Homeಮುಖಪುಟಬಿಜೆಪಿ ಮತ್ತೆ ಗೆದ್ದರೆ, ಮೋದಿ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಕೇಜ್ರಿವಾಲ್‌

ಬಿಜೆಪಿ ಮತ್ತೆ ಗೆದ್ದರೆ, ಮೋದಿ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಕೇಜ್ರಿವಾಲ್‌

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ಕೇಜ್ರಿವಾಲ್ ಬಿಜೆಪಿ ಮತ್ತು ಮೋದಿ ಸರಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದು, ಸರ್ವಾಧಿಕಾರಿ’ ಮೋದಿ ‘ಒಂದು ರಾಷ್ಟ್ರ, ಒಂದು ನಾಯಕ’ ವ್ಯವಸ್ಥೆಯನ್ನು ಬಯಸುತ್ತಿದ್ದಾರೆ, ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಹೇಳಿದ್ದಾರೆ.

ಶುಕ್ರವಾರ ಸುಪ್ರೀಂಕೋರ್ಟ್‌ನ ಆದೇಶದ ಮೇರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ಕೇಜ್ರಿವಾಲ್ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡಿದ್ದು, ನಿಮ್ಮ ಮುಂದಿನ ಪ್ರಧಾನಿ ಯಾರು ಎಂದು ಬಿಜೆಪಿಗರನ್ನು ಕೇಳಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ 2025ರ ನಂತರ ನರೇಂದ್ರ ಮೋದಿ ಅಲ್ಲ, ಅಮಿತ್ ಶಾ ದೇಶವನ್ನು ಮುನ್ನಡೆಸುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿಗರು ನಿಮ್ಮ ಪ್ರಧಾನಿ ಅಭ್ಯರ್ಥಿ ಯಾರು? ಎಂದು ಇಂಡಿಯಾ ಮೈತ್ರಿಕೂಟವನ್ನು ಕೇಳುತ್ತಾರೆ, ನಾನು ಬಿಜೆಪಿಯವರನ್ನು ಕೇಳುತ್ತೇನೆ, ನಿಮ್ಮ ಪ್ರಧಾನಿ ಯಾರು? ಮೋದಿ ಮುಂದಿನ ಸೆಪ್ಟೆಂಬರ್‌ನಲ್ಲಿ 75 ವರ್ಷಗಳನ್ನು ಪೂರೈಸುತ್ತಿದ್ದಾರೆ. 75 ವರ್ಷ ತುಂಬಿದ ಪಕ್ಷದ ಸದಸ್ಯರು ನಿವೃತ್ತಿಯಾಗಬೇಕು ಎಂಬ ನಿಯಮ ರೂಪಿಸಿದವರು ಅವರೇ, ಮುಂದಿನ ವರ್ಷ ಅವರು ನಿವೃತ್ತಿಯಾಗಬೇಕಿದೆ. ಮೋದಿಯವರ ಭರವಸೆಗಳನ್ನು ಯಾರು ಪೂರೈಸುತ್ತಾರೆ? ಅಮಿತ್ ಶಾ ಮಾಡುತ್ತಾರಾ? ನೀವು ಮತ ಹಾಕಲು ಹೊರಟಾಗ, ನೀವು ಅಮಿತ್ ಶಾಗೆ ಮತ ಹಾಕುತ್ತಿದ್ದೀರಿ, ಮೋದಿಗೆ ಅಲ್ಲ ಎಂಬುವುದನ್ನು ಮರೆಯಬೇಡಿ ಎಂದು ಹೇಳಿದ್ದಾರೆ.

ಮೋದಿ ಅತ್ಯಂತ ಅಪಾಯಕಾರಿ ಯೋಜನೆಯನ್ನು ಹೊಂದಿದ್ದಾರೆ, ಅವರು ರಾಜ್ಯ ಚುನಾವಣೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಜೆಪಿಯ ಹಿರಿಯ ನಾಯಕರನ್ನು ಬದಿಗೆ ಸರಿಸುತ್ತಿದ್ದಾರೆ. ಮೋದಿ-ಒಂದು  ರಾಷ್ಟ್ರ, ಒಂದು ನಾಯಕ-ಅಪಾಯಕಾರಿ ಯೋಜನೆಯನ್ನು ಹೊಂದಿದ್ದಾರೆ. ಅವರು ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸುತ್ತಾರೆ ಮತ್ತು ಎಲ್ಲಾ ಹಿರಿಯ ಬಿಜೆಪಿ ನಾಯಕರನ್ನು ಅಧಿಕಾರದಿಂದ ದೂರವಿಡುತ್ತಾರೆ, ವಸುಂಧರಾ ರಾಜೆ, ಶಿವರಾಜ್ ಚೌಹಾಣ್ ಅವರನ್ನು ನೋಡಿ..ಈಗ ಯೋಗಿ ಆದಿತ್ಯನಾಥ್ ಸರದಿ, ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮೋದಿ ಉತ್ತರಪ್ರದೇಶ ಮುಖ್ಯಮಂತ್ರಿಯನ್ನು ಬದಲಾಯಿಸುತ್ತಾರೆ.

