Homeಮುಖಪುಟಮೋದಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸದಿದ್ದರೆ ದೇಶವು 'ಕರಾಳ ದಿನ'ಗಳನ್ನು ನೋಡಲಿದೆ: ಉದ್ಧವ್ ಠಾಕ್ರೆ

ಮೋದಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸದಿದ್ದರೆ ದೇಶವು ‘ಕರಾಳ ದಿನ’ಗಳನ್ನು ನೋಡಲಿದೆ: ಉದ್ಧವ್ ಠಾಕ್ರೆ

- Advertisement -
- Advertisement -

ಮೋದಿ ಸರ್ಕಾರವನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸದಿದ್ದರೆ ದೇಶವು “ಕರಾಳ ದಿನಗಳನ್ನು” ನೋಡಲಿದೆ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಶಿವಸೇನಾ ಪಕ್ಷದ ಮುಖವಾಣಿ ‘ಸಾಮ್ನಾ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಭಾರತದ ಜನರು ತಮ್ಮ ನಾಯಕರ ಭವಿಷ್ಯವನ್ನು ನಿರ್ಧರಿಸುತ್ತಾರೆ. ಪ್ರಸ್ತುತ ಸರ್ಕಾರವನ್ನು ಸೋಲಿಸಿದರೆ ದೇಶದ ಭವಿಷ್ಯವು ಶಾಂತಿಯುತವಾಗಿರುತ್ತದೆ ಮತ್ತು ಪ್ರಜಾಪ್ರಭುತ್ವವು ಬಲವಾಗುತ್ತದೆ. ಇಲ್ಲದಿದ್ದರೆ ದೇಶವು ಕರಾಳ ದಿನಗಳನ್ನು ನೋಡಲಿದೆ. ಅಚ್ಛೇ ದಿನ್ ಎಂದಿಗೂ ಬರಲಿಲ್ಲ, ಆದರೆ ಕರಾಳ ದಿನಗಳು ಬರುತ್ತವೆ ಎಂದು ಹೇಳಿದ್ದಾರೆ.

ಭ್ರಷ್ಟರ ರಕ್ಷಣೆ ಮೋದಿ ಗ್ಯಾರಂಟಿ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಆರೋಪಿಸಿದ್ದಾರೆ. ಎಲ್ಲಾ ಧೂಳು ಮತ್ತು ಮಣ್ಣನ್ನು ಹೀರುವ ವ್ಯಾಕ್ಯೂಮ್ ಕ್ಲೀನರ್‌ನಂತೆ ಬಿಜೆಪಿ ಎಲ್ಲಾ ಭ್ರಷ್ಟರನ್ನು ಸೇರಿಸುತ್ತಿದೆ. ಕಾಂಗ್ರೆಸ್, ಶಿವಸೇನೆ ಭ್ರಷ್ಟರಿಂದ ಮುಕ್ತವಾಗಿದೆ ಎಂದು ಹೇಳಿದ್ದಾರೆ. ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿಗೆ ಹೇಳಿಕೊಳ್ಳುವ ಸಾಧನೆ ಏನೂ ಇಲ್ಲ, ಆದ್ದರಿಂದ ಚುನಾವಣಾ ಭಾಷಣದಲ್ಲಿ ಬಿಜೆಪಿ ರಾಮನ ಹೆಸರು ಹೇಳುತ್ತಿದೆ ಎಂದು ಹೇಳಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳ ಬಗ್ಗೆ ಕೇಳಿದ ಪ್ರಶ್ನೆಗೆ ಠಾಕ್ರೆ, ಪ್ರಧಾನಿ ತಮ್ಮ ಭಾಷಣಗಳಲ್ಲಿ ಪಾಕಿಸ್ತಾನ ಬಗ್ಗೆ ಮಾತನಾಡುತ್ತಾರೆ, ಆದರೆ ಪ್ರತಿಪಕ್ಷಗಳು ಭಾರತದ ಬಗ್ಗೆ ಮಾತನಾಡುತ್ತವೆ ಎಂದು ಹೇಳಿದ್ದಾರೆ.

ಎನ್‌ಸಿಪಿ(ಎಸ್‌ಪಿ) ನಾಯಕ ಶರದ್ ಪವಾರ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಟೀಕೆಗಳನ್ನು ಸಹಿಸುವುದಿಲ್ಲ ಆದರೆ ಇತರರ ವಿರುದ್ಧ ಏನೇನೋ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚಣೆ ವೇಳೆ ಮಾತನಾಡಿದ್ದ ಶರದ್ ಪವಾರ್, ಮೋದಿ ಅವರು ಮುಸ್ಲಿಮರನ್ನು ಬಹಿರಂಗವಾಗಿ ಗುರಿಯಾಗಿಸಿದ್ದಾರೆ, ಆದರೆ ಅವರು ಪ್ರಧಾನಿಯಾಗಿದ್ದರೂ ಅವರು ಎಲ್ಲಾ ಜಾತಿಗಳು ಮತ್ತು ಧರ್ಮಗಳ ನಾಗರಿಕರ ಪರವಾಗಿ ನಿಲ್ಲಬೇಕು ಎಂದು ಹೇಳಿದ್ದರು.

ಮೋದಿ ಮಹಿಳಾ ವಿರೋಧಿ ಮತ್ತು ರೈತ ವಿರೋಧಿಯಾಗಿದ್ದಾರೆ. ಕಳೆದ 10 ವರ್ಷಗಳಲ್ಲಿ ರೈತರ ಕಲ್ಯಾಣಕ್ಕಾಗಿ ಮೋದಿ ಸರ್ಕಾರ ಏನನ್ನೂ ಮಾಡಿಲ್ಲ, ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆಯೂ ಅವರ ಸರ್ಕಾರ ಕಣ್ಣು ಮುಚ್ಚಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಹೇಮಂತ್ ಸೋರೆನ್ ಅವರ ಬಂಧನವು ಅಧಿಕಾರದ ದುರುಪಯೋಗ ಮತ್ತು ದುರಹಂಕಾರಕ್ಕೆ ಉದಾಹರಣೆಯಾಗಿದೆ ಎಂದು ಶರದ್‌ ಪವಾರ್‌ ಹೇಳಿದ್ದಾರೆ.

ಇದನ್ನು ಓದಿ; ಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...