Homeಮುಖಪುಟಮೋದಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸದಿದ್ದರೆ ದೇಶವು 'ಕರಾಳ ದಿನ'ಗಳನ್ನು ನೋಡಲಿದೆ: ಉದ್ಧವ್ ಠಾಕ್ರೆ

ಮೋದಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸದಿದ್ದರೆ ದೇಶವು ‘ಕರಾಳ ದಿನ’ಗಳನ್ನು ನೋಡಲಿದೆ: ಉದ್ಧವ್ ಠಾಕ್ರೆ

- Advertisement -
- Advertisement -

ಮೋದಿ ಸರ್ಕಾರವನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸದಿದ್ದರೆ ದೇಶವು “ಕರಾಳ ದಿನಗಳನ್ನು” ನೋಡಲಿದೆ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಶಿವಸೇನಾ ಪಕ್ಷದ ಮುಖವಾಣಿ ‘ಸಾಮ್ನಾ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಭಾರತದ ಜನರು ತಮ್ಮ ನಾಯಕರ ಭವಿಷ್ಯವನ್ನು ನಿರ್ಧರಿಸುತ್ತಾರೆ. ಪ್ರಸ್ತುತ ಸರ್ಕಾರವನ್ನು ಸೋಲಿಸಿದರೆ ದೇಶದ ಭವಿಷ್ಯವು ಶಾಂತಿಯುತವಾಗಿರುತ್ತದೆ ಮತ್ತು ಪ್ರಜಾಪ್ರಭುತ್ವವು ಬಲವಾಗುತ್ತದೆ. ಇಲ್ಲದಿದ್ದರೆ ದೇಶವು ಕರಾಳ ದಿನಗಳನ್ನು ನೋಡಲಿದೆ. ಅಚ್ಛೇ ದಿನ್ ಎಂದಿಗೂ ಬರಲಿಲ್ಲ, ಆದರೆ ಕರಾಳ ದಿನಗಳು ಬರುತ್ತವೆ ಎಂದು ಹೇಳಿದ್ದಾರೆ.

ಭ್ರಷ್ಟರ ರಕ್ಷಣೆ ಮೋದಿ ಗ್ಯಾರಂಟಿ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಆರೋಪಿಸಿದ್ದಾರೆ. ಎಲ್ಲಾ ಧೂಳು ಮತ್ತು ಮಣ್ಣನ್ನು ಹೀರುವ ವ್ಯಾಕ್ಯೂಮ್ ಕ್ಲೀನರ್‌ನಂತೆ ಬಿಜೆಪಿ ಎಲ್ಲಾ ಭ್ರಷ್ಟರನ್ನು ಸೇರಿಸುತ್ತಿದೆ. ಕಾಂಗ್ರೆಸ್, ಶಿವಸೇನೆ ಭ್ರಷ್ಟರಿಂದ ಮುಕ್ತವಾಗಿದೆ ಎಂದು ಹೇಳಿದ್ದಾರೆ. ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿಗೆ ಹೇಳಿಕೊಳ್ಳುವ ಸಾಧನೆ ಏನೂ ಇಲ್ಲ, ಆದ್ದರಿಂದ ಚುನಾವಣಾ ಭಾಷಣದಲ್ಲಿ ಬಿಜೆಪಿ ರಾಮನ ಹೆಸರು ಹೇಳುತ್ತಿದೆ ಎಂದು ಹೇಳಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳ ಬಗ್ಗೆ ಕೇಳಿದ ಪ್ರಶ್ನೆಗೆ ಠಾಕ್ರೆ, ಪ್ರಧಾನಿ ತಮ್ಮ ಭಾಷಣಗಳಲ್ಲಿ ಪಾಕಿಸ್ತಾನ ಬಗ್ಗೆ ಮಾತನಾಡುತ್ತಾರೆ, ಆದರೆ ಪ್ರತಿಪಕ್ಷಗಳು ಭಾರತದ ಬಗ್ಗೆ ಮಾತನಾಡುತ್ತವೆ ಎಂದು ಹೇಳಿದ್ದಾರೆ.

ಎನ್‌ಸಿಪಿ(ಎಸ್‌ಪಿ) ನಾಯಕ ಶರದ್ ಪವಾರ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಟೀಕೆಗಳನ್ನು ಸಹಿಸುವುದಿಲ್ಲ ಆದರೆ ಇತರರ ವಿರುದ್ಧ ಏನೇನೋ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚಣೆ ವೇಳೆ ಮಾತನಾಡಿದ್ದ ಶರದ್ ಪವಾರ್, ಮೋದಿ ಅವರು ಮುಸ್ಲಿಮರನ್ನು ಬಹಿರಂಗವಾಗಿ ಗುರಿಯಾಗಿಸಿದ್ದಾರೆ, ಆದರೆ ಅವರು ಪ್ರಧಾನಿಯಾಗಿದ್ದರೂ ಅವರು ಎಲ್ಲಾ ಜಾತಿಗಳು ಮತ್ತು ಧರ್ಮಗಳ ನಾಗರಿಕರ ಪರವಾಗಿ ನಿಲ್ಲಬೇಕು ಎಂದು ಹೇಳಿದ್ದರು.

ಮೋದಿ ಮಹಿಳಾ ವಿರೋಧಿ ಮತ್ತು ರೈತ ವಿರೋಧಿಯಾಗಿದ್ದಾರೆ. ಕಳೆದ 10 ವರ್ಷಗಳಲ್ಲಿ ರೈತರ ಕಲ್ಯಾಣಕ್ಕಾಗಿ ಮೋದಿ ಸರ್ಕಾರ ಏನನ್ನೂ ಮಾಡಿಲ್ಲ, ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆಯೂ ಅವರ ಸರ್ಕಾರ ಕಣ್ಣು ಮುಚ್ಚಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಹೇಮಂತ್ ಸೋರೆನ್ ಅವರ ಬಂಧನವು ಅಧಿಕಾರದ ದುರುಪಯೋಗ ಮತ್ತು ದುರಹಂಕಾರಕ್ಕೆ ಉದಾಹರಣೆಯಾಗಿದೆ ಎಂದು ಶರದ್‌ ಪವಾರ್‌ ಹೇಳಿದ್ದಾರೆ.

ಇದನ್ನು ಓದಿ; ಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...