Homeಮುಖಪುಟ"ಕೇಜ್ರಿವಾಲ್ ಕಿ ಗ್ಯಾರಂಟಿ" ಘೋಷಣೆ: ಉಚಿತ ವಿದ್ಯುತ್‌ ಸೇರಿ 10 ಗ್ಯಾರೆಂಟಿಗಳನ್ನು ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌

“ಕೇಜ್ರಿವಾಲ್ ಕಿ ಗ್ಯಾರಂಟಿ” ಘೋಷಣೆ: ಉಚಿತ ವಿದ್ಯುತ್‌ ಸೇರಿ 10 ಗ್ಯಾರೆಂಟಿಗಳನ್ನು ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌

- Advertisement -
- Advertisement -

ಲೋಕಸಭೆ ಚುನಾವಣೆಯ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೇಶದ ಜನರಿಗೆ ಭರಪೂರ ಭರವಸೆಯನ್ನು ನೀಡುವ “ಕೇಜ್ರಿವಾಲ್ ಕಿ ಗ್ಯಾರಂಟಿ” ಯೋಜನೆಯನ್ನು ಘೋಷಿಸಿದ್ದಾರೆ.

ಭಾನುವಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅರವಿಂದ್‌ ಕೇಜ್ರಿವಾಲ್‌, ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ತಮ್ಮ ’10 ಗ್ಯಾರಂಟಿ’ಗಳನ್ನು ಘೋಷಿಸಿದ್ದಾರೆ. ದೇಶಾದ್ಯಂತ 24 ಗಂಟೆಗಳ ಕಾಲ ಉಚಿತ ವಿದ್ಯುತ್, ಉಚಿತ ಶಿಕ್ಷಣ ಮತ್ತು ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ಮತ್ತು ಭಾರತದ ಗಡಿಯಲ್ಲಿ ಚೀನಾ ವಶಪಡಿಸಿಕೊಂಡಿದೆ ಎನ್ನಲಾದ ಭೂಮಿಯನ್ನು ವಾಪಸ್ ಪಡೆಯುವುದಾಗಿ ಭರವಸೆ ನೀಡಿದ್ದಾರೆ.

ಈ ಖಾತರಿಗಳ ಬಗ್ಗೆ ಇತರ ಇಂಡಿಯಾ ಬ್ಲಾಕ್ ಪಾಲುದಾರರೊಂದಿಗೆ ಚರ್ಚಿಸಿಲ್ಲ, ಆದರೆ ಯಾರಿಗೂ ಯಾವುದೇ ತಕರಾರು ಇಲ್ಲ ಎಂದು ಭಾವಿಸಿರುವುದಾಗಿ ಕೇಜ್ರಿವಾಲ್‌ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದ ನಂತರ, ಈ ಭರವಸೆಗಳನ್ನು ಕಾರ್ಯಗತಗೊಳಿಸುವುದನ್ನು ನಾನು ಖಚಿತಪಡಿಸಿಕೊಳ್ಳುತ್ತೇನೆ ಕೇಜ್ರಿವಾಲ್‌ ಹೇಳಿದ್ದಾರೆ.

“ಕೇಜ್ರಿವಾಲ್ ಕಿ ಗ್ಯಾರಂಟಿ”ಯಡಿಯಲ್ಲಿನ 10 ಗ್ಯಾರೆಂಟಿಗಳು

ವಿದ್ಯುಚ್ಛಕ್ತಿ ಖಾತ್ರಿ: ದೇಶದಾದ್ಯಂತ ಮೊದಲ 200 ಯೂನಿಟ್ ವಿದ್ಯುತ್ ಉಚಿತದೊಂದಿಗೆ 24-ಗಂಟೆಗಳ ಕಾಲ ವಿದ್ಯುತ್ ಸರಬರಾಜು.

ಶಿಕ್ಷಣ ಖಾತ್ರಿ: ಎಲ್ಲರಿಗೂ ಉಚಿತ ಶಿಕ್ಷಣದ ವ್ಯವಸ್ಥೆ ಮಾಡುವ ಮತ್ತು ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ಭರವಸೆ.

ಆರೋಗ್ಯ ಖಾತ್ರಿ: ಖಾಸಗಿ ಆಸ್ಪತ್ರೆಗಳಿಗೆ ಸರಿಸಮನಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಕಲ್ಪಿಸುವ ಭರವಸೆ.

ಚೀನಾ ಆಕ್ರಮಿಸಿಕೊಂಡಿರುವ ಭಾರತದ ಭೂಮಿಯನ್ನು ಮುಕ್ತಗೊಳಿಸುವ  ಗ್ಯಾರಂಟಿ: ಭಾರತದ ಭೂಮಿಯನ್ನು ಚೀನಾದಿಂದ ಮುಕ್ತಗೊಳಿಸಲಾಗುವುದು, ಸೇನೆಗೆ ಮುಕ್ತ ಕಾರ್ಯ ನಿರ್ವಹಣೆಗೆ ಅವಕಾಶ ನೀಡುವ ಭರವಸೆ.

ಅಗ್ನಿವೀರ್ ಯೋಜನೆ ರದ್ದುಗೊಳಿಸುವ ಗ್ಯಾರಂಟಿ: ನರೇಂದ್ರ ಮೋದಿ ಸರ್ಕಾರ ಆರಂಭಿಸಿದ ಅಗ್ನಿವೀರ್ ಯೋಜನೆ ರದ್ದುಗೊಳಿಸುವ ಗ್ಯಾರೆಂಟಿ.

MSPಯ ಖಾತರಿ: ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಗ್ಯಾರೆಂಟಿ.

ರಾಜ್ಯದ ಸ್ಥಾನಮಾನದ ಭರವಸೆ: ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನದ ಭರವಸೆ.

ಉದ್ಯೋಗ ಖಾತ್ರಿ: ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಯೋಜನೆ.

ಭ್ರಷ್ಟಾಚಾರದ ವಿರುದ್ಧ ಕ್ರಮ: ದೇಶವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಭರವಸೆ.

GST ಮೇಲೆ ಗ್ಯಾರಂಟಿ: ಸರಕು ಮತ್ತು ಸೇವಾ ತೆರಿಗೆಯನ್ನು (GST) ಸರಳಗೊಳಿಸುವ ಯೋಜನೆಗಳನ್ನು ಜಾರಿಗೆ ತರುವ ಭರವಸೆಯನ್ನು ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಉಪಸ್ಥಿತರಿದ್ದರು. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಶುಕ್ರವಾರ ಸುಪ್ರೀಂಕೋರ್ಟ್‌ನ ಆದೇಶದ ಮೇರೆಗೆ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್ ಬಿಡಗಡೆಯಾಗಿದ್ದರು. ನಿನ್ನೆ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಕೇಜ್ರಿವಾಲ್‌, ಮೋದಿ ‘ಒಂದು ರಾಷ್ಟ್ರ, ಒಂದು ನಾಯಕ’ ವ್ಯವಸ್ಥೆಯನ್ನು ಬಯಸುತ್ತಿದ್ದಾರೆ, ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಹೇಳಿದ್ದರು.

ಇದನ್ನು ಓದಿ: ಮೋದಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸದಿದ್ದರೆ ದೇಶವು ‘ಕರಾಳ ದಿನ’ಗಳನ್ನು ನೋಡಲಿದೆ: ಉದ್ಧವ್ ಠಾಕ್ರೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...