Homeಮುಖಪುಟಹಣದುಬ್ಬರ, ಉದ್ಯೋಗಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿ ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ: ಪ್ರಿಯಾಂಕಾ ಗಾಂಧಿ

ಹಣದುಬ್ಬರ, ಉದ್ಯೋಗಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿ ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ: ಪ್ರಿಯಾಂಕಾ ಗಾಂಧಿ

- Advertisement -
- Advertisement -

‘ಆಡಳಿತಾರೂಢ ಬಿಜೆಪಿ ಹಣದುಬ್ಬರವನ್ನು ಹೇಗೆ ನಿಯಂತ್ರಿಸುತ್ತದೆ ಅಥವಾ ಜನರಿಗೆ ಉದ್ಯೋಗವನ್ನು ನೀಡುತ್ತದೆ ಎಂಬುದರ ಕುರಿತು ಮಾತನಾಡುವ ಬದಲು ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ’ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಆರೋಪಿಸಿದ್ದಾರೆ.

ಅಮೇಥಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅವರನ್ನು ಬೆಂಬಲಿಸಿ ‘ನುಕ್ಕಡ್ ಸಭೆ’ಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ಕಳೆದ 70 ವರ್ಷಗಳಲ್ಲಿ ಮಾಡದ ಕೆಲಸವನ್ನು ತಮ್ಮ ಸರ್ಕಾರ 10 ವರ್ಷಗಳಲ್ಲಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟಿವಿಯಲ್ಲಿ ಹೇಳಿಕೊಳ್ಳುತ್ತಾರೆ. ನೆಲದ ಮಟ್ಟದಲ್ಲಿ ಪರಿಸ್ಥಿತಿ ವಿಭಿನ್ನವಾಗಿದೆ” ಎಂದು ತಿರುಗೇಟು ಕೊಟ್ಟಿದ್ದಾರೆ.

ಅಮೇಥಿ ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್ ಶರ್ಮಾ ಕಣಕ್ಕಿಳಿದಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯಿಂದ ಗಾಂಧಿ ಕುಟುಂಬದ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿದ್ದ ಸ್ಥಾನವನ್ನು ಬಿಜೆಪಿ ನಾಯಕಿ ಕಸಿದುಕೊಂಡಿದ್ದರು.

ಇರಾನಿ ಅವರನ್ನು ಗುರಿಯಾಗಿಸಿ ಮಾತನಾಡಿದ ಪ್ರಿಯಾಂಕಾ, ರಾಹುಲ್ ಗಾಂಧಿಯನ್ನು ಸೋಲಿಸುವುದು ಅವರ ಏಕೈಕ ಉದ್ದೇಶವಾಗಿತ್ತು ಎಂದರು.

ನಿಮ್ಮ ಸಂಸದರು ಮತ್ತು ಬಿಜೆಪಿಯವರು ಚುನಾವಣಾ ಸಮಯದಲ್ಲಿ ಬರುತ್ತಾರೆ. ಆದರೆ, ಹಣದುಬ್ಬರವನ್ನು ಹೇಗೆ ನಿಯಂತ್ರಿಸುತ್ತಾರೆ.. ಕೃಷಿಯನ್ನು ಸುಧಾರಿಸುತ್ತಾರೆ ಅಥವಾ ನಿಮ್ಮ ಮಕ್ಕಳಿಗೆ ಉದ್ಯೋಗ ಕೊಡುತ್ತಾರೆ ಎಂದು ಮಾತನಾಡುವುದಿಲ್ಲ. ಅವರು ನಿಮ್ಮ ಮನೆಗೆ ಬಂದು ದೇವರ ಹೆಸರಿನಲ್ಲಿ ನಮಗೆ ಮತ ಚಲಾಯಿಸಿ ಎಂದು ಹೇಳುತ್ತಾರೆ. ಅವರು 10 ವರ್ಷಗಳಲ್ಲಿ ಮಾಡಿದ ಕೆಲಸದ ಹೆಸರಿನಲ್ಲಿ ಏಕೆ ಮತ ಕೇಳಲಿಲ್ಲ? ನಾವೂ ಸಹ ಧಾರ್ಮಿಕ ವ್ಯಕ್ತಿಗಳು, ನಮಗೆಲ್ಲರಿಗೂ ದೇವರು ಮತ್ತು ಧರ್ಮ ಬಹಳ ಪ್ರಿಯ. ಆದರೆ, ಧರ್ಮವನ್ನು ರಾಜಕೀಯಕ್ಕೆ ಬಳಸುವುದು ತಪ್ಪು” ಎಂದು ಅವರು ಹೇಳಿದರು.

ಅಮೇಥಿಯೊಂದಿಗೆ ತಮ್ಮ ಕುಟುಂಬದ ಒಡನಾಟವನ್ನು ಸ್ಮರಿಸಿದ ಅವರು, “ಇಲ್ಲಿನ ರಾಜಕೀಯದ ಸಂಪ್ರದಾಯವು ಜನರಿಗೆ ಸೇವೆ ಸಲ್ಲಿಸುವುದು ನಾಯಕನ ಧರ್ಮವಾಗಿದೆ ಮತ್ತು ಅದನ್ನು ಅವರ ಕುಟುಂಬದ ಎಲ್ಲಾ ಸದಸ್ಯರು ಅನುಸರಿಸುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ; ‘ಆರೋಪಗಳನ್ನು ಹೊರಿಸಲು ಸಾಕಷ್ಟು ವಸ್ತುಗಳಿವೆ..’; ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಕೇಸ್ ದಾಖಲಿಸುವಂತೆ ಸೂಚಿಸಿದ ದೆಹಲಿ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...