Homeಮುಖಪುಟಸಂದೇಶ್‌ಖಾಲಿ ಘಟನೆಗಳ ಬಗ್ಗೆ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಟಿಎಂಸಿ

ಸಂದೇಶ್‌ಖಾಲಿ ಘಟನೆಗಳ ಬಗ್ಗೆ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಟಿಎಂಸಿ

- Advertisement -
- Advertisement -

ಸ್ಥಳೀಯ ಬಿಜೆಪಿ ನಾಯಕಿಯೊಬ್ಬರು ಟಿಎಂಸಿ ನಾಯಕರ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಲು ಖಾಲಿ ಪೇಪರ್‌ಗಳ ಮೇಲೆ ಅನೇಕ ಮಹಿಳೆಯರ ಸಹಿ ಹಾಕಿಸಿಕೊಂಡಿದ್ದಾರೆ ಎಂದು ಹೊಸದಾಗಿ ಹೊರಬಂದ ಹಲವಾರು ವೀಡಿಯೊಗಳ ನಂತರ ತೃಣಮೂಲ ಕಾಂಗ್ರೆಸ್ ಗುರುವಾರ ಬಿಜೆಪಿಯು ಸಂದೇಶ್‌ಖಾಲಿ ಘಟನೆಗಳ ಬಗ್ಗೆ ಸುಳ್ಳು ಸುದ್ದಿಯನ್ನು ಹರಡುತ್ತಿದೆ ಎಂದು ಆರೋಪಿಸಿದೆ.

“ಅತ್ಯಾಚಾರದ ಆರೋಪಗಳನ್ನು ಸೃಷ್ಠಿಸಲಾಗಿದೆ ಮತ್ತು ರಾಜ್ಯ ನಾಯಕರ ಆಜ್ಞೆಯ ಮೇರೆಗೆ ದಾಖಲಿಸಲಾಗಿದೆ” ಎಂದು ಹೇಳುವ ಸ್ಥಳೀಯ ಬಿಜೆಪಿ ನಾಯಕ ಗಂಗಾಧರ ಕೋಯಲ್ ಅವರನ್ನು ಒಳಗೊಂಡ ಸಂದೇಶಖಾಲಿ “ಸ್ಟಿಂಗ್ ಆಪರೇಷನ್” ವೀಡಿಯೊವನ್ನು ಟಿಎಂಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ ಮೂರು ದಿನಗಳ ನಂತರ ಸುವೆಂದು ಅಧಿಕಾರಿ ವಿರುದ್ಧ ಈ ಆರೋಪವನ್ನು ಹೊರಿಸಲಾಗಿದೆ.

ಪ್ರಕರಣದ ಕುರಿತು, ಟಿಎಂಸಿ ಗುರುವಾರ ಸಂದೇಶಖಾಲಿಯ ಮಹಿಳಾ ನಿವಾಸಿಗಳ ಹೊಸ ವೀಡಿಯೊಗಳನ್ನು ಹಂಚಿಕೊಂಡಿದೆ. “ಬಿಜೆಪಿ ಸುಳ್ಳು ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಲು ಜನರನ್ನು ಬಳಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

ಬಿಜೆಪಿಯ ಬಸಿರ್‌ಹತ್ ಅಭ್ಯರ್ಥಿ ಮತ್ತು ಸಂದೇಶ್‌ಖಾಲಿ ಪ್ರತಿಭಟನೆಯ ಪ್ರಮುಖ ಮುಖಗಳಲ್ಲಿ ಒಬ್ಬರಾದ ರೇಖಾ ಪಾತ್ರಾ ಅವರು ಈ ಹಿಂದೆ ರಾಜ್ಯ ಬಿಜೆಪಿ ನಾಯಕರು ಭೇಟಿಯಾಗಲು ದೆಹಲಿಗೆ ಕರೆದೊಯ್ದ “ಸಂದೇಶಖಾಲಿ ಸಂತ್ರಸ್ತರ” ತುಕಡಿಯ ಗುರುತನ್ನು ಪ್ರಶ್ನಿಸುತ್ತಿರುವ ಹೊಸ ವೀಡಿಯೊವನ್ನು ಪಕ್ಷವು ಹಂಚಿಕೊಂಡಿದೆ.

