Homeಮುಖಪುಟಬಿಜೆಪಿ 'ಸಂವಿಧಾನ ಮತ್ತು ಮೀಸಲಾತಿ'ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

- Advertisement -
- Advertisement -

ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಬಿಜೆಪಿ ಚುನಾವಣಾ ಪ್ರಚಾರದ ಸಮಯದಲ್ಲಿ ಮಾಡಿದ ದ್ವೇಷದ ಭಾಷಣಗಳ ಬಗ್ಗೆ ಪ್ರತಿಕ್ರಿಯಿಸಿದ ಲಾಲು ಪ್ರಸಾದ್ ಯಾದವ್, ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟಕ್ಕೆ ಜನರು ನೀಡುತ್ತಿರುವ ಬೆಂಬಲದಿಂದ ಬಿಜೆಪಿ ನಾಯಕರು ಭಯಭೀತರಾಗಿದ್ದಾರೆ, ಅದಕ್ಕಾಗಿಯೇ ಅವರು ಜನರನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತದೆ, ಅವರ ಉದ್ದೇಶದ ಬಗ್ಗೆ ಜನರಿಗೆ ತಿಳಿದಿದೆ. ಮುಸ್ಲಿಮರಿಗೆ ಸಂಪೂರ್ಣ ಮೀಸಲಾತಿ ಸಿಗಬೇಕು ಎಂದು ಹೇಳಿದ್ದಾರೆ.

ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಮುಸ್ಲಿಮರಿಗೆ ಆಯಾ ರಾಜ್ಯ ಸರ್ಕಾರಗಳು ನೀಡುತ್ತಿರುವ ಧರ್ಮಾಧಾರಿತ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ರ್ಯಾಲಿಯಲ್ಲಿ ಹೇಳಿದ ಒಂದು ದಿನದ ನಂತರ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಈ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

ಬಿಜೆಪಿಯು ಚುನಾವಣಾ ಸಮಾವೇಶಗಳಲ್ಲಿ ಬೆದರಿಕೆ ಹುಟ್ಟಿಸುವ ಹಾಗೂ ಜಂಗಲ್ ರಾಜ್ ಪುಕಾರನ್ನು ಹಬ್ಬಿಸುವ ಕೆಲಸದಲ್ಲಿ ನಿರತವಾಗಿದೆ ಎಂದು ಹೇಳಿದ ಲಾಲು ಪ್ರಸಾದ್ ಯಾದವ್, “ಈ ಬಾರಿ ನಾನೂರರಾಚೆ” ಎಂಬ ಪ್ರಧಾನಿ ನರೇಂದ್ರ ಮೋದಿಯ ಘೋಷಣೆಯನ್ನು ವ್ಯಂಗ್ಯವಾಡಿದ್ದಾರೆ, ಅವರೇ ಸ್ವತಃ ಆಚೆ ಹೋಗಲಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಮತಗಟ್ಟೆಗಳ ಹೊರಗೆ ಮತದಾರರ ಉದ್ದನೆಯ ಸರತಿ ಸಾಲುಗಳು ಕಂಡುಬರುತ್ತಿದ್ದು, ಜನರು ಮೂರನೇ ಹಂತದಲ್ಲಿ ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ ಎಂದು ಇದೇ ವೇಳೆ ಹೇಳಿದ್ದಾರೆ. ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಮತ್ತು ಆರ್‌ಜೆಡಿ ಬಯಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣಾ ರ್ಯಾಲಿಗಳಲ್ಲಿ ಆರೋಪಿಸಿದ ಹಿನ್ನೆಲೆಯಲ್ಲಿ ಆರ್‌ಜೆಡಿ ಮುಖ್ಯಸ್ಥರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಎಲ್‌ಜೆಪಿ(ರಾಮ್ ವಿಲಾಸ್) ಮುಖ್ಯಸ್ಥ ಮತ್ತು ಸಂಸದ ಚಿರಾಗ್ ಪಾಸ್ವಾನ್ ಅವರು ಕಾಂಗ್ರೆಸ್‌ ನಾಯಕರು ಮೂಲಭೂತ ಸಮಸ್ಯೆಗಳನ್ನು ಎತ್ತುವ ಬದಲು ಎನ್‌ಡಿಎ ಅಧಿಕಾರಕ್ಕೆ ಬಂದರೆ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸುತ್ತಾರೆ, ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುತ್ತದೆ ಎಂದು ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೇಜ್ರಿವಾಲ್‌ ನ್ಯಾಯಾಂಗ ಬಂಧನದ ಅವಧಿ ಮೇ.20ರವರೆಗೆ ವಿಸ್ತರಣೆ: ಮಧ್ಯಂತರ ಜಾಮೀನು ನೀಡುತ್ತಾ ಸುಪ್ರೀಂಕೋರ್ಟ್‌?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...