Homeಮುಖಪುಟಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

ಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದ ಹಾಸ್ಯನಟ ಮತ್ತು ರಾಜಕಾರಣಿ ಶ್ಯಾಮ್ ರಂಗೀಲಾ ತಾನು ನಾಮಪತ್ರದ ಅರ್ಜಿಯನ್ನು ಪಡೆಯಲು ತೊಂದರೆ ಎದುರಿಸುತ್ತಿದ್ದೇನೆ, ಅಧಿಕಾರಿಗಳು ನಾಮಪತ್ರದ ಅರ್ಜಿಯನ್ನು ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನಾಮಪತ್ರದ ಅರ್ಜಿ ವಿಚಾರದಲ್ಲಿ ಅಧಿಕಾರಿಗಳು ತೊಂದರೆ ನೀಡುತ್ತಿರುವುದರಿಂದ ನನಗೆ ತೊಂದರೆಯಾಗುತ್ತಿದೆ. ಈ ವಿಚಾರದಲ್ಲಿ ಭಾರತೀಯ ಚುನಾವಣಾ ಆಯೋಗ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ವಾರಣಾಸಿಯಲ್ಲಿ ನಾಮಪತ್ರದ ಕುರಿತು ಅರ್ಜಿಗಳನ್ನು ಪಡೆಯುವ ಪ್ರಕ್ರಿಯೆಯು ತುಂಬಾ ಜಟಿಲವಾಗಿದೆ, ಫಾರ್ಮ್ ಪಡೆಯುವುದು ತುಂಬಾ ಕಷ್ಟಕರವಾಗಿದೆ. ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತ ನಂತರ, ಚುನಾವಣಾ ಕಚೇರಿಯು ನೀವು ಮೊದಲು 10 ಪ್ರಸ್ತಾವನೆದಾರರ ಸಹಿ ಸೇರಿದಂತೆ ಆಧಾರ್ ಕಾರ್ಡ್‌ಗಳ ನಕಲು ಮತ್ತು ಅವರ ಫೋನ್ ಸಂಖ್ಯೆಗಳನ್ನು ಸಲ್ಲಿಸಬೇಕು ಎಂದು ಹೇಳಿದ್ದಾರೆ, ಆಗ ಮಾತ್ರ ನೀವು ಅರ್ಜಿಗಾಗಿ ಖಜಾನೆ ಚಲನ್ ಫಾರ್ಮ್‌ನ್ನು ಪಡೆಯುತ್ತೀರಿ ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ಶ್ಯಾಮ್ ರಂಗೀಲಾ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಈ ನಿಬಂಧನೆಯು ಚುನಾವಣಾ ಆಯೋಗದ ನಿಯಮಗಳಿಗೆ ಅನುಸಾರವಾಗಿಲ್ಲ. ಈ ಬಗ್ಗೆ ವಾರಣಾಸಿ ಜಿಲ್ಲಾಡಳಿತಕ್ಕೆ ಸರಿಯಾದ ನಿರ್ದೇಶನಗಳನ್ನು ನೀಡಬೇಕು, ಆ ಮೂಲಕ ಈ ದೇಶದ ಪ್ರಜಾತಂತ್ರದ ಕುರಿತು ನಮಗಿರುವ ವಿಶ್ವಾಸವನ್ನು ಬಲಪಡಿಸಬೇಕು ಎಂದು ಗೌರವಾನ್ವಿತ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಂಗೀಲಾ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ವಿಡಿಯೋದಲ್ಲಿ, ನಾಮಪತ್ರವನ್ನು ಪಡೆಯುವ ಸಂದರ್ಭದಲ್ಲಿ ಎದುರಿಸಿದ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ ಮತ್ತು ಮೇ 13ರ ಸೋಮವಾರ ಮತ್ತೆ ನಾಮಪತ್ರದ ಅರ್ಜಿಯನ್ನು ಪಡೆಯಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ವಾರಣಾಸಿ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿ ನಾಲ್ಕು ದಿನಗಳಾಗಿವೆ. ರಂಗೀಲಾ ಅವರಿಗೆ ನಾಮಪತ್ರ ಸಲ್ಲಿಸಲು ಮೇ 14ರವರೆಗೆ ಕಾಲಾವಕಾಶವಿದೆ. ಪ್ರಧಾನಿ ಮೋದಿ ಹೊರತುಪಡಿಸಿ ಕಾಂಗ್ರೆಸ್-ಎಸ್‌ಪಿ ಮೈತ್ರಿಕೂಟದ ಇಂಡಿಯಾ ಮೈತ್ರಿಕೂಟದಿಂದ ಅಜಯ್ ರೈ ಮತ್ತು ಬಿಎಸ್‌ಪಿಯ ಅತಹರ್ ಜಮಾಲ್ ಲಾರಿ ಕೂಡ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ವಾರಣಾಸಿಯಲ್ಲಿ ಜೂ.1ರಂದು 7ನೇ ಮತ್ತು ಅಂತಿಮ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನು ಓದಿ: ಎನ್‌ಡಿಎ ಪ್ರಚಾರ ಸಭೆಗೆ 500ರೂ. ಹಣದ ಆಮಿಷ ನೀಡಿ ಕರೆದುಕೊಂಡು ಬಂದು ವಂಚನೆ: ಮಹಿಳೆಯರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...