Homeಕರ್ನಾಟಕಬೆಳಗಾವಿ| ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ನಿರಾಕರಣೆ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ 'ಎದ್ದೇಳು ಕರ್ನಾಟಕ'

ಬೆಳಗಾವಿ| ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ನಿರಾಕರಣೆ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ‘ಎದ್ದೇಳು ಕರ್ನಾಟಕ’

- Advertisement -
- Advertisement -

ಜಾಗತಿಕ ಚುನಾವಣಾ ನಿರ್ವಹಣಾ ಸಂಸ್ಥೆಗಳು (ಇಎಂಬಿ) ಪರವಾಗಿ ಭಾರತದ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಆಗಮಿಸಿರುವ ವಿದೇಶಿ ಪ್ರತಿನಿಧಿಗಳ ತಂಡವನ್ನು ಭೇಟಿ ಮಾಡಲು ಸರ್ಕಾರ ಯಾರಿಗೂ ಅನುಮತಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ವಿವಿಧ ದೇಶಗಳ ಪ್ರತಿನಿಧಿಗಳನ್ನೊಳಗೊಂಡ ನಿಯೋಗ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಭಾರತಕ್ಕೆ ಆಗಮಿಸಿದೆ. ಈ ಪೈಕಿ ಕಾಂಬೋಡಿಯಾ, ಮಾಲ್ಡೊವಾ, ನೇಪಾಳ, ಸಿಷೆಲ್ ಹಾಗೂ ಟ್ಯುನೇಷಿಯಾ ದೇಶಗಳ ಚುನಾವಣಾ ಆಯೋಗಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳ ತಂಡವೊಂದು ಬೆಳಗಾವಿಗೆ ಭೇಟಿ ಬಂದಿತ್ತು. ಈ ತಂಡವನ್ನು ಭೇಟಿ ಮಾಡಲು ಅಧಿಕಾರಿಗಳು ಅವಕಾಶ ನೀಡಿಲ್ಲ ಎಂದು ‘ಎದ್ದೇಳು ಕರ್ನಾಟಕ’ ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ.

‘ಆಡಳಿತ ಪಕ್ಷದಿಂದ ಚುನಾವಣಾ ಆಯುಕ್ತರ ನೇಮಕ, ಚುನಾವಣಾ ಆಯೋಗ ಆಡಳಿತ ಪಕ್ಷದ ಪರವಾಗಿ ಕೆಲಸ ಮಾಡುತ್ತಿರುವುದು, ಆಡಳಿತ ಪಕ್ಷ ನೀತಿ ಸಂಹಿತೆ ಉಲ್ಲಂಘಿಸಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು, ಪ್ರತಿಪಕ್ಷಗಳ ಬ್ಯಾಂಕ್ ಖಾತೆ ಸ್ಥಗಿತಗೊಳಿಸುವುದು, ಪ್ರತಿಪಕ್ಷ ನಾಯಕರ ಬಂಧನ, ಅಲ್ಪ ಸಂಖ್ಯಾತರ ವಿರುದ್ಧದ ದ್ವೇಷ ಭಾಷಣ, ಇವಿಎಂ, ವಿವಿಪ್ಯಾಟ್‌ಗಳ ಮೂಲಕ ವಂಚನೆ’ ಸೇರಿದಂತೆ ಚುನಾವಣಾ ವ್ಯವಸ್ಥೆಯ ವಸ್ತುಸ್ಥಿತಿಯನ್ನು ವಿದೇಶಿ ಪ್ರತಿನಿಧಿಗಳಿಗೆ ತಿಳಿಸಲು ಎದ್ದೇಳು ಕರ್ನಾಟಕ ಮುಂದಾಗಿತ್ತು. ಆದರೆ, ಇದಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.

