Homeಮುಖಪುಟ'ಪೊಲೀಸರು ನಮಗೆ ಮತ ಹಾಕಲು ಬಿಡಲಿಲ್ಲ': ಗಂಭೀರ ಆರೋಪ ಮಾಡಿದ ಸಂಭಾಲ್‌ನ ಮುಸ್ಲಿಂ ಮತದಾರರು

‘ಪೊಲೀಸರು ನಮಗೆ ಮತ ಹಾಕಲು ಬಿಡಲಿಲ್ಲ’: ಗಂಭೀರ ಆರೋಪ ಮಾಡಿದ ಸಂಭಾಲ್‌ನ ಮುಸ್ಲಿಂ ಮತದಾರರು

- Advertisement -
- Advertisement -

ದೇಶದ 93 ಲೋಕಸಭೆ ಕ್ಷೇತ್ರಗಳಲ್ಲಿ ಇಂದು 3ನೇ ಹಂತದ ಮತದಾನ ನಡೆದಿದೆ. ಉತ್ತರ ಪ್ರದೇಶದ ಸಂಭಾಲ್ ಲೋಕಸಭಾ ಕ್ಷೇತ್ರದಲ್ಲಿ ಮುಸ್ಲಿಮರು ಮತದಾನ ಮಾಡದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾಗಳಲ್ಲಿ ಕೆಲವೊಂದು ವಿಡಿಯೋಗಳು ಹರಿದಾಡಿದ್ದು, ನಾವು ಮತ ಹಾಕಲೆಂದು ಮತಗಟ್ಟೆಗೆ ತೆರಳಿದಾಗ ನಮ್ಮನ್ನು ಮತ ಹಾಕದಂತೆ ಪೊಲೀಸರು ಹಾಗೂ ಕೆಲ ಮತಗಟ್ಟೆ ಅಧಿಕಾರಿಗಳು ತಡೆದಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ, ಲಾಠಿ ಏಟು ಕೊಟ್ಟು ಓಡಿಸುತ್ತಿದ್ದಾರೆ, ನಮ್ಮ ಗುರುತಿನ ಚೀಟಿ ಮತ್ತು ಮತದಾನದ ರಸೀದಿಗಳನ್ನು ಕಸಿದುಕೊಳ್ಳಲಾಗಿದೆ ಎಂದು ಮುಸ್ಲಿಮ್‌ ಮತದಾರರು ಆರೋಪಿಸಿದ್ದಾರೆ.

ಸಮಾಜವಾದಿ ಪಕ್ಷ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ, ಪೋಲಿಸರ ಲಾಠೀ ಚಾರ್ಜ್‌ನಿಂದ ಕೆಲವು ಮತದಾರರಿಗೆ ಮೂಗಿಗೆ ಏಟು ಬಿದ್ದು ಗಾಯಗಳು ಆಗಿರುವುದನ್ನು ತೋರಿಸುತ್ತದೆ,  ಪೋಲೀಸರ ದಬ್ಬಾಳಿಕೆಯಿಂದಾಗಿ ಕೆಲವು ವಯೋವೃದ್ಧ ಮತದಾರರು ಪ್ರಜ್ಞಾಹೀನರಾಗಿರುವುದನ್ನು ಮತ್ತು ಅವರನ್ನು ಎತ್ತಿಕೊಂಡು ಹೋಗುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತಗಟ್ಟೆಯಿಂದ ಪೊಲೀಸರು ಓಡಿಸಿದ ನಂತರ ಹೆಚ್ಚಿನ ಸಂಖ್ಯೆಯ ಮತದಾರರು ಮತಗಟ್ಟೆಯಿಂದ ಹೊರಬರುವುದನ್ನು ಮತ್ತೊಂದು ವೀಡಿಯೊ ತೋರಿಸುತ್ತದೆ. ಕೆಲವು ಮುಸ್ಲಿಂ ಮಹಿಳೆಯರು ತಮಗೆ ಮತ ಚಲಾಯಿಸಲು ಅವಕಾಶ ನೀಡಲಿಲ್ಲ ಎಂದು ಹೇಳಿಕೊಂಡು ಪೂಲಿಂಗ್ ಬೂತ್‌ನಿಂದ ದೂರ ಸರಿಯುವುದನ್ನು ವೀಡಿಯೊ ತೋರಿಸುತ್ತದೆ. ಇದಲ್ಲದೆ ಎಸ್‌ಪಿ ಬೆಂಬಲಿಗರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿಯೂ ನಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಸಂಭಾಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕುಂದರಕಿ, ಬಿಲಾರಿ, ಚಂದೌಸಿ, ಸಂಭಾಲ್ ಮತ್ತು ಅಸ್ಮೋಲಿ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರನ್ನು ಪೊಲೀಸರು ಥಳಿಸುತ್ತಿದ್ದಾರೆ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸ್ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿದ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಪೊಲೀಸ್ ಮತ್ತು ಸರಕಾರದ  ಈ ನಡವಳಿಕೆ ಸರಿಯಲ್ಲ. ಈ ಹಂತದಲ್ಲಿ ಬಿಜೆಪಿ ನಿರ್ನಾಮವಾಗಲಿದೆ. ಸಂಭಾಲ್‌ನಲ್ಲಿ ಪೊಲೀಸರು ಜನರನ್ನು ಥಳಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ನಾನು ತಿಳಿದಿದ್ದೇನೆ. ಮಂತ್ರಿಗಳು ಅವರ ಸಂಗಡಿಗರು ಮತ್ತು ಕುಟುಂಬ ಸದಸ್ಯರು ಮುಕ್ತವಾಗಿ ತಿರುಗಾಡುತ್ತಿದ್ದಾರೆ. ಆದ್ದರಿಂದ, ಜನರು ಹೊರಗೆ ಬಂದು ಮತ ಚಲಾಯಿಸಿ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ನಾನು ಮನವಿ ಮಾಡಲು ಬಯಸುತ್ತೇನೆ. ಚುನಾವಣಾ ಆಯೋಗವು ಈ ಬಗ್ಗೆ ಕ್ರಮ ಕೈಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಸಂಭಾಲ್ ಮುಸ್ಲಿಂ ಕೇಂದ್ರಿತ ಕ್ಷೇತ್ರವಾಗಿದೆ. ಆಡಳಿತಾರೂಢ ಬಿಜೆಪಿ ಪರಮೇಶ್ವರ ಲಾಲ್ ಸೈನಿಯನ್ನು ಇಲ್ಲಿಂದ ತನ್ನ ಅಭ್ಯರ್ಥಿಯನ್ನಾಗಿ ಮಾಡಿದೆ. ಸಮಾಜವಾದಿ ಪಕ್ಷವು ಜಿಯಾವುರ್ ರಹಮಾನ್ ಬಾರ್ಕ್ ಅವರನ್ನು ಕಣಕ್ಕಿಳಿಸಿದ್ದರೆ, ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮಾಜಿ ಶಾಸಕ ಸೌಲತ್ ಅಲಿ ಅವರನ್ನು ಕಣಕ್ಕಿಳಿಸಿದೆ.

 

 

ಇದನ್ನು ಓದಿ: ಸುಳ್ಳು ಸುದ್ದಿ, ದ್ವೇಷ ಹಬ್ಬಿಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ವಿರುದ್ಧ ಚು.ಆಯೋಗಕ್ಕೆ ದೂರು ನೀಡಿದ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...