Homeಮುಖಪುಟಮಾಲ್ಡೀವ್ಸ್ ಜತೆಗೆ ಜೈಶಂಕರ್ ಮಾತುಕತೆ; ದ್ವೀಪ ರಾಷ್ಟ್ರದಿಂದ ಸೈನಿಕರನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡ ಭಾರತ

ಮಾಲ್ಡೀವ್ಸ್ ಜತೆಗೆ ಜೈಶಂಕರ್ ಮಾತುಕತೆ; ದ್ವೀಪ ರಾಷ್ಟ್ರದಿಂದ ಸೈನಿಕರನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡ ಭಾರತ

- Advertisement -
- Advertisement -

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಾಲ್ಡೀವ್ಸ್ ಸಚಿವ ಮೂಸಾ ಜಮೀರ್ ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ, ಅಧ್ಯಕ್ಷ ಮೊಹಮದ್ ಮುಯಿಝು ಅವರು ನಿಗದಿಪಡಿಸಿದ ಮೇ 10 ರ ಗಡುವಿನ ಮುಂಚೆಯೇ ಭಾರತವು ದ್ವೀಪ ರಾಷ್ಟ್ರದಿಂದ ತನ್ನ ಎಲ್ಲ ಸೈನಿಕರನ್ನು ಹಿಂತೆಗೆದುಕೊಳ್ಳುವಿಕೆಯನ್ನು ಪೂರ್ಣಗೊಳಿಸಿದೆ.

ಮಾಲ್ಡೀವ್ಸ್‌ನಲ್ಲಿ ಬೀಡುಬಿಟ್ಟಿದ್ದ ಭಾರತೀಯ ಸೈನಿಕರ ಕೊನೆಯ ಬ್ಯಾಚ್ ಅನ್ನು ವಾಪಸ್ ಕಳುಹಿಸಲಾಗಿದೆ ಎಂದು ಹೀನಾ ವಲೀದ್ ದೃಢಪಡಿಸಿದ್ದಾರೆ ಎಂದು ಅಧ್ಯಕ್ಷರ ಕಚೇರಿಯ ಮುಖ್ಯ ವಕ್ತಾರರು ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಭಾರತವು ಈ ಹಿಂದೆ ಉಡುಗೊರೆಯಾಗಿ ನೀಡಿದ್ದ ಎರಡು ಹೆಲಿಕಾಪ್ಟರ್‌ಗಳು, ಡೋರ್ನಿಯರ್ ವಿಮಾನಗಳನ್ನು ನಿರ್ವಹಿಸಲು ಮಾಲ್ಡೀವ್ಸ್‌ನಲ್ಲಿ ನೆಲೆಸಿರುವ ಸುಮಾರು 89 ಭಾರತೀಯ ಮಿಲಿಟರಿ ಸಿಬ್ಬಂದಿಯನ್ನು ವಾಪಸು ಕಳುಹಿಸುವುದು 2023 ರಲ್ಲಿ ಅವರ ಅಧ್ಯಕ್ಷೀಯ ಪ್ರಚಾರದ ಸಮಯದಲ್ಲಿ ಮುಯಿಝು ಅವರ ಪ್ರಮುಖ ಪ್ರತಿಜ್ಞೆಯಾಗಿತ್ತು.

ಠಿಕಾಣಿ ಹೂಡಿರುವ ಸೈನಿಕರ ಸಂಖ್ಯೆಯ ವಿವರಗಳನ್ನು ನಂತರ ಬಹಿರಂಗಪಡಿಸಲಾಗುವುದು ಎಂದು ವಲೀದ್ ಹಂಚಿಕೊಂಡಿದ್ದಾರೆ. ಈ ಹಿಂದೆ 51 ಸೈನಿಕರನ್ನು ಸೋಮವಾರ ಭಾರತಕ್ಕೆ ವಾಪಸ್ ಕಳುಹಿಸಲಾಗಿದೆ ಎಂದು ಅದರ ಸರ್ಕಾರ ಘೋಷಿಸಿತ್ತು. ಗುರುವಾರ ನವದೆಹಲಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಭಾರತೀಯ ಸಿಬ್ಬಂದಿಯ ಮೊದಲ ಮತ್ತು ಎರಡನೇ ಬ್ಯಾಚ್‌ಗಳು ಹಿಂತಿರುಗಿದ್ದಾರೆ ಎಂದು ದೃಢಪಡಿಸಿದರು.

ಕಳೆದ ನವೆಂಬರ್‌ನಲ್ಲಿ ‘ಇಂಡಿಯಾ ಔಟ್’ ಪೋಲ್ ಪ್ಲಾಂಕ್‌ನಲ್ಲಿ ಅಧಿಕಾರಕ್ಕೆ ಬಂದ ಮುಯಿಜ್ಜು ಅವರ ಮೊದಲ ಕಾರ್ಯಗಳಲ್ಲಿ ಒಂದಾದ ಮೇ 10 ರೊಳಗೆ ಸುಮಾರು 80 ಭಾರತೀಯ ಸೇನಾ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುವುದಾಗಿತ್ತು. ಸೈನಿಕರು ಎರಡು ಹೆಲಿಕಾಪ್ಟರ್‌ಗಳು ಮತ್ತು ಡೋರ್ನಿಯರ್ ವಿಮಾನವನ್ನು ನಿರ್ವಹಿಸಲು ಅಲ್ಲಿ ನೆಲೆಸಿದ್ದರು.

ಮಾಲ್ಡೀವ್ಸ್ ಸರ್ಕಾರದ ಚೀನಾ ಪರವಾದ ಒಲವನ್ನು ಉಲ್ಲೇಖಿಸಿ ಮಾತನಾಡಿದ ಜೈಶಂಕರ್,  ‘ಜಮೀರ್ ಅವರಿಗೆ ಭಾರತ-ಮಾಲ್ಡೀವ್ಸ್ ಸಂಬಂಧಗಳ ಅಭಿವೃದ್ಧಿಯು ಪರಸ್ಪರ ಹಿತಾಸಕ್ತಿಗಳು ಮತ್ತು ಪರಸ್ಪರ ಸೂಕ್ಷ್ಮತೆಯನ್ನು ಆಧರಿಸಿದೆ” ಎಂದು ಹೇಳಿದರು.

ಮೊಟ್ಟೆ, ಆಲೂಗಡ್ಡೆ, ಈರುಳ್ಳಿ, ಸಕ್ಕರೆ, ಅಕ್ಕಿ, ಗೋಧಿ ಹಿಟ್ಟು ಮತ್ತು ಬೇಳೆಕಾಳುಗಳು, ನದಿ ಮರಳು ಮತ್ತು ಕಲ್ಲುಗಳನ್ನು ಮಾಲ್ಡೀವ್ಸ್‌ಗೆ ವಿಶಿಷ್ಟ ದ್ವಿಪಕ್ಷೀಯ ಕಾರ್ಯವಿಧಾನದ ಅಡಿಯಲ್ಲಿ 2024-25 ಕ್ಕೆ ಅತ್ಯಧಿಕ ರಫ್ತು ಕೋಟಾಗಳನ್ನು ಭಾರತವು ಇತ್ತೀಚೆಗೆ ಅನುಮೋದಿಸಿದೆ. ಈ ವ್ಯವಸ್ಥೆಯು 1981 ರಲ್ಲಿ ಜಾರಿಗೆ ಬಂದ ನಂತರ ಅನುಮೋದಿತ ಪ್ರಮಾಣಗಳು ಅತ್ಯಧಿಕವಾಗಿದೆ.

ಇದನ್ನೂ ಓದಿ; ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3 ಮಂದಿ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...