ವಿದೇಶಿ ಪ್ರತಿನಿಧಿಗಳಿಗೆ ನೀಡಲು ಉದ್ದೇಶಿಸಿದ್ದ ವರದಿ 

“ವಿದೇಶಿ ಪ್ರತಿನಿಧಿಗಳ ತಂಡವನ್ನು ಭೇಟಿ ಮಾಡಲು ಯಾರಿಗೂ ಅವಕಾಶವಿಲ್ಲ. ನಮಗೆ ಸರ್ಕಾರದಿಂದ ಆದೇಶವಿದೆ. ನೀವು ಬೇಕಾದರೆ ಸುಪ್ರೀಂ ಕೋರ್ಟ್‌ಗೆ ತೆರಳಿ ಇದನ್ನು ಪ್ರಶ್ನಿಸಿ ಅಥವಾ ಚುನಾವಣಾ ಆಯೋಗದಿಂದ ಅನುಮತಿ ಪಡೆದುಕೊಂಡು ಬನ್ನಿ. ಆದರೆ, ನಾನು ಮಾತ್ರ ಅವಕಾಶ ನೀಡಲು ಸಾಧ್ಯವಿಲ್ಲ” ಎಂದು ಬೆಳಗಾವಿ ಜಿಲ್ಲಾಧಿಕಾರಿ ಹೇಳಿದ್ದಾಗಿ ಎದ್ದೇಳು ಕರ್ನಾಟಕದ ಮುಖಂಡರು ತಿಳಿಸಿದ್ದಾರೆ.

“ಕೇಂದ್ರ ಸರ್ಕಾರ ವಿದೇಶಿ ಪ್ರತಿನಿಧಿಗಳನ್ನು ಜನರಿಂದ ದೂರವಿಡುವ ಮೂಲಕ ಸತ್ಯ ಮರೆಮಾಚಲು ಮುಂದಾಗಿದೆ. ಇವಿಎಂ ತೆರೆಯುವುದು, ಮತದಾನ ಮಾಡುವುದು ಸೇರಿದಂತೆ ಕೆಲ ಪ್ರಾಥಮಿಕ ವಿಷಯಗಳನ್ನು ಮಾತ್ರ ಅವರಿಗೆ ತಿಳಿಸಲಾಗುತ್ತಿದೆ. ಚುನಾವಣೆಯಲ್ಲಿ ನಡೆಯುತ್ತಿರುವ ವಂಚನೆಯ ವಸ್ತುಸ್ಥಿತಿ ವಿದೇಶಿ ತಂಡಕ್ಕೆ ತಿಳಿದಿಲ್ಲ. ಅದನ್ನು ತಿಳಿಸಲು ಸರ್ಕಾರ ಅವಕಾಶ ನೀಡುತ್ತಿಲ್ಲ. ಪ್ರತಿನಿಧಿಗಳನ್ನೂ ಕೂಡ ತಮಗೆ ಬೇಕಾದ ದೇಶಗಳಿಂದ ಆಯ್ಕೆ ಮಾಡಲಾಗಿದೆ. ಇಲ್ಲಿ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಬಂದವರ ದೇಶಗಳಲ್ಲೇ ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎಂದು ಹೇಳಿದ್ದಾರೆ.

ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ಸಿಗದ ಹಿನ್ನೆಲೆ ಎದ್ದೇಳು ಕರ್ನಾಟಕದ ಮುಖಂಡರು, ಇಎಂಬಿಗೆ ನೀಡಬೇಕಾದ ವರದಿ ಮತ್ತು ಮನವಿಯನ್ನು ಜಿಲ್ಲಾಧಿಕಾರಿಗೆ ನೀಡಿದ್ದಾರೆ.

ಇದನ್ನೂ ಓದಿ : ಬಿಜೆಪಿಯ ‘ಕೋಮು ದ್ವೇಷದ ಪೋಸ್ಟ್‌’ನ್ನು ತೆಗೆದು ಹಾಕುವಂತೆ ‘ಎಕ್ಸ್‌’ಗೆ ಸೂಚಿಸಿದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...