Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ...

FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ ಮಾಡಿರುವ ವೈರಲ್ ಪತ್ರ ನಕಲಿ

- Advertisement -
- Advertisement -

ಅಸೋಸಿಯೇಷನ್ ​​ಆಫ್ ಸುನ್ನಿ ಮುಸ್ಲಿಂ (ಸುನ್ನಿ ಮುಸ್ಲಿಂ ಮಜ್ಲಿಸ್) ಎಂಬ ಸಂಘಟನೆಯೊಂದರ ಲೆಟರ್ ಹೆಡ್‌ನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ತೆರಳುವ ದುಬೈನ ಮುಸ್ಲಿಮರಿಗೆ ಟಿಕೆಟ್ ಬುಕಿಂಗ್ ಮತ್ತು ಮುಂಗಡ ಬುಕ್ಕಿಂಗ್ ಟಿಕೆಟ್‌ನ ಸಂಪೂರ್ಣ ಹಣವನ್ನು ಈ ಸಂಘಟನೆ ನೀಡಲಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಏಪ್ರಿಲ್ 29ರ ದಿನಾಂಕದಲ್ಲಿ ಪತ್ರವನ್ನು ಮುದ್ರಿಸಲಾಗಿದೆ.

ಪತ್ರದಲ್ಲಿ ‘ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವುದು ಮತ್ತು ಮುಸ್ಲಿಮರ ನಿಜವಾದ ಹಿತೈಷಿಯಾದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಈ ಸಹಾಯದ ಉದ್ದೇಶವಾಗಿದೆ’ ಎಂದು ಹೇಳಲಾಗಿದೆ. ಈ ಪತ್ರವನ್ನು ಹಂಚಿಕೊಂಡಿರುವ ಅನೇಕರು ‘ಕಾಂಗ್ರೆಸ್ ಪಕ್ಷಕ್ಕೆ ಅಂತಾರಾಷ್ಟ್ರೀಯ ಮುಸ್ಲಿಂ ಸಂಘಟನೆಗಳ ಬೆಂಬಲ ಸಿಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಅರುಣ್ ಪುದೂರ್ ಎಂಬವರು ಮೇ 7ರಂದು ಎಕ್ಸ್‌ನಲ್ಲಿ ಈ ಪತ್ರವನ್ನು ಪೋಸ್ಟ್ ಮಾಡಿದ್ದರು. “ದುಬೈನ ಸುನ್ನಿ ಮುಸ್ಲಿಮರ ಸಂಘವು ಮತ್ತೆ ಕಾಂಗ್ರೆಸ್ ಸರ್ಕಾರ ರಚಿಸಲು ಕರ್ನಾಟಕದ ಮುಸ್ಲಿಮರಿಗೆ ಸಂಪೂರ್ಣ ಆರ್ಥಿಕ ನೆರವು ನೀಡುತ್ತಿದೆ. ಆದರೆ, ಇಲ್ಲಿನ ಹಿಂದೂಗಳು ಈ ಬಿರು ಬೇಸಿಗೆಯಲ್ಲೂ ಮನೆಯಲ್ಲಿ ಹೊದ್ದು ಮಲಗಿದ್ದಾರೆ ಅಥವಾ ಮೌಲಾನಾ ಮೋದಿ ಹಿಂದೂಗಳಿಗೆ ಏನೂ ಮಾಡಿಲ್ಲ” ಎಂದು ಸುಳ್ಳು ಹೇಳುತ್ತಿದ್ದಾರೆ” ಎಂದು ಬರೆದುಕೊಂಡಿದ್ದರು.

“ಕರ್ನಾಟಕದ ಮುಸ್ಲಿಂ ಸಂಘಟನೆ ಸೌದಿ ಅರೇಬಿಯಾದಲ್ಲಿರುವ ಭಾರತೀಯ ಮುಸ್ಲಿಮರು ತಾಯ್ನಾಡಿಗೆ ಬಂದು ಕಾಂಗ್ರೆಸ್‌ಗೆ ಮತ ಹಾಕಲು ತಗಲುವ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸುತ್ತಿದೆ” ಎಂದು ‘ಇಂದು ಮಕ್ಕಳ್ ಕಚ್ಚಿ‘ ಎಂಬ ಎಕ್ಸ್‌ ಹ್ಯಾಂಡಲ್‌ನಲ್ಲಿ ವೈರಲ್ ಲೆಟರ್ ಹೆಡ್ ಪೋಸ್ಟ್ ಮಾಡಲಾಗಿತ್ತು.

ಅನೇಕ ಬಾರಿ ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಾಯ್ಡ್‌ ಅಂಡ (@AmitLeliSlayer)ಎಂಬ ಎಕ್ಸ್ ಖಾತೆಯಲ್ಲಿ ಮೇ 7, 2024ರಂದು ವೈರಲ್ ಪತ್ರವನ್ನು ಹಂಚಿಕೊಂಡು ‘ಕಾಂಗ್ರೆಸ್ ಅಂತಾರಾಷ್ಟ್ರೀಯ ಬೆಂಬಲ ಪಡೆಯುತ್ತಿದೆ’ ಎಂದು ಬರೆದುಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ಪತ್ರದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಹೆಸರನ್ನು ನೋಡಿ ಗೂಗಲ್‌ನಲ್ಲಿ ಅದರ ವಿಳಾಸ (#2-11TH STREET KHALID BIN WALEED ROAD PLOT NO. UMM HURAIR ONE DUBAI-UNITED ARAB EMIRATES)ಹುಡುಕಿದ್ದೇವೆ. ಈ ವೇಳೆ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ವಿಳಾಸವು ದುಬೈನಲ್ಲಿರುವ ಪಾಕಿಸ್ತಾನದ ಕಾನ್ಸುಲೇಟ್ ಜನರಲ್‌ನ ವೆಬ್‌ಸೈಟ್‌ನಲ್ಲಿ ಅವರ ಕಚೇರಿಯ ವಿಳಾಸವಾಗಿ ಇರುವುದು ಕಂಡು ಬಂದಿದೆ. ಇದರಿಂದ ಆ ವಿಳಾಸ ವೈರಲ್ ಪತ್ರದಲ್ಲಿರುವ ಸುನ್ನಿ ಮುಸ್ಲಿಂ ಸಂಘಟನೆಯದ್ದಲ್ಲ ಎಂದು ಗೊತ್ತಾಗಿದೆ. ಇದರ ಹೊರತಾಗಿ ವೈರಲ್ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಬಗ್ಗೆ ಅಂತರ್ಜಾಲದಲ್ಲಿ ಯಾವುದೇ ಮಾಹಿತಿ ಲಭ್ಯವಿಲ್ಲ.

ಪತ್ರದಲ್ಲಿ ಮೂರು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ. ನಾವು ಈ ಸಂಖ್ಯೆಗಳನ್ನು ಹುಡುಕಿದಾಗ, ಪತ್ರದಲ್ಲಿರುವ ಮೊದಲ ಸಂಖ್ಯೆ ದುಬೈ ಮೂಲದ ಕಾಫಿ ವಿತರಣಾ ಯಂತ್ರ ಉತ್ಪಾದನಾ ಕಂಪನಿಯಾದ ಡಾಲ್ಮೇರ್ ತನ್ನ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿರುವುದು ಕಂಡು ಬಂದಿದೆ. ಅಂದರೆ, ಈ ಸಂಖ್ಯೆ ಯಾವುದೇ ಮುಸ್ಲಿಂ ಸಂಘಟನೆಗೆ ಸೇರಿಲ್ಲ ಎಂಬುವುದು ಇದರ ಖಚಿತವಾಗಿದೆ. “ಪತ್ರದಲ್ಲಿ ಉಲ್ಲೇಖಿಸಲಾದ ಉಳಿದ 2 ಮೊಬೈಲ್ ಸಂಖ್ಯೆಗಳನ್ನು ನಾವು ಸಂಪರ್ಕಿಸಿದ್ದೇವೆ, ನಮಗೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಅಲ್ಟ್‌ ನ್ಯೂಸ್ ಹಿಂದಿ ತಿಳಿಸಿದೆ.

ಲಭ್ಯವಿರುವ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ಆದ ಮುಸ್ಲಿಂ ಸಂಘಟನೆಯ ಹೆಸರಿನ ಲೆಟರ್ ಹೆಡ್ ನಕಲಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK: ಮುಸ್ಲಿಮರ ಕಲ್ಯಾಣಕ್ಕಾಗಿ ದೇವಸ್ಥಾನಗಳ ಜಮೀನು ಮಾರುತ್ತೇವೆ ಎಂದು ತೆಲಂಗಾಣ ಸಿಎಂ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...