Homeಮುಖಪುಟಹರಿಯಾಣ ರಾಜಕೀಯ ಬಿಕ್ಕಟ್ಟು: ವಿಶ್ವಾಸಮತ ಯಾಚನೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ಜೆಜೆಪಿಯ ಚೌಟಾಲಾ

ಹರಿಯಾಣ ರಾಜಕೀಯ ಬಿಕ್ಕಟ್ಟು: ವಿಶ್ವಾಸಮತ ಯಾಚನೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ಜೆಜೆಪಿಯ ಚೌಟಾಲಾ

- Advertisement -
- Advertisement -

ಮೂವರು ಸ್ವತಂತ್ರ ಶಾಸಕರು ಹರಿಯಾಣದ ನಯಾಬ್ ಸಿಂಗ್ ಸೈನಿ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ಹಿಂತೆಗೆದುಕೊಂಡ ಕೆಲವು ದಿನಗಳ ನಂತರ, ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ಯ ದುಶ್ಯಂತ್ ಚೌತಾಲ ಅವರು ಗುರುವಾರ ಹರ್ಯಾಣದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸರ್ಕಾರದ ವಿರುದ್ಧ ವಿಶ್ವಾಸಮತ ಯಾಚನೆಗೆ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಬಿಜೆಪಿಯ ಮಾಜಿ ಮಿತ್ರ ಪಕ್ಷವಾದ ಜನನಾಯಕ್ ಜನತಾ ಪಕ್ಷವು ಹರಿಯಾಣದಲ್ಲಿ ಬಿಜೆಪಿ ಸರ್ಕಾರವನ್ನು ಉರುಳಿಸಲು ಕಾಂಗ್ರೆಸ್‌ಗೆ ಸಹಾಯ ಮಾಡಲು ಸಿದ್ಧವಾಗಿದೆ ಎಂದು ಈಗಾಗಲೇ ಹೇಳಿದೆ.

ಮೇ 7 ರಂದು, ಮೂವರು ಸ್ವತಂತ್ರ ಶಾಸಕರ ಹಠಾತ್ ನಡೆಯ ನಂತರ ಹರಿಯಾಣ ಸರ್ಕಾರವು ಆಘಾತವನ್ನು ಅನುಭವಿಸಿದ್ದು, ಸೈನಿ ಸರ್ಕಾರ ಬಹುಮತ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದೆ. ಪುಂಡ್ರಿಯಿಂದ ರಣಧೀರ್ ಗೋಲನ್, ನಿಲೋಖೇರಿಯಿಂದ ಧರ್ಮಪಾಲ್ ಗೊಂಡರ್ ಮತ್ತು ಚಾರ್ಖಿ ದಾದ್ರಿಯಿಂದ ಸೋಂಬಿರ್ ಸಿಂಗ್ ಸಾಂಗ್ವಾನ್ ಮೂವರು ಶಾಸಕರು ಬೆಂಬಲ ವಾಪಸ್ ಪಡೆದಿದ್ದು, ಅವರೆಲ್ಲರೂ ಕಾಂಗ್ರೆಸ್‌ ಜೊತೆ ನಿಲ್ಲಲು ನಿರ್ಧರಿಸಿದ್ದಾರೆ.

ಎರಡು ತಿಂಗಳ ಹಿಂದೆ ರಚನೆಯಾದ ಸರ್ಕಾರವು ಈಗ ಬಹುಮತದ ಕೊರತೆ ಎದುರಿಸುತ್ತಿದೆ. ಏಕೆಂದರೆ, ಬಿಜೆಪಿಯನ್ನು ಬೆಂಬಲಿಸಿದ ಒಬ್ಬರು ಬಿಜೆಪಿ ಮತ್ತು ಇನ್ನೊಬ್ಬರು ಸ್ವತಂತ್ರ ಶಾಸಕರು ರಾಜೀನಾಮೆ ನೀಡಿದ್ದಾರೆ. ಅವರನ್ನು ಬೆಂಬಲಿಸುತ್ತಿದ್ದ ಮೂವರು ಸ್ವತಂತ್ರ ಶಾಸಕರು ತಮ್ಮ ಬೆಂಬಲವನ್ನು ಹಿಂಪಡೆದಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದಿರುವ ಜೆಜೆಪಿ ಈ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ. “ಪ್ರಸ್ತುತ ಬಿಜೆಪಿ ಸರ್ಕಾರವನ್ನು ಮೂಲೆಗುಂಪು ಮಾಡಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಕಾಂಗ್ರೆಸ್ ನಿರ್ಧರಿಸಬೇಕು” ಎಂದು ದುಷ್ಯಂತ್ ಚೌತಾಲಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು “ಬಹುಮತ” ಹೊಂದಿಲ್ಲದಿದ್ದರೆ ರಾಜ್ಯಪಾಲರು ಹರಿಯಾಣದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಬೇಕು ಎಂದು ಅವರು ಹೇಳಿದರು.

