Homeಕರ್ನಾಟಕವಿಧಾನ ಪರಿಷತ್‌ಗೆ ಕೈತಪ್ಪಿದ ಟಿಕೆಟ್‌: ಬಿಜೆಪಿ ವಿರುದ್ಧ ರಘುಪತಿ ಭಟ್‌ ಅಸಮಾಧಾನ

ವಿಧಾನ ಪರಿಷತ್‌ಗೆ ಕೈತಪ್ಪಿದ ಟಿಕೆಟ್‌: ಬಿಜೆಪಿ ವಿರುದ್ಧ ರಘುಪತಿ ಭಟ್‌ ಅಸಮಾಧಾನ

- Advertisement -
- Advertisement -

ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದ ಬಿಜೆಪಿ ನಾಯಕ ರಘುಪತಿ ಭಟ್‌ ಇದೀಗ ವಿಧಾನ ಪರಿಷತ್‌ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ.

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ನಿನ್ನೆ ಪ್ರಕಟಿಸಿತ್ತು. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಅಮರನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ಉಡುಪಿ ಕ್ಷೇತ್ರದಲ್ಲಿ ಶಾಸಕರಾಗಿದ್ದ ರಘುಪತಿ ಭಟ್‌ಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ನೀಡದೆ ಯಶ್ಪಲ್‌ ಸುವರ್ಣಾಗೆ ಟಿಕೆಟ್‌ ನೀಡಲಾಗಿತ್ತು. ಇದರಿಂದ ರಘಪತಿ ಭಟ್‌ ಸಾರ್ವಜನಿಕವಾಗಿ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷ ‌ನಡೆಸಿಕೊಂಡ ರೀತಿ ಸಾಕಷ್ಟು ಬೇಸರ ತಂದಿದೆ ಎಂದು ಹೇಳಿದ್ದರು. ರಘುಪತಿ ಭಟ್‌ ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅವರಿಗೆ ಪರಿಷತ್‌ ಟಿಕೆಟ್‌ ನೀಡುವುದಾಗಿ ಹೇಳಿ ಬಿಜೆಪಿ ಹೈಕಮಾಂಡ್‌ ಸಮಾಧಾನ ಮಾಡಿತ್ತು ಎಂದು ಹೇಳಲಾಗಿದೆ. ಆ ಬಳಿಕ ಅವರು ಪರಿಷತ್‌ ಚುನಾವಣೆ ಸ್ಪರ್ಧೆಗೆ ಸಿದ್ಧತೆ ಮಾಡುತ್ತಿದ್ದರು. ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರನ್ನು ಅವರು ಪಕ್ಷಕ್ಕೆ ಸೇರ್ಪಡೆಗೊಳಿಸಿದ್ದರು. ಆದರೆ ಇದೀಗ ಅವರಿಗೆ ಟಿಕೆಟ್‌ ಕೈತಪ್ಪಿದ್ದು ಅಸಮಾಧಾನಕ್ಕೆ ಕಾರಣವಾಗಿದೆ.

ರಘುಪತಿ ಭಟ್ಫೇಸ್ಬುಕ್ಪೋಸ್ಟ್ನಲ್ಲಿ ಏನೇನಿದೆ?

ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ. ಪ್ರಸ್ತುತ ಸ್ಥಿತಿಯಲ್ಲಿ ಬಿಜೆಪಿಯ ನಿಲುವಿನಿಂದ ವಿಚಲಿತನಾಗಿದ್ದೇನೆ.

1994ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು.

ನನ್ನ ಹೆಸರಿನ ಬದಲು ಬೇರೆ ಹೆಸರು ಘೋಷಣೆಯಾಗಿದ್ದು, ಟಿವಿ ಮೂಲಕ ತಿಳಿಯಿತು. ಆದರೆ ನಾನು ವಿಚಲಿತನಾಗದೆ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ನನಗೆ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಹಿರಿಯರು ಭರವಸೆ ನೀಡಿದ್ದರು. ಆ ಪ್ರಕಾರ ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ್ದೇನೆ. ಅಲ್ಲದೆ ಪಕ್ಷ ನೀಡಿದ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಭಾರಿ ಜವಾಬ್ದಾರಿಯನ್ನು 40 ದಿನಗಳ ಕಾಲ ಶಿವಮೊಗ್ಗದಲ್ಲಿ ಉಳಿದು ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ.

ಈಗ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಆದರೆ ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರ ನೀಡದೆ ಮಾಡಿದ ಅನ್ಯಾಯಕ್ಕೆ ನ್ಯಾಯ ಕೊಡುವವರು ಯಾರು?ಪಕ್ಷ ತೆಗೆದುಕೊಂಡಿರುವ ಈ ನಿಲುವಿಂದ ವಿಚಲಿತನಾಗಿದ್ದೇನೆ. ಇದು ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪಕ್ಷದ ಅಭಿಮಾನಿಗಳು ಚಿಂತಿಸುವ ಕಾಲ, ಚರ್ಚಿಸೋಣ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ: ಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...