Homeಮುಖಪುಟಲೋಕಸಭಾ ಚುನಾವಣೆ 2024: ಸಮಸ್ಯೆ ಪರಿಹರಿಸದ ಗುಜರಾತ್‌ ಸರ್ಕಾರ; ಮತದಾನ ಬಹಿಷ್ಕರಿಸಿದ ಹಲವು ಗ್ರಾಮಸ್ಥರು

ಲೋಕಸಭಾ ಚುನಾವಣೆ 2024: ಸಮಸ್ಯೆ ಪರಿಹರಿಸದ ಗುಜರಾತ್‌ ಸರ್ಕಾರ; ಮತದಾನ ಬಹಿಷ್ಕರಿಸಿದ ಹಲವು ಗ್ರಾಮಸ್ಥರು

- Advertisement -
- Advertisement -

ತಮ್ಮ ಧೀರ್ಘ ಕಾಲದ ಬೇಡಿಕೆಯನ್ನು ಗುಜರಾತ್‌ ಸರ್ಕಾರ ಈಡೇರಿಸಿಲ್ಲ ಎಂಬ ಕಾರಣಕ್ಕೆ ಮೂರು ಗ್ರಾಮಗಳ ಸುಮಾರು ಒಂದು ಸಾವಿರ ಮತದಾರರು ಮಂಗಳವಾರ ಲೋಕಸಭೆ ಚುನಾವಣೆಯಲ್ಲಿ ಮತದಾನವನ್ನು ಬಹಿಷ್ಕರಿಸಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ, ಹಲವು ಗ್ರಾಮಗಳ ಜನರು ಸರ್ಕಾರದಿಂದ ತಮ್ಮ ಈಡೇರದ ಬೇಡಿಕೆಗಳಿಂದ ಭಾಗಶಃ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ಭರೂಚ್ ಜಿಲ್ಲೆಯ ಕೇಸರ್ ಗ್ರಾಮ, ಸೂರತ್ ಜಿಲ್ಲೆಯ ಸನಾಧಾರ ಮತ್ತು ಬನಸ್ಕಾಂತ ಜಿಲ್ಲೆಯ ಭಖಾರಿ ಮತದಾರರು ಮತದಾನವನ್ನು ಸಂಪೂರ್ಣವಾಗಿ ಬಹಿಷ್ಕರಿಸಿದರೆ, ಜುನಾಗಢ ಜಿಲ್ಲೆಯ ಭಟ್ಗಾಮ್ ಗ್ರಾಮ ಮತ್ತು ಬೋಡೋಲಿ ಮತ್ತು ಬೋಡೋಲಿ ಮತ್ತು ಮಹಿಸಾಗರ ಜಿಲ್ಲೆಯ ಕುಂಜರ ಗ್ರಾಮಗಳು ಚುನಾವಣೆಯನ್ನು ಭಾಗಶಃ ಬಹಿಷ್ಕರಿಸಿದವು. ಸನಧಾರ ಗ್ರಾಮವು ಬಾರ್ಡೋಲಿ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತದೆ ಮತ್ತು 320 ಮತದಾರರನ್ನು ಹೊಂದಿದೆ.

ಚುನಾವಣಾ ಆಯೋಗದ ವರದಿಯ ಪ್ರಕಾರ, ಸ್ಥಳೀಯ ಚುನಾವಣಾ ಆಡಳಿತ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹೊರಬರಲು, ತಮ್ಮ ಹಕ್ಕು ಚಲಾಯಿಸುವಂತೆ ಮನವೊಲಿಸಲು ಪ್ರಯತ್ನಿಸಿದರೂ 320 ಮತದಾರರಲ್ಲಿ ಯಾರೊಬ್ಬರೂ ಮತ ಚಲಾಯಿಸಲಿಲ್ಲ ಎನ್ನಲಾಗಿದೆ.

ಪಟಾನ್ ಸಂಸದೀಯ ಕ್ಷೇತ್ರಕ್ಕೆ ಒಳಪಡುವ ಬಕ್ರಿ ಗ್ರಾಮದ ಸುಮಾರು 300 ಮತದಾರರು ತಮ್ಮ ಗ್ರಾಮ ಪಂಚಾಯಿತಿ ವಿಭಜನೆಯನ್ನು ವಿರೋಧಿಸಿ ಸಾಮೂಹಿಕವಾಗಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಮನವೊಲಿಕೆಯ ಹೊರತಾಗಿಯೂ, ಅವರು ತಮ್ಮ ಮತದಾನದ ಹಕ್ಕನ್ನು ಚಲಾಯಿಸದ ನಿರ್ಧಾರದಲ್ಲಿ ದೃಢವಾಗಿ ಉಳಿದರು.

ಬೆಳಗ್ಗೆಯಿಂದಲೇ ಚುನಾವಣಾ ಸಿದ್ಧತೆ ನಡೆದಿದ್ದು, ಮತಗಟ್ಟೆ ಅಧಿಕಾರಿಗಳು ಕಾದು ಕುಳಿತಿದ್ದರೂ ಗ್ರಾಮಸ್ಥರು ಮತದಾನಕ್ಕೆ ಬಾರದೆ ಹೋಗಿದ್ದರು. ತಮ್ಮ ಗ್ರಾಮ ಪಂಚಾಯತಿ ವಿಂಗಡಣೆಯ ಬಗ್ಗೆ ಗ್ರಾಮಸ್ಥರು ಅಸಮಾಧಾನಗೊಂಡಿದ್ದಾರೆ ಎಂದು ಅವರು ಹೇಳಿದರು.

ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಭರತಸಿಂಹ ದಾಭಿ ಕೂಡ ಗ್ರಾಮಕ್ಕೆ ಆಗಮಿಸಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಆದರೆ, ಯಾವುದೇ ಪ್ರಯೋಜನವಾಗಲಿಲ್ಲ. ಭರೂಚ್ ಜಿಲ್ಲೆಯ ಕೇಸರ್ ಗ್ರಾಮದ ಸುಮಾರು 350 ಮತದಾರರು ಮತದಾನ ಮಾಡದಿರುವ ತಮ್ಮ ನಿರ್ಧಾರದಲ್ಲಿ ಅಚಲವಾಗಿ ಉಳಿದರು ಮತ್ತು ದಿನದ ಅಂತ್ಯದ ವೇಳೆಗೆ ಒಂದೇ ಒಂದು ಮತವೂ ಚಲಾವಣೆಯಾಗಲಿಲ್ಲ.

ಮತದಾರರು ತಮ್ಮ ಮತಗಳನ್ನು ಬಹಿಷ್ಕರಿಸುವುದು ಇದೇ ಮೊದಲಲ್ಲ. ನದಿಗೆ ಸೇತುವೆ ನಿರ್ಮಿಸುವಂತೆ ಹಲವು ಬಾರಿ ಒತ್ತಾಯಿಸಿದರೂ ಸರ್ಕಾರ ಬೇಡಿಕೆ ಈಡೇರಿಸದ ಕಾರಣ ಈ ಹಿಂದೆಯೂ ಈ ರೀತಿ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗುಜರಾತ್‌ನ ಒಟ್ಟು 26 ಲೋಕಸಭಾ ಸ್ಥಾನಗಳ ಪೈಕಿ 25 ಕ್ಷೇತ್ರಗಳಿಗೆ ಮಂಗಳವಾರ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಸೂರತ್ ಕ್ಷೇತ್ರವನ್ನು ಅವಿರೋಧವಾಗಿ ಗೆದ್ದಿದೆ.

ಇದನ್ನೂ ಓದಿ; ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...