ಸರ್ಕಾರಕ್ಕೆ ಅಗತ್ಯವಿರುವ ಬಲವಿದೆಯೇ ಮತ್ತು ಬಹುಮತ ಇಲ್ಲದಿದ್ದಲ್ಲಿ ತಕ್ಷಣವೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೆ ತರಲು ವಿಶ್ವಾಸಮತ ಪರೀಕ್ಷೆಗೆ ಆದೇಶಿಸಲು ರಾಜ್ಯಪಾಲರಿಗೆ ಅಧಿಕಾರವಿದೆ ಎಂದು ಅವರು ಹೇಳಿದರು.

ಆದರೂ, ತಮ್ಮ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಹೇಳಿದ್ದಾರೆ. ಅವರ ಹಿಂದಿನ ಮತ್ತು ಪಕ್ಷದ ಸಹೋದ್ಯೋಗಿ ಎಂಎಲ್ ಖಟ್ಟರ್ ಅವರು ‘ಅನೇಕ ಶಾಸಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ, ಚಿಂತಿಸಲು ಏನೂ ಇಲ್ಲ’ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಕೇವಲ ಹದಿನೈದು ದಿನಗಳು ಬಾಕಿ ಇರುವಾಗ ಮತ್ತು ಅಕ್ಟೋಬರ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಸಮಯದಲ್ಲಿ ರಾಜ್ಯದಲ್ಲಿ ತ್ವರಿತ ಗತಿಯ ರಾಜಕೀಯ ಬೆಳವಣಿಗೆಗಳು ಬಂದಿವೆ.

90 ಸದಸ್ಯ ಬಲದ ಹರಿಯಾಣ ವಿಧಾನಸಭೆಯು ಪ್ರಸ್ತುತ 88 ರ ಪರಿಣಾಮಕಾರಿ ಬಲವನ್ನು ಹೊಂದಿದೆ. ಕರ್ನಾಲ್ ಮತ್ತು ರಾನಿಯಾ ವಿಧಾನಸಭಾ ಸ್ಥಾನಗಳು ಖಾಲಿ ಇವೆ. ಸದನದಲ್ಲಿ ಬಿಜೆಪಿ 40, ಕಾಂಗ್ರೆಸ್ 30 ಮತ್ತು ಜೆಜೆಪಿ 10 ಶಾಸಕರನ್ನು ಹೊಂದಿದೆ. ಐಎನ್‌ಡಿಎಲ್ ಮತ್ತು ಹರಿಯಾಣ ಲೋಕಿತ್ ಪಕ್ಷವು ಒಬ್ಬ ಸದಸ್ಯರನ್ನು ಹೊಂದಿದೆ. ಆರು ಜನ ಪಕ್ಷೇತರ ಶಾಸಕರಿದ್ದಾರೆ.

ಸರ್ಕಾರಕ್ಕೆ ಇಬ್ಬರು ಸ್ವತಂತ್ರ ಶಾಸಕರ ಬೆಂಬಲವಿದೆ. ಸ್ವತಂತ್ರ ಶಾಸಕ ನಯನ್ ಪಾಲ್ ರಾವತ್ ಅವರು 2019 ರಲ್ಲಿ ಬಿಜೆಪಿಗೆ ಬೇಷರತ್ ಬೆಂಬಲ ನೀಡಿದ್ದರು ಮತ್ತು ಅದು ಈಗಲೂ ಮುಂದುವರೆದಿದೆ.

ಇದನ್ನೂ ಓದಿ; ಸಂದೇಶಖಾಲಿ ‘ಸ್ಟಿಂಗ್ ಆಪರೇಷನ್’: ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಟಿಎಂಸಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...