Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ...

FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ ಮಾಡಿರುವ ವೈರಲ್ ಪತ್ರ ನಕಲಿ

- Advertisement -
- Advertisement -

ಅಸೋಸಿಯೇಷನ್ ​​ಆಫ್ ಸುನ್ನಿ ಮುಸ್ಲಿಂ (ಸುನ್ನಿ ಮುಸ್ಲಿಂ ಮಜ್ಲಿಸ್) ಎಂಬ ಸಂಘಟನೆಯೊಂದರ ಲೆಟರ್ ಹೆಡ್‌ನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ತೆರಳುವ ದುಬೈನ ಮುಸ್ಲಿಮರಿಗೆ ಟಿಕೆಟ್ ಬುಕಿಂಗ್ ಮತ್ತು ಮುಂಗಡ ಬುಕ್ಕಿಂಗ್ ಟಿಕೆಟ್‌ನ ಸಂಪೂರ್ಣ ಹಣವನ್ನು ಈ ಸಂಘಟನೆ ನೀಡಲಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಏಪ್ರಿಲ್ 29ರ ದಿನಾಂಕದಲ್ಲಿ ಪತ್ರವನ್ನು ಮುದ್ರಿಸಲಾಗಿದೆ.

ಪತ್ರದಲ್ಲಿ ‘ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವುದು ಮತ್ತು ಮುಸ್ಲಿಮರ ನಿಜವಾದ ಹಿತೈಷಿಯಾದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಈ ಸಹಾಯದ ಉದ್ದೇಶವಾಗಿದೆ’ ಎಂದು ಹೇಳಲಾಗಿದೆ. ಈ ಪತ್ರವನ್ನು ಹಂಚಿಕೊಂಡಿರುವ ಅನೇಕರು ‘ಕಾಂಗ್ರೆಸ್ ಪಕ್ಷಕ್ಕೆ ಅಂತಾರಾಷ್ಟ್ರೀಯ ಮುಸ್ಲಿಂ ಸಂಘಟನೆಗಳ ಬೆಂಬಲ ಸಿಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಅರುಣ್ ಪುದೂರ್ ಎಂಬವರು ಮೇ 7ರಂದು ಎಕ್ಸ್‌ನಲ್ಲಿ ಈ ಪತ್ರವನ್ನು ಪೋಸ್ಟ್ ಮಾಡಿದ್ದರು. “ದುಬೈನ ಸುನ್ನಿ ಮುಸ್ಲಿಮರ ಸಂಘವು ಮತ್ತೆ ಕಾಂಗ್ರೆಸ್ ಸರ್ಕಾರ ರಚಿಸಲು ಕರ್ನಾಟಕದ ಮುಸ್ಲಿಮರಿಗೆ ಸಂಪೂರ್ಣ ಆರ್ಥಿಕ ನೆರವು ನೀಡುತ್ತಿದೆ. ಆದರೆ, ಇಲ್ಲಿನ ಹಿಂದೂಗಳು ಈ ಬಿರು ಬೇಸಿಗೆಯಲ್ಲೂ ಮನೆಯಲ್ಲಿ ಹೊದ್ದು ಮಲಗಿದ್ದಾರೆ ಅಥವಾ ಮೌಲಾನಾ ಮೋದಿ ಹಿಂದೂಗಳಿಗೆ ಏನೂ ಮಾಡಿಲ್ಲ” ಎಂದು ಸುಳ್ಳು ಹೇಳುತ್ತಿದ್ದಾರೆ” ಎಂದು ಬರೆದುಕೊಂಡಿದ್ದರು.

“ಕರ್ನಾಟಕದ ಮುಸ್ಲಿಂ ಸಂಘಟನೆ ಸೌದಿ ಅರೇಬಿಯಾದಲ್ಲಿರುವ ಭಾರತೀಯ ಮುಸ್ಲಿಮರು ತಾಯ್ನಾಡಿಗೆ ಬಂದು ಕಾಂಗ್ರೆಸ್‌ಗೆ ಮತ ಹಾಕಲು ತಗಲುವ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸುತ್ತಿದೆ” ಎಂದು ‘ಇಂದು ಮಕ್ಕಳ್ ಕಚ್ಚಿ‘ ಎಂಬ ಎಕ್ಸ್‌ ಹ್ಯಾಂಡಲ್‌ನಲ್ಲಿ ವೈರಲ್ ಲೆಟರ್ ಹೆಡ್ ಪೋಸ್ಟ್ ಮಾಡಲಾಗಿತ್ತು.

ಅನೇಕ ಬಾರಿ ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಾಯ್ಡ್‌ ಅಂಡ (@AmitLeliSlayer)ಎಂಬ ಎಕ್ಸ್ ಖಾತೆಯಲ್ಲಿ ಮೇ 7, 2024ರಂದು ವೈರಲ್ ಪತ್ರವನ್ನು ಹಂಚಿಕೊಂಡು ‘ಕಾಂಗ್ರೆಸ್ ಅಂತಾರಾಷ್ಟ್ರೀಯ ಬೆಂಬಲ ಪಡೆಯುತ್ತಿದೆ’ ಎಂದು ಬರೆದುಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ಪತ್ರದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಹೆಸರನ್ನು ನೋಡಿ ಗೂಗಲ್‌ನಲ್ಲಿ ಅದರ ವಿಳಾಸ (#2-11TH STREET KHALID BIN WALEED ROAD PLOT NO. UMM HURAIR ONE DUBAI-UNITED ARAB EMIRATES)ಹುಡುಕಿದ್ದೇವೆ. ಈ ವೇಳೆ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ವಿಳಾಸವು ದುಬೈನಲ್ಲಿರುವ ಪಾಕಿಸ್ತಾನದ ಕಾನ್ಸುಲೇಟ್ ಜನರಲ್‌ನ ವೆಬ್‌ಸೈಟ್‌ನಲ್ಲಿ ಅವರ ಕಚೇರಿಯ ವಿಳಾಸವಾಗಿ ಇರುವುದು ಕಂಡು ಬಂದಿದೆ. ಇದರಿಂದ ಆ ವಿಳಾಸ ವೈರಲ್ ಪತ್ರದಲ್ಲಿರುವ ಸುನ್ನಿ ಮುಸ್ಲಿಂ ಸಂಘಟನೆಯದ್ದಲ್ಲ ಎಂದು ಗೊತ್ತಾಗಿದೆ. ಇದರ ಹೊರತಾಗಿ ವೈರಲ್ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಬಗ್ಗೆ ಅಂತರ್ಜಾಲದಲ್ಲಿ ಯಾವುದೇ ಮಾಹಿತಿ ಲಭ್ಯವಿಲ್ಲ.

ಪತ್ರದಲ್ಲಿ ಮೂರು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ. ನಾವು ಈ ಸಂಖ್ಯೆಗಳನ್ನು ಹುಡುಕಿದಾಗ, ಪತ್ರದಲ್ಲಿರುವ ಮೊದಲ ಸಂಖ್ಯೆ ದುಬೈ ಮೂಲದ ಕಾಫಿ ವಿತರಣಾ ಯಂತ್ರ ಉತ್ಪಾದನಾ ಕಂಪನಿಯಾದ ಡಾಲ್ಮೇರ್ ತನ್ನ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿರುವುದು ಕಂಡು ಬಂದಿದೆ. ಅಂದರೆ, ಈ ಸಂಖ್ಯೆ ಯಾವುದೇ ಮುಸ್ಲಿಂ ಸಂಘಟನೆಗೆ ಸೇರಿಲ್ಲ ಎಂಬುವುದು ಇದರ ಖಚಿತವಾಗಿದೆ. “ಪತ್ರದಲ್ಲಿ ಉಲ್ಲೇಖಿಸಲಾದ ಉಳಿದ 2 ಮೊಬೈಲ್ ಸಂಖ್ಯೆಗಳನ್ನು ನಾವು ಸಂಪರ್ಕಿಸಿದ್ದೇವೆ, ನಮಗೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಅಲ್ಟ್‌ ನ್ಯೂಸ್ ಹಿಂದಿ ತಿಳಿಸಿದೆ.

ಲಭ್ಯವಿರುವ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ಆದ ಮುಸ್ಲಿಂ ಸಂಘಟನೆಯ ಹೆಸರಿನ ಲೆಟರ್ ಹೆಡ್ ನಕಲಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK: ಮುಸ್ಲಿಮರ ಕಲ್ಯಾಣಕ್ಕಾಗಿ ದೇವಸ್ಥಾನಗಳ ಜಮೀನು ಮಾರುತ್ತೇವೆ ಎಂದು ತೆಲಂಗಾಣ ಸಿಎಂ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...