Homeಮುಖಪುಟಬಿಜೆಪಿ ಮತ್ತೆ ಗೆದ್ದರೆ, ಮೋದಿ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಕೇಜ್ರಿವಾಲ್‌

ಬಿಜೆಪಿ ಮತ್ತೆ ಗೆದ್ದರೆ, ಮೋದಿ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಕೇಜ್ರಿವಾಲ್‌

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ಕೇಜ್ರಿವಾಲ್ ಬಿಜೆಪಿ ಮತ್ತು ಮೋದಿ ಸರಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದು, ಸರ್ವಾಧಿಕಾರಿ’ ಮೋದಿ ‘ಒಂದು ರಾಷ್ಟ್ರ, ಒಂದು ನಾಯಕ’ ವ್ಯವಸ್ಥೆಯನ್ನು ಬಯಸುತ್ತಿದ್ದಾರೆ, ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಹೇಳಿದ್ದಾರೆ.

ಶುಕ್ರವಾರ ಸುಪ್ರೀಂಕೋರ್ಟ್‌ನ ಆದೇಶದ ಮೇರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ಕೇಜ್ರಿವಾಲ್ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡಿದ್ದು, ನಿಮ್ಮ ಮುಂದಿನ ಪ್ರಧಾನಿ ಯಾರು ಎಂದು ಬಿಜೆಪಿಗರನ್ನು ಕೇಳಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ 2025ರ ನಂತರ ನರೇಂದ್ರ ಮೋದಿ ಅಲ್ಲ, ಅಮಿತ್ ಶಾ ದೇಶವನ್ನು ಮುನ್ನಡೆಸುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿಗರು ನಿಮ್ಮ ಪ್ರಧಾನಿ ಅಭ್ಯರ್ಥಿ ಯಾರು? ಎಂದು ಇಂಡಿಯಾ ಮೈತ್ರಿಕೂಟವನ್ನು ಕೇಳುತ್ತಾರೆ, ನಾನು ಬಿಜೆಪಿಯವರನ್ನು ಕೇಳುತ್ತೇನೆ, ನಿಮ್ಮ ಪ್ರಧಾನಿ ಯಾರು? ಮೋದಿ ಮುಂದಿನ ಸೆಪ್ಟೆಂಬರ್‌ನಲ್ಲಿ 75 ವರ್ಷಗಳನ್ನು ಪೂರೈಸುತ್ತಿದ್ದಾರೆ. 75 ವರ್ಷ ತುಂಬಿದ ಪಕ್ಷದ ಸದಸ್ಯರು ನಿವೃತ್ತಿಯಾಗಬೇಕು ಎಂಬ ನಿಯಮ ರೂಪಿಸಿದವರು ಅವರೇ, ಮುಂದಿನ ವರ್ಷ ಅವರು ನಿವೃತ್ತಿಯಾಗಬೇಕಿದೆ. ಮೋದಿಯವರ ಭರವಸೆಗಳನ್ನು ಯಾರು ಪೂರೈಸುತ್ತಾರೆ? ಅಮಿತ್ ಶಾ ಮಾಡುತ್ತಾರಾ? ನೀವು ಮತ ಹಾಕಲು ಹೊರಟಾಗ, ನೀವು ಅಮಿತ್ ಶಾಗೆ ಮತ ಹಾಕುತ್ತಿದ್ದೀರಿ, ಮೋದಿಗೆ ಅಲ್ಲ ಎಂಬುವುದನ್ನು ಮರೆಯಬೇಡಿ ಎಂದು ಹೇಳಿದ್ದಾರೆ.

ಮೋದಿ ಅತ್ಯಂತ ಅಪಾಯಕಾರಿ ಯೋಜನೆಯನ್ನು ಹೊಂದಿದ್ದಾರೆ, ಅವರು ರಾಜ್ಯ ಚುನಾವಣೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಜೆಪಿಯ ಹಿರಿಯ ನಾಯಕರನ್ನು ಬದಿಗೆ ಸರಿಸುತ್ತಿದ್ದಾರೆ. ಮೋದಿ-ಒಂದು  ರಾಷ್ಟ್ರ, ಒಂದು ನಾಯಕ-ಅಪಾಯಕಾರಿ ಯೋಜನೆಯನ್ನು ಹೊಂದಿದ್ದಾರೆ. ಅವರು ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸುತ್ತಾರೆ ಮತ್ತು ಎಲ್ಲಾ ಹಿರಿಯ ಬಿಜೆಪಿ ನಾಯಕರನ್ನು ಅಧಿಕಾರದಿಂದ ದೂರವಿಡುತ್ತಾರೆ, ವಸುಂಧರಾ ರಾಜೆ, ಶಿವರಾಜ್ ಚೌಹಾಣ್ ಅವರನ್ನು ನೋಡಿ..ಈಗ ಯೋಗಿ ಆದಿತ್ಯನಾಥ್ ಸರದಿ, ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮೋದಿ ಉತ್ತರಪ್ರದೇಶ ಮುಖ್ಯಮಂತ್ರಿಯನ್ನು ಬದಲಾಯಿಸುತ್ತಾರೆ.

