Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್‌ಗೆ ಪೂರ್ಣ ಸದಸ್ಯತ್ವ ನೀಡಬೇಕೆಂಬ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದ ಕರಡು ಪರವಾಗಿ ಭಾರತ ಮತ ಚಲಾಯಿಸಿದೆ. ಭದ್ರತಾ ಮಂಡಳಿಯು ಈ ವಿಷಯವನ್ನು ಅನುಕೂಲಕರವಾಗಿ ಮರುಪರಿಶೀಲಿಸುವಂತೆ ನಿರ್ಣಯವು ಶಿಫಾರಸು ಮಾಡಿದೆ.

ಈ ನಿರ್ಣಯದ ಪರವಾಗಿ ಭಾರತ ಸೇರಿದಂತೆ ಒಟ್ಟು 143 ರಾಷ್ಟ್ರಗಳು ಮತ ಚಲಾಯಿಸಿದ್ದರೆ, 25 ರಾಷ್ಟ್ರಗಳು ಗೈರಾಗಿತ್ತು, ಒಂಬತ್ತು ರಾಷ್ಟ್ರಗಳು ನಿರ್ಣಯದ ವಿರುದ್ಧ ಮತ ಚಲಾಯಿಸಿವೆ. ನಿರ್ಣಯದ ವಿರುದ್ಧ ಅಮೆರಿಕ, ಇಸ್ರೇಲ್‌, ಪಪುವಾ ನ್ಯೂ ಗಿನಿ, ಪಲೌ, ನೌರು, ಮೈಕ್ರೋನೇಷ್ಯಾ, ಆರ್ಜೆಂಟಿನ, ಹಂಗೆರಿ, ಝೆಕಿಯಾ ಮತ ಚಲಾಯಿಸಿವೆ.

ವಿಶ್ವ ಸಂಸ್ಥೆಯ ಸದಸ್ಯತ್ವ ಪಡೆಯಲು ಫೆಲೆಸ್ತೀನ್‌ ಅರ್ಹವಾಗಿದೆ ಎಂದು ಸಂಯುಕ್ತ ಅರಬ್‌ ಸಂಸ್ಥಾನ ನಿರ್ಣಯ ಮಂಡಿಸಿದೆ. ವಿಶ್ವಸಂಸ್ಥೆ ಸನ್ನದಿನ ವಿಧಿ 4ರ ಅನ್ವಯ ಸದಸ್ಯತ್ವಕ್ಕೆ ಮಾನ್ಯತೆ ನೀಡಬೇಕು ಎಂದು ನಿರ್ಣಯ ಮಂಡಿಸಲಾಗಿತ್ತು. ಈ ನಿರ್ಣಯದ ಕುರಿತು 100ಕ್ಕೂ ಅಧಿಕ ರಾಷ್ಟ್ರೀಯ ಪ್ರತಿನಿಧಿಗಳು ಮಾತನಾಡಿದ್ದರು.

ಕಳೆದ ತಿಂಗಳು, ಸಾಮಾನ್ಯ ಸಭೆಯಲ್ಲಿ ವ್ಯಾಪಕ ಬೆಂಬಲದ ಹೊರತಾಗಿಯೂ ಭದ್ರತಾ ಮಂಡಳಿಗೆ ಸಲ್ಲಿಸಿದ ಇದೇ ರೀತಿಯ ನಿರ್ಣಯವನ್ನು ಯುನೈಟೆಡ್ ಸ್ಟೇಟ್ಸ್ ವೀಟೋ ಅಧಿಕಾರ ಚಲಾವಣೆ ಮಾಡಿ ರದ್ದುಗೊಳಿಸಿತ್ತು.  ಇದೀಗ ಯುಎಸ್ ಮತ್ತೊಮ್ಮೆ ವೀಟೋ ಅಧಿಕಾರ ಚಲಾವಣೆ ಮಾಡುವ ನಿರೀಕ್ಷೆಯಿದೆ.

1974ರಲ್ಲಿ ಪ್ಯಾಲೆಸ್ತೀನ್‌ ಲಿಬರೇಶನ್ ಆರ್ಗನೈಸೇಶನ್‌ನ್ನು ಪ್ಯಾಲೆಸ್ತೀನಿಯನ್ ಜನರ ಏಕೈಕ ಮತ್ತು ಕಾನೂನುಬದ್ಧ ಪ್ರತಿನಿಧಿಯಾಗಿ ಗುರುತಿಸಿದ ಮೊದಲ ಅರಬ್ ಅಲ್ಲದ ರಾಜ್ಯ ಭಾರತವಾಗಿದೆ. 1988ರಲ್ಲಿ ಪ್ಯಾಲೆಸ್ತೀನ್‌ ರಾಜ್ಯವನ್ನಾಗಿ ಗುರುತಿಸಿದ ದೇಶಗಳಲ್ಲಿ ಭಾರತವೂ ಒಂದಾಗಿದೆ. 1996ರಲ್ಲಿ ಭಾರತ ತನ್ನ ಪ್ರತಿನಿಧಿ ಕಚೇರಿಯನ್ನು ಕೂಡ ತೆರೆದಿದೆ.

UN ರಾಯಭಾರಿಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ರುಚಿರಾ ಕಾಂಬೋಜ್ ಅವರು ಈ ಮೊದಲು ಮಾತನಾಡಿ, ಯುಎನ್‌ನಲ್ಲಿ ಸದಸ್ಯತ್ವಕ್ಕಾಗಿ ಪ್ಯಾಲೆಸ್ತೀನ್‌ ಸಲ್ಲಿಸಿದ್ದ ಅರ್ಜಿಯನ್ನು ಭದ್ರತಾ ಮಂಡಳಿಯು ಅನುಮೋದಿಸಲಿಲ್ಲ, ಇದನ್ನು ವೀಟೋ ಬಳಸಿ ಅಮೆರಿಕ ತಡೆದಿತ್ತು ಎಂದು ಹೇಳಿದ್ದರು.

ಏಪ್ರಿಲ್‌ನಲ್ಲಿ ಪ್ಯಾಲೆಸ್ತೀನ್‌, ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್‌ಗೆ ಪತ್ರವನ್ನು ಕಳುಹಿಸಿದ್ದು, ಯುಎನ್ ಪೂರ್ಣ ಸದಸ್ಯತ್ವಕ್ಕಾಗಿ ತನ್ನ ಅರ್ಜಿಯನ್ನು ಮತ್ತೊಮ್ಮೆ ಪರಿಗಣಿಸುವಂತೆ ವಿನಂತಿಸಿದೆ. ಒಂದು ರಾಜ್ಯಕ್ಕೆ ಪೂರ್ಣ UN ಸದಸ್ಯತ್ವವನ್ನು ನೀಡಬೇಕಾದರೆ, ಅದರ ಅರ್ಜಿಯನ್ನು ಭದ್ರತಾ ಮಂಡಳಿ ಮತ್ತು ಜನರಲ್ ಅಸೆಂಬ್ಲಿ ಎರಡರಿಂದಲೂ ಅನುಮೋದಿಸಬೇಕು, ಅಲ್ಲಿ ಮೂರನೇ ಎರಡರಷ್ಟು ಸದಸ್ಯರು ಹಾಜರಿರುತ್ತಾರೆ ಮತ್ತು ರಾಜ್ಯವನ್ನು ಪೂರ್ಣ ಸದಸ್ಯರಾಗಿ ಒಪ್ಪಿಕೊಳ್ಳಲು ಮತದಾನದ ಅಗತ್ಯವಿದೆ.

ಪ್ರಸ್ತುತ, ಪ್ಯಾಲೆಸ್ತೀನ್‌ ಯುಎನ್‌ನಲ್ಲಿ “ಸದಸ್ಯರಲ್ಲದ ವೀಕ್ಷಕ ರಾಜ್ಯ” ಆಗಿದೆ, 2012ರಲ್ಲಿ ಜನರಲ್ ಅಸೆಂಬ್ಲಿಯು ಪ್ಯಾಲೆಸ್ತೀನ್‌ಗೆ ಈ ಸ್ಥಾನಮಾನವನ್ನು ನೀಡಿದೆ. ಈ ಸ್ಥಿತಿಯು ಪ್ಯಾಲೆಸ್ತೀನ್‌ಗೆ ವಿಶ್ವ ಸಂಸ್ಥೆಯ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಅವಕಾಶ ನೀಡುತ್ತದೆ ಆದರೆ ಅದು ನಿರ್ಣಯಗಳ ಬಗ್ಗೆ ಮತ ಚಲಾಯಿಸಲು ಅವಕಾಶ ಇರುವುದಿಲ್ಲ.

ಅಕ್ಟೋಬರ್ 7, 2023ರಂದು ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ನಡೆಸಿದ ದಾಳಿಗೆ ಗಾಝಾದಲ್ಲಿ ಈವರೆಗೆ 34,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಇದನ್ನು ಓದಿ: ‘ಸರ್ಜಿಕಲ್ ಸ್ಟ್ರೈಕ್’ ನಿಜವಾಗಿ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ: ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...