Homeಅಂತರಾಷ್ಟ್ರೀಯಬಿಸಿಸಿಐ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಆಯ್ಕೆ

ಬಿಸಿಸಿಐ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಆಯ್ಕೆ

- Advertisement -
- Advertisement -

ಅಕ್ರಮಣಕಾರಿ ಆಟದಿಂದ ಹೆಸರಾಗಿರುವ ಸ್ಟ್ರಾಂಗ್ ಕ್ರಿಕೆಟರ್, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ಬಿಸಿಸಿಐನ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಬಂಗಾಳದ ಕ್ರಿಕೆಟರ್ ಸೌರವ್ ಗಂಗೂಲಿ ಮತ್ತೊಂದು ಇತಿಹಾಸ ನಿರ್ಮಿಸಿದ್ದಾರೆ. ಬಿಸಿಸಿಐನ ಪೂರ್ಣಾವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಕ್ರಿಕೆಟ್ ನಲ್ಲಿ ಬಿಸಿಸಿಐನ ಅಧ್ಯಕ್ಷ ಸ್ಥಾನ ಅಲಂಕರಿಸಿದ ಎರಡನೇ ಭಾರತೀಯ ಕ್ರಿಕೆಟರ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಸೌರವ್ ಗಂಗೂಲಿ ಅಕ್ರಮಣಕಾರಿ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ನೂತನ ಶೈಲಿಗೆ ನಾಂದಿ ಹಾಡಿದ್ದರು. ಬಿಸಿಸಿಐನ ಅಧ್ಯಕ್ಷ ಗಾದಿ ರೇಸ್ ನಲ್ಲಿ ಭಾರತದ ಮಾಜಿ ಕ್ರಿಕೆಟಿಗ, ಕರ್ನಾಟಕದ ಬ್ರಿಜೇಶ್ ಪಟೇಲ್ ಕೂಡ ಇದ್ದರು. ಆದರೆ ಅಂತಿಮವಾಗಿ ಸೌರವ್ ಗಂಗೂಲಿ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.

ಬಿಸಿಸಿಐನ ಅಧ್ಯಕ್ಷರಾಗಿ ಅವಿರೋಧವಾಗಿ ಕ್ರಿಕೆಟ್ ದಾದಾ ಸೌರವ್ ಗಂಗೂಲಿ ಆಯ್ಕೆಯಾದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಜಯ್ ಶಾ ಬಿಸಿಸಿಐನ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇದರ ಜತೆಗೆ ನೂತನ ಖಜಾಂಚಿಯಾಗಿ ಅರುಣ್ ಧುಮಲ್ ನೇಮಕಗೊಂಡಿದ್ದಾರೆ.