ಅತ್ಯಾಚಾರದ ದೂರುಗಳನ್ನು ಹಿಂಪಡೆಯಲು ಇಚ್ಛೆ ವ್ಯಕ್ತಪಡಿಸಿದ ಮಹಿಳೆಯರಿಗೆ ಬಿಜೆಪಿ ನಾಯಕರು ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಟಿಎಂಸಿ ಬುಧವಾರ ಆರೋಪಿಸಿತ್ತು.

ಹೊಸದಾಗಿ ಬಿಡುಗಡೆಯಾದ ವೀಡಿಯೊಗಳನ್ನು ಉಲ್ಲೇಖಿಸಿ, ರಾಜ್ಯ ಸಚಿವ ಮತ್ತು ಹಿರಿಯ ಟಿಎಂಸಿ ನಾಯಕ ಶಶಿ ಪಂಜ ಅವರು, “ಸಂದೇಶಖಾಲಿ ಲೈಂಗಿಕ ದೌರ್ಜನ್ಯಗಳ ಬಗ್ಗೆ ಸುಳ್ಳು ನಿರೂಪಣೆಯನ್ನು ಮುಂದುವರಿಸಲು ಮತ್ತು ತಮ್ಮ ಪೊಲೀಸ್ ದೂರುಗಳನ್ನು ಹಿಂತೆಗೆದುಕೊಳ್ಳಲು ಪ್ರಯತ್ನಿಸಿದ ಸಂತ್ರಸ್ತರಿಗೆ ಬೆದರಿಕೆ ಹಾಕಲಾಗುತ್ತಿದೆ” ಎಂದು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

“ಸಂದೇಶಖಾಲಿ ಸಂತ್ರಸ್ತರಿಗೆ ಭೂಹಗರಣದ ಕುರಿತು ಕೆಲವು ದೂರುಗಳು ಬಂದಿರಬಹುದು. ಆದರೆ ಅವರಲ್ಲಿ ಲೈಂಗಿಕ ಅಪರಾಧದ ದೂರುಗಳು ಇರಲಿಲ್ಲ. ಇದು ಬಿಜೆಪಿಯು ಸುಳ್ಳು ಸುದ್ದಿಯನ್ನು ಹರಡುತ್ತಿದೆ ಎಂದು ಮತ್ತೊಮ್ಮೆ ಸಾಬೀತುಪಡಿಸುತ್ತದೆ” ಎಂದು ಪಂಜ ಹೇಳಿದರು.

ಮತ್ತೊಂದೆಡೆ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಟಿಎಂಸಿಯ ಆರೋಪಗಳನ್ನು ತಳ್ಳಿಹಾಕಿದರು, ವೀಡಿಯೊಗಳನ್ನು ಅಭಿಷೇಕ್ ಬ್ಯಾನರ್ಜಿ ಮತ್ತು ಪಕ್ಷದ ಖಾಸಗಿ ಚುನಾವಣಾ-ಕಮ್-ರಾಜಕೀಯ ಸಲಹೆಗಾರ ಐ-ಪಿಎಸಿಯ ಓರೆಯಾದ ಉಲ್ಲೇಖದಿಂದ ನಿರ್ಮಿಸಲಾಗಿದೆ” ಎಂದು ಆರೋಪಿಸಿದರು.

“ನಾವು ಇಬ್ಬರ ವಿರುದ್ಧವೂ ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹೋಗುತ್ತಿದ್ದೇವೆ ಮತ್ತು ಅಂತಹ ದುರುದ್ದೇಶಪೂರಿತ ಸುಳ್ಳುಗಳನ್ನು ಹರಡಿದ್ದಕ್ಕಾಗಿ ಇಬ್ಬರನ್ನೂ ತರಾಟೆಗೆ ತೆಗೆದುಕೊಳ್ಳುತ್ತೇವೆ ಎಂದು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಬಸಿರ್‌ಹತ್‌ನಲ್ಲಿ ರೇಖಾ ಪಾತ್ರ ಅವರ ನಾಮಪತ್ರ ಸಲ್ಲಿಕೆ ರ್ಯಾಲಿಯಲ್ಲಿ ಭಾಗವಹಿಸಿದ ಅಧಿಕಾರಿ ಹೇಳಿದರು.

ಇತ್ತೀಚಿನ ಬಿಡುಗಡೆಯಾದ ವೀಡಿಯೋ ಒಂದರಲ್ಲಿ ಮಹಿಳೆಯೊಬ್ಬರು, “ನಮಗೆ ಖಾಲಿ ಪೇಪರ್‌ಗಳ ಮೇಲೆ ಸಹಿ ಹಾಕಿ ವಂಚಿಸಲಾಗಿದೆ. ನಮ್ಮ ಹೆಸರಿನಲ್ಲಿ ಅತ್ಯಾಚಾರದ ದೂರುಗಳು ದಾಖಲಾಗಿರುವುದು ನಮಗೆ ನಂತರ ಪತ್ತೆಯಾಯಿತು. ಇದು ಹಸಿ ಸುಳ್ಳು” ಎಂದು ಹೇಳುತ್ತಿರುವುದು ಕೇಳಿಬಂದಿದೆ. ಖಾಲಿ ಪೇಪರ್‌ಗಳಿಗೆ ಸಹಿ ಹಾಕುವಂತೆ ದುರ್ಬಳಕೆ ಮಾಡಿದ ಬಿಜೆಪಿ ಮಹಿಳಾ ಮುಖಂಡರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮಹಿಳೆ ಹೇಳಿದ್ದಾರೆ.

ಮತ್ತೊಬ್ಬ ಆಪಾದಿತ ಸಂದೇಶ್‌ಖಾಲಿ ನಿವಾಸಿಯೂ ಇದೇ ರೀತಿಯ ಭಾವನೆಗಳನ್ನು ಪ್ರತ್ಯೇಕ ವೀಡಿಯೊದಲ್ಲಿ ಪ್ರತಿಧ್ವನಿಸಿದ್ದು, ಬಿಜೆಪಿ ನಾಯಕ ಪಿಯಾಲಿ ದಾಸ್ ರೂಪಿಸಿದ ಯೋಜನೆಗೆ ತಾವು ಬಲಿಪಶುಗಳಾಗಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಮೂರನೇ ಮಹಿಳೆ ಕೂಡ ಪಿಯಾಲಿ ದಾಸ್ ವಿರುದ್ಧ ಅದೇ ಆರೋಪವನ್ನು ಮಾಡಿದ್ದಾರೆ. “ಅವರು ನಮ್ಮ ಖ್ಯಾತಿಯನ್ನು ಹಾಳುಮಾಡಿದ್ದಾರೆ ಮತ್ತು ನಮಗೆ ಅಪಾರ ನೋವನ್ನು ತಂದಿದ್ದಾರೆ” ಎಂದು ಹೇಳಿದರು. ಕೊನೆಯದಾಗಿ ಸ್ವೀಕರಿಸಿದ ಮಾಹಿತಿಯ ಪ್ರಕಾರ, ದಾಸ್ ಅವರನ್ನು ವಿಚಾರಣೆಗಾಗಿ ಸ್ಥಳೀಯ ಪೊಲೀಸರು ಕರೆದಿದ್ದಾರೆ.

ಪತ್ರಾ ಒಳಗೊಂಡಿರುವ ವೀಡಿಯೊದಲ್ಲಿ, ಬಿಜೆಪಿ ಅಭ್ಯರ್ಥಿಯು ತನ್ನ ಪಕ್ಕದಲ್ಲಿ ನಿಂತಿದ್ದ ಇನ್ನೊಬ್ಬ ಮಹಿಳೆಯನ್ನು ಬೆಂಬಲಿಸಿದ್ದು, ರಾಷ್ಟ್ರಪತಿಯನ್ನು ಭೇಟಿ ಮಾಡಲು ಕರೆದೊಯ್ಯಲ್ಪಟ್ಟ ಸಂತ್ರಸ್ತರನ್ನು ಸ್ಥಳೀಯ ಬಿಜೆಪಿ ನಾಯಕರು ಅನಿಯಂತ್ರಿತವಾಗಿ ಆಯ್ಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ; ಪ.ಬಂಗಾಳ: ‘ನನ್ನ ಮೇಲೆ ದೌರ್ಜನ್ಯ ನಡೆದಿಲ್ಲ..’; ಅತ್ಯಾಚಾರ ಆರೋಪ ಹಿಂತೆಗೆದುಕೊಂಡ ಸಂದೇಶಖಾಲಿ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...