ನಾನು ದೇಶದ 140 ಕೋಟಿ ಜನರಲ್ಲಿ ಭಿಕ್ಷೆ ಬೇಡಲು ಬಂದಿದ್ದೇನೆ. ಸರ್ವಾಧಿಕಾರದಿಂದ ನನ್ನ ದೇಶವನ್ನು ಉಳಿಸಿ, ಸುಪ್ರೀಂಕೋರ್ಟ್ ನನಗೆ 21 ದಿನಗಳನ್ನು ನೀಡಿದೆ. ಒಂದು ದಿನ 24 ಗಂಟೆಗಳು ಆದರೆ ನಾನು 36 ಗಂಟೆಗಳ ಕಾಲ ಕೆಲಸ ಮಾಡುತ್ತೇನೆ. ನನ್ನ ಸಂಪೂರ್ಣ ಜೀವ ನನ್ನ ದೇಶಕ್ಕೆ ಸಮರ್ಪಿತವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಗರು ನನ್ನನ್ನು ಜೈಲಿಗೆ ಕಳುಹಿಸಿದರು, ಪ್ರಧಾನಿ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಹೇಳುತ್ತಾರೆ. ಮತ್ತೊಂದೆಡೆ ಅವರು ತಮ್ಮ ಪಕ್ಷಕ್ಕೆ ಎಲ್ಲಾ ಭ್ರಷ್ಟರನ್ನು ಸ್ವಾಗತಿಸಿದ್ದಾರೆ, ನೀವು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಬಯಸಿದರೆ, ಅರವಿಂದ್ ಕೇಜ್ರಿವಾಲ್ ಅವರಿಂದ ಕಲಿಯಿರಿ. 2015ರಲ್ಲಿ ನಾವು ಸರ್ಕಾರ ರಚಿಸಿದಾಗ ನನ್ನ ಸಚಿವರೊಬ್ಬರು ಅಂಗಡಿಯವನಿಗೆ 5 ಲಕ್ಷ ರೂಪಾಯಿ ಕೇಳುತ್ತಿರುವ ಆಡಿಯೋವನ್ನು ಯಾರೋ ನನಗೆ ಕಳುಹಿಸಿದ್ದರು. ಅದರ ಬಗ್ಗೆ ಯಾರಿಗೂ ತಿಳಿದಿರಲಿಲ್ಲ, ಆದರೆ ನಾನು ಆ ಕೇಸ್‌ನ್ನು ಸಿಬಿಐಗೆ ಒಪ್ಪಿಸಿದೆ, ನೀವು ಏನು ಮಾಡಿದ್ದೀರಿ? ಪಕ್ಷಕ್ಕೆ ಎಲ್ಲಾ ಭ್ರಷ್ಟರನ್ನು ನೀವು ಸ್ವಾಗತಿಸುತ್ತೀರಿ ಮತ್ತು ನಿಮ್ಮನ್ನು ಭ್ರಷ್ಟಾಚಾರದ ವಿರುದ್ಧ ಹೋರಾಟಗಾರ ಎಂದು ಕರೆಯುವ ಧೈರ್ಯವಿದೆಯೇ? ನನ್ನನ್ನು ಬಂಧಿಸುವ ಮೂಲಕ ಬಿಜೆಪಿಯವರು ಯಾವುದೇ ಕೇಸು ಇಲ್ಲದಿದ್ದರೂ ಯಾರನ್ನು ಬೇಕಾದರೂ ಬಂಧಿಸಬಹುದು ಎಂಬ ಸಂದೇಶವನ್ನು ನೀಡಿದ್ದಾರೆ ಎಂದು ಕೇಜ್ರವಾಲ್‌ ಹೇಳಿದ್ದಾರೆ.

ನನಗೆ ಹುದ್ದೆಗಳ ಮೇಲೆ ಪ್ರೀತಿ ಇಲ್ಲ, ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ 49 ದಿನಗಳಲ್ಲಿ ರಾಜೀನಾಮೆ ನೀಡಿದ್ದೆ, ನನ್ನನ್ನು ಬಂಧಿಸಿದಾಗ ನಾನೇಕೆ ರಾಜೀನಾಮೆ ನೀಡಲಿಲ್ಲ? ಎಎಪಿ ದೆಹಲಿಯನ್ನು ಅಭೂತಪೂರ್ವ ಅಂತರದಿಂದ ಗೆದ್ದಿದೆ. ಮುಂದಿನ 20 ವರ್ಷಗಳ ಕಾಲ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಅವರಿಗೆ ತಿಳಿದಿದೆ. ನಾನು ರಾಜೀನಾಮೆ ನೀಡಿ ಎಎಪಿ ಸರ್ಕಾರ ಪತನವಾಗುವಂತೆ ಪಿತೂರಿ ನಡೆಸಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ ಮತ್ತು ಜೈಲಿನಿಂದ ಸರ್ಕಾರವನ್ನು ನಡೆಸುತ್ತೇನೆ ಎಂದು ಹೇಳಿದ್ದೇನೆ. ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಕೂಡ ರಾಜೀನಾಮೆ ನೀಡಬಾರದಿತ್ತು ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ಇದನ್ನು ಓದಿ: ‘ಸರ್ಜಿಕಲ್ ಸ್ಟ್ರೈಕ್’ ನಿಜವಾಗಿ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ: ರೇವಂತ್ ರೆಡ್ಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...