Homeಮುಖಪುಟಬಿಜೆಪಿ 'ಸಂವಿಧಾನ ಮತ್ತು ಮೀಸಲಾತಿ'ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

- Advertisement -
- Advertisement -

ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಬಿಜೆಪಿ ಚುನಾವಣಾ ಪ್ರಚಾರದ ಸಮಯದಲ್ಲಿ ಮಾಡಿದ ದ್ವೇಷದ ಭಾಷಣಗಳ ಬಗ್ಗೆ ಪ್ರತಿಕ್ರಿಯಿಸಿದ ಲಾಲು ಪ್ರಸಾದ್ ಯಾದವ್, ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟಕ್ಕೆ ಜನರು ನೀಡುತ್ತಿರುವ ಬೆಂಬಲದಿಂದ ಬಿಜೆಪಿ ನಾಯಕರು ಭಯಭೀತರಾಗಿದ್ದಾರೆ, ಅದಕ್ಕಾಗಿಯೇ ಅವರು ಜನರನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತದೆ, ಅವರ ಉದ್ದೇಶದ ಬಗ್ಗೆ ಜನರಿಗೆ ತಿಳಿದಿದೆ. ಮುಸ್ಲಿಮರಿಗೆ ಸಂಪೂರ್ಣ ಮೀಸಲಾತಿ ಸಿಗಬೇಕು ಎಂದು ಹೇಳಿದ್ದಾರೆ.

ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಮುಸ್ಲಿಮರಿಗೆ ಆಯಾ ರಾಜ್ಯ ಸರ್ಕಾರಗಳು ನೀಡುತ್ತಿರುವ ಧರ್ಮಾಧಾರಿತ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ರ್ಯಾಲಿಯಲ್ಲಿ ಹೇಳಿದ ಒಂದು ದಿನದ ನಂತರ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಈ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

ಬಿಜೆಪಿಯು ಚುನಾವಣಾ ಸಮಾವೇಶಗಳಲ್ಲಿ ಬೆದರಿಕೆ ಹುಟ್ಟಿಸುವ ಹಾಗೂ ಜಂಗಲ್ ರಾಜ್ ಪುಕಾರನ್ನು ಹಬ್ಬಿಸುವ ಕೆಲಸದಲ್ಲಿ ನಿರತವಾಗಿದೆ ಎಂದು ಹೇಳಿದ ಲಾಲು ಪ್ರಸಾದ್ ಯಾದವ್, “ಈ ಬಾರಿ ನಾನೂರರಾಚೆ” ಎಂಬ ಪ್ರಧಾನಿ ನರೇಂದ್ರ ಮೋದಿಯ ಘೋಷಣೆಯನ್ನು ವ್ಯಂಗ್ಯವಾಡಿದ್ದಾರೆ, ಅವರೇ ಸ್ವತಃ ಆಚೆ ಹೋಗಲಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಮತಗಟ್ಟೆಗಳ ಹೊರಗೆ ಮತದಾರರ ಉದ್ದನೆಯ ಸರತಿ ಸಾಲುಗಳು ಕಂಡುಬರುತ್ತಿದ್ದು, ಜನರು ಮೂರನೇ ಹಂತದಲ್ಲಿ ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ ಎಂದು ಇದೇ ವೇಳೆ ಹೇಳಿದ್ದಾರೆ. ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಮತ್ತು ಆರ್‌ಜೆಡಿ ಬಯಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣಾ ರ್ಯಾಲಿಗಳಲ್ಲಿ ಆರೋಪಿಸಿದ ಹಿನ್ನೆಲೆಯಲ್ಲಿ ಆರ್‌ಜೆಡಿ ಮುಖ್ಯಸ್ಥರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಎಲ್‌ಜೆಪಿ(ರಾಮ್ ವಿಲಾಸ್) ಮುಖ್ಯಸ್ಥ ಮತ್ತು ಸಂಸದ ಚಿರಾಗ್ ಪಾಸ್ವಾನ್ ಅವರು ಕಾಂಗ್ರೆಸ್‌ ನಾಯಕರು ಮೂಲಭೂತ ಸಮಸ್ಯೆಗಳನ್ನು ಎತ್ತುವ ಬದಲು ಎನ್‌ಡಿಎ ಅಧಿಕಾರಕ್ಕೆ ಬಂದರೆ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸುತ್ತಾರೆ, ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುತ್ತದೆ ಎಂದು ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೇಜ್ರಿವಾಲ್‌ ನ್ಯಾಯಾಂಗ ಬಂಧನದ ಅವಧಿ ಮೇ.20ರವರೆಗೆ ವಿಸ್ತರಣೆ: ಮಧ್ಯಂತರ ಜಾಮೀನು ನೀಡುತ್ತಾ ಸುಪ್ರೀಂಕೋರ್ಟ್‌?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...