ಬಿಸಿಸಿಐ ವಿವಿಧ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿತ್ತು. ಆದರೆ ಬಿಸಿಸಿಐ ಸ್ಥಾನಕ್ಕಾಗಿ ಸಾಕಷ್ಟು ಲಾಬಿ ನಡೆದ ಹಿನ್ನೆಲೆ ಚುನಾವಣೆ ನಡೆಯದೆಯೇ, ಅವಿರೋಧವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಇನ್ನು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಬ್ರಿಜೇಶ್ ಕೂಡ ಪೈಪೋಟಿ ನಡೆಸಿದ್ದರು. ಈ ಮಧ್ಯೆ 2021ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರ ಪ್ರಚಾರ  ನಡೆಸುವ ವಿಚಾರವಾಗಿ ಸೌರವ್ ಗಂಗೂಲಿ ಒಪ್ಪಿಗೆ ಸೂಚಿಸಿರಲಿಲ್ಲ. ಹೀಗಾಗಿ ಬೇರೆ ಅಭ್ಯರ್ಥಿ ಹುಡುಕಾಟ ನಡೆದಿತ್ತು. ಆದರೆ ಬೇರೆ ಭಾಗಗಳಿಂದ ಕೇಳಿ ಬಂದ ವಿರೋಧದಿಂದ ಹೈಡ್ರಾಮಾ ನಡೆದಿತ್ತು. ಇದೆಲ್ಲದರ ನಂತರ ಈಗ ಸೌರವ್ ಗಂಗೂಲಿ ಬಿಸಿಸಿಐನ ನೂರನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಿಸಿಸಿಐ ತಮ್ಮನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ವಿಚಾರಕ್ಕೆ ಸೌರವ್ ಗಂಗೂಲಿ ಸಂತಸ ವ್ಯಕ್ತಪಡಿಸಿದರು. ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಕ್ಕೆ ಖುಷಿಯಾಗಿದೆ. ಯಾವುದೋ ವಿಶೇಷ ಮತ್ತು ಉತ್ತಮ ಕೆಲಸ ಮಾಡಲು ಬಿಸಿಸಿಐ ಅವಕಾಶ ಕಲ್ಪಿಸಿದೆ. ನನಗೆ ಬಿಸಿಸಿಐ ಬೃಹತ್ ಜವಾಬ್ದಾರಿ ನೀಡಿದೆ. ಬಿಸಿಸಿಐ ಅಧ್ಯಕ್ಷ ಸ್ಥಾನ ನಿಭಾಯಿಸುವುದು ಒಂದು ಸವಾಲಿನ ಕೆಲಸ ಎಂದು ಗಂಗೂಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಮೊದಲು ಬಿಸಿಸಿಐನ ಪೂರ್ಣಾವಧಿಗೆ ಅಧ್ಯಕ್ಷರಾಗಿ ಭಾರತ ತಂಡದ ಕ್ಯಾಪ್ಟನ್ ಮಹಾರಾಜಕುಮಾರ್ ವಿಜಿಯಾನಗ್ರಾಮ್ ಅಥವಾ ವಿಜ್ಜಿ 1954ರಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ನೇಮಕೊಂಡಿದ್ದರು. ಅವರ ನಂತರ ಬಿಸಿಸಿಐ ಅಧ್ಯಕ್ಷರಾಗಿ ಭಾರತೀಯ ಕ್ರಿಕೆಟಿಗರು ಆಯ್ಕೆಯಾಗಿರಲಿಲ್ಲ. ಭಾರತೀಯ ಲೆಜೆಂಡ್ ಕ್ರಿಕೆಟಿಗ ಸುನೀಲ್ ಗವಾಸ್ಕರ್ 2014ರಲ್ಲಿ ಮಧ್ಯಂತರ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ ಅವರನ್ನು ಬಿಸಿಸಿಐ ಪೂರ್ಣಾವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಿಲ್ಲ.

ಸೌರವ್ ಗಂಗೂಲಿ ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಸಂಸ್ಕೃತಿ ಹುಟ್ಟುಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಾರತದ ಹೊರಗೆ ಟೆಸ್ಟ್ ಕ್ರಿಕೆಟ್ ಆಡಿದ ರೀತಿಯ ಬದಲಾವಣೆಗೆ ಕಾರಣರಾಗಿದ್ದರು. 2003ರಲ್ಲಿ ಐಸಿಸಿ ವರ್ಲ್ಡ್ ಕಪ್ ಫೈನಲ್ ತಲುಪಲು ಭಾರತದ ತಂಡಕ್ಕೆ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದರು. ಯುವರಾಜ್ ಸಿಂಗ್, ಜಹೀರ್ ಖಾನ್, ವೀರೇಂದ್ರ ಸೆಹ್ವಾಗ್, ಎಂ.ಎಸ್.ಧೋನಿ ಸೇರಿದಂತೆ ಅನೇಕ ಯುವ ಆಟಗಾರರಿಗೆ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿದ್ದರು. ಗಂಗೂಲಿ 2015ರಿಂದ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿಸಿಸಿಐ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೌರವ್ ಗಂಗೂಲಿಯವರಿಗೆ ಗಣ್ಯರು ಮತ್ತು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.

ಇಲ್ಲಿಯವರೆಗೆ ಆಯ್ಕೆಯಾದ ಬಿಸಿಸಿಐ ಅಧ್ಯಕ್ಷರ ಪಟ್ಟಿ ಈ ಕೆಳಗಿನಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...