Homeಸಾಹಿತ್ಯ-ಸಂಸ್ಕೃತಿಕವನಭಾಷೆಯ ರದ್ದು: ಮೂರು ಭಾಷೆಗಳನ್ನು ದಾಟಿ ಬಂದ ಕವನ

ಭಾಷೆಯ ರದ್ದು: ಮೂರು ಭಾಷೆಗಳನ್ನು ದಾಟಿ ಬಂದ ಕವನ

- Advertisement -
- Advertisement -

(“ಇತ್ತೀಚೆಗೆ ಭಾಷಾಧಿಪತ್ಯದ ಧೊರಣೆಯ ಬಗ್ಗೆ ರಹೀಂ ಪೊನ್ನಾಡ್ ಬರೆದ ಮಲೆಯಾಳಂ ಕವನಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬಂದ ಹಿಂದೀ ಅನುವಾದವನ್ನು ನೋಡಿ ತೆಲುಗಿಗೆ ಅನುವಾದ ಮಾಡದೇ ಇರಲು ಸಾಧ್ಯವಾಗಲಿಲ್ಲ” ಎಂದು ಕವನವನ್ನು ತೆಲುಗಿಗೆ ಅನುವಾದ ಮಾಡಿದ ಮುಖಪುಟದ ಗೆಳೆಯ ಎನ್. ವೇಣುಗೋಪಾಲ್ ಬರೆದುಕೊಂಡಿದ್ದಾರೆ. ನನ್ನ ಸ್ಥಿತಿಯು ಸಹಾ ಅಂಥದ್ದೇ ಆಗಿರುವುದರಿಂದ ಕನ್ನಡಾನುವಾದ ನಮ್ಮೆಲ್ಲರಿಗಾಗಿ…)

ಒಂದು ದಿನ ಅರ್ಧ ರಾತ್ರಿ
ಆತ ಭಾಷೆಯ ಮೇಲೆ ನಿಷೇಧವೇರಿದ
‘ಇಂದಿನಿಂದ ಎಲ್ಲರದ್ದೂ ಒಂದೇ ಭಾಷೆ”
ಹಳೇ ಭಾಷಾ ಪದಗಳು ನಿಮ್ಮಲ್ಲಿದ್ದರೆ
ಅಂಚೆ ಕಚೇರಿಯಲ್ಲಿ ಬದಲಾಯಿಸಿ ಕೊಳ್ಳಬಹುದು’
ಎಂಬ ಗಂಭೀರ ಪ್ರಕಟಣೆ ಹೊರಡಿತು

ಅರ್ಧ ನಿದ್ರೆಯಲ್ಲಿದ್ದ ಜನರು
ಬೆಚ್ಚಿಬಿದ್ದು
ಓಟ ಶುರುಮಾಡಿದರು
ಪ್ರತಿಯೊಂದು ಜಾಗದಲ್ಲೂ ನಿಶ್ಶಬ್ಧ
ತಾಯಂದಿರು ಮಕ್ಕಳ ಬಾಯನ್ನು ಕೈಗಳಿಂದ ಮುಚ್ಚಿದ್ದಾರೆ
ಮುದುಕರ ಮುಖಗಳನ್ನು ಬಟ್ಟೆಯಿಂದ ಮರೆಮಾಚಿದ್ದಾರೆ
ದೇವಾಲಯಗಳಲ್ಲಿ ಹಾಡುಗಳು ನಿಂತುಹೋಗಿವೆ
ಮಸೀದಿಯಲ್ಲಿ ಅಜಾನ್ ಸಹಾ ಕೇಳಿಸುತ್ತಿಲ್ಲ
ರೇಡಿಯೋದಲ್ಲಿ ವೀಣಾ ವಾದನೆ ಬಿಟ್ಟರೆ ಮತ್ತೇನೂ ಕೇಳಿಸುತ್ತಿಲ್ಲ
ಟೀವಿ ಪರದೆಯ ಮೇಲೆ ಸನ್ನೆಯ ಭಾಷೆಯಲ್ಲೇ ವಾರ್ತೆಗಳು ಬರುತ್ತಿವೆ
ಪತ್ರಿಕೆಗಳ ಹೆಸರಲ್ಲಿ
ಸಂತೆಗೆ ಬಂದಿರುವುದು ಎಂಟು ಕಾಲಂಗಳು ಖಾಲಿ ಇರುವ ಬಿಳಿ ಕಾಗದಗಳು
ಎಲ್ಲಾ ಕೀಬೋರ್ಡ್‍ಗಳು ಮೌನತಾಳಿವೆ
ಮೊಬೈಲ್ ಸ್ಕ್ರೀನ್‍ಗಳ ಮೇಲೆ
ಗೊಂಬೆಗಳು ಮಾತ್ರ ಉಳಿದಿವೆ