ನಾನು ದೇಶದ 140 ಕೋಟಿ ಜನರಲ್ಲಿ ಭಿಕ್ಷೆ ಬೇಡಲು ಬಂದಿದ್ದೇನೆ. ಸರ್ವಾಧಿಕಾರದಿಂದ ನನ್ನ ದೇಶವನ್ನು ಉಳಿಸಿ, ಸುಪ್ರೀಂಕೋರ್ಟ್ ನನಗೆ 21 ದಿನಗಳನ್ನು ನೀಡಿದೆ. ಒಂದು ದಿನ 24 ಗಂಟೆಗಳು ಆದರೆ ನಾನು 36 ಗಂಟೆಗಳ ಕಾಲ ಕೆಲಸ ಮಾಡುತ್ತೇನೆ. ನನ್ನ ಸಂಪೂರ್ಣ ಜೀವ ನನ್ನ ದೇಶಕ್ಕೆ ಸಮರ್ಪಿತವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಗರು ನನ್ನನ್ನು ಜೈಲಿಗೆ ಕಳುಹಿಸಿದರು, ಪ್ರಧಾನಿ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಹೇಳುತ್ತಾರೆ. ಮತ್ತೊಂದೆಡೆ ಅವರು ತಮ್ಮ ಪಕ್ಷಕ್ಕೆ ಎಲ್ಲಾ ಭ್ರಷ್ಟರನ್ನು ಸ್ವಾಗತಿಸಿದ್ದಾರೆ, ನೀವು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಬಯಸಿದರೆ, ಅರವಿಂದ್ ಕೇಜ್ರಿವಾಲ್ ಅವರಿಂದ ಕಲಿಯಿರಿ. 2015ರಲ್ಲಿ ನಾವು ಸರ್ಕಾರ ರಚಿಸಿದಾಗ ನನ್ನ ಸಚಿವರೊಬ್ಬರು ಅಂಗಡಿಯವನಿಗೆ 5 ಲಕ್ಷ ರೂಪಾಯಿ ಕೇಳುತ್ತಿರುವ ಆಡಿಯೋವನ್ನು ಯಾರೋ ನನಗೆ ಕಳುಹಿಸಿದ್ದರು. ಅದರ ಬಗ್ಗೆ ಯಾರಿಗೂ ತಿಳಿದಿರಲಿಲ್ಲ, ಆದರೆ ನಾನು ಆ ಕೇಸ್‌ನ್ನು ಸಿಬಿಐಗೆ ಒಪ್ಪಿಸಿದೆ, ನೀವು ಏನು ಮಾಡಿದ್ದೀರಿ? ಪಕ್ಷಕ್ಕೆ ಎಲ್ಲಾ ಭ್ರಷ್ಟರನ್ನು ನೀವು ಸ್ವಾಗತಿಸುತ್ತೀರಿ ಮತ್ತು ನಿಮ್ಮನ್ನು ಭ್ರಷ್ಟಾಚಾರದ ವಿರುದ್ಧ ಹೋರಾಟಗಾರ ಎಂದು ಕರೆಯುವ ಧೈರ್ಯವಿದೆಯೇ? ನನ್ನನ್ನು ಬಂಧಿಸುವ ಮೂಲಕ ಬಿಜೆಪಿಯವರು ಯಾವುದೇ ಕೇಸು ಇಲ್ಲದಿದ್ದರೂ ಯಾರನ್ನು ಬೇಕಾದರೂ ಬಂಧಿಸಬಹುದು ಎಂಬ ಸಂದೇಶವನ್ನು ನೀಡಿದ್ದಾರೆ ಎಂದು ಕೇಜ್ರವಾಲ್‌ ಹೇಳಿದ್ದಾರೆ.

ನನಗೆ ಹುದ್ದೆಗಳ ಮೇಲೆ ಪ್ರೀತಿ ಇಲ್ಲ, ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ 49 ದಿನಗಳಲ್ಲಿ ರಾಜೀನಾಮೆ ನೀಡಿದ್ದೆ, ನನ್ನನ್ನು ಬಂಧಿಸಿದಾಗ ನಾನೇಕೆ ರಾಜೀನಾಮೆ ನೀಡಲಿಲ್ಲ? ಎಎಪಿ ದೆಹಲಿಯನ್ನು ಅಭೂತಪೂರ್ವ ಅಂತರದಿಂದ ಗೆದ್ದಿದೆ. ಮುಂದಿನ 20 ವರ್ಷಗಳ ಕಾಲ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಅವರಿಗೆ ತಿಳಿದಿದೆ. ನಾನು ರಾಜೀನಾಮೆ ನೀಡಿ ಎಎಪಿ ಸರ್ಕಾರ ಪತನವಾಗುವಂತೆ ಪಿತೂರಿ ನಡೆಸಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ ಮತ್ತು ಜೈಲಿನಿಂದ ಸರ್ಕಾರವನ್ನು ನಡೆಸುತ್ತೇನೆ ಎಂದು ಹೇಳಿದ್ದೇನೆ. ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಕೂಡ ರಾಜೀನಾಮೆ ನೀಡಬಾರದಿತ್ತು ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ಇದನ್ನು ಓದಿ: ‘ಸರ್ಜಿಕಲ್ ಸ್ಟ್ರೈಕ್’ ನಿಜವಾಗಿ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ: ರೇವಂತ್ ರೆಡ್ಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...