Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ದೇವಸ್ಥಾನದ ರಥೋತ್ಸವ ಸಮಿತಿಗೆ ಸಿದ್ದರಾಮಯ್ಯ ಸರ್ಕಾರ ಮುಸ್ಲಿಂ ವ್ಯಕ್ತಿಯನ್ನು ಆಯ್ಕೆ...

FACT CHECK : ಹಿಂದೂ ದೇವಸ್ಥಾನದ ರಥೋತ್ಸವ ಸಮಿತಿಗೆ ಸಿದ್ದರಾಮಯ್ಯ ಸರ್ಕಾರ ಮುಸ್ಲಿಂ ವ್ಯಕ್ತಿಯನ್ನು ಆಯ್ಕೆ ಮಾಡಿದೆಯಾ?

- Advertisement -
- Advertisement -

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ ರಾಜ್ಯ ಸರ್ಕಾರ ರಚಿಸಿರುವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸದಸ್ಯನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

ಬ್ರಹ್ಮರಥೋತ್ಸವ ಸಮಿತಿ ರಚಿಸಿ ಸರ್ಕಾರ ಹೊರಡಿಸಿರುವ ಆದೇಶ ಪತ್ರ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ಸಮಿತಿಯ ಪಟ್ಟಿಯೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ‘ನವಾಝ್’ ಎಂಬ ಸದಸ್ಯನ ಹೆಸರಿದೆ. ಬಿಜೆಪಿ ತನ್ನ ಪೋಸ್ಟ್‌ನಲ್ಲಿ ಈ ಕೆಳಗಿನಂತೆ ಬರೆದುಕೊಂಡಿದೆ.

“ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ ರಚಿಸಿರುವ ಸಮಿತಿಯ ಸದಸ್ಯನಾಗಿ ನವಾಝ್ ಎಂಬ ವ್ಯಕ್ತಿಯನ್ನು ಸರ್ಕಾರ ನೇಮಿಸಿದೆ. ಹಿಂದೂ ದೇವಸ್ಥಾನಗಳನ್ನು ಪ್ರಯತ್ನ ನಡೆಸಿದ ಬಳಿಕ, ಹಿಂದೂ ವಿರೋಧಿ ಸಿದ್ದರಾಮಯ್ಯ ಅವರು, ಈಗ ಹಿಂದೂಯೇತರ ವ್ಯಕ್ತಿಯನ್ನು ಸಮಿತಿಗೆ ನೇಮಿಸುವ ಮೂಲಕ ದೇವಸ್ಥಾನ ಮತ್ತು ಅದರ ಸಂಪತ್ತನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ.”

“ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಹಕ್ಕು ಕಿತ್ತು ಒಂದು ಸಮುದಾಯಕ್ಕೆ ಕೊಡುವ ರಾಹುಲ್ ಗಾಂಧಿಯ ಕನಸಿನ ಯೋಜನೆಯನ್ನು ಜಾರಿಗೊಳಿಸುವ ತವಕದಲ್ಲಿದೆ. ಇಂದು ಇದು ಕರ್ನಾಟಕದ ಒಂದು ದೇವಸ್ಥಾನವಾಗಿರಬಹುದು. ಆದರೆ, ನಾಳೆ ಭಾರತದ ಎಲ್ಲಾ ದೇವಸ್ಥಾನಗಳಲ್ಲಿ ಆಗುತ್ತದೆ. ಕಾಂಗ್ರೆಸ್‌ ಬಗ್ಗೆ ಎಚ್ಚರವಾಗಿರಿ.”

ಪ್ರಸ್ತುತ, ಎಕ್ಸ್‌ನಿಂದ ಬಿಜೆಪಿ ತನ್ನ ಪೋಸ್ಟ್ ಡಿಲಿಟ್ ಮಾಡಿದೆ 

ಫ್ಯಾಕ್ಟ್‌ಚೆಕ್ : ಬಿಜೆಪಿ ಆರೋಪಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದೇವಸ್ಥಾನದ ಬ್ರಹ್ಮರಥೋತ್ಸವದ ಸಮಿತಿಗೆ ಸದಸ್ಯನಾಗಿ ಮುಸ್ಲಿಂ ವ್ಯಕ್ತಿಯನ್ನು ನೇಮಿಸಿದೆಯಾ? ಎಂದು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಬಿಜೆಪಿ ಮಾಡಿರುವ ಆರೋಪ ಸುಳ್ಳು ಎಂದು ತಿಳಿದು ಬಂದಿದೆ.

ಬಿಜೆಪಿಯ ಆರೋಪದ ಕುರಿತು ಮೇ 8, 2024ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಸಿಎಂ ತಿಳಿಸಿದಂತೆ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ ಸಮಿತಿ ರಚಿಸುವಾಗ ಅನ್ಯ ಧರ್ಮದ ವ್ಯಕ್ತಿಗಳನ್ನು ಸದಸ್ಯರನ್ನಾಗಿ ನೇಮಿಸಿಕೊಳ್ಳುವುದು ಬಹಳ ಹಿಂದಿನಿಂದಲೂ ನಡೆದುಕೊಂಡ ಬಂದ ಸಂಪ್ರದಾಯ. ಅದರಂತೆ ಈ ಬಾರಿಯೂ ಸರ್ಕಾರ ಮುಸ್ಲಿಂ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದೆ.

ಗಮನಾರ್ಹವಾಗಿ, ಈ ಹಿಂದೆ (2021-22) ರಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗಲೂ ದೇವಸ್ಥಾನ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗಳಿಗೆ ಸ್ಥಾನ ನೀಡಲಾಗಿತ್ತು. 2020ರಲ್ಲಿ ಇಮ್ತಿಯಾಝ್ ಪಾಷಾ ಎಂಬವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಎಂಬವರನ್ನು ಸದಸ್ಯರನ್ನಾಗಿ ಮಾಡಿತ್ತು. ಈ ಕುರಿತ ಸರ್ಕಾರದ ಆದೇಶ ಪ್ರತಿಯನ್ನು ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.

“ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿಂದೂ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರು ಕೂಡ ಎಕ್ಸ್‌ನಲ್ಲಿ ದಾಖಲೆಗಳನ್ನು ಹಂಚಿಕೊಂಡಿದ್ದು, “ಸಮಿತಿಯಲ್ಲಿ ಸರ್ವ ಸಮುದಾಯದ ಸದಸ್ಯರನ್ನು ನೇಮಕಗೊಳಿಸುವುದು ದೇಗುಲದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : FACT CHECK : ಕರ್ನಾಟಕದಲ್ಲಿ ಮೋದಿ ಪ್ರತಿಕೃತಿ ದಹಿಸಲು ಹೋದ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...