ಅಂಚೆ ಕಚೇರಿಯ ಮುಂದೆ ನಿಶ್ಶಬ್ದವಾಗಿ ನಿಂತ ಉದ್ದನೆಯ ಕ್ಯೂ
ದಿನಕ್ಕೆರಡು ಪದಗಳನ್ನು ಮಾತ್ರ ಬದಲಾಯಿಸಿಕೊಳ್ಳಲು
ಅನುಮೋದನೆ ನೀಡಲಾಗಿದೆ
ಆದರೆ ಕೆಲವರು ಚೀಲಗಳ ತುಂಬಾ ಶಬ್ದಗಳನ್ನು ತುಂಬಿಕೊಂಡು ಬಂದಿದ್ದಾರೆ
ಟಿಫಿನ್ ಬಾಕ್ಸ್‌ಗಳಲ್ಲಿ ಬ್ಯಾಗುಗಳಲ್ಲಿ ಮಾತುಗಳನ್ನು
ತುಂಬಿಕೊಂಡು ಬಂದ ಪುಟಾಣಿ ಮಕ್ಕಳು ಕೂಡಾ ಕ್ಯೂನಲ್ಲಿ ನಿಂತಿದ್ದಾರೆ

‘ಅಮ್ಮ’ ಎಂಬ ಮಾತು ಕೊಟ್ಟವರಿಗೆ
‘ಮಾ’ ಎಂಬ ಮಾತು ಸಿಕ್ಕಿದೆ
‘ಅಪ್ಪ’ ಎಂಬ ಮಾತಿಗೆ
‘ಬಾಪ್‘ ಎಂಬ ಮಾತು ಸಿಕ್ಕಿತು
ಚಾಕೊಲೇಟ್, ಗೇಮ್ ಎಂಬ ಪದಗಳನ್ನು ಬದಲಾಯಿಸಿಕೊಳ್ಳಲು ಬಂದ ಮಕ್ಕಳನ್ನು
ಕೌಂಟರ್‌ನಿಂದ ಕಳುಹಿಸೇಬಿಟ್ಟರು
ಇಲ್ಲಿ ಭಾಷೆಯನ್ನು ಮಾತ್ರ ಬದಲಾಯಿಸಿಕೊಳ್ಳಬಹುದು ಎಂದರು

ಬದಲಾಯಿಸಲು ಶಬ್ಧಗಳಿಲ್ಲ ಎಂಬ ಕಾರಣಕ್ಕಾಗಿ
‘ಅಸಂತೃಪ್ತಿ’ ಎಂಬ ಪದವನ್ನು
‘ಹೆಣದ ವಸ್ತ್ರ’ ಎಂಬ ಪದವನ್ನು ಹಿಂದಕ್ಕೆ ಕಳುಹಿಸಿದರು

‘ಚೂರಿ’ ಪದವನ್ನು ಬದಲಾಯಿಸಲು ಬಂದವರನ್ನು ಓಡಿಸಿಬಿಟ್ಟರು
‘ಮದ್ದುಗುಂಡು’ ಎಂಬ ಪದ ಬದಲಾಯಿಸಿ ಎಂದರೆ
ಪೊಲೀಸರು ಸೆರೆ ಹಿಡಿದರು
ಕ್ಯೂನಲ್ಲಿ ನಿಂತು ನಿಂತು ಸುಸ್ತಾದ ಮುದುಕರು
ಕುಡಿಯಲು ನೀರು ಕೇಳಿದರೆ
ತುಪಾಕಿ ತೋಟಾಗಳಿಂದ ಬಾಯಿ ಮುಚ್ಚಿಸಿದರು

ಇದೆಲ್ಲವನ್ನೂ ನೋಡಿ ನೋಡಿ
ಸಾಕಾಗಿ ಮನೆಗೆ ಬಂದರೆ
ಮನೆ ಅಂಗಳದಲ್ಲಿ ಮಾತುಗಳ ರಾಶಿ ಬಿದ್ದಿದೆ
ಹೊಸ ಪದಗಳು, ಹಳೆ ಪದಗಳು, ಲಿಪಿ ಇಲ್ಲದ ಪದಗಳು
ಬದಲಾಯಿಸಿಕೊಂಡು ತರಬೇಕಾದ ಪದಗಳು

ಮನೆಯವರು ಎಲ್ಲವನ್ನೂ ರಾಶಿರಾಶಿಯಾಗಿ ಸುರಿದಿದ್ದಾರೆ
ಅಪ್ಪ ತನ್ನ ತಲೆದಿಂಬು ಒಳಗಿಂದ ತೆಗೆದ ಪದಗಳು
ನನಗೆ ಅರ್ಥವೇ ಆಗಲಿಲ್ಲ
ಅಮ್ಮ ತನ್ನ ಮಡಿಲಲ್ಲಿ ತುಂಬಿಕೊಂಡಿರುವ ಪದಗಳನ್ನು ನಾನೆಂದೂ ಕೇಳಲೇ ಇಲ್ಲ
ನನ್ನ ಹೆಂಡತಿ ಅಡುಗೆ ಮನೆಯಿಂದ ಎಳೆದುತಂದ ಪದಗಳನ್ನು ನೋಡಿದರೆ
ಅಷ್ಟು ಮಾತುಗಳ ಮಧ್ಯದಲ್ಲೇ ಆಕೆ ಅಡುಗೆ ಮಾಡುತ್ತಿದ್ದಳು ಅನಿಸಿತು
ನನ್ನ ಮಗಳ ಶಾಲೆಯ ಬ್ಯಾಗಿನಲ್ಲಿ ಹೋಂವರ್ಕ್ ಪದಗಳು
ನನ್ನ ಮಗನ ಪೆಟ್ಟಿಗೆಯಲ್ಲಿ ಹರಡಿರುವ ಜೋಷಿನ ಮಾತುಗಳು
ಎಷ್ಟೇ ಪದಗಳಿದ್ದರೂ ಬದಲಾಗಿ ಎರಡೇ ಎರಡು ಮಾತುಗಳು
ಮಾತ್ರ ಸಿಗುತ್ತವೆ ಎಂದು ಹೇಗೆ ಹೇಳಲಿ?

ಆ ಮಾತುಗಳ ಗಂಟಿನಲ್ಲಿ ತುಂಬಾ ಹುಡುಕಿದೆ
ಬಹಳ ಕಷ್ಟಪಟ್ಟ ಮೇಲೆ
ನನ್ನ ಕೈಗೆ ಎರಡು ಪದಗಳು ಸಿಕ್ಕವು
ಇರೋ ಬರೋ ಶಕ್ತಿ ಎಲ್ಲಾ ಬಳಸಿ
ಆ ಮಾತುಗಳನ್ನು ಹೊರಗೆ ಎಳೆದಿದೆ
ಒಂದು “ಪ್ರಜಾತಂತ್ರ” ಮತ್ತೊಂದು “ಬಹುಳ”

ಬೇಗ ಬೇಗ ಓಡಿಹೋಗಿ ಅಂಚೆ ಕಚೇರಿಗೆ ತಲುಪುವ ವೇಳೆಗೆ
ಮುಸ್ಸಂಜೆ ಕತ್ತಲಾಗುತ್ತಿತ್ತು
ನನ್ನ ಕೈಯಲ್ಲಿರುವ ಮಾತುಗಳನ್ನು ನೋಡಿ
ಬೆಚ್ಚಿಬಿದ್ದು ಎದ್ದು ನಿಂತರು
ಕೌಂಟರಿನ ಉದ್ಯೋಗಿಗಳು
ನನ್ನ ಕೈಯಲ್ಲಿನ ಮಾತುಗಳು ಜಾರಿ ಕೆಳಗೆ ಬಿದ್ದವು
ತುಂಬಾ ಜನ ಓಡಿ ಬಂದು ಸುತ್ತುವರೆಯುತ್ತಿರುವಂತೆ ಬೂಟು ಹೆಜ್ಜೆಗಳ ಸದ್ದು ಕೇಳಿಸಿತು
ಪ್ರಜ್ಞೆ ತಪ್ಪಿ ಬೀಳುತ್ತಿರುವ ನನಗೆ
ಎರಡೇ ಎರಡು ‘ಮಾತು’ಗಳು ಕೇಳಿಸಿತು
“ಸಾಯಿಸಿಬಿಡಿ” – “ದೇಶದ್ರೋಹಿಯನ್ನ”

ಮಲೆಯಾಳಂ ಮೂಲ : ರಹೀಮ್ ಪೊನ್ನಾಡ್
ಹಿಂದಿ : ಎ. ಆರ್. ಸಿಂಧು, ವೀಣಾ ಗುಪ್ತ
ತೆಲುಗು : ಎನ್.ವೇಣುಗೋಪಾಲ್
ಕನ್ನಡಾನುವಾದ : ಪದ್ಮಾ ಕೆ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಶಾನ್ಯ ಭಾರತದಲ್ಲಿ ಕೇವಲ ನೂರು ವರ್ಷಗಳಲ್ಲಿ ಚರ್ಚ್ 60ಕ್ಕೂ ಅಧಿಕ ಭಾಷೆಗಳನ್ನು ಕೊಂದು ಇಂಗ್ಲಿಷ್ ಅನ್ನು ಸ್ಥಾಪಿಸಿದಾಗ, ಕೇರಳ ಸರಕಾರ ಕಾಸರಗೋಡಿನಲ್ಲಿ ಸಾವಿರಾರು ತುಳು, ಕನ್ನಡ, ಕೊಂಕಣಿ ಸಂಸಾರಗಳನ್ನು ಓಡಿಸಿದಾಗ ರಹೀಮರು ಕವನ ಬರೆಯಲಿಲ್ಲ!! ಮಂಗಳೂರು, ಚೆನ್ನೈ, ಮುಂಬಯಿ ಮುಂತಾದೆಡೆ ಕನ್ನಡ, ತುಳು, ತಮಿಳು, ಮರಾಠಿ ಭಾಷೆಗಳನ್ನು ಬಿಟ್ಟು ಹಿಡಿದದ್ದು ಹಿಂದಿಯನ್ನಲ್ಲ, ಇಂಗ್ಲಿಷನ್ನು!!! ಅವರ ಸಂಖ್ಯೆ ಈಗ ಶೇಕಡಾ 40 ದಾಟಿದೆ!!! ರಹೀಮರ ಪದ್ಯವನ್ನು ಅವರ ಮುಂದೆ ಓದಿದರೆ ಬಿದ್ದು ಬಿದ್ದು ನಗುತ್ತಾರೆ!!!

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...