Homeಮುಖಪುಟಬಿಎಸ್ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್ ಆನಂದ್‌ಗೆ ವಜಾ ಮಾಡಿದ ಮಾಯಾವತಿ

ಬಿಎಸ್ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್ ಆನಂದ್‌ಗೆ ವಜಾ ಮಾಡಿದ ಮಾಯಾವತಿ

- Advertisement -
- Advertisement -

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮತ್ತು ಯುಪಿ ಮಾಜಿ ಸಿಎಂ ಮಾಯಾವತಿ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದ್ದು, ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ಉತ್ತರಾಧಿಕಾರಿ ಮತ್ತು ಬಿಎಸ್ಪಿಯ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ತೆಗೆದು ಹಾಕಿದ್ದಾರೆ.

ಆಕಾಶ್ ಆನಂದ್ ‘ರಾಜಕೀಯವಾಗಿ ಪ್ರಬುದ್ಧರಾಗುವವರೆಗೆ’ ಅವರನ್ನು ಪಕ್ಷದ ಪ್ರಮುಖ ಹುದ್ದೆಗಳಿಂದ ವಜಾಗೊಳಿಸಿದ್ದೇನೆ ಎಂದು ಮಾಯಾವತಿ ಈ ಕುರಿತು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಮಾಯಾವತಿ, ನಾನು ಆಕಾಶ್ ಆನಂದ್ ಅವರನ್ನು ರಾಷ್ಟ್ರೀಯ ಸಂಯೋಜಕ ಮತ್ತು ಉತ್ತರಾಧಿಕಾರಿ ಎಂದು ಘೋಷಿಸಿದ್ದೆ, ಆದರೆ ಪಕ್ಷ ಮತ್ತು ಚಳವಳಿಯ ದೊಡ್ಡ ಹಿತಾಸಕ್ತಿಯಿಂದ ಅವರು ಪೂರ್ಣ ಪ್ರಬುದ್ಧತೆಯನ್ನು ಪಡೆಯುವವರೆಗೆ ಈ ಎರಡೂ ಪ್ರಮುಖ ಜವಾಬ್ದಾರಿಗಳಿಂದ ಅವರನ್ನು ವಜಾಗೊಳಿಸುವುದಾಗಿ ಹೇಳಿದ್ದಾರೆ.

ಬಿಎಸ್ಪಿ ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರ ಆತ್ಮಗೌರವ ಮತ್ತು ಸ್ವಾಭಿಮಾನದ ಸಂಕೇತ ಹಾಗೂ ಸಾಮಾಜಿಕ ಬದಲಾವಣೆಗಾಗಿ ಕಾನ್ಶಿರಾಂ ಅವರು ಕಟ್ಟಿದ ಚಳವಳಿ. ಇದಕ್ಕಾಗಿ ನಾನು ನನ್ನ ಇಡೀ ಜೀವನವನ್ನು ಸಮರ್ಪಿಸಿಕೊಂಡಿದ್ದೇನೆ ಮತ್ತು ಹೊಸ ಪೀಳಿಗೆ ಕೂಡಾ ಈ ಚಳವಳಿಗೆ ವೇಗ ನೀಡಲು ಸಜ್ಜಾಗಬೇಕು. ಆಕಾಶ್ ಅವರ ತಂದೆ ಆನಂದ್ ಕುಮಾರ್ ಅವರು ಪಕ್ಷದಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಾರೆ ಎಂದು ಹೇಳಿದ್ದಾರೆ.

ಏಪ್ರಿಲ್ 28ರಂದು,ಸೀತಾಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಆರೋಪದ ಹಿನ್ನೆಲೆ ಆಕಾಶ್ ಆನಂದ್ ಮತ್ತು ಇತರ ನಾಲ್ವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ  ದಾಖಲಾಗಿತ್ತು. ರ್ಯಾಲಿಯಲ್ಲಿ ಆನಂದ್ ಭಾಷಣದ ವಿರುದ್ಧ ಜಿಲ್ಲಾಡಳಿತ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಆನಂದ್ ಅಲ್ಲದೆ, ಬಿಎಸ್‌ಪಿ ಅಭ್ಯರ್ಥಿ ಮಹೇಂದ್ರ ಯಾದವ್, ಶ್ಯಾಮ್ ಅವಸ್ತಿ ಮತ್ತು ಅಕ್ಷಯ್ ಕಲ್ರಾ ಮತ್ತು ರ್ಯಾಲಿ ಆಯೋಜಕ ವಿಕಾಸ್ ರಾಜವಂಶಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸೀತಾಪುರ ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ಹೇಳಿದ್ದಾರೆ.

ಈ ಸರ್ಕಾರ ಬುಲ್ಡೋಜರ್ ಸರ್ಕಾರ ಮತ್ತು ದೇಶದ್ರೋಹಿ ಸರ್ಕಾರ, ಯುವಕರನ್ನು ಹಸಿವಿನಿಂದ ಬಿಡುವ ಮತ್ತು ತನ್ನ ಹಿರಿಯರನ್ನು ತನ್ನ ಗುಲಾಮರನ್ನಾಗಿ ಮಾಡುವ ಪಕ್ಷವು ಭಯೋತ್ಪಾದಕ ಸರ್ಕಾರವಾಗಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಇಂತಹ ಸರ್ಕಾರವನ್ನು ನಡೆಸುತ್ತಿದೆ ಎಂದು ಅವರು ಬಿಜೆಪಿ ನೇತೃತ್ವದ ಉತ್ತರಪ್ರದೇಶ ಸರ್ಕಾರದ ವಿರುದ್ಧ ಟೀಕೆ ಮಾಡುವ ವೇಳೆ ಹೇಳಿದ್ದರು.

ಕಳೆದ ಡಿಸೆಂಬರ್‌ನಲ್ಲಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಸೋದರಳಿಯ ಆನಂದ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಘೋಷಿಸಿ ಅವರಿಗೆ ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿಯನ್ನು ನೀಡಿದ್ದರು. ಆಕಾಶ್ ಆನಂದ್ ಅವರು ಮಾಯಾವತಿಯ ಕಿರಿಯ ಸಹೋದರ ಆನಂದ್ ಕುಮಾರ್ ಅವರ ಪುತ್ರರಾಗಿದ್ದಾರೆ. ಅವರು ಬಿಎಸ್ಪಿಯಲ್ಲಿ ಬೆಹೆನ್ ಜಿ(ಮಾಯಾವತಿಯ) ನಂತರದ ಸ್ಥಾನದಲ್ಲಿದ್ದರು.

ಇದನ್ನು ಓದಿ: ಬೆಳಗಾವಿ| ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ನಿರಾಕರಣೆ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ‘ಎದ್ದೇಳು ಕರ್ನಾಟಕ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...