುವರಿ ಮಾಹಿತಿಗಾಗಿ, ಅವರ ಗುರುತು, ಸ್ಥಳ ಪತ್ತೆಗಾಗಿ ಮಾಹಿತಿ ನೀಡಲಾಗುತ್ತದೆ.

ಇಂಟರ್‌ಪೋಲ್‌ನ ಸದಸ್ಯ ರಾಷ್ಟ್ರದ ‘ಇಂಟರ್‌ಪೋಲ್ ನ್ಯಾಷನಲ್ ಸೆಂಟ್ರಲ್ ಬ್ಯೂರೋ’ದ ಕೋರಿಕೆಯ ಮೇರೆಗೆ ‘ಇಂಟರ್‌ಪೋಲ್‌ನ ಜನರಲ್ ಸೆಕ್ರೆಟರಿಯೇಟ್‌’ನಿಂದ ಈ ನೋಟಿಸ್‌ಗಳನ್ನು ನೀಡಲಾಗುತ್ತದೆ. ಎಲ್ಲ ಸದಸ್ಯ ರಾಷ್ಟ್ರಗಳಿಗೆ ನೋಟಿಸ್‌ ಲಭ್ಯವಾಗುವಂತೆ ಮಾಡಲಾಗುತ್ತದೆ. ಆರೋಪಿ ಗುರುತು ಪತ್ತೆ ಹಚ್ಚಲು, ವ್ಯಕ್ತಿಯ ಕ್ರಿಮಿನಲ್ ದಾಖಲೆಯ ವಿವರಗಳನ್ನು ಒದಗಿಸಲು ಮತ್ತು ಪಡೆಯಲು, ಕಾಣೆಯಾಗಿರುವ ಅಥವಾ ಗುರುತಿಸಲ್ಪಟ್ಟ ಅಥವಾ ಗುರುತಿಸಲಾಗದ ಅಂತರಾಷ್ಟ್ರೀಯ ಅಪರಾಧಿಯ ಬಂಧನ, ಸಾಮಾನ್ಯ ಕ್ರಿಮಿನಲ್ ಕಾನೂನಿನನ್ನು ಉಲ್ಲಂಘಿಸಿದ ಆರೋಪಿಯನ್ನು ಪತ್ತೆ ಹಚ್ಚಿಲು ಮತ್ತು ದೇಶಕ್ಕೆ ಹಸ್ತಾಂತರಿಸಲು ಈ ನೊಟೀಸ್‌ ಸಹಕಾರಿಯಾಗಿದೆ.

ಇದನ್ನು ಓದಿ: ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...