Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್‌ಗೆ ಪೂರ್ಣ ಸದಸ್ಯತ್ವ ನೀಡಬೇಕೆಂಬ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದ ಕರಡು ಪರವಾಗಿ ಭಾರತ ಮತ ಚಲಾಯಿಸಿದೆ. ಭದ್ರತಾ ಮಂಡಳಿಯು ಈ ವಿಷಯವನ್ನು ಅನುಕೂಲಕರವಾಗಿ ಮರುಪರಿಶೀಲಿಸುವಂತೆ ನಿರ್ಣಯವು ಶಿಫಾರಸು ಮಾಡಿದೆ.

ಈ ನಿರ್ಣಯದ ಪರವಾಗಿ ಭಾರತ ಸೇರಿದಂತೆ ಒಟ್ಟು 143 ರಾಷ್ಟ್ರಗಳು ಮತ ಚಲಾಯಿಸಿದ್ದರೆ, 25 ರಾಷ್ಟ್ರಗಳು ಗೈರಾಗಿತ್ತು, ಒಂಬತ್ತು ರಾಷ್ಟ್ರಗಳು ನಿರ್ಣಯದ ವಿರುದ್ಧ ಮತ ಚಲಾಯಿಸಿವೆ. ನಿರ್ಣಯದ ವಿರುದ್ಧ ಅಮೆರಿಕ, ಇಸ್ರೇಲ್‌, ಪಪುವಾ ನ್ಯೂ ಗಿನಿ, ಪಲೌ, ನೌರು, ಮೈಕ್ರೋನೇಷ್ಯಾ, ಆರ್ಜೆಂಟಿನ, ಹಂಗೆರಿ, ಝೆಕಿಯಾ ಮತ ಚಲಾಯಿಸಿವೆ.

ವಿಶ್ವ ಸಂಸ್ಥೆಯ ಸದಸ್ಯತ್ವ ಪಡೆಯಲು ಫೆಲೆಸ್ತೀನ್‌ ಅರ್ಹವಾಗಿದೆ ಎಂದು ಸಂಯುಕ್ತ ಅರಬ್‌ ಸಂಸ್ಥಾನ ನಿರ್ಣಯ ಮಂಡಿಸಿದೆ. ವಿಶ್ವಸಂಸ್ಥೆ ಸನ್ನದಿನ ವಿಧಿ 4ರ ಅನ್ವಯ ಸದಸ್ಯತ್ವಕ್ಕೆ ಮಾನ್ಯತೆ ನೀಡಬೇಕು ಎಂದು ನಿರ್ಣಯ ಮಂಡಿಸಲಾಗಿತ್ತು. ಈ ನಿರ್ಣಯದ ಕುರಿತು 100ಕ್ಕೂ ಅಧಿಕ ರಾಷ್ಟ್ರೀಯ ಪ್ರತಿನಿಧಿಗಳು ಮಾತನಾಡಿದ್ದರು.

ಕಳೆದ ತಿಂಗಳು, ಸಾಮಾನ್ಯ ಸಭೆಯಲ್ಲಿ ವ್ಯಾಪಕ ಬೆಂಬಲದ ಹೊರತಾಗಿಯೂ ಭದ್ರತಾ ಮಂಡಳಿಗೆ ಸಲ್ಲಿಸಿದ ಇದೇ ರೀತಿಯ ನಿರ್ಣಯವನ್ನು ಯುನೈಟೆಡ್ ಸ್ಟೇಟ್ಸ್ ವೀಟೋ ಅಧಿಕಾರ ಚಲಾವಣೆ ಮಾಡಿ ರದ್ದುಗೊಳಿಸಿತ್ತು.  ಇದೀಗ ಯುಎಸ್ ಮತ್ತೊಮ್ಮೆ ವೀಟೋ ಅಧಿಕಾರ ಚಲಾವಣೆ ಮಾಡುವ ನಿರೀಕ್ಷೆಯಿದೆ.

1974ರಲ್ಲಿ ಪ್ಯಾಲೆಸ್ತೀನ್‌ ಲಿಬರೇಶನ್ ಆರ್ಗನೈಸೇಶನ್‌ನ್ನು ಪ್ಯಾಲೆಸ್ತೀನಿಯನ್ ಜನರ ಏಕೈಕ ಮತ್ತು ಕಾನೂನುಬದ್ಧ ಪ್ರತಿನಿಧಿಯಾಗಿ ಗುರುತಿಸಿದ ಮೊದಲ ಅರಬ್ ಅಲ್ಲದ ರಾಜ್ಯ ಭಾರತವಾಗಿದೆ. 1988ರಲ್ಲಿ ಪ್ಯಾಲೆಸ್ತೀನ್‌ ರಾಜ್ಯವನ್ನಾಗಿ ಗುರುತಿಸಿದ ದೇಶಗಳಲ್ಲಿ ಭಾರತವೂ ಒಂದಾಗಿದೆ. 1996ರಲ್ಲಿ ಭಾರತ ತನ್ನ ಪ್ರತಿನಿಧಿ ಕಚೇರಿಯನ್ನು ಕೂಡ ತೆರೆದಿದೆ.

UN ರಾಯಭಾರಿಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ರುಚಿರಾ ಕಾಂಬೋಜ್ ಅವರು ಈ ಮೊದಲು ಮಾತನಾಡಿ, ಯುಎನ್‌ನಲ್ಲಿ ಸದಸ್ಯತ್ವಕ್ಕಾಗಿ ಪ್ಯಾಲೆಸ್ತೀನ್‌ ಸಲ್ಲಿಸಿದ್ದ ಅರ್ಜಿಯನ್ನು ಭದ್ರತಾ ಮಂಡಳಿಯು ಅನುಮೋದಿಸಲಿಲ್ಲ, ಇದನ್ನು ವೀಟೋ ಬಳಸಿ ಅಮೆರಿಕ ತಡೆದಿತ್ತು ಎಂದು ಹೇಳಿದ್ದರು.

ಏಪ್ರಿಲ್‌ನಲ್ಲಿ ಪ್ಯಾಲೆಸ್ತೀನ್‌, ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್‌ಗೆ ಪತ್ರವನ್ನು ಕಳುಹಿಸಿದ್ದು, ಯುಎನ್ ಪೂರ್ಣ ಸದಸ್ಯತ್ವಕ್ಕಾಗಿ ತನ್ನ ಅರ್ಜಿಯನ್ನು ಮತ್ತೊಮ್ಮೆ ಪರಿಗಣಿಸುವಂತೆ ವಿನಂತಿಸಿದೆ. ಒಂದು ರಾಜ್ಯಕ್ಕೆ ಪೂರ್ಣ UN ಸದಸ್ಯತ್ವವನ್ನು ನೀಡಬೇಕಾದರೆ, ಅದರ ಅರ್ಜಿಯನ್ನು ಭದ್ರತಾ ಮಂಡಳಿ ಮತ್ತು ಜನರಲ್ ಅಸೆಂಬ್ಲಿ ಎರಡರಿಂದಲೂ ಅನುಮೋದಿಸಬೇಕು, ಅಲ್ಲಿ ಮೂರನೇ ಎರಡರಷ್ಟು ಸದಸ್ಯರು ಹಾಜರಿರುತ್ತಾರೆ ಮತ್ತು ರಾಜ್ಯವನ್ನು ಪೂರ್ಣ ಸದಸ್ಯರಾಗಿ ಒಪ್ಪಿಕೊಳ್ಳಲು ಮತದಾನದ ಅಗತ್ಯವಿದೆ.

ಪ್ರಸ್ತುತ, ಪ್ಯಾಲೆಸ್ತೀನ್‌ ಯುಎನ್‌ನಲ್ಲಿ “ಸದಸ್ಯರಲ್ಲದ ವೀಕ್ಷಕ ರಾಜ್ಯ” ಆಗಿದೆ, 2012ರಲ್ಲಿ ಜನರಲ್ ಅಸೆಂಬ್ಲಿಯು ಪ್ಯಾಲೆಸ್ತೀನ್‌ಗೆ ಈ ಸ್ಥಾನಮಾನವನ್ನು ನೀಡಿದೆ. ಈ ಸ್ಥಿತಿಯು ಪ್ಯಾಲೆಸ್ತೀನ್‌ಗೆ ವಿಶ್ವ ಸಂಸ್ಥೆಯ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಅವಕಾಶ ನೀಡುತ್ತದೆ ಆದರೆ ಅದು ನಿರ್ಣಯಗಳ ಬಗ್ಗೆ ಮತ ಚಲಾಯಿಸಲು ಅವಕಾಶ ಇರುವುದಿಲ್ಲ.

ಅಕ್ಟೋಬರ್ 7, 2023ರಂದು ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ನಡೆಸಿದ ದಾಳಿಗೆ ಗಾಝಾದಲ್ಲಿ ಈವರೆಗೆ 34,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಇದನ್ನು ಓದಿ: ‘ಸರ್ಜಿಕಲ್ ಸ್ಟ್ರೈಕ್’ ನಿಜವಾಗಿ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